Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ


Team Udayavani, Oct 13, 2024, 8:39 AM IST

Baba Siddique Case:‌ ಲಾರೆನ್ಸ್‌ ಬಿಷ್ಣೋಯ್ ಕೈವಾಡ ಶಂಕೆ; ಇಬ್ಬರು ಶೂಟರ್‌ ಗಳ ಬಂಧನ

ಮುಂಬೈ: ಮಹಾರಾಷ್ಟ್ರದ ರಾಜಕೀಯ ಧುರೀಣ, ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕಿ (Baba Siddique) ಹತ್ಯೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಘಟನೆಯಲ್ಲಿ ಕುಖ್ಯಾತ ಗ್ಯಾಂಗ್‌ ಸ್ಟರ್‌ ಲಾರೆನ್ಸ್‌ ಬಿಷ್ಣೋಯ್‌ (Lawrence Bishnoi) ಕೈವಾಡದ ಬಗ್ಗೆ ಶಂಕೆ ವ್ಯಕ್ತವಾಗಿದೆ.

66 ವರ್ಷದ ಎನ್‌ ಸಿಪಿ ನಾಯಕ ಬಾಬಾ ಸಿದ್ದಿಕಿ ಅವರಿಗೆ ಶನಿವಾರ (ಅ.12) ರಾತ್ರಿ ಮುಂಬೈನ ಬಾಂದ್ರಾ ಪೂರ್ವದಲ್ಲಿ ಅವರ ಮಗನ ಕಚೇರಿ ಬಳಿ ಗುಂಡಿಕ್ಕಲಾಗಿತ್ತು. ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಅವರು ಬದುಕುಳಿಯಲಿಲ್ಲ.

ಇಬ್ಬರು ಬಂಧಿತ ಆರೋಪಿಗಳನ್ನು ಹರಿಯಾಣದ ಕರ್ನೈಲ್ ಸಿಂಗ್ ಮತ್ತು ಉತ್ತರ ಪ್ರದೇಶದ ಧರ್ಮರಾಜ್ ಕಶ್ಯಪ್ ಎಂದು ಗುರುತಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಅವರು ಪ್ರಸ್ತುತ ಜೈಲಿನಲ್ಲಿರುವ ಕುಖ್ಯಾತ ಗ್ಯಾಂಗ್‌ ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರ ಗ್ಯಾಂಗ್‌ ಗೆ ಸೇರಿದವರು ಎಂದು ಹೇಳಿಕೊಂಡಿದ್ದಾರೆ ಎಂದು ಕ್ರೈಂ ಬ್ರಾಂಚ್ ಮೂಲಗಳು ತಿಳಿಸಿವೆ.

ಕೊಲೆಗೆ ಮೊದಲು ಸುಮಾರು 25ರಿಂದ 30 ದಿನಗಳ ಕಾಲ ಅವರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿದೆ.

ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ಮೂಲಗಳ ಪ್ರಕಾರ ಮೂವರು ಆರೋಪಿಗಳು ಘಟನಾ ಸ್ಥಳಕ್ಕೆ ಆಟೋ ರಿಕ್ಷಾದಲ್ಲಿ ಆಗಮಿಸಿದ್ದರು. ಅಲ್ಲಿ ಕೆಲ ಸಮಯ ಕಾದು ಬಳಿಕ ಸಿದ್ದಿಕಿಗೆ ಗುಂಡು ಹಾರಿಸಿದ್ದರು. ಶೂಟರ್‌ ಗಳಿಗೆ ಮಾಹಿತಿ ರವಾನೆ ಮಾಡುತ್ತಿದ್ದ ಮತ್ತೊಬ್ಬ ಕೂಡಾ ಘಟನೆಯಲ್ಲಿ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾದ ಬಾಬಾ ಸಿದ್ದಿಕಿ ಅವರು ಬಾಂದ್ರಾ (ಪಶ್ಚಿಮ) ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕಾರಾಗಿ ಆಯ್ಕೆಯಾಗಿದ್ದರು. ಮುಂಬೈನ ಪ್ರಮುಖ ವ್ಯಕ್ತಿಯಾಗಿದ್ದ ಅವರು 2004ರಿಂದ 2008ರವರೆಗೆ ವಿಲಾಸ್‌ರಾವ್‌ ದೇಶ್‌ಮುಖ್‌ ಸರ್ಕಾರದಲ್ಲಿ ಸಚಿವರಾಗಿದ್ದರು. ಈ ವರ್ಷದ ಫೆಬ್ರವರಿಯಲ್ಲಿ ಅವರು ಕಾಂಗ್ರೆಸ್‌ ತೊರೆದು ಅಜಿತ್‌ ಪವಾರ್‌ ಅವರ ಎನ್‌ ಸಿಪಿಗೆ ಸೇರ್ಪಡೆಯಾಗಿದ್ದರು.

ಟಾಪ್ ನ್ಯೂಸ್

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

5-bommai

ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ‌ ಪ್ರಶ್ನೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Raichur: ಸ್ಕೂಟಿ – ಕಾರು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

Raichur: ಸ್ಕೂಟಿ – ಕಾರು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Miracle: 15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Miracle: 15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

salman-khan

Mumbai: ಬಿಗ್‌ ಬಾಸ್‌ ಶೂಟಿಂಗ್‌ ಅರ್ಧದಲ್ಲೇ ಬಿಟ್ಟು ಆಸ್ಪತ್ರೆಗೆ ಧಾವಿಸಿದ ಸಲ್ಮಾನ್‌ ಖಾನ್

Ghaziabad: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್‌ಪೆಕ್ಟರ್‌!

Ghaziabad: ಪೊದೆಯಲ್ಲಿ ಸಿಕ್ಕ ನವಜಾತ ಹೆಣ್ಣು ಶಿಶುವನ್ನು ದತ್ತು ಪಡೆದ ಇನ್ಸ್‌ಪೆಕ್ಟರ್‌!

PM Modi

RSS; ಶತಮಾನದ ಸಂಭ್ರಮ: ಸದಸ್ಯರಿಗೆ ಮೋದಿ ಶುಭಾಶಯ

1-asss-bg

NCP Leader; ಗುಂಡಿನ ದಾಳಿಗೈದು ಬಾಬಾ ಸಿದ್ದಿಕಿ ಬರ್ಬರ ಹ*ತ್ಯೆ!!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

5-bommai

ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ‌ ಪ್ರಶ್ನೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-udupi

Malpe: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ

10

JC Nagar Dussehra: ಜೆ.ಸಿ.ನಗರ ದಸರಾದಲ್ಲಿ ನೂರಾರು ಪಲ್ಲಕ್ಕಿಗಳ ಉತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.