By Election: ಚನ್ನಪಟ್ಟಣದಲ್ಲಿ ನಾನೇ ಎನ್ ಡಿಎ ಅಭ್ಯರ್ಥಿ: ಎಚ್ ಡಿ ಕುಮಾರಸ್ವಾಮಿ
ಕಾನೂನು ಬಾಹಿರ ಕೆಲಸ ಮಾಡಿದವರಿಗೆ ರಾಜ್ಯ ಸರ್ಕಾರದಿಂದ ರಿಲೀಫ್
Team Udayavani, Oct 13, 2024, 2:07 PM IST
ದಾವಣಗೆರೆ: ರಾಜ್ಯ ಸರ್ಕಾರ ಕಾನೂನು ಬಾಹಿರ ಚಟುವಟಿಕೆ ನಡೆಸಿದವರಿಗೆ ರಿಲೀಫ್ ಕೊಟ್ಟಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಇಲಾಖೆ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ದೂರಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಕೇಸ್ ವಾಪಸ್ ಪಡೆದ ವಿಚಾರ ನೋಡಿದರೆ ರಾಜ್ಯ ಸರ್ಕಾರ ಗಲಭೆಕೋರರಿಗೆ ರಕ್ಷಣೆ ಕೊಡುತ್ತಿದೆ. ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ದೂರಿದರು.
ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನೇ ಅಭ್ಯರ್ಥಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡುತ್ತಿರುವ ಮಾದರಿಯಲ್ಲೇ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಹ ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿ ಯಾದರೂ ನಾನೇ ಎನ್ ಡಿಎ ಅಭ್ಯರ್ಥಿ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದರು.
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ದೂರು ದಾಖಲಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ನನ್ನ ಮೇಲೆ ಅವರು ದೂರು ದಾಖಲು ಮಾಡಿದ್ದಾರೆ. ಅದಕ್ಕೆ ನಾನು ನ್ಯಾಯಾಲಯದಲ್ಲಿ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.
3-4 ಸಾವಿರ ಪುಟಗಳಷ್ಟು ಚಾರ್ಜ್ ಶೀಟ್ ಹಾಕುತ್ತಾರೆ. 12 ವರ್ಷದಿಂದ ನನ್ನ ಮೇಲೆ ಕೇಸ್ ಹಾಗೆ ಉಳಿಸಿಕೊಂಡಿದ್ದಾರೆ. ಈಗ ನನ್ನ ಮೇಲೆ ಕೇಸ್ ಹಾಕಿದ್ದಾರೆ ನ್ಯಾಯಾಲಯದಲ್ಲಿ ಎಲ್ಲ ಚರ್ಚೆ ಆಗಲಿ ಎಂದು ತಿಳಿಸಿದರು.
ಕುಮಾರಸ್ವಾಮಿ ಅವರು ತಾಜ್ ವೆಸ್ಟೆಂಡ್ ನಲ್ಲಿ ಅಧಿಕಾರ ನಡೆಸಿದ ಕುರಿತು ಬಾಲಕೃಷ್ಣ ಹೇಳಿರುವ ಬಗ್ಗೆ ನಾನು ಮಾತನಾಡುವುದಿಲ್ಲ. ಬಾಲಕೃಷ್ಣ ಅವರ ಹಿನ್ನೆಲೆ ಎಂಬುದು ಏನೂ ಎಂಬುದು ಗೊತ್ತಿದೆ ಎಂದರು.
600 ಕೋಟಿ ಕೆಲಸ ಮಾಡದೆ ಬಿಲ್ ಮಾಡಿದ್ದಾರೆ ಅಂತ ಮಹದೇವಪ್ಪ ಅವರು ಮಾತನಾಡಿದ್ದರು. ಸದನ ಸಮಿತಿ ರಚಿಸಿ ತನಿಖೆ ಮಾಡಬೇಕು ಎಂದು ಒತ್ತಾಯಿಸಿದ್ದರು. ಈಗ ಅವರೇ ಅವರನ್ನು ಜೊತೆಗಿಟ್ಟುಕೊಂಡು ಓಡಾಡುತ್ತಾ ಇದ್ದಾರೆ. 2018 ರಲ್ಲಿ ಯಾರಾದ್ರೂ ಫೈಲ್ ಹಿಡಿದುಕೊಂಡು ಬಂದಿದ್ದರಾ. ನಾನು ಏನಾದರೂ ಸಹಿಗೆ ಕಮಿಷನ್ ತೆಗೆದುಕೊಂಡಿದ್ದರೆ ಈಗ ಅವರದೆ ಸರ್ಕಾರ ಇದೆ. ಅದರ ಬಗ್ಗೆ ತನಿಖೆ ನಡೆಸಲಿ. ಯಾರೋ ತೀಟೆಗೆ ಏನಾದರೂ ಮಾತನಾಡಿದರೆ ಅದಕ್ಕೆಲ್ಲ ನಾನೂ ಉತ್ತರ ಕೊಡಬೇಕಾ ಎಂದು ಖಾರವಾಗಿ ಪ್ರಶ್ನಿಸಿದರು.
ದಾವಣಗೆರೆಯಲ್ಲಿ ಕಾಟನ್, ಆಯಿಲ್ ಇಂಡಸ್ಟ್ರಿ ಇತ್ತು. ಆಧುನಿಕತೆ ಬೆಳೆದಂತೆ ನಶಿಸಿ ಹೋಗುತ್ತಾ ಇದೆ. ದಾವಣಗೆರೆಯಲ್ಲಿ ಕೈಗಾರಿಕೆಗೆ ಏನು ಮಾಡಬೇಕು ಎಂಬುದರ ಬಗ್ಗೆ ಕೇಂದ್ರದಲ್ಲಿ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.Y.Vijayendra; ಏನು ಪುರೋಹಿತನಾ? ಜ್ಯೋತಿಷಿನಾ?…: ಸಿದ್ದರಾಮಯ್ಯ ಕಿಡಿ
Hubli: ಪ್ರಕರಣದಲ್ಲಿ ಮುಸ್ಲಿಮರ ಹೆಸರು ಇದ್ದರೆ ಮಾತ್ರ ಬಿಜೆಪಿಯ ಹೋರಾಟ: ಸಂತೋಷ್ ಲಾಡ್
Baba Siddique Case: ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಖರ್ಗೆ
Hubli: ಹಳೇಹುಬ್ಬಳ್ಳಿ ಕೇಸು ಹಿಂಪಡೆದ ವಿಚಾರ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ ಪ್ರಶ್ನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Congress: ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಉಸ್ತುವಾರಿಗಳ ನೇಮಕ
Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ
Kaup: ಮಳೆ ಸಿಂಚನದ ನಡುವೆ ಉಚ್ಚಿಲ ದಸರಾಕ್ಕೆ ವಿಜೃಂಭಣೆಯ ತೆರೆ
Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..ಕಮೆಂಟ್ ಮಾಡಿದವರಿಗೆ ಎಂಜಾಯ್ ಮಾಡಿ ಎಂದ ನಟಿ
Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದು ಕಾಂಗ್ರೆಸ್ ಸರಕಾರದಿಂದ ಅಪರಾಧ: ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.