Vijayapura: ಸಿ.ಟಿ.ರವಿ ಪ್ರಕರಣ ಹಿಂಪಡೆದ ಬಗ್ಗೆ ಬಿಜೆಪಿಯವರು ಯಾಕೆ ಹೇಳಲ್ಲ: ಎಂಬಿ ಪಾಟೀಲ್


Team Udayavani, Oct 13, 2024, 4:50 PM IST

Vijayapura: Why didn’t BJP say about withdrawal of CT Ravi case: MB Patil

ವಿಜಯಪುರ: ಹುಬ್ಬಳ್ಳಿ ಗಲಭೆಯ ಪ್ರಕರಣ ಹಿಂಪಡೆದ ಬಗ್ಗೆ ಮಾತನಾಡುತ್ತಿರುವ ಬಿಜೆಪಿಯವರು ಸಿ.ಟಿ.ರವಿ ವಿರುದ್ಧದ ಪ್ರಕರಣ ಹಿಂಪಡೆದಿರುವ ಬಗ್ಗೆ ಯಾಕೆ ಹೇಳುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಪ್ರಶ್ನಿಸಿದರು.

ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಗಲಭೆ ಪ್ರಕರಣಗಳನ್ನು ಕಾಲ ಕಾಲಕ್ಕೆ ಎಲ್ಲ ಸರ್ಕಾರಗಳು ಹಿಂಪಡೆದಿವೆ. ರೈತ ಹೋರಾಟ, ವಿದ್ಯಾರ್ಥಿ ಹೋರಾಟ, ಜನರ ಹೋರಾಟಗಳ ಕೇಸ್ ಗಳನ್ನು ಎಲ್ಲ ಸರ್ಕಾರಗಳು ಹಿಂಪಡೆದಿರುತ್ತವೆ. ಅದೇ ರೀತಿ ಹುಬ್ಬಳ್ಳಿ ಗಲಭೆ ವಾಪಸ್ ಪಡೆದಿರಬಹುದು ಎಂದರು.

ಅಲ್ಲದೇ, ಗಲಭೆಗಳಾದಾಗ ಅಮಾಯಕರ ಮೇಲೆ ಕೇಸ್ ದಾಖಲಾಗಿರುತ್ತವೆ. ಗಲಭೆ ಮಾಡಿದವರು ಓಡಿ ಹೋಗಿ, ಸಿಕ್ಕಿಹಾಕಿಕೊಂಡಿರಲ್ಲ. ಗಲಭೆ ನೋಡುತ್ತಾ ನಿಂತವರು ಸಿಕ್ಕಿ ಹಾಕಿಕೊಳ್ಳುತ್ತಾರೆ. ಹೀಗಾಗಿ ಪ್ರಕರಣಗಳ ಹಿಂಪಡೆಯುವುದು ಸರ್ವೇ ಸಾಮಾನ್ಯ. ಹಾಗೆ, ಸಿ.ಟಿ.ರವಿ ವಿರುದ್ಧದ ಪ್ರಕರಣ ಹಿಂಪಡೆದಿದ್ದೇವೆ. ಅದನ್ನು ಯಾಕೆ ಹೇಳುತ್ತಿಲ್ಲ ಎಂದು ಬಿಜೆಪಿಯವರ ವಿರುದ್ಧ ಕಿಡಿಕಾರಿದರು.

ಇದೇ ವೇಳೆ, ಕಾಂಗ್ರೆಸ್ ಸರ್ಕಾರ ಬಂದರೆ ಮುಸ್ಲಿಂ ಭಯೋತ್ಪಾದಕರಿಗೆ ಹಬ್ಬ ಎಂಬ ವಿಪಕ್ಷ ನಾಯಕ ಆರ್. ಅಶೋಕ‌ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಹಿಜಾಬ್, ಹಲಾಲ್, ಅಜಾನ್.. ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಆರ್.ಅಶೋಕ್ ಸಹ ಇದನ್ನೇ ಮಾಡಿದ್ದಾರೆ. ಆದರೆ, ನಾವು ಎಲ್ಲ ಜನರನ್ನ ರಕ್ಷಣೆ ಮಾಡುತ್ತೇವೆ. ಹಿಂದೂ, ಮುಸ್ಲಿಂ, ಸಿಖ್, ಬೌದ್ಧ, ಜೈನರು ಸೇರಿ ಎಲ್ಲರನ್ನು ರಕ್ಷಣೆ ಮಾಡುತ್ತೇವೆ. ಎಲ್ಲರಿಗೂ ಪ್ರೋತ್ಸಾಹ ಕೊಡುತ್ತೇವೆ ಎಂದು ತಿಳಿಸಿದರು.

ಬಿಜೆಪಿಯಲ್ಲಿ 20 ಗುಂಪುಗಳು ಇವೆ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾಗಿರುವ ಬಗ್ಗೆ ಮಾತನಾಡಿದ ಎಂ.ಬಿ.ಪಾಟೀಲ್, ಬಿಜೆಪಿಯವರಿಗೆ ತಮ್ಮಲ್ಲೆ ನೆಲೆ ಇಲ್ಲ. ಅವರಲ್ಲಿ 20 ಗುಂಪುಗಳಿವೆ. ಮೊದಲು ತಮ್ಮ ಮನೆ ಸರಿ ಪಡೆಸಿಕೊಳ್ಳಲಿ. ಬೇರೆಯವರದ್ದೇನು ನೋಡುತ್ತಾರೆ. ಶೇ.40 ಭ್ರಷ್ಟಾಚಾರದಿಂದ ಜನರು ಬಿಜೆಪಿಯನ್ನು ಕಿತ್ತೆಸೆದು ಮನೆಗೆ ಕಳಿಸಿದ್ದಾರೆ. ಬಿಜೆಪಿಯಲ್ಲೇ ಹೊಂದಾಣಿಕೆ ಇಲ್ಲ ಎಂದು ಲೇವಡಿ ಮಾಡಿದರು.

5 ವರ್ಷನೂ ಸಿದ್ದರಾಮಯ್ಯ ಸಿಎಂ: ಪ್ರಸ್ತುತ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರೇ 5 ವರ್ಷ ಮುಂದುವರೆಯುತ್ತಾರೆ. ಕೆಲ ನಾಯಕರ ಅಭಿಮಾನಿಗಳು ತಮ್ಮ ನಾಯಕರು ಸಹ ಸಿಎಂ ಆಗಲಿ ಎಂದು ಘೋಷಣೆ ಕೂಗುತ್ತಾರೆ. ಹಾಗೆ ಘೋಷಣೆ ಕೂಗುವುದರಲ್ಲಿ ತಪ್ಪೆನಿಲ್ಲ ಎಂದು ಅವರು ತಿಳಿಸಿದರು.

ಜನತೆಯೊಂದಿಗೆ ಸಚಿವರ ಬನ್ನಿ ವಿನಿಮಯ: ದಸರಾ ಹಬ್ಬ ಹಿನ್ನೆಲೆಯಲ್ಲಿ ಸಚಿವ ಎಂ.ಬಿ. ಪಾಟೀಲ್ ತಮ್ಮ ನಿವಾಸದಲ್ಲಿ ಹಿತೈಷಿಗಳು, ಬೆಂಬಲಿಗರು ಮತ್ತು ಕ್ಷೇತ್ರದ ಜನತೆಯೊಂದಿಗೆ ಬನ್ನಿ ವಿನಿಮಯ ಮಾಡಿಕೊಂಡು ಹಬ್ಬದ ಶುಭ ಹಾರೈಸಿದರು.

ವಿದೇಶ ಪ್ರವಾಸದಲ್ಲಿದ್ದ ಅವರು ಇಂದು ನಸುಕಿನ ಜಾವ 4 ಗಂಟೆಗೆ ಬೆಂಗಳೂರಿಗೆ ಆಗಮಿಸಿ, ಅಲ್ಲಿಂದ ನೇರವಾಗಿ ರಸ್ತೆ ಮಾರ್ಗವಾಗಿ ವಿಜಯಪುರಕ್ಕೆ ಬಂದರು. ತಮ್ಮ ನಿವಾಸದಲ್ಲಿ ಬೆಳಗ್ಗೆಯಿಂದಲೇ ಪತ್ನಿ ಆಶಾ ಪಾಟೀಲ್, ಪುತ್ರ ಬಸನಗೌಡ ಪಾಟೀಲ್ ಅವರೊಂದಿಗೆ ಸೇರಿಕೊಂಡು ಬನ್ನಿ ವಿನಿಮಯದಲ್ಲಿ ಭಾಗಿಯಾದರು. ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸಚಿವರ ಮನೆಗೆ ಆಗಮಿಸಿ ಬನ್ನಿ ವಿನಿಮಯದಲ್ಲಿ ತೊಡಗಿಸಿಕೊಂಡರು.

ಈ ವೇಳೆ ಮಾತನಾಡಿದ ಎಂ.ಬಿ.ಪಾಟೀಲ್, ತಾಯಿ ಚಾಮುಂಡೇಶ್ವರಿ ಕೆಟ್ಟದನ್ನು ಹೋಗಲಾಡಿಸಲಿ. ಒಳ್ಳೆಯದನ್ನು ತರಲಿ. ಹಾಗೆ ದುಷ್ಟರನ್ನು ಸಂಹಾರ ಮಾಡಿ, ಒಳ್ಳೆಯದನ್ನು ಚಾಮುಂಡೇಶ್ವರಿ ರಕ್ಷಿಸುತ್ತಾಳೆ ಎಂಬ ಪ್ರತೀತಿ ಇದೆ. ವಿಜಯದಶಮಿ ಹಬ್ಬದ ಅಂಗವಾಗಿ ಬನ್ನಿ ವಿನಿಮಯ ಆಚರಣೆ ಮಾಡಲಾಗುತ್ತಿದೆ. ಈ ಮೂಲಕ ನಮ್ಮ ಕ್ಷೇತ್ರದ ಜನರೊಂದಿಗೆ ನೇರವಾಗಿ ಬೆರೆಯುವಂತಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

yallamma-Meeting

Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ

salman-khan

Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

Congress: ವಿಧಾನ ಪರಿಷತ್‌ ಉಪ ಚುನಾವಣೆ: ಕಾಂಗ್ರೆಸ್‌ ಉಸ್ತುವಾರಿಗಳ ನೇಮಕ

1-reee

Virat Kohli ಅವರನ್ನು ಭಾರತ ಹೊರಗಿಟ್ಟಿತ್ತೇ?:ಬಾಬರ್ ಕೈಬಿಟ್ಟಿದ್ದಕ್ಕೆ ಫಖರ್ ಜಮಾನ್ ಆಕ್ರೋಶ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ

Actress: ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್..‌ಕಮೆಂಟ್‌ ಮಾಡಿದವರಿಗೆ ಎಂಜಾಯ್‌ ಮಾಡಿ ಎಂದ ನಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್

1-vijayapura

Vijayapura: ಧೂಳಖೇಡ್ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

Vijayapura-jameer

Vijayapura: ಮಿಸ್ಟರ್ ಯತ್ನಾಳ್‌, ವಕ್ಫ್ ಬೋರ್ಡ್ ಆಸ್ತಿ ಯಾರಪ್ಪಂದೂ ಅಲ್ಲ: ಸಚಿವ ಜಮೀರ್

zameer ahmed khan

Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

sand

Karkala: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

ssa

Karkala: ಪೆಟ್ರೋಲ್‌ ಹಾಕಿಸಿ ಹಣ ನೀಡದೆ ಪರಾರಿ; ಕಾರು ವಶ

accident2

Brahmavar: ಪ್ರತ್ಯೇಕ ಅಪಘಾತ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.