![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Oct 13, 2024, 6:55 AM IST
ಹೊಸದಿಲ್ಲಿ: ಬಾಂಗ್ಲಾದೇಶದಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರಕಾರ ಪತನವಾದ ಬಳಿಕ ಅಲ್ಪಸಂಖ್ಯಾಕ ಹಿಂದೂ ಗಳ ಮೇಲೆ ನಿರಂತರ ದಾಳಿಗಳು ನಡೆಯುತ್ತಿವೆ. ಇದಕ್ಕೆ ಹೊಸ ಸೇರ್ಪಡೆಯೆಂಬಂತೆ ನವರಾತ್ರಿಯ ಶುಭ ಸಂದರ್ಭದಲ್ಲಿ ಹಿಂದೂಗಳನ್ನು ಗುರಿಯಾಗಿಸಿ 35ಕ್ಕೂ ಅಧಿಕ ದಾಳಿಗಳು ನಡೆದಿವೆ.
ಢಾಕಾದ ತಂತಿಬಜಾರ್ನ ನವರಾತ್ರಿ ಪೂಜಾ ಮಂಟಪದ ಮೇಲೆ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿದ್ದು, ಹಲವರು ಗಾಯಗೊಂಡಿದ್ದಾರೆ. ಇನ್ನೊಂದು ಪೂಜಾ ಪೆಂಡಾಲ್ಗೆ ನುಗ್ಗಿದ ಕಿಡಿಗೇಡಿಗಳು ಇಸ್ಲಾಮಿಕ್ ಕ್ರಾಂತಿಯ ಹಾಡುಗಳನ್ನು ಹಾಡಿ ದ್ದಾರೆ. ಅ. 1ರಿಂದ ದುರ್ಗಾ ಪೆಂಡಾಲ್ಗಳ ಮೇಲೆ ದಾಳಿ ಹಾಗೂ ಕಳ್ಳತನದಂತಹ ಸುಮಾರು 35 ಘಟನೆಗಳು ನಡೆ ದಿವೆ. ಈ ಸಂಬಂಧ 11 ಪ್ರಕರಣಗಳು ದಾಖಲಾಗಿದ್ದು, 17 ಮಂದಿಯನ್ನು ಬಂಧಿಸಲಾಗಿದೆ.
ಮೋದಿ ನೀಡಿದ್ದ ಕಿರೀಟ ಕಳವು
ಸತ್ಖೀರಾ ಜಿಲ್ಲೆಯ ದೇವಾಲಯಕ್ಕೆ ಪ್ರಧಾನಿ ಮೋದಿಯವರು ನೀಡಿದ್ದ ಚಿನ್ನದ ಕಿರೀಟ ಶುಕ್ರವಾರ ಕಳವಾಗಿದೆ. ಈ ಬಗ್ಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಶನಿವಾರ ಈ ಎಲ್ಲ ಘಟನೆಗಳನ್ನು ಖಂಡಿಸಿ ಪ್ರಕ ಟನೆ ಹೊರಡಿಸಿರುವ ಭಾರತ ವಿದೇಶಾಂಗ ಇಲಾಖೆಯು ರಾಜಧಾನಿ ಢಾಕಾದ ತಂತಿಬಜಾರ್ನಲ್ಲಿನ ಪೂಜಾ ಮಂಟಪದ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದು ಮತ್ತು ಸತ್ಖೀರಾದಲ್ಲಿರುವ ಜೆಶೋರೇಶ್ವರಿ ಕಾಳಿ ದೇವಸ್ಥಾನದಲ್ಲಿ ಮೋದಿ ನೀಡಿದ್ದ ಕಿರೀಟ ಕಳವಾಗಿರುವುದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಆ ದೇಶದಲ್ಲಿ ಹಿಂದೂ ದೇಗುಲಗಳನ್ನು ವ್ಯವಸ್ಥಿತವಾಗಿ ವಿರೂಪಗೊಳಿಸಲಾಗುತ್ತಿದೆ. ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದಕ್ಕಾಗಿ ಹಬ್ಬಗಳ ಸಂದರ್ಭದಲ್ಲಿ ಪೂಜಾ ಸ್ಥಳಗಳಿಗೆ ಸುರಕ್ಷೆ ಹಾಗೂ ಭದ್ರತೆ ಒದಗಿಸಲು ಬಾಂಗ್ಲಾ ಸರಕಾರಕ್ಕೆ ಮನವಿ ಮಾಡುತ್ತೇವೆ ಎಂದು ತಿಳಿಸಿದೆ. ಜತೆಗೆ ಕಿರೀಟ ಕಳವು ಮಾಡಿದವರನ್ನು ಆದಷ್ಟು ಬೇಗ ಬಂಧಿಸಿ, ಕಿರೀಟವನ್ನು ವಶಪಡಿಸಿಕೊಂಡು ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಿ ಎಂದು ಆಗ್ರಹಿಸಿದೆ.
ಢಾಕೇಶ್ವರಿ ದೇಗುಲಕ್ಕೆ ಯೂನುಸ್ ಭೇಟಿ
ಈ ದಾಳಿಗಳ ನಡುವೆಯೇ ಮಧ್ಯಾಂತರ ಸರಕಾರದ ಮುಖ್ಯಸ್ಥ ಮೊಹಮ್ಮದ್ ಯೂನುಸ್ ಢಾಕೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ. ದುರ್ಗಾಪೂಜೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾತನಾಡಿ, ಪ್ರತಿಯೊಬ್ಬ ನಾಗರಿಕನ ಹಕ್ಕು ಖಾತರಿಯಾಗುವ ರೀತಿಯಲ್ಲಿ ಬಾಂಗ್ಲಾದೇಶವನ್ನು ನಿರ್ಮಿಸಬೇಕೆಂದು ಸರಕಾರ ಆಶಿಸುತ್ತದೆ. ದುರ್ಗಾಪೂಜೆ ವೇಳೆ ಸುರಕ್ಷೆಗಾಗಿ ಸಂಬಂಧಪಟ್ಟ ಸಂಸ್ಥೆಗಳು ಕಠಿನ ಶ್ರಮ ವಹಿಸಿವೆ. ಅದಾಗ್ಯೂ ದಾಳಿಗಳು ನಿರಂತರವಾಗಿದ್ದು, ಇದು ಸಾಮೂಹಿಕ ವೈಫಲ್ಯವನ್ನು ತೋರುತ್ತದೆ ಎಂದಿದ್ದಾರೆ.
ಪಾಕ್ ಜತೆಗೆ ಕೈಜೋಡಿಸುವ ಅಪಾಯವಿದೆ: ಮೋಹನ್ ಭಾಗವತ್
ಬಾಂಗ್ಲಾದೇಶದಲ್ಲಿ ಭಾರತವನ್ನು ಅಪಾಯಕಾರಿ ಎಂದು ಬಿಂಬಿಸಲಾಗುತ್ತಿದೆ. ಭಾರತವು ತನ್ನ ಶತ್ರು ಎಂಬ ಭಾವನೆ ಮೂಡಿಸುವುದರಿಂದ ಮುಂದೆ ಆ ದೇಶವು ಅಣ್ವಸ್ತ್ರಸಜ್ಜಿತ ಪಾಕ್ ಜತೆಗೆ ಕೈಜೋಡಿಸುವ ಅಪಾಯವಿದೆ. ವಿಶ್ವಾದ್ಯಂತದ ಹಿಂದೂಗಳು ಬಾಂಗ್ಲಾದ ಹಿಂದೂಗಳ ಬೆಂಬಲಕ್ಕೆ ನಿಲ್ಲಬೇಕು. ಸಮಸ್ಯೆಗೆ ಶೀಘ್ರ ಪರಿಹಾರ ಸಿಗಬೇಕು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಒತ್ತಾಯಿಸಿದ್ದಾರೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.