Agra; 3 ದಿನ ಒತ್ತೆಯಾಳಾಗಿಟ್ಟು ಡ್ಯಾನ್ಸರ್ ಮೇಲೆ ಅತ್ಯಾ*ಚಾರಗೈದ ಇವೆಂಟ್ ಮ್ಯಾನೇಜರ್
ಪತಿಯ ಹೇಯ ಕೃತ್ಯಕ್ಕೆ ಸಹಕಾರ ನೀಡಿದ ಪತ್ನಿ!!
Team Udayavani, Oct 13, 2024, 6:09 PM IST
ಆಗ್ರಾ: 26 ವರ್ಷದ ಡ್ಯಾನ್ಸರ್ ಒಬ್ಬಾಕೆಯನ್ನು ಫ್ಲಾಟ್ನಲ್ಲಿ ಮೂರು ದಿನಗಳ ಕಾಲ ಒತ್ತೆಯಾಳಾಗಿ ಇಟ್ಟುಕೊಂಡು ಇವೆಂಟ್ ಮ್ಯಾನೇಜರ್ ಒಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ರವಿವಾರ(ಅ13) ತಿಳಿಸಿದ್ದಾರೆ.
ಆರೋಪಿಯನ್ನು ವಿನಯ್ ಗುಪ್ತಾ ಎಂದು ಗುರುತಿಸಲಾಗಿದೆ. ಡ್ಯಾನ್ಸರ್ ಆಗಿ ಕೆಲಸ ಮಾಡುವ ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ಸಂತ್ರಸ್ತೆಯನ್ನು ಆಗ್ರಾದಲ್ಲಿ ನಡೆದ ಕಾರ್ಯಕ್ರಮಕ್ಕಾಗಿ ಸಂಪರ್ಕಿಸಿದ್ದ. ಅಕ್ಟೋಬರ್ 8 ರಂದು, ಗುಪ್ತಾ ತನ್ನ ನಿವಾಸಕ್ಕೆ ಕರೆದೊಯ್ದು ಅಲ್ಲಿ ಆತನ ಪತ್ನಿ ನಿದ್ರೆ ಮಾತ್ರೆ ಹಾಕಿದ್ದ ಚಹಾ ನೀಡಿದ್ದು ನಂತರ ಡ್ಯಾನ್ಸರ್ ಪ್ರಜ್ಞಾಹೀನಳಾಗಿದ್ದಳು. ಆಕೆ ಎಚ್ಚರಗೊಂಡಾಗ ಅವಳು ಕೋಣೆಯೋಧರಲ್ಲಿ ಇದ್ದಳು ಎಂದು ದೂರು ದಾಖಲಿಸಿರುವುದಾಗಿ ” ಪೊಲೀಸರು ತಿಳಿಸಿದ್ದಾರೆ.
ಗುಪ್ತಾ ತನ್ನನ್ನು ಮೂರು ದಿನಗಳ ಕಾಲ ಒತ್ತೆಯಾಳಾಗಿ ಇಟ್ಟುಕೊಂಡು ಅತ್ಯಾಚಾರ ಎಸಗಿದ್ದಾನೆ. ಹೆಚ್ಚಿನ ಹಣ ಸಂಪಾದಿಸಲು ವೇಶ್ಯೆಯಾಗುವಂತೆ ಒತ್ತಾಯಿಸಿದ್ದ, ಮಾತ್ರವಲ್ಲದೆ ಇತರ ಮಹಿಳೆಯರನ್ನೂ ವೇಶ್ಯಾವಾಟಿಕೆಗೆ ಬಲವಂತಪಡಿಸಿದ್ದಾನೆ ಎಂದು ಆಕೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
“ಸಂತ್ರಸ್ತ ಮಹಿಳೆ ಹೇಗೋ ಗುಪ್ತಾ ಅವರ ಮನೆಯಿಂದ ತಪ್ಪಿಸಿಕೊಂಡು ತಾಜ್ಗಂಜ್ ಪೊಲೀಸ್ ಠಾಣೆಗೆ ಬಂದು ಶುಕ್ರವಾರ ದೂರು ದಾಖಲಿಸಿದ್ದಾರೆ” ಎಂದು ಆಗ್ರಾದ ಸಹಾಯಕ ಪೊಲೀಸ್ ಆಯುಕ್ತ (ತಾಜ್ ಸುರಕ್ಷಾ ಮತ್ತು ಸಂಚಾರ) ಸೈಯದ್ ಅರೀಬ್ ಅಹ್ಮದ್ ಪಿಟಿಐಗೆ ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಿಸಿ ವಿನಯ್ ಗುಪ್ತಾ ಮತ್ತು ಆತನ ಪತ್ನಿಯನ್ನು ಶನಿವಾರ ಬಂಧಿಸಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಹ್ಮದ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್
EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್
Salman Khan ವಿರುದ್ದದ ಸೇಡು? ..; ಎಲ್ಲಾ ಕೋನಗಳಲ್ಲಿ ತನಿಖೆ ಎಂದ ಮುಂಬಯಿ ಪೊಲೀಸರು
Miracle: 15 ಅಡಿ ಆಳದ ಬಾವಿಗೆ ಬಿತ್ತು ನವದಂಪತಿಯ ಕಾರು; ಬದುಕಿ ಬಂದಿದ್ದೇ ಪವಾಡ!
Mumbai: ಬಿಗ್ ಬಾಸ್ ಶೂಟಿಂಗ್ ಅರ್ಧದಲ್ಲೇ ಬಿಟ್ಟು ಆಸ್ಪತ್ರೆಗೆ ಧಾವಿಸಿದ ಸಲ್ಮಾನ್ ಖಾನ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Womens T20 World Cup; ಭಾರತಕ್ಕೆ ಸೋಲು: ಆಸ್ಟ್ರೇಲಿಯ ಸೆಮಿಫೈನಲಿಗೆ
BBK11: ಬಿಗ್ ಬಾಸ್ ನಿರೂಪಣೆಗೆ ಕಿಚ್ಚ ಗುಡ್ ಬೈ.. ಫ್ಯಾನ್ಸ್ ಶಾಕ್
Road mishap: ಕೊಪ್ಪಲಂಗಡಿ; ಮಿನಿ ಟೆಂಪೋ ಢಿಕ್ಕಿ; ವ್ಯಕ್ತಿ ಮೃತ್ಯು
Dharwad: ನಾನು ಸಿಎಂ ಆಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್!
Badami: ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ; ಬೆಳೆಗಳಿಗೆ ಅಪಾರ ಹಾನಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.