Bhatkala: ತೆರೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಪ್ರವಾಸಿಗನ ರಕ್ಷಣೆ
Team Udayavani, Oct 13, 2024, 2:49 PM IST
ಭಟ್ಕಳ: ಮುರುಡೇಶ್ವರ ಸಮುದ್ರಕ್ಕೆ ಈಜಲು ತೆರಳಿ ತೆರೆಗಳ ಹೊಡೆತಕ್ಕೆ ಸಿಲುಕಿ ಮುಳುಗುತ್ತಿದ್ದ ಪ್ರವಾಸಿಗನೋರ್ವನನ್ನು ಕರಾವಳಿ ಕಾವಲು ಪಡೆಯ ಕೆ.ಎನ್.ಡಿ. ಸಿಬ್ಬಂದಿಗಳು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ನಡೆದಿರುವ ಬಗ್ಗೆ ಅ. 13ರ ರವಿವಾರ ವರದಿಯಾಗಿದೆ.
ಸಂಗಡಿಗರೊಂದಿಗೆ ಬೆಂಗಳೂರಿನಿಂದ ಪ್ರವಾಸಕ್ಕೆ ಮುರ್ಡೇಶ್ವರಕ್ಕೆ ಬಂದಿದ್ದ ಪುನೀತ್ ಕೆ. (19) ಈಜಲು ಸಮುದ್ರಕ್ಕೆ ಇಳಿದಿದ್ದರು.
ಈಜಲು ಬಾರದ ಪುನೀತ್ ಗೆ ನೀರಿನ ಸೆಳೆತ ತಿಳಿಯದೇ ಮುಂದೆ ಮುಂದೆ ಹೋಗಿದ್ದರಿಂದ ಅಲೆಯ ಹೊಡೆತಕ್ಕೆ ಆಯತಪ್ಪಿ ಅಪಾಯಕ್ಕೆ ಸಿಲುಕಿದ್ದರು. ತಕ್ಷಣ ಇದನ್ನು ಕಂಡ ಸ್ಥಳದಲ್ಲಿದ್ದ ಕೆ.ಎನ್.ಡಿ. ಸಿಬ್ಬಂದಿ ಯೋಗೇಶ ಹರಿಕಾಂತ ಹಾಗೂ ಲಕ್ಷ್ಮಣ ಹರಿಕಾಂತ ಅವರು ಪಾತಿ ದೋಣಿಯನ್ನು ತೆಗೆದುಕೊಂಡು ಹೋಗಿ ಮುಳುಗುತ್ತಿದ್ದ ಪುನೀತ್ ಈತನನ್ನು ರಕ್ಷಣೆ ಮಾಡಿದ್ದಾರೆ.
ಇತ್ತೀಚೆಗಷ್ಟೇ ಬೆಂಗಳೂರಿನಿಂದ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಲ್ಲಿ ಓರ್ವ ನೀರು ಪಾಲಾಗಿ ಮೃತಪಟ್ಟ ಘಟನೆ ಹಸಿರಾಗಿರುವುದರಿಂದ ಲೈಫ್ ಗಾರ್ಡ್ ಸಿಬ್ಬಂದಿ ಹಾಗೂ ಕೆ.ಎನ್.ಡಿ. ಸಿಬ್ಬಂದಿಗಳು ಜಾಗೃತರಾಗಿರುವುದರಿಂದ ಪುನೀತ್ ರಕ್ಷಣೆ ಸಾಧ್ಯವಾಯಿತು.
ಮುರುಡೇಶ್ವರ ಸಮುದ್ರದಲ್ಲಿ ದೇವಾಸ್ಥಾನದ ಬಲಭಾಗಕ್ಕೆ ಪ್ರವಾಸಿಗರಿಗೆ ಅನುಮತಿ ನೀಡಲಾಗಿತ್ತು. ಇಲ್ಲಿ ಪ್ರವಾಸಿಗರ ರಕ್ಷಣೆಗೆ ಅಗತ್ಯವಿರುವ ಸ್ಪೀಡ್ ಬೋಟ್, ಜೀವ ರಕ್ಷಕ ಸಾಮಗ್ರಿಗಳು ಇಲ್ಲದೇ ಇರುವುದರಿಂದ ತೊಂದರೆಯಾಗಿದ್ದು, ಪಾತಿ ದೋಣಿಯಲ್ಲಿ ಹೋಗಿ ರಕ್ಷಣೆ ಮಾಡಿದ್ದು, ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದು ಕಾಂಗ್ರೆಸ್ ಸರಕಾರದಿಂದ ಅಪರಾಧ: ಕಾಗೇರಿ
Bhatkal: ತಿರುಪತಿಗೆ ನೇರ ರೈಲು ಸಂಪರ್ಕದಿಂದ ಜನರಿಗೆ ಅನುಕೂಲ: ಎಸ್.ಎಸ್. ಕಾಮತ್
ನವರಾತ್ರಿ ಉತ್ಸವದಲ್ಲಿ ಗಮನಸೆಳೆದ ಕಾಂತಾರ ಖ್ಯಾತಿಯ ಮಾನಸಿ ನೇತೃತ್ವದ ಸಾಂಸ್ಕೃತಿಕ ಕಾರ್ಯಕ್ರಮ
Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ
Sirsi ವಿಜ್ಞಾನ ಪ್ರಶ್ನೆ ಪತ್ರಿಕೆಯ ರಚನೆಯಲ್ಲಿ ಸೂಕ್ತ ಬದಲಾವಣೆಗೆ ಮನವಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Congress: ವಿಧಾನ ಪರಿಷತ್ ಉಪ ಚುನಾವಣೆ: ಕಾಂಗ್ರೆಸ್ ಉಸ್ತುವಾರಿಗಳ ನೇಮಕ
Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ
Kaup: ಮಳೆ ಸಿಂಚನದ ನಡುವೆ ಉಚ್ಚಿಲ ದಸರಾಕ್ಕೆ ವಿಜೃಂಭಣೆಯ ತೆರೆ
Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..ಕಮೆಂಟ್ ಮಾಡಿದವರಿಗೆ ಎಂಜಾಯ್ ಮಾಡಿ ಎಂದ ನಟಿ
Sirsi: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದು ಕಾಂಗ್ರೆಸ್ ಸರಕಾರದಿಂದ ಅಪರಾಧ: ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.