Martin Movie Review: ಆ್ಯಕ್ಷನ್‌ ಅಬ್ಬರದಲ್ಲಿ ಮಾರ್ಟಿನ್‌ ಮಿಂಚು


Team Udayavani, Oct 13, 2024, 9:00 AM IST

Martin movie review

ಮಾರ್ಟಿನ್‌ ಅಭಿಮಾನಿಗಳ ಕುತೂಹಲ ತಣಿಸಿದೆ. ಒಂದು ಸ್ಟಾರ್‌ ಸಿನಿಮಾದಲ್ಲಿ ಏನೆಲ್ಲಾ ಅಂಶಗಳು ಇರಬೇಕು ಆ ಎಲ್ಲಾ ಅಂಶಗಳು ಇಲ್ಲಿವೆ. ಸಿನಿಮಾದ ಕಥೆಯೇ ಇಲ್ಲಿ ಹೈಲೈಟ್‌. ಎಲ್ಲ ಭಾಷೆಗೂ ಒಪ್ಪುವಂಥ ಕಥೆಯನ್ನೇ ನಿರ್ಮಪಕರು ಆಯ್ಕೆ ಮಾಡಿದ್ದಾರೆ. ಕಥೆಯಲ್ಲಿ ಬರುವ ಟ್ವಿಸ್ಟ್‌ ಆ್ಯಂಡ್‌ ಟರ್ನ್‌ ಗಳೇ ಸಿನಿಮಾದ ಪ್ಲಸ್‌ಗಳು.

ಪ್ರೇಕ್ಷಕನ ನಿರೀಕ್ಷಿಗೆ ನಿಲುಕದೆ ಮಗ್ಗಲು ಬದಲಿಸುತ್ತಾ ಸಿನಿಮಾ ಸಾಗುತ್ತದೆ. ಚಿತ್ರದ ಅದ್ಧೂರಿತನದಲ್ಲಿ ಗ್ರಾಫಿಕ್ಸ್‌ ಕೊಡುಗೆ ಮಹತ್ವದ್ದು. ಆದರೆ ಇದು ಇನ್ನೊಂದಿಷ್ಟು ಗುಣಮಟ್ಟದಲ್ಲಿ ಇದ್ದಿದ್ದರೆ ಮಾರ್ಟಿನ್‌ ವೈಭವ ಹೆಚ್ಚುತ್ತಿತ್ತು. ಸಿನಿಮಾದ ಕೊನೆಯಲ್ಲೊಂದು ಟ್ವಿಸ್ಟ್‌ ಕೂಡಾ ಇದೆ. ಇಲ್ಲಿ ಆ್ಯಕ್ಷನ್‌ ದೃಶ್ಯಗಳಿಗೆ ಹೆಚ್ಚಿನ ಮಹತ್ವವಿದೆ. ರೆಗ್ಯುಲರ್‌ ಶೈಲಿ ಬಿಟ್ಟ ಆಕ್ಷನ್‌ ದೃಶ್ಯಗಳನ್ನು ಇಲ್ಲಿ ನೋಡಬಹುದು. ನಿರ್ಮಾಪಕ ಉದಯ್‌ ಮೆಹ್ತಾ ಆ್ಯಕ್ಷನ್‌ಗೆ ಸ್ವಲ್ಪ ಹೆಚ್ಚೇ ಖರ್ಚು ಮಾಡಿದ್ದಾರೆ ಎನ್ನಬಹುದು. ಇಡೀ ಸಿನಿಮಾವನ್ನು ಅದ್ದೂರಿಯಾಗಿ ಕಟ್ಟಿಕೊಡಬೇಕೆಂಬ ನಿರ್ಮಾಪಕರ ಸಂಕಲ್ಪ ತೆರೆಮೇಲೆ ಎದ್ದು ಕಾಣುತ್ತದೆ.

ಮಾರ್ಟಿನ್‌ ಒಂದು ಔಟ್‌ ಆ್ಯಂಡ್‌ ಔಟ್‌ ಆಕ್ಷನ್‌ ಸಿನಿಮಾ. ಮಾಸ್‌ ಮನಸುಗಳು ಖುಷಿಪಡುವ ಸನ್ನಿವೇಶಗಳು ಹೆಜ್ಜೆ ಹೆಜ್ಜೆಗೂ ಇಲ್ಲಿ ಸಿಗುತ್ತವೆ. ಚಿತ್ರದಲ್ಲಿ ಪಾಕಿಸ್ತಾನವಿದೆ. ಅಲ್ಲೊಬ್ಬ “ಇಂಡಿಯನ್‌’ ಎಂಬ ಟ್ಯಾಟೂ ಹಾಕಿಕೊಂಡು ಎಲ್ಲರ ಹುಟ್ಟಡಗಿಸುವ ಬಲಶಾಲಿ ಇದ್ದಾನೆ. ಜೊತೆಗೆ ಆತನಿಗೊಂದು ಕನ್ಫೂಶನ್ ಕೂಡಾ ಇದೆ. ಇದೆ ಕಥೆಯ ಮೂಲ ಮಂತ್ರ… ಆ ಕುತೂಹಲ ಏನೆಂಬುದನ್ನು ತೆರೆ ಮೇಲೆ ನೋಡಿದರೇನೆ ಚೆನ್ನ.

ಇನ್ನು ನಟನೆ ಬಗ್ಗೆ ಹೇಳುವುದಾದರೆ, ಧ್ರುವ ಸರ್ಜಾ ಅವರಿಗೆ ಇಲ್ಲಿ ಎರಡು ಶೇಡ್‌ನ‌ ಪಾತ್ರ ಸಿಕ್ಕಿದೆ. ಇಡೀ ಸಿನಿಮಾವನ್ನು ಹೆಗಲ ಮೇಲೆ ಹೊತ್ತು ಸಾಗಿದವರೇ ಧ್ರುವ. ಆಕ್ಷನ್‌ ದೃಶ್ಯಗಳಲ್ಲಿ ಅಬ್ಬರಿಸಿರುವ ಅವರ ಎನರ್ಜಿಗೊಂದು ಮೆಚ್ಚುಗೆ ವ್ಯಕ್ತಪಡಿಸಲೇಬೇಕು. ಅವರ ಎರಡು ಭಿನ್ನ ಪಾತ್ರಗಳನ್ನು ಸಿನಿಮಾದಲ್ಲಿ ನೋಡಿದರೇನೆ ಮಜಾ.

ನಾಯಕಿ ವೈಭವಿ ಶಾಂಡಿಲ್ಯಗೆ ಹೆಚ್ಚಿನ ಅವಕಾಶ ಸಿಗದಿದ್ದರೂ, ಗ್ಲಾಮರಸ್‌ ಆಗಿ ಸಿನಿಮಾದಲ್ಲಿ ಬಂದು ಹೋಗುತ್ತಾರೆ. ಯಾವಾಗಲೂ ಕಾಮಿಡಿ ಮಾಡುವ ಚಿಕ್ಕಣ್ಣ ಇಲ್ಲಿ ಗಂಭೀರವಾಗಿ ಕಾಣಿಸಿಕೊಂಡಿರುವುದು ವಿಶೇಷ. ಉಳಿದಂತೆ ಅಚ್ಯುತ್‌, ಅನ್ವಿಶಿ, ನಿಕ್ತಿನ್‌ ಇತರರು ನಟಿಸಿದ್ದಾರೆ. ಸತ್ಯ ಹೆಗ್ಡೆ ಅವರ ಛಾಯಾಗ್ರಹಣ, ರವಿ ಬಸೂÅರ ಅವರ ಸಂಗೀತ ಚಿತ್ರಕ್ಕಿದೆ. ಒಟ್ಟಾರೆ ಆ್ಯಕ್ಷನ್‌ ಪ್ರಿಯರಿಗೆ ಹೇಳಿ ಮಾಡಿಸಿದ ಸಿನಿಮಾವಿದು.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

5-bommai

ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ‌ ಪ್ರಶ್ನೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Arrested: ಈವೆಂಟ್‌ ಮ್ಯಾನೇಜ್‌ಮೆಂಟ್‌ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ

Raichur: ಸ್ಕೂಟಿ – ಕಾರು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

Raichur: ಸ್ಕೂಟಿ – ಕಾರು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Miracle: 15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

Veera Ratna Foundation: ಯೋಧರ ಕುಟುಂಬಕ್ಕೆ ಹೆಗಲಾಗುವ ವೀರ ರತ್ನ

1

Ratan Naval Tata: ರತನ್‌ ಟಾಟಾ ಮರೆಯಾದ ಮಾಣಿಕ್ಯ; ಅಳಿದ ಮೇಲೂ ಉಳಿವ ನೆನಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

Gopilola Movie Review

Gopilola Movie Review: ಹೆಣ್ಣು ಮಣ್ಣಿನ ಮಧ್ಯೆ ಗೋಪಿ ಆಟ

Bhairadevi Review; ಅಘೋರಿ ಹಿಂದೆ ಘೋರ ಕಥನ

Bhairadevi Review; ಅಘೋರಿ ಹಿಂದೆ ಘೋರ ಕಥನ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Nite Road Movie Review:

Nite Road Movie Review: ಪಾಪ ಕರ್ಮಗಳ ಲೆಕ್ಕಾಚಾರ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?

5-bommai

ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ‌ ಪ್ರಶ್ನೆ

crime

Bidar:‌ ರಸ್ತೆ ಅಪಘಾತ; ಇಬ್ಬರು ಬಲಿ; ಪ್ರಕರಣ ದಾಖಲು

4-udupi

Malpe: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪಾಪನಾಶಿನಿ ನದಿಯಲ್ಲಿ ಪತ್ತೆ

10

JC Nagar Dussehra: ಜೆ.ಸಿ.ನಗರ ದಸರಾದಲ್ಲಿ ನೂರಾರು ಪಲ್ಲಕ್ಕಿಗಳ ಉತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.