RSS;ಶತಮಾನ ಸಂಭ್ರಮಕ್ಕೆ ‘ಪಂಚಪರಿವರ್ತನ’: 3 ಹಂತದಲ್ಲಿ 5 ತತ್ತ್ವಗಳ ಪಾಲನೆ

ಮುಂದಿನ ಒಂದು ವರ್ಷ ಕಾಲ ಕೋಟ್ಯಂತರ ಕಾರ್ಯಕರ್ತರಿಂದ ಈ ಅಭಿಯಾನ ನಡೆಯಲಿದೆ

Team Udayavani, Oct 13, 2024, 7:10 AM IST

RSS

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರೆಸ್ಸೆಸ್‌) 100 ವರ್ಷ ತುಂಬುತ್ತಿರುವ ಹೊತ್ತಿನಲ್ಲಿ ಸಮಾಜದಲ್ಲಿ ಗುಣಾತ್ಮಕ ಬದಲಾವಣೆಗಾಗಿ “ಪಂಚ ಪರಿವರ್ತನಾ’ ಎಂಬ ಕಾರ್ಯಕ್ರಮ ಜಾರಿಗೆ ಮುಂದಾಗಿದೆ.

ಮುಂದಿನ 1 ವರ್ಷ ಕಾಲ ಈ ಅಭಿಯಾನವನ್ನು ನಿತ್ಯ ಜೀವನದ ಭಾಗವಾಗಿ ಜೋಡಿಸುವುದಕ್ಕೆ ಸಂಘ ಚಿಂತಿಸಿದ್ದು, ಪಂಚ ಪರಿವರ್ತನೆಯನ್ನು “ಶತಾಬ್ದ ಘೋಷಣೆ’ ಎಂದು ಪರಿಗಣಿಸಿದೆ.ಸರಸಂಘ ಚಾಲಕ ಮೋಹನ್‌ ಭಾಗವತ್‌ ಹಾಗೂ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ನಿರ್ದೇಶನದಂತೆ ಸಮಾಜದ ಗುಣಾತ್ಮಕ ಪರಿವರ್ತನೆ ದೃಷ್ಟಿಯಿಂದ ಈ ಕಲ್ಪನೆ ರೂಪಿಸಿದ್ದು, ವಿವಿಧ ಸ್ತರಗಳಲ್ಲಿರುವ ಕೋಟ್ಯಂತರ ಕಾರ್ಯಕರ್ತರು ಈ 5 ತಣ್ತೀಗಳನ್ನು 3 ಹಂತದಲ್ಲಿ ಪಾಲನೆ ಮಾಡುವುದರೊಂದಿಗೆ ಅಭಿಯಾನ ನಡೆಯಲಿದೆ.

ಇಡೀ ದೇಶಕ್ಕೆ ಅನ್ವಯವಾಗುವಂಥ ಬೃಹತ್‌ ಅಭಿಯಾನ, ಶಿಬಿರಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಅನುಭವ ಇರುವ ಆರೆಸ್ಸೆಸ್‌ ಶತಮಾನದ ಸಂಭ್ರಮದಲ್ಲಿ ಇದ್ಯಾವುದಕ್ಕೂ ಆದ್ಯತೆ ನೀಡದೆ “ಪಂಚ ಪರಿವರ್ತನೆ’ಯನ್ನೇ ಪ್ರಧಾನವಾಗಿಟ್ಟುಕೊಳ್ಳಲು ನಿರ್ಧರಿಸಿದೆ.

ಸಂಘಟನೆಯೊಂದು 100 ವರ್ಷ ತಲುಪುವುದು ನಾಗರಿಕ ಸಮಾಜದಲ್ಲಿ ಒಂದು ಮೈಲುಗಲ್ಲು. ಆದರೆ ವಿಶ್ವದ ಅತಿದೊಡ್ಡ ಸಾಮಾಜಿಕ ಸಂಘಟನೆಯಾದ ಆರೆಸ್ಸೆಸ್‌ ಈ ಸಂದರ್ಭದಲ್ಲಿ ವಿನೂತನವಾಗಬೇಕು. “ಸಮಾಜದಲ್ಲಿ ಆರೆಸ್ಸೆಸ್‌ ಅಲ್ಲ, ಸಮಾಜವೇ ಆರೆಸ್ಸೆಸ್‌’ ಎಂಬ ಕಲ್ಪನೆಯೊಂದಿಗೆ ಪಂಚಪರಿವರ್ತನಾ ಅಭಿಯಾನ ನಡೆಸಬೇಕೆಂದು ದತ್ತಾತ್ರಯ ಹೊಸಬಾಳೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಯಾವುದು ಈ ಸೂತ್ರ?
“ಸಾಮರಸ್ಯ, ಕುಟುಂಬ ಪ್ರಬೋಧನಾ, ಪರಿಸರ ಸಂರಕ್ಷಣೆ, ಸ್ವದೇಶಿ ಜೀವನಶೈಲಿ ಹಾಗೂ ನಾಗರಿಕ ಶಿಷ್ಟಾಚಾರ ಪಾಲನೆ’ ಈ 5 ತಣ್ತೀಗಳಾಗಿವೆ. ಸ್ವಾತಂತ್ರ್ಯ ಬಂದು ಇಷ್ಟು ವರ್ಷ ಕಳೆದರೂ ಸಮಾಜದಲ್ಲಿ ಇನ್ನೂ ಜಾತೀಯತೆ ತೊಲಗಿಲ್ಲ. ಈ ಹಿನ್ನೆಲೆಯಲ್ಲಿ ಸಾಮರಸ್ಯ’ ಎಂಬ ತತ್ವವನ್ನು ವ್ರತದಂತೆ ಪಾಲಿಸಬೇಕೆಂಬುದು ಸಂಘದ ನಿಲುವಾಗಿದೆ. ದೇವಸ್ಥಾನ, ಸ್ಮಶಾನ, ಜಲಮೂಲಗಳ ಬಳಕೆ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಜಾತೀ ಯ ತೆ ಸಲ್ಲ. ಜಾತಿ ಮೀರಿದ ಬಾಂಧವ್ಯ ಸಮಾಜದಲ್ಲಿ ಬೆಳೆಯಬೇಕೆಂಬುದು ಈ ಪೈಕಿ ಮೊದಲನೆಯದಾಗಿದೆ.

ಎರಡನೆಯದಾಗಿ “ಕುಟುಂಬ ಪ್ರಬೋಧನಾ’. ಸಮಾಜದಲ್ಲಿ ಮೌಲ್ಯಗಳು ಶಿಥಿಲಗೊಳ್ಳುತ್ತಿವೆ ಎಂಬ ಮಾತು ಎಲ್ಲೆಡೆ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ 6 ಅಂಶಗಳ ಮೂಲಕ ಭಾರತೀಯ ಕುಟುಂಬ ಸಂಸ್ಕಾರದ ಮರು ಸ್ಥಾಪನೆ ಸಂಘದ ಉದ್ದೇಶವಾಗಿದೆ. ಭಾಷಾ (ಮಾತೃ ಭಾಷೆ ಪಾಲನೆ), ಭೂಷ (ಭಾರತೀಯ ವಸ್ತ್ರ ಪದ್ಧತಿ), ಭಜನ್‌ (ಆರಾಧನಾ ವಿಧಾನ), ಭೋಜನ (ಭಾರತೀಯ ಆಹಾರ ಪದ್ಧತಿ), ಭ್ರಮಣ್‌ ( ಕೌಟುಂಬಿಕ ಪ್ರವಾಸ) ಹಾಗೂ ಭವನ ( ಭಾರತೀಯ ಕುಟುಂಬ ಕಲ್ಪನೆ) ಇದರ ಭಾಗವಾಗಿದೆ.

ಪರಿಸರ ಸಂರಕ್ಷಣೆ 3ನೇ ಅಂಶವಾಗಿದ್ದು, ಸಸ್ಯ ಪಾಲನೆ, ಜಲ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್‌ ಹಠಾವೋ ಇದರಲ್ಲಿ ಸೇರುತ್ತದೆ. 4ನೇ ವಿಚಾರ ಸ್ವದೇಶಿ ಜೀವನ ಶೈಲಿಗೆ ಸಂಬಂಧಪಟ್ಟಿದ್ದು, ಇದರಲ್ಲಿ ಮಾತೃಭಾಷಾ ಶಿಕ್ಷಣವೂ ಸೇರಿದೆ. 5ನೇಯದು ಸಂಘದ ದೃಷ್ಟಿಯಲ್ಲಿ ಅತ್ಯಂತ ಮಹತ್ವಪೂರ್ಣವಾಗಿದ್ದು, ಸಂವಿಧಾನದಲ್ಲಿ ಉಲ್ಲೇಖಿತವಾದ ಮೂಲಭೂತ ಕರ್ತವ್ಯದ ಪಾಲನೆಯೂ ಸೇರಿದಂತೆ ಸಮಾಜದಲ್ಲಿ ನಾಗರಿಕ ಶಿಷ್ಟಾಚಾರ ಹಾಗೂ ನಾವೇ ಮಾಡಿದ ಕಾನೂನುಗಳ ಸ್ವಯಂ ಪಾಲನೆ ಸೇರಿದೆ.

100 ವರ್ಷದಲ್ಲಿ ಸಂಘ ತಲುಪದ ಕ್ಷೇತ್ರವೇ ಇಲ್ಲ. ಪಂಚ ಪರಿವರ್ತನೆ ಎಂಬ ಶತಾಬ್ದಿ ಘೋಷಣೆ ಸಮಾಜದ ಒಟ್ಟಾರೆ ಭವಿಷ್ಯದ ದೃಷ್ಟಿಯಿಂದ ಮಹತ್ವದ್ದಾಗಿದೆ. ಇತ್ತೀಚಿನ ದಿನಗಳಲ್ಲಿ ನಾಗರಿಕ ಕರ್ತವ್ಯ ಪಾಲನೆ ಕ್ಷೀಣಿಸುತ್ತಿದೆ. ಜವಾಬ್ದಾರಿಯುತ ಸಮಾಜ ಎಲ್ಲರ ಬಯಕೆಯಾಗಿದ್ದು, ಸಂಘದ ಈ ಉದಾತ್ತ ಕಲ್ಪನೆಯ ಅನುಷ್ಠಾನದಲ್ಲಿ ನಾವೆಲ್ಲರೂ ಮೊದಲಿಗರಾಗೋಣ.
ವಿ. ಸುನಿಲ್‌ ಕುಮಾರ್‌, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

ರಾಘವೇಂದ್ರ ಭಟ್‌

ಟಾಪ್ ನ್ಯೂಸ್

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು

ಟೆಸ್ಟ್‌ ತಂಡದಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ಕ್ರಿಕೆಟ್‌ ನಲ್ಲಿ ಏನಾಗುತ್ತಿದೆ?

Pakistan Cricket: ಟೆಸ್ಟ್‌ನಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ತಂಡದಲ್ಲಿ ಏನಾಗುತ್ತಿದೆ?

Vijayalakshmi Darshan

Darshan; ವಿಜಯಲಕ್ಷ್ಮೀ ಪೋಸ್ಟ್‌ ವೈರಲ್: ದರ್ಶನ್‌ ಬಿಡುಗಡೆಯ ಸೂಚನೆ?

salman-khan

Mumbai: ಬಿಗ್‌ ಬಾಸ್‌ ಶೂಟಿಂಗ್‌ ಅರ್ಧದಲ್ಲೇ ಬಿಟ್ಟು ಆಸ್ಪತ್ರೆಗೆ ಧಾವಿಸಿದ ಸಲ್ಮಾನ್‌ ಖಾನ್

INDvsBAN: India’s young speedster Mayank Yadav joins the special record club

INDvsBAN: ವಿಶೇಷ ದಾಖಲೆ ಕ್ಲಬ್‌ ಸೇರಿದ ಭಾರತದ ಯುವ ವೇಗಿ ಮಯಾಂಕ್‌ ಯಾದವ್

Martin movie review

Martin Movie Review: ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಟಿನ್‌ ಮಿಂಚು

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಅನುಮಾನ ಬಾರದಂತೆ 5 ವರ್ಷದಿಂದ ವಾಸ; ಗಾರೆ ಕಾರ್ಮಿಕರಾಗಿದ್ದ ಬಾಂಗ್ಲಾ ಅಕ್ರಮ ವಲಸಿಗರು

Udupi: ಅನುಮಾನ ಬಾರದಂತೆ 5 ವರ್ಷದಿಂದ ವಾಸ; ಗಾರೆ ಕಾರ್ಮಿಕರಾಗಿದ್ದ ಬಾಂಗ್ಲಾ ಅಕ್ರಮ ವಲಸಿಗರು

Ramalinga reddy 2

Muzrai; ಅರ್ಚಕರಿಗೆ 5 ಲಕ್ಷ ರೂ. ಜೀವ ವಿಮೆಗೆ ಕ್ರಮ: ಸಚಿವ ರಾಮಲಿಂಗಾ ರೆಡ್ಡಿ ಭರವಸೆ

1-a-yy

Channapatna by-election; ಸ್ಪರ್ಧೆ ಖಚಿತ ಎಂದ ಸಿಪಿ ಯೋಗೇಶ್ವರ್‌

vidhana-soudha

PRR:ಭೂ ಪರಿಹಾರ ಬದಲಿಗೆ ಟಿಡಿಆರ್‌ ನೀಡಲು ಸಂಪುಟ ಸಭೆ ತೀರ್ಮಾನ

1-paramm

G.Parameshwara; ಬೊಂಬೆ ಹೇಳುತೈತೆ ಹಾಡಿಗೆ ಗೃಹ ಸಚಿವರ ಹೆಜ್ಜೆ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು

3-kottigehara

Kottigehara: ಕೌ ಗಾರ್ಡ್ ಗೆ ಬಿದ್ದು ಬೆಂಗಳೂರು ಪ್ರವಾಸಿಗನಿಗೆ ಗಾಯ

ಟೆಸ್ಟ್‌ ತಂಡದಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ಕ್ರಿಕೆಟ್‌ ನಲ್ಲಿ ಏನಾಗುತ್ತಿದೆ?

Pakistan Cricket: ಟೆಸ್ಟ್‌ನಿಂದ ಬಾಬರ್‌ಗೆ ಗೇಟ್‌ ಪಾಸ್;‌ ಪಾಕ್‌ ತಂಡದಲ್ಲಿ ಏನಾಗುತ್ತಿದೆ?

Vijayalakshmi Darshan

Darshan; ವಿಜಯಲಕ್ಷ್ಮೀ ಪೋಸ್ಟ್‌ ವೈರಲ್: ದರ್ಶನ್‌ ಬಿಡುಗಡೆಯ ಸೂಚನೆ?

1-kampli-1

Kampli- ತುಂಗಭದ್ರಾ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.