Ranji Trophy: ಕರ್ನಾಟಕ ವಿರುದ್ಧ ಮಧ್ಯಪ್ರದೇಶ 232/4


Team Udayavani, Oct 12, 2024, 9:26 PM IST

Ranji Trophy: ಕರ್ನಾಟಕ ವಿರುದ್ಧ ಮಧ್ಯಪ್ರದೇಶ 232/4

ಇಂದೋರ್‌: ಇಲ್ಲಿನ ಹೋಲ್ಕರ್‌ ಮೈದಾನದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಎಲೈಟ್‌ ಗ್ರೂಪ್‌ “ಸಿ’ ಪಂದ್ಯದಲ್ಲಿ ಕರ್ನಾಟಕ ವಿರುದ್ಧ ಮಧ್ಯಪ್ರದೇಶ ತಂಡ ಸಾಧಾರಣ ರನ್‌ ಪೇರಿಸಿದೆ. ಶನಿವಾರ 2ನೇ ದಿನದಾಟದ ಅಂತ್ಯಕ್ಕೆ ಅದು, 83 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 232 ರನ್‌ ಕಲೆಹಾಕಿದೆ.

ಟಾಸ್‌ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಮಧ್ಯಪ್ರದೇಶದಿಂದ ಆರಂಭಿಕ ಬ್ಯಾಟರ್‌ಗಳಾದ ಯಶ್‌ ದುಬೆ 20 ರನ್‌ ಬಾರಿಸಿದರೆ, ಹಿಮಾಂಶು ಮಂತ್ರಿ ಶೂನ್ಯಕ್ಕೆ ವಿಕೆಟ್‌ ಒಪ್ಪಿಸಿದರು. ಇನ್ನು ಸುಭ್ರಾಂಶು ಸೇನಾಪತಿ 28, ನಾಯಕ ಶುಭಂ ಶರ್ಮಾ 40, ರಜತ್‌ ಪಾಟೀದಾರ್‌ 31 ರನ್‌ ಸೇರಿಸಿ ತಂಡದ ಮೊತ್ತ ಹೆಚ್ಚಿಸುವಲ್ಲಿ ತಕ್ಕಮಟ್ಟಿಗೆ ನೆರವಾದರು. ಆದರೆ 5ನೇ ಕ್ರಮಾಂಕದಲ್ಲಿ ಆಡಿದ ಹರ್ಪ್ರೀತ್‌ ಸಿಂಗ್‌ 75 ರನ್‌ ಗಳಿಸಿ ಗಮನಾರ್ಹ ರನ್‌ ಕೊಡುಗೆ ನೀಡಿದರು.

ಹರ್ಪ್ರೀತ್‌ ಮತ್ತು ವೆಂಕಟೇಶ್‌ ಅಯ್ಯರ್‌ (25) ಕ್ರೀಸಿನಲ್ಲಿ ಉಳಿದಿದ್ದು, 3ನೇ ದಿನವಾದ ಭಾನುವಾರ ಮಧ್ಯಪ್ರದೇಶ ತಂಡ ಮೊತ್ತವನ್ನು 300ರ ಸನಿಹ ಕೊಂಡೊಯ್ಯುವ ನಿರೀಕ್ಷೆಯಿದೆ. ಎಂ.ಪಿ. ಇನಿಂಗ್ಸ್‌ ವೇಳೆ ರಾಜ್ಯದ ವಾಸುಕಿ ಕೌಶಿಕ್‌, ಪ್ರಸಿದ್ಧ್ ಕೃಷ್ಣ, ವೈಶಾಕ್‌ ವಿಜಯ್‌ ಕುಮಾರ್‌ ಮತ್ತು ಹಾರ್ದಿಕ್‌ ರಾಜ್‌ ತಲಾ 1 ವಿಕೆಟ್‌ ಉರುಳಿಸಿದರು.

ಸಂಕ್ಷಿಪ್ತ ಸ್ಕೋರ್‌:

ಮಧ್ಯಪ್ರದೇಶ 1ನೇ ಇನಿಂಗ್ಸ್‌, 83 ಓವರ್‌ಗೆ 232/4 (ಶುಭಂ 40, ಹರ್ಪ್ರೀತ್‌ ಅಜೇಯ 75, ಪ್ರಸಿದ್ಧ್ 20ಕ್ಕೆ 1).

ಅಗ್ರ ಕ್ರಮಾಂಕದ ನಾಲ್ವರೂ ಶತಕ:

ಇತಿಹಾಸ ಬರೆದ ಹಿಮಾಚಲ ಪ್ರದೇಶ ಧರ್ಮಶಾಲಾದಲ್ಲಿ ನಡೆಯುತ್ತಿರುವ ರಣಜಿ ಎಲೈಟ್‌ ಗ್ರೂಪ್‌ “ಬಿ’ಯಲ್ಲಿ ಉತ್ತರಾಖಂಡ ವಿರುದ್ಧ ಹಿಮಾಚಲ ಪ್ರದೇಶದ ಅಗ್ರ ಕ್ರಮಾಂಕದ ನಾಲ್ವರೂ ಬ್ಯಾಟರ್‌ಗಳು ಶತಕ ಬಾರಿಸಿದ್ದಾರೆ. ಈ ಮೂಲಕ 2ನೇ ಬಾರಿ ರಣಜಿ ಇನಿಂಗ್ಸ್‌ ಒಂದರಲ್ಲಿ ಆರಂಭಿಕ ನಾಲ್ವರು ಶತಕ ಬಾರಿಸಿದಂತಾಗಿದೆ. ಇದಕ್ಕೂ ಮುನ್ನ 2019ರಲ್ಲಿ ಗೋವಾ ತಂಡ ಈ ಸಾಧನೆ ಮಾಡಿತ್ತು. ಹಿಮಾಚಲ ಪ್ರದೇಶದ ಶುಭಂ ಅರೋರಾ (118), ಪ್ರಶಾಂತ್‌ ಚೋಪ್ರಾ (171), ಅಂಕಿತ್‌ ಕಲ್ಸಿ (ಅಜೇಯ 205), ಏಕಾಂತ್‌ ಸಿಂಗ್‌ (101) ಶತಕ ಬಾರಿಸಿದ್ದರಿಂದ ಈ ದಾಖಲೆ ನಿರ್ಮಾಣವಾಗಿದೆ. 1ನೇ ಇನಿಂಗ್ಸ್‌ನಲ್ಲಿ ಹಿಮಾಚಲ ಪ್ರದೇಶ 3 ವಿಕೆಟ್‌ ನಷ್ಟಕ್ಕೆ 663 ರನ್‌ ಬಾರಿಸಿ ಡಿಕ್ಲೇರ್‌ ಘೋಷಿಸಿದ್ದು, ಉತ್ತರಾಖಂಡ ತಂಡ 50 ರನ್‌ಗೆ 1 ವಿಕೆಟ್‌ ಕಳೆದುಕೊಂಡಿದೆ.

22 ವರ್ಷ ಬಳಿಕ ಕಾಶ್ಮೀರ ಪರ ದ್ವಿಶತಕ:  ದಾಖಲೆ ಬರೆದ ಶುಭಂ ಖುಜಾರಿಯ:

ಶ್ರೀನಗರದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಎಲೈಟ್‌ ಗ್ರೂಪ್‌ “ಎ’ಯಲ್ಲಿ ಮಹಾರಾಷ್ಟ್ರ ವಿರುದ್ಧ ಜಮ್ಮು ಮತ್ತು ಕಾಶ್ಮೀರದ ಬ್ಯಾಟರ್‌ ಶುಭಂ ಖುಜಾರಿಯ ದ್ವಿಶತಕ ಬಾರಿಸಿದ್ದಾರೆ. ಅವರು ರಣಜಿಯಲ್ಲಿ 22 ವರ್ಷಗಳ ಬಳಿಕ ಜಮ್ಮು ಮತ್ತು ಕಾಶ್ಮೀರ ಪರ ದ್ವಿಶತಕ ಬಾರಿಸಿದ ಮೊದಲಿಗನಾಗಿ ಗುರುತಿಸಿಕೊಂಡಿದ್ದಾರೆ. 255 ರನ್‌ ಬಾರಿಸಿ ಶುಭಂ ಈ ಸಾಧನೆ ಮೆರೆದರು. ಜಮ್ಮು-ಕಾಶ್ಮೀರ ಪರ 2002ರಲ್ಲಿ ಅಶ್ವಾನಿ ಗುಪ್ತಾ ಕೊನೇ ಬಾರಿ ದ್ವಿಶತಕ ಬಾರಿಸಿದ್ದರು. 1ನೇ ಇನಿಂಗ್ಸ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡ 7ಕ್ಕೆ 519 ರನ್‌ ಬಾರಿಸಿ ಡಿಕ್ಲೇರ್‌ ಘೋಷಿಸಿದ್ದರೆ, ಇನಿಂಗ್ಸ್‌ ಆಡುತ್ತಿರುವ ಮಹಾರಾಷ್ಟ್ರ 1 ವಿಕೆಟ್‌ ನಷ್ಟಕ್ಕೆ 28 ರನ್‌ ಬಾರಿಸಿದೆ.

ಟಾಪ್ ನ್ಯೂಸ್

yashapal

Udupi: ಭದ್ರತೆ ದೃಷ್ಟಿಯಿಂದ ಪ್ರಕರಣ ಉನ್ನತ ಮಟ್ಟದ ತನಿಖೆ ವಹಿಸಿ: ಶಾಸಕ ಯಶ್‌ಪಾಲ್‌ ಸುವರ್ಣ

ucchila

Udupi: ಉಚ್ಚಿಲ ದಸರಾ 2024; ಶಾರದೆ, ನವದುರ್ಗೆಯರ ಅದ್ದೂರಿ ಶೋಭಾಯಾತ್ರೆ

Krishna-Mutt

Udupi: ಶ್ರೀಕೃಷ್ಣ ಮಠದಲ್ಲಿ ಕದಿರುಹಬ್ಬ, ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆ

1-saasds

Mysore Dasara;ದೀಪಾಲಂಕಾರ 12 ದಿನ ವಿಸ್ತರಣೆ: ಡಿ.ಕೆ.ಶಿವಕುಮಾರ್‌

Bhatakal

Bhatkal: ತಿರುಪತಿಗೆ ನೇರ ರೈಲು ಸಂಪರ್ಕದಿಂದ ಜನರಿಗೆ ಅನುಕೂಲ: ಎಸ್.ಎಸ್. ಕಾಮತ್

1-ewss

T20 series; ಕ್ಲೀನ್‌ಸ್ವೀಪ್‌ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್‌ ಗೆಲುವು

Joshi

Grants: ಕೇಂದ್ರ ಸರಕಾರ ದೂರುವುದೇ ರಾಜ್ಯ ಕಾಂಗ್ರೆಸ್‌ ಸರಕಾರದ ಚಾಳಿ: ಪ್ರಹ್ಲಾದ್‌ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–wwewqewq

Bodybuilding competition; ದಿನೇಶ್‌ ಆಚಾರ್ಯ ಮಿಸ್ಟರ್‌ ಉಚ್ಚಿಲ ದಸರಾ

1-ewss

T20 series; ಕ್ಲೀನ್‌ಸ್ವೀಪ್‌ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್‌ ಗೆಲುವು

Mohammed Siraj: ತೆಲಂಗಾಣ ಡಿಎಸ್‌ಪಿಯಾಗಿ ವೇಗಿ ಮೊಹಮ್ಮದ್‌ ಸಿರಾಜ್‌ ಆಯ್ಕೆ

Mohammed Siraj: ತೆಲಂಗಾಣ ಡಿಎಸ್‌ಪಿಯಾಗಿ ವೇಗಿ ಮೊಹಮ್ಮದ್‌ ಸಿರಾಜ್‌ ಆಯ್ಕೆ

17

Women’s T20 World Cup: ಶ್ರೀಲಂಕಾ ವಿರುದ್ಧ ಕಿವೀಸ್‌ಗೆ 8 ವಿಕೆಟ್‌ ಜಯಭೇರಿ

Women’s T20 World Cup: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಕ್ಕೆ 9 ವಿಕೆಟ್‌ ಸುಲಭ ಜಯ

Women’s T20 World Cup: ಪಾಕಿಸ್ತಾನ ವಿರುದ್ಧ ಆಸ್ಟ್ರೇಲಿಯಾಕ್ಕೆ 9 ವಿಕೆಟ್‌ ಸುಲಭ ಜಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

yashapal

Udupi: ಭದ್ರತೆ ದೃಷ್ಟಿಯಿಂದ ಪ್ರಕರಣ ಉನ್ನತ ಮಟ್ಟದ ತನಿಖೆ ವಹಿಸಿ: ಶಾಸಕ ಯಶ್‌ಪಾಲ್‌ ಸುವರ್ಣ

1-paramm

G.Parameshwara; ಬೊಂಬೆ ಹೇಳುತೈತೆ ಹಾಡಿಗೆ ಗೃಹ ಸಚಿವರ ಹೆಜ್ಜೆ!

ucchila

Udupi: ಉಚ್ಚಿಲ ದಸರಾ 2024; ಶಾರದೆ, ನವದುರ್ಗೆಯರ ಅದ್ದೂರಿ ಶೋಭಾಯಾತ್ರೆ

HDK (4)

H.D. Kumaraswamy; ಹತ್ತು ವರ್ಷಗಳ ಹಿಂದಿನ ವರದಿ ಇಟ್ಟುಕೊಂಡು ಏನು ಮಾಡುತ್ತೀರಿ?

Krishna-Mutt

Udupi: ಶ್ರೀಕೃಷ್ಣ ಮಠದಲ್ಲಿ ಕದಿರುಹಬ್ಬ, ಸಾಂಪ್ರದಾಯಿಕ ಬಿರುದಾವಳಿಗಳೊಂದಿಗೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.