INDvsBAN: ವಿಶೇಷ ದಾಖಲೆ ಕ್ಲಬ್ ಸೇರಿದ ಭಾರತದ ಯುವ ವೇಗಿ ಮಯಾಂಕ್ ಯಾದವ್
Team Udayavani, Oct 13, 2024, 10:21 AM IST
ಹೈದರಾಬಾದ್: ಬಾಂಗ್ಲಾದೇಶ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ರನ್ ರಾಶಿ ಹರಿದು ಬಂದಿದೆ. ಭಾರತವು ದಾಖಲೆಯ ರನ್ ಬಾರಿಸಿದೆ. ಇದೇ ವೇಳೆ ಟೀಂ ಇಂಡಿಯಾದ ಯುವ ಬೌಲರ್ ಮಯಾಂಕ್ ಯಾದವ್ (Mayank Yadav) ಸಾಧನೆಯೊಂದಿಗೆ ಭಾರತದ ಬೌಲರ್ಗಳ ವಿಶೇಷ ಕ್ಲಬ್ಗೆ ಸೇರಿಕೊಂಡರು.
ಮೊದಲ ಇನಿಂಗ್ಸ್ನಲ್ಲಿ ಭಾರತದ ಆಟಗಾರರು ಬೌಂಡರಿಗಳ ಸುರಿಮಳೆಗೈದರು. ಹೈದರಾಬಾದ್ ನಲ್ಲಿ ಭಾರತವು ಆರು ವಿಕೆಟ್ ಕಳೆದುಕೊಂಡು 297 ರನ್ ಮಾಡುವುದರೊಂದಿಗೆ ಅಂತಾರಾಷ್ಟ್ರೀಯ ಟಿ20 ಗಳಲ್ಲಿ ಎರಡನೇ ಅತಿ ಹೆಚ್ಚು ಸ್ಕೋರ್ ಮಾಡಿದ ದಾಖಲೆ ಬರೆಯಿತು. ಬಾಂಗ್ಲಾದೇಶ 20 ಓವರ್ ಗಳಲ್ಲಿ ಏಳು ವಿಕೆಟ್ ಗೆ 164 ರನ್ ಸೀಮಿತವಾದ ನಂತರ ಭಾರತ 133 ರನ್ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು.
ಮಯಾಂಕ್ ಅವರ ವೇಗವು ಬಾಂಗ್ಲಾದೇಶವು ರೆಕ್ಕೆಗಳನ್ನು ಹರಡುವ ಬಗ್ಗೆ ಯೋಚಿಸುವ ಮೊದಲೇ ಕತ್ತರಿಸಿತು. ಬಾಂಗ್ಲಾ ಇನ್ನಿಂಗ್ಸ್ನ ಮೊದಲ ಬಾಲ್ ನಲ್ಲಿ, 22 ವರ್ಷ ವಯಸ್ಸಿನ ಪರ್ವೇಜ್ ಹೊಸೈನ್ ಎಮೋನ್ ಅವರನ್ನು ಮಯಾಂಕ್ ಯಾದವ್ ಔಟ್ ಮಾಡಿದರು.
ಇನ್ನಿಂಗ್ಸ್ ನ ಮೊದಲ ಎಸೆತದಲ್ಲಿಯೇ ಎಮೊನ್ ಅವರು ರಿಯಾನ್ ಪರಾಗ್ ಅವರಿಗೆ ಕ್ಯಾಚಿತ್ತು ಹೊರನಡೆದರು. ಒಟ್ಟು ನಾಲ್ಕು ಓವರ್ ಬೌಲಿಂಗ್ ಮಾಡಿದ ಮಯಾಂಕ್ ಯಾದವ್ 32 ರನ್ ನೀಡಿ ಎರಡು ವಿಕೆಟ್ ಕಿತ್ತರು.
ಟಿ20ಐ ಇನ್ನಿಂಗ್ಸ್ನ ಮೊದಲ ಎಸೆತದಲ್ಲಿ ವಿಕೆಟ್ ಪಡೆಯುವ ಮೂಲಕ ಮಯಾಂಕ್ ಈ ಸಾಧನೆ ಮಾಡಿದ ನಾಲ್ಕನೇ ಭಾರತೀಯ ಬೌಲರ್ ಆದರು.
ಅವರು ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್ ಮತ್ತು ಭುವನೇಶ್ವರ್ ಕುಮಾರ್ ಒಳಗೊಂಡಿರುವ ವಿಶೇಷ ಕ್ಲಬ್ ಗೆ ಸೇರಿದರು. “ಸ್ವಿಂಗ್ ಮಾಸ್ಟರ್” ಎಂದು ಕರೆಯಲ್ಪಡುವ ಭುವನೇಶ್ವರ್ ಕುಮಾರ್ ಅವರು ತಮ್ಮ ವೃತ್ತಿಜೀವನದಲ್ಲಿ ಮೂರು ಬಾರಿ ಸಾಧನೆ ಮಾಡಿದ್ದಾರೆ.
ಹೈದರಾಬಾದ್ ನಲ್ಲಿ ಶನಿವಾರ ರಾತ್ರಿ ಉರುಳಿದ ದಾಖಲೆ ಇದೊಂದೇ ಅಲ್ಲ. ಸಂಜು ಸ್ಯಾಮ್ಸನ್ ಅವರು ಟಿ20ಐ ಶತಕ ಗಳಿಸಿದ ಮೊದಲ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan Cricket: ಟೆಸ್ಟ್ನಿಂದ ಬಾಬರ್ಗೆ ಗೇಟ್ ಪಾಸ್; ಪಾಕ್ ತಂಡದಲ್ಲಿ ಏನಾಗುತ್ತಿದೆ?
Women’s T20 World Cup: ಭಾರತಕ್ಕಿಂದು ಆಸೀಸ್ವಿರುದ್ಧ ನಿರ್ಣಾಯಕ ಪಂದ್ಯ
Bodybuilding competition; ದಿನೇಶ್ ಆಚಾರ್ಯ ಮಿಸ್ಟರ್ ಉಚ್ಚಿಲ ದಸರಾ
T20 series; ಕ್ಲೀನ್ಸ್ವೀಪ್ ಸಾಧನೆ: ಬಾಂಗ್ಲಾ ಎದುರು ಭಾರತಕ್ಕೆ ಬೃಹತ್ ಗೆಲುವು
Mohammed Siraj: ತೆಲಂಗಾಣ ಡಿಎಸ್ಪಿಯಾಗಿ ವೇಗಿ ಮೊಹಮ್ಮದ್ ಸಿರಾಜ್ ಆಯ್ಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.