Terrorist ಪಕ್ಷ ದೇಶವಾಳುತ್ತಿದೆ…: ಮಲ್ಲಿಕಾರ್ಜುನ ಖರ್ಗೆ ಕಿಡಿ
ಹರಿಯಾಣದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಯಾವ ಮಾಧ್ಯಮವೂ ಹೇಳಿಲ್ಲ. ಆದರೆ...
Team Udayavani, Oct 12, 2024, 7:10 PM IST
ಕಲಬುರಗಿ: ”ದೇಶವನ್ನಾಳುತ್ತಿರುವುದು ಟೆರರಿಸ್ಟ್ ಪಕ್ಷ, ದಲಿತರ ಮೇಲೆ ಹಲ್ಲೆ ಮಾಡೋಡು, ಬಾಯಲ್ಲಿ ಮೂತ್ರ ಮಾಡೋದು, ಆದಿವಾಸಿ ಹೆಣ್ಣು ಮಕ್ಕಳನ್ನು ತಂದು ಅತ್ಯಾಚಾರ ಮಾಡುವ ಟೆರರಿಸ್ಟ್ ಪಕ್ಷ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ಶನಿವಾರ(ಅ18) ಕಿಡಿ ಕಾರಿದ್ದಾರೆ.
ನಗರದಲ್ಲಿ ಸಿದ್ಧಾರ್ಥ ವಿಹಾರದಲ್ಲಿ ದಸರೆ ಪ್ರಯುಕ್ತ ಧರ್ಮಚಕ್ರ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ಕಾಂಗ್ರೆಸ್ ಒಂದು ಅರ್ಬನ್ ನಕ್ಸಲ್ರು ನಡೆಸುತ್ತಿರುವ ಪಕ್ಷ ಎಂದು ಪ್ರಧಾನಿ ನರೇಂದ್ರ ಮೋದಿ ದೂಷಣೆ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಖರ್ಗೆ, ಅವರ ನಡವಳಿಕೆ, ಮಾತು ಏನು ಸೂಚಿಸುತ್ತಿದೆ. ದೇಶದ ಜನತೆಗೆ ಎಲ್ಲವೂ ಅರ್ಥವಾಗುತ್ತದೆ. ಮೋದಿ ಅವರು ಮೊದಲಿಂದಲೂ ಇಂತಹದೆ ಆರೋಪಗಳನ್ನು ಕಾಂಗ್ರೆಸ್ ವಿರುದ್ಧ ಮಾಡುತ್ತಲೇ ಬಂದಿದ್ದಾರೆ. ಇದರಿಂದಾಗಿ ದೇಶದಲ್ಲಿ ಕಾಂಗ್ರೆಸ್ನ್ನು ಅತ್ಯಂತ ಆರೋಪಿತ ಸ್ಥಾನದಲ್ಲಿ ನಿಲ್ಲಿಸುವ ಪ್ರಯತ್ನವಷ್ಟೆ ಮಾಡಲು ಅವರಿಂದ ಸಾಧ್ಯವಾಗಿದೆ ಎಂದರು.
ಜಮ್ಮು ಕಾಶ್ಮೀರ ಹಾಗೂ ಹರಿಯಾಣದ ಚುನಾವಣೆಯಲ್ಲಿ ಕಾಂಗ್ರೆಸ್ ಸಾಧನೆ ಕುರಿತು ವಿಶ್ಲೇಷಣೆ ನಡೆದಿದೆ. ಈಗಾಗಲೇ ಪಕ್ಷದ ಹಿರಿಯರನ್ನು ಕರೆದು ಸಭೆಯೂ ಮಾಡಿದ್ದು, ಅವರ ಅಭಿಪ್ರಾಯಗಳನ್ನು ಸಂಗ್ರಹ ಮಾಡಲಾಗಿದೆ. ನಮ್ಮ ಕಾರ್ಯಕರ್ತರು, ಮುಖಂಡರು ಹಾಗೂ ಹಿರಿಯರ ಪಾತ್ರವೇನಿವೆ ಎನ್ನುವ ಕುರಿತು ಬೂತ್ ಮಟ್ಟದಿಂದಲೂ ತರಿಸಿಕೊಳ್ಳಲಾಗುತ್ತಿದೆ ಎಂದರು.
ಹರಿಯಾಣದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಯಾವ ಮಾಧ್ಯಮವೂ ಹೇಳಿಲ್ಲ. ಆದರೆ, ವಿಶ್ಲೇಷಣೆಗಳಲ್ಲೋ, ಅಥವಾ ಇನ್ಯಾವುದೋ ರೀತಿಯಿಂದ ಗಡಿಬಿಡಿಯಾಗಿದೆ. ಅದನ್ನು ನಾವು ಪತ್ತೆ ಮಾಡುತ್ತಿದ್ದೇವೆ ಎಂದರು. ಅಲ್ಲದೆ, ಹರಿಯಾಣದ ಫಲಿತಾಂಶ ಮಹಾರಾಷ್ಟ್ರದ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ. ಅಲ್ಲೂ ಜನ ನಮ್ಮ ಪರಿವಾಗಿದ್ದಾರೆ. ನೋಡೋಣ ಅಲ್ಲಿನ ಚುನಾವಣೆ ತಂತ್ರ ಮತ್ತು ವಿಷಯಗಳೇನಿವೇಯೋ ಅದನ್ನು ಆಧರಿಸಿ ಜನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್ ಸರಕಾರದ ಚಾಳಿ: ಪ್ರಹ್ಲಾದ್ ಜೋಶಿ
Mysuru Dasara: ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ; 5ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು
Tax Injustice: ತೆರಿಗೆ ಹಂಚಿಕೆಯಲ್ಲಿ ಕಡೆಗಣಿಸಲು ಕರ್ನಾಟಕವೇನು ಅನ್ಯಾಯ ಮಾಡಿದೆ?: ಸಿಎಂ
Hubli ಗಲಭೆ ಆರೋಪಿಗಳ ಮೇಲಿನ ಕೇಸ್ ಹಿಂಪಡೆದಿರುವುದು ದೊಡ್ಡ ದುರಂತ: ಶೆಟ್ಟರ್ ಕಿಡಿ
Davanagere: ಮಹಿಷಮರ್ದನ ರೀತಿಯಲ್ಲೇ ರಾಜ್ಯ ಸರ್ಕಾರದ ಮರ್ದನ: ರೇಣುಕಾಚಾರ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್ ಸರಕಾರದ ಚಾಳಿ: ಪ್ರಹ್ಲಾದ್ ಜೋಶಿ
NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!
Uppinangady: ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಬಸ್; ಚಾಲಕ ಸಾವು
Surathkal: ಕಾಮಗಾರಿ ಹೊಂಡಕ್ಕೆ ಬಿದ್ದ ಬೈಕ್ ಸವಾರ ಪಾರು
Haryana: ಕಾಲುವೆಗೆ ಬಿದ್ದ ಕಾರು ಒಂದೇ ಕುಟುಂಬದ 7 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.