Hubli: ಹಳೇಹುಬ್ಬಳ್ಳಿ ಕೇಸು ಹಿಂಪಡೆದ ವಿಚಾರ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
Team Udayavani, Oct 13, 2024, 2:34 PM IST
ಹುಬ್ಬಳ್ಳಿ: ಸಚಿವ ಸಂಪುಟದ ಉಪ ಸಮಿತಿಯಲ್ಲಿ ಯಾವುದು ಸುಳ್ಳು ಹಾಗೂ ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದರೆ, ಹೋರಾಟ ಮಾಡಿದಾಗ ಕೇಸ್ ಹಾಕಿದ್ದರೆ ಅಂತಹ ಕೇಸ್ಗಳನ್ನು ವಾಪಸು ಪಡೆಯಲು ಅವಕಾಶವಿದೆ. ಅದೇ ರೀತಿ ಹಳೇಹುಬ್ಬಳ್ಳಿ ಕೇಸನ್ನು ಹಿಂಪಡೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಾಲದಲ್ಲೂ ಕೇಸ್ ವಾಪಸು ಪಡೆದ ಉದಾಹರಣೆಗಳಿವೆ. ಹಳೇ ಹುಬ್ಬಳ್ಳಿಯದು ಸುಳ್ಳು ಕೇಸ್ ಇದೆ ಎಂಬ ಕಾರಣಕ್ಕೆ ವಾಪಸು ಪಡೆಯಲಾಗಿದೆ. ಪ್ರಕರಣ ಕೋರ್ಟ್ ನಲ್ಲಿದೆ. ಕೋರ್ಟ್ ವಾಪಸು ತೆಗೆದುಕೊಳ್ಳಲು ಅವಕಾಶ ಕೊಟ್ಟರೆ ಮಾತ್ರ ವಾಪಸು ತೆಗೆದುಕೊಳ್ಳುವುದು. ಇಲ್ಲದಿದ್ದರೆ ಇಲ್ಲ ಎಂದರು.
ಜೋಶಿಯವರೇ ಭಯೋತ್ಪಾದಕರು: ಕಾಂಗ್ರೆಸ್ನವರು ಭಯೋತ್ಪಾದಕರ ಪರ ಎಂಬ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಜೋಶಿಯವರೇ ಭಯೋತ್ಪಾದಕ. ಬಿಜೆಪಿಯವರು ಎಲ್ಲಾ ಸುಳ್ಳು ವಿಚಾರಗಳ ಮೇಲೆಯೇ ಪ್ರತಿಭಟನೆ ಮಾಡುವುದು. ಅವರು ಸಹ ಅನೇಕ ಕೇಸ್ಗಳನ್ನು ವಿತ್ ಡ್ರಾ ಮಾಡಿದ್ದಾರೆ ಎಂದರು.
ವಿಧ್ವಂಸಕರ ಕೃತ್ಯಗಳಲ್ಲಿ ಭಾಗಿ ಆಗಿಲ್ಲ
ಹಳೇಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ದಾಖಲಾದವರು ಎಲ್ಲಿಯೂ ವಿಧ್ವಂಸಕರ ಕೃತ್ಯಗಳಲ್ಲಿ ಭಾಗಿ ಆಗಿಲ್ಲ ಅಂತ ಸಾಬೀತಾಗಿದೆ. ಹೀಗಾಗಿ ಆ ಪ್ರಕರಣ ಹಿಂಪಡೆಯಲಾಗಿತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಪ್ರತಿ ಹಂತದಲ್ಲೂ ರಾಜಕಾರಣ ಮಾಡುತ್ತಾರೆ. ಅವರು ಎಷ್ಟು ಕೇಸ್ ವಾಪಸು ತೆಗೆದುಕೊಂಡಿದ್ದಾರೆ? ಆರ್ಎಸ್ಎಸ್, ವಿಎಚ್ಪಿ ಭಜರಂಗದವರ ಮೇಲೆ ಸೇರಿದಂತೆ ಎಲ್ಲರ ಕೇಸ್ ವಾಪಸು ಪಡೆದಿದ್ದಾರೆ. ಅದರ ನಾವು ಪಟ್ಟಿ ಕೊಡುತ್ತೇವೆ. ಹಳೇಹುಬ್ಬಳ್ಳಿ ಗಲಭೆಗೆ ಸಂಬಂಧಿಸಿ ರಾಜಕೀಯ ಒತ್ತಡದಲ್ಲಿ ಆಗ ಪೊಲೀಸರು ಅವರ ಮೇಲೆ ಕೇಸ್ ಮಾಡಿದ್ದಾರೆ. ಇದರಲ್ಲಿ ಯಾರು ಭಾಗಿಯಾಗಿಲ್ಲ ಎಂದು ಖಚಿತವಾದ ಮೇಲೆ ನಾವು ಕೇಸ್ ವಾಪಸು ಪಡೆದುಕೊಂಡಿದ್ದೇವೆ. ಇದನ್ನು ರಾಜಕೀಯವಾಗಿ ಅವರು ಮಾಡುತ್ತಿದ್ದಾರೆ. ನಾವು ರಾಜಕಾರಣ ಮಾಡುತ್ತಿಲ್ಲ. ಅವರಿಗೆ ನ್ಯಾಯ ಒದಗಿಸುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.Y.Vijayendra; ಏನು ಪುರೋಹಿತನಾ? ಜ್ಯೋತಿಷಿನಾ?…: ಸಿದ್ದರಾಮಯ್ಯ ಕಿಡಿ
Hubli: ಪ್ರಕರಣದಲ್ಲಿ ಮುಸ್ಲಿಮರ ಹೆಸರು ಇದ್ದರೆ ಮಾತ್ರ ಬಿಜೆಪಿಯ ಹೋರಾಟ: ಸಂತೋಷ್ ಲಾಡ್
Baba Siddique Case: ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಖರ್ಗೆ
By Election: ಚನ್ನಪಟ್ಟಣದಲ್ಲಿ ನಾನೇ ಎನ್ ಡಿಎ ಅಭ್ಯರ್ಥಿ: ಎಚ್ ಡಿ ಕುಮಾರಸ್ವಾಮಿ
ಪೊಲೀಸ್ ಸ್ಟೇಶನ್ ಮೇಲೆ ದಾಳಿ ಮಾಡಿದರೆ ಪೊಲೀಸರು ಏನೂ ಮಾಡುವಂತಿಲ್ಲವೇ ? ಬೊಮ್ಮಾಯಿ ಪ್ರಶ್ನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Congress: ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಉಸ್ತುವಾರಿಗಳ ನೇಮಕ
Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ
Kaup: ಮಳೆ ಸಿಂಚನದ ನಡುವೆ ಉಚ್ಚಿಲ ದಸರಾಕ್ಕೆ ವಿಜೃಂಭಣೆಯ ತೆರೆ
Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..ಕಮೆಂಟ್ ಮಾಡಿದವರಿಗೆ ಎಂಜಾಯ್ ಮಾಡಿ ಎಂದ ನಟಿ
Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದು ಕಾಂಗ್ರೆಸ್ ಸರಕಾರದಿಂದ ಅಪರಾಧ: ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.