PRR:ಭೂ ಪರಿಹಾರ ಬದಲಿಗೆ ಟಿಡಿಆರ್ ನೀಡಲು ಸಂಪುಟ ಸಭೆ ತೀರ್ಮಾನ
Team Udayavani, Oct 13, 2024, 6:40 AM IST
ಬೆಂಗಳೂರು: ಪೆರಿಫರಲ್ ರಿಂಗ್ರಸ್ತೆ (ಪಿಆರ್ಆರ್) ನಿರ್ಮಾಣಕ್ಕೆ ಭೂಮಿ ಕಳೆದುಕೊಂಡವರಿಗೆ ಭೂಪರಿಹಾರದ ಬದಲಿಗೆ ಟಿಡಿಆರ್ ನೀಡಲು ಅನುಕೂಲವಾಗುವಂತೆ ಸಚಿವ ಸಂಪುಟ ಗುರುವಾರ ಘಟನೋತ್ತರ ಅನುಮೋದನೆ ನೀಡಿತು.
ಉದ್ದೇಶಿತ ಪಿಆರ್ಆರ್ ಯೋಜನೆ ಒಳಗೊಂಡ ಗ್ರಾಮಗಳ ಜಮೀನು ಕಳೆದುಕೊಂಡವರಿಗೆ ಗ್ರಾಮವಾರು ಮಾರ್ಗಸೂಚಿ ದರವನ್ನು ಗಮನದಲ್ಲಿರಿಸಿಕೊಂಡು ಸಂಧಾನಿತ ಮೊತ್ತ (ಸಂಧಾನ ಸೂತ್ರ)ದ ಮೂಲಕ ಪರಿಹಾರ ನಿಗದಿಪಡಿಸುವುದು. ಇದಕ್ಕೆ ಭೂಮಾಲಕರು ಒಪ್ಪದಿದ್ದರೆ, ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕು (ಟಿಡಿಆರ್) ನೀಡುವ ಸಂಬಂಧದ ತಿದ್ದುಪಡಿಗೆ ಸಂಪುಟ ಘಟನೋತ್ತರ ಅನುಮೋದನೆ ನೀಡಿದೆ.
ಯೋಜನೆ ಒಳಗೊಂಡ ಗ್ರಾಮಗಳ ಜಮೀನುಗಳ ಮಾರ್ಗಸೂಚಿ ದರಗಳು ವಿಭಿನ್ನವಾಗಿರುವುದರಿಂದ ಭೂಸ್ವಾಧೀನ ಕೈಗೊಳ್ಳುವ ಜಮೀನು ಮಾಲಕರಿಗೆ ಆಯಾ ಗ್ರಾಮವಾರು ಮಾರ್ಗಸೂಚಿ ದರವನ್ನು ಗಮನದಲ್ಲಿರಿಸಿಕೊಂಡು 1994ರ ಭೂಸ್ವಾಧೀನ ಕಾಯ್ದೆ ಅಡಿ ನಿಗದಿಪಡಿಸಬಹುದಾದ ಭೂ ಪರಿಹಾರ ಮೊತ್ತಕ್ಕಿಂತ ಹೆಚ್ಚಿನ ಪರಿಹಾರ ಮೊತ್ತ ನಿಗದಿಪಡಿಸಲು ಈ ತಿದ್ದುಪಡಿ ಅನುಕೂಲ ಆಗಲಿದೆ ಎಂದು ಸಚಿವ ಎಚ್.ಕೆ. ಪಾಟೀಲ ಮಾಹಿತಿ ನೀಡಿದರು.
ಜಮೀನು ಹಂಚಿಕೆ
ಇನ್ನು ಸಣ್ಣ ಕೈಗಾರಿಕೆಗಳ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರ ಸ್ಥಾಪನೆಗಾಗಿ ರಾಷ್ಟ್ರೀಯ ಸಣ್ಣ ಕೈಗಾರಿಕಾ ನಿಗಮ ನಿಯಮಿತ (ಎನ್ಎಸ್ಐಸಿ)ಕ್ಕೆ ಹಂಚಿಕೆ ಮಾಡಲು ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಪೀಣ್ಯ 1ನೇ ಹಂತದಲ್ಲಿರುವ ಕೈಗಾರಿಕಾ ವಸಾಹತುಗಳು ನಿವೇಶನ/ ಮಳಿಗೆ ಸಂಖ್ಯೆ ಎ-180 ಅನ್ನು 30 ವರ್ಷಗಳ ಕರಾರು ಅವಧಿಗೆ ವಾರ್ಷಿಕ ರೂ. 1 ಶುಲ್ಕದ ಆಧಾರದಲ್ಲಿ ನೀಡಲು ತೀರ್ಮಾನಿಸಲಾಗಿದೆ ಎಂದೂ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಅನುಮಾನ ಬಾರದಂತೆ 5 ವರ್ಷದಿಂದ ವಾಸ; ಗಾರೆ ಕಾರ್ಮಿಕರಾಗಿದ್ದ ಬಾಂಗ್ಲಾ ಅಕ್ರಮ ವಲಸಿಗರು
RSS;ಶತಮಾನ ಸಂಭ್ರಮಕ್ಕೆ ‘ಪಂಚಪರಿವರ್ತನ’: 3 ಹಂತದಲ್ಲಿ 5 ತತ್ತ್ವಗಳ ಪಾಲನೆ
Muzrai; ಅರ್ಚಕರಿಗೆ 5 ಲಕ್ಷ ರೂ. ಜೀವ ವಿಮೆಗೆ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಭರವಸೆ
Channapatna by-election; ಸ್ಪರ್ಧೆ ಖಚಿತ ಎಂದ ಸಿಪಿ ಯೋಗೇಶ್ವರ್
G.Parameshwara; ಬೊಂಬೆ ಹೇಳುತೈತೆ ಹಾಡಿಗೆ ಗೃಹ ಸಚಿವರ ಹೆಜ್ಜೆ!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Ratan Naval Tata: ರತನ್ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು
Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ
Pakistan Cricket: ಟೆಸ್ಟ್ನಿಂದ ಬಾಬರ್ಗೆ ಗೇಟ್ ಪಾಸ್; ಪಾಕ್ ತಂಡದಲ್ಲಿ ಏನಾಗುತ್ತಿದೆ?
Darshan; ವಿಜಯಲಕ್ಷ್ಮೀ ಪೋಸ್ಟ್ ವೈರಲ್: ದರ್ಶನ್ ಬಿಡುಗಡೆಯ ಸೂಚನೆ?
Kampli- ತುಂಗಭದ್ರಾ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.