BBK11: ಈ ವಾರ ಮನೆಯಿಂದ ಯಾರು ಹೋಗಲ್ಲ.. ಕಾರಣವೇನು?
Team Udayavani, Oct 13, 2024, 1:37 PM IST
ಬೆಂಗಳೂರು: ಬಿಗ್ಬಾಸ್ ಕನ್ನಡ -11(Bigg Boss Kannada-11) ದೊಡ್ಮನೆ ಆಟ ಎರಡನೇ ವಾರ ಮುಕ್ತಾಯ ಕಂಡು ಮೂರನೇ ವಾರದತ್ತ ಕಾಲಿಡುತ್ತಿದೆ.
ದಿನ ಕಳೆದಂತೆ ದೊಡ್ಮನೆ ರಂಗೇರುತ್ತಿದೆ. ಸ್ವರ್ಗ – ನರಕದಲ್ಲಿ ಮನೆ ಈಗ ಒಂದೇ ಬಾಗಿಲಿನ ಮನೆಯಾಗಿದೆ. ಎಲ್ಲ ಸ್ಪರ್ಧಿಗಳು ಸ್ವರ್ಗದಲ್ಲೇ ಇದ್ದಾರೆ. ನಿಜವಾದ ಸ್ವರ್ಗ ನರಕ ನೀವು ಬದುಕುವ ರೀತಿಯಲ್ಲಿದೆ. ನಿಮ್ಮ ದೃಷ್ಟಿಕೋನದಲ್ಲಿ. ಈ ಮನೆ ಒಂದಾಗುವ ಸಮಯ ಬಂದಿದೆ. ಒಂದಾದ ಮನೆ ಸ್ವರ್ಗವಾಗಿ ಇರುತ್ತಾ, ನರಕವಾಗಿ ಉಳಿಯುತ್ತದೆ ಎನ್ನುವುದು ನಿಮ್ಮ ಕೈಯಲ್ಲಿದೆ ಎಂದು ಬಿಗ್ ಬಾಸ್ ಹೇಳಿದ್ದಾರೆ .
ಎರಡನೇ ವಾರದಲ್ಲಿ ಮನೆಯಿಂದ ಹೊರ ಹೋಗಲು ನಾಮಿನೇಟ್ ಆಗಿರುವ ಸ್ಪರ್ಧಿಗಳಲ್ಲಿ ಢವ ಢವ ಶುರುವಾಗಿದೆ.
ಕಿಚ್ಚ ಪಂಚಾಯ್ತಿಯಲ್ಲಿ ಸ್ಪರ್ಧಿಗಳಿಗೆ ಪಾಪದ ಪ್ರಾಯಶ್ಚಿತ ಹಾಗೂ ಪ್ರಾಮಾಣಿಕತೆಯ ಪಾಠವನ್ನು ಮಾಡಲಾಗಿದೆ. ಇನ್ನು ಸ್ಪರ್ಧಿಗಳು ಮನೆಯಲ್ಲಿ ಹೇಗಿದ್ದಾರೆ? ಎನ್ನುವುದನ್ನು ಜನರಿಂದ ಬಂದ ಪತ್ರದ ಮೂಲಕ ತಿಳಿಸಲಾಗಿದೆ.
ಈ ನಡುವೆ ಈ ವಾರ ಯಾರು ಮನೆಯಿಂದ ಹೊರಹೋಗುತ್ತಾರೆ ಎನ್ನುವ ಪ್ರಶ್ನೆ ಕಾಡಿದೆ. ಭವ್ಯಾ ಗೌಡ, ಧನರಾಜ್, ಧರ್ಮ ಕೀರ್ತಿರಾಜ್, ರಂಜಿತ್, ತ್ರಿವಿಕ್ರಂ, ಮಾನಸಾ, ಐಶ್ವರ್ಯಾ, ಗೋಲ್ಡ್ ಸುರೇಶ್, ಹಂಸಾ, ಜಗದೀಶ್, ಅನುಷಾ ರೈ ನಾಮಿನೇಟ್ ಆಗಿದ್ದಾರೆ.
ಈ ವಾರ ಎಲಿಮಿನೇಷನ್ ಇಲ್ಲ.. ಮೂಲಗಳ ಪ್ರಕಾರ ಈ ವಾರ ಬಿಗ್ ಬಾಸ್ ಮನೆಯಲ್ಲಿ ಎಲಿಮಿನೇಷನ್ ಇರಲ್ಲ ಎನ್ನಲಾಗಿದೆ. ಪ್ರತಿ ಸೀಸನ್ನಲ್ಲಿ ಒಂದು ವಾರ ಎಲಿಮಿನೇಷನ್ ಇರುವುದಿಲ್ಲ. ಕೆಲವೊಮ್ಮೆ ಸ್ಪರ್ಧಿಗಳನ್ನು ಸೀಕ್ರೆಟ್ ರೂಮ್ ನಲ್ಲಿ ಕೂರಿಸಿ ಆ ಬಳಿಕ ಎಲಿಮಿನೇಷನ್ ಇಲ್ಲವೆಂದು ಹೇಳಲಾಗುತ್ತದೆ.
ಈ ಬಾರಿ ನವರಾತ್ರಿ ವಾರ ಆದ ಕಾರಣ ಎಲಿಮಿನೇಷನ್ ಇರಲ್ಲವೆಂದು ಹೇಳಲಾಗುತ್ತಿದೆ. ಆ ಮೂಲಕ ಸ್ಪರ್ಧಿಗಳಿಗೆ ಸರ್ಪೈಸ್ ನೀಡಲಾಗುತ್ತದೆವೆಂದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಬಿಗ್ಬಾಸ್ ಕಾರ್ಯಕ್ರಮಕ್ಕೆ ಶಾಕ್ ನೀಡಿದ ಪೊಲೀಸರು; ಆಗಿದ್ದೇನು?
BBK11: ಎರಡೇ ವಾರದಲ್ಲಿ ಬಿಗ್ ಬಾಸ್ ನರಕದ ಮನೆ ಧ್ವಂಸ
BBK11: ಪ್ರತಿದಿನ ಎಂಜಾಯ್ ಮಾಡುತ್ತಿದ್ದೇನೆ.. ಬಿಗ್ ಬಾಸ್ ಬಿಟ್ಟು ಹೋಗಲ್ಲ ಎಂದ ಜಗದೀಶ್
BBK11: ಬಿಗ್ ಬಾಸ್ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ
BB18: ಬಿಗ್ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿರುವ ʼಕತ್ತೆʼಯನ್ನು ಹೊರ ಕಳುಹಿಸಿ..ʼಪೆಟಾʼ ಆಗ್ರಹ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Viral Video; ಬೆಂಕಿ ಹೊತ್ತಿಕೊಂಡ ಬಳಿಕ ಚಾಲಕನಿಲ್ಲದೆ ಚಲಿಸಿದ ಕಾರು!!
Martin Box Office: ಹೇಗಿದೆ ʼಮಾರ್ಟಿನ್ʼ ಹವಾ.. ಎರಡು ದಿನದಲ್ಲಿ ಚಿತ್ರ ಗಳಿಸಿದ್ದೆಷ್ಟು?
Dharwad: ಸಿಎಂ ಸಿದ್ದು ವಿರುದ್ದ ಪ್ರತಿಭಟನೆ: ಬಿಜೆಪಿ ಮುಖಂಡರು ವಶಕ್ಕೆ
Vijayapura: ಸಿ.ಟಿ.ರವಿ ಪ್ರಕರಣ ಹಿಂಪಡೆದ ಬಗ್ಗೆ ಬಿಜೆಪಿಯವರು ಯಾಕೆ ಹೇಳಲ್ಲ: ಎಂಬಿ ಪಾಟೀಲ್
Yuva: ರೌಡಿಸಂ ಸುತ್ತ ಯುವ ರಾಜಕುಮಾರ್: ಹೊಸ ಚಿತ್ರಕ್ಕೆ 3 ನಿರ್ಮಾಪಕರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.