Kaup: ಮಳೆ ಸಿಂಚನದ ನಡುವೆ ಉಚ್ಚಿಲ ದಸರಾಕ್ಕೆ ವಿಜೃಂಭಣೆಯ ತೆರೆ

ಮಂಗಳಾರತಿಯೊಂದಿಗೆ ಶಾರದೆ, ನವದುರ್ಗೆಯರ ಮೂರ್ತಿ ಜಲಸ್ತಂಭನ

Team Udayavani, Oct 13, 2024, 7:16 PM IST

Kaup: ಮಳೆ ಸಿಂಚನದ ನಡುವೆ ಉಚ್ಚಿಲ ದಸರಾಕ್ಕೆ ವಿಜೃಂಭಣೆಯ ತೆರೆ

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರ ಹಾಗೂ ಭಕ್ತಾಭಿಮಾನಿಗಳ ಸಹಭಾಗಿತ್ವದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಮೂರನೇ ವರ್ಷದ “ಉಡುಪಿ ಉಚ್ಚಿಲ ದಸರಾ 2024′ ವೈಭವವು ಶನಿವಾರ ತಡರಾತ್ರಿ ವಿಜೃಂಭಣೆಯ ತೆರೆ ಕಂಡಿದೆ.

7 ಗಂಟೆ 41 ನಿಮಿಷ
ನವದುರ್ಗೆಯರು ಮತ್ತು ಶಾರದಾ ಮಾತೆಯ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ, ವಿಸರ್ಜನಾ ಪೂಜೆಯ ಬಳಿಕ ಶನಿವಾರ ಸಂಜೆ 3.20ಕ್ಕೆ ಅಂಬಾರಿ ಹೊತ್ತ ಆನೆಯ ಪ್ರತಿಕೃತಿಗೆ ಪುಷ್ಪಾರ್ಚನೆಗೈದು ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. 4.45ಕ್ಕೆ ಶಾರದೆಯ ಮೇಲೆ ಡ್ರೋನ್‌ ಮೂಲಕ ಪುಷ್ಪಾರ್ಚನೆ ಮಾಡಲಾಯಿತು.

ರಾ. ಹೆ. 66ರ ಉಚ್ಚಿಲದಿಂದ ಹೊರಟ ಶೋಭಾಯಾತ್ರೆ ಎರ್ಮಾಳು-ಉಚ್ಚಿಲ-ಮೂಳೂರು ಮೂಲಕ 9.55ಕ್ಕೆ ಕೊಪ್ಪಲಂಗಡಿಗೆ, 10.51ಕ್ಕೆ ಓಶಿಯನ್‌ ಬೀಚ್‌ ರೆಸಾರ್ಟ್‌ ಬಳಿಯ ಬೀಚ್‌ ತಲುಪಿತು.

ಗಂಗಾರತಿ, ಮಹಾಮಂಗಳಾರತಿ ಬಳಿಕ ಬಾಲಕೃಷ್ಣ ಕೋಟ್ಯಾನ್‌ ಕಾಪು ಮತ್ತು ಬಳಗದ ಸಹಕಾರದೊಂದಿಗೆ ಸಮುದ್ರಕ್ಕೆ ತಂದು 12.01ಕ್ಕೆ ಸಮುದ್ರ ಕಿನಾರೆಯಲ್ಲಿ ಡ್ರೋನ್‌ ಶಿವು ನೇತೃತ್ವದಲ್ಲಿ ಪುಷ್ಪಾರ್ಚನೆಗೈದು ಜಲಸ್ತಂಭನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಯಿತು.

ಕ್ಷೇತ್ರದ ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಹತ್ತು ಮಂದಿ ಪುರೋಹಿತರು ಪುಷ್ಪಾರ್ಚನೆ ಸಹಿತ ಗಂಗಾರತಿ ಬೆಳಗಿಸಿದರು. ಸಹಸ್ರಾರು ಮಂದಿ ಮಹಿಳೆಯರು ಮಹಾಮಂಗಳಾರತಿ ಬೆಳಗಿದರು. ಅನಂತರ ದಸರಾ ರೂವಾರಿ ಡಾ| ಜಿ. ಶಂಕರ್‌ ಮತ್ತು ಶಾಲಿನಿ ಜಿ. ಶಂಕರ್‌ ಅವರಿಂದ ಸಮಷ್ಠಿಯ ಹಿತಕ್ಕಾಗಿ ಪ್ರಾರ್ಥನಾ ಸಂಕಲ್ಪ, ಜಯಘೋಷದೊಂದಿಗೆ ನವದುರ್ಗೆಯರು ಮತ್ತು ಶಾರದಾ ಮಾತೆಯನ್ನು ಏಕಕಾಲದಲ್ಲಿ ಜಲಸ್ತಂಭನಗೊಳಿಸಲಾಯಿತು.

ಬೀಚ್‌ನಲ್ಲಿ ಜನಸಾಗರ
ಶೋಭಾಯಾತ್ರೆ ಮತ್ತು ಜಲಸ್ತಂಭನದ ಸಂದರ್ಭ ಭಾರೀ ಜನಸಾಗರ ಹರಿದು ಬಂದಿದೆ. ಬೀಚ್‌ನಲ್ಲಿ ಸಂಗೀತ ರಸಮಂಜರಿ ಮತ್ತು ಆಕರ್ಷಕ ಸುಡುಮದ್ದು ಪ್ರದರ್ಶನ ಭಾರೀ ಗಮನ ಸೆಳೆಯಿತು. ಮೊಗವೀರ ಯುವ ಸಂಘಟನೆ ಸಹಿತ ವಿವಿಧ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಸ್ವಯಂ ಸೇವಕರು ಮತ್ತು ಪೊಲೀಸರು ಜನರನ್ನು ನಿಯಂತ್ರಿಸಲು ಭಾರೀ ಶ್ರಮಿಸಬೇಕಾಯಿತು.

ಸಹಕರಿಸಿದ ವರುಣ, ಅಬ್ಬರಿಸಿದ ಕಡಲು
ಶೋಭಾಯತ್ರೆ ಸಂದರ್ಭ ಎರ್ಮಾಳು ಪರಿಸರದಲ್ಲಿ ಮಳೆ ಸುರಿದಿದ್ದು, ಉಳಿದಂತೆ ವರುಣದೇವ ಉಚ್ಚಿಲ ದಸರಾಕ್ಕೆ ಸಂಪೂರ್ಣ ಸಹಕರಿಸಿದ್ದ. ಜಲಸ್ತಂಭನ ವೇಳೆ ಕಡಲಬ್ಬರ ಹೆಚ್ಚಾಗಿದ್ದು, ಬೃಹತ್‌ ಅಲೆಗಳ ಆರ್ಭಟದ ನಡುವೆಯೂ ಶಾಸಕ ಯಶ್‌ಪಾಲ್‌ ಸುವರ್ಣ ಮತ್ತು ಬಾಲಕೃಷ್ಣ ಕೋಟ್ಯಾನ್‌ ಮಾರ್ಗದರ್ಶನದಲ್ಲಿ ಸ್ವಯಂಸೇವಕರು ಶಿಸ್ತುಬದ್ಧವಾಗಿ ಹತ್ತೂ ವಿಗ್ರಹಗಳ ಜಲಸ್ತಂಭನ ಕಾರ್ಯಕ್ರಮವನ್ನು ಪೂರ್ಣಗೊಳಿಸಿ, ಮೆಚ್ಚುಗೆಗೆ ಪಾತ್ರರಾದರು.

ಶಾಸಕರಾದ ಗುರ್ಮೆ ಸುರೇಶ್‌ ಶೆಟ್ಟಿ, ಯಶ್‌ಪಾಲ್‌ ಸುವರ್ಣ, ದ. ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್‌, ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷ ಗಿರಿಧರ ಸುವರ್ಣ, ದಸರಾ ಸಮಿತಿ ಅಧ್ಯಕ್ಷ ವಿನಯ ಕರ್ಕೇರ, ಕ್ಷೇತ್ರಾಡಳಿತ ಸಮಿತಿ ಮಾಜಿ ಅಧ್ಯಕ್ಷ ವಾಸುದೇವ ಸಾಲ್ಯಾನ್‌, ಜೀರ್ಣೋದ್ಧಾರ ಸಮಿತಿ ಮಾಜಿ ಅಧ್ಯಕ್ಷ ಗುಂಡು ಅಮೀನ್‌, ಓಶಿಯನ್‌ ಬೀಚ್‌ ರೆಸಾರ್ಟ್‌ ಮಾಲಕರಾದ ಗಂಗಾಧರ ಸುವರ್ಣ, ಶಿಲ್ಪಾ ಜಿ. ಸುವರ್ಣ, ಮೊಗವೀರ ಯುವ ಸಂಘಟನೆ ಜಿಲ್ಲಾಧ್ಯಕ್ಷ ಜಯಂತ್‌ ಅಮೀನ್‌, ಮಹಾಜನ ಸಂಘದ ಪದಾಧಿಕಾರಿಗಳು, ಶೋಭಾಯಾತ್ರೆ, ಟ್ಯಾಬ್ಲೋ ಸಮಿತಿ ಪದಾಧಿಕಾರಿಗಳು ಹಾಗೂ ಸಮಾಜ ಭಾಂದವರು ಉಪಸ್ಥಿತರಿದ್ದರು.

ದೇಗುಲದ ವ್ಯವಸ್ಥಾಪಕ ಸತೀಶ್‌ ಅಮೀನ್‌ ಪಡುಕೆರೆ ಸಮಗ್ರ ಕಾರ್ಯಕ್ರಮವನ್ನು ನಿರೂಪಿಸಿದರು

ಕೃತಜ್ಞತೆ ಸಲ್ಲಿಕೆ
ತಾಯಿ ಶ್ರೀ ಮಹಾಲಕ್ಷ್ಮೀ ಸನ್ನಿಧಾನದಲ್ಲಿ ಹತ್ತು ದಿನಗಳ ಕಾಲ ಜರಗಿದ ಉಚ್ಚಿಲ ದಸರಾ 2024 ಅತ್ಯಂತ ವಿಜೃಂಭಣೆಯೊಂದಿಗೆ ಸಂಪನ್ನಗೊಂಡಿದೆ.

ಸಮಾಜ, ರಾಷ್ಟ್ರದ ಒಳಿತಿಗಾಗಿ ಮತ್ತು ಸಮಷ್ಠಿಯ ಅಭಿವೃದ್ಧಿ, ಕಸುಬುದಾರರಿಗೆ ಹೇರಳ ಮತ್ಸ್ಯಸಂಪತ್ತು ದೊರಕುವಂತಾಗಲಿ ಎಂದು ಪ್ರಾರ್ಥಿಸಿ ಸಮುದ್ರ ಪೂಜೆ, ಗಂಗಾರತಿ ನಡೆಸಲಾಗಿದೆ.

ದಸರಾ ಯಶಸ್ಸಿನಲ್ಲಿ ಸಹಕಾರ ನೀಡಿದ ಸಹೃದಯಿ ಭಕ್ತಾಭಿಮಾನಿಗಳು, ದಾನಿಗಳು, ರಾಜ್ಯ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ಮಾಧ್ಯಮ ವಿಭಾಗ, ಪುರೋಹಿತ ವರ್ಗ, ಮೊಗವೀರ ಸಂಯುಕ್ತ ಸಭೆ, ಗ್ರಾಮ ಸಭೆಗಳು, ಮೀನುಗಾರಿಕೆ ಸಂಘಟನೆಗಳು, ಸ್ವಯಂಸೇವಕರು ಹಾಗೂ ಎಲ್ಲ ಭಕ್ತಾಭಿಮಾನಿಗಳಿಗೆ ಡಾ| ಜಿ. ಶಂಕರ್‌ ಮತ್ತು ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಕೃತಜ್ಞತೆ ಸಲ್ಲಿಸಿದ್ದಾರೆ.

ಚಿತ್ರಗಳು : ರಾಕೇಶ್‌ ಕುಂಜೂರು

ಟಾಪ್ ನ್ಯೂಸ್

1-asqwq

Womens T20 World Cup; ಭಾರತಕ್ಕೆ ಸೋಲು: ಆಸ್ಟ್ರೇಲಿಯ ಸೆಮಿಫೈನಲಿಗೆ

sup

BBK11: ಬಿಗ್ ಬಾಸ್ ನಿರೂಪಣೆಗೆ ಕಿಚ್ಚ ಗುಡ್ ಬೈ.. ಫ್ಯಾನ್ಸ್ ಶಾಕ್

Reddy-Bank-DKS

Dharwad: ನಾನು ಸಿಎಂ ಆಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌!

Agri-Damage

Badami: ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ; ಬೆಳೆಗಳಿಗೆ ಅಪಾರ ಹಾನಿ

1-asss-bg

Baba Siddique ಪ್ರಕರಣಕ್ಕೆ ಜಲಂಧರ್ ನಂಟು: 4ನೇ ಆರೋಪಿ ಜೀಶನ್ ಅಖ್ತರ್

Kapil Sibal;

EVM ಬಗ್ಗೆ ಕಾಂಗ್ರೆಸ್ ಎತ್ತಿರುವ ಪ್ರಶ್ನೆಗಳಿಗೆ ಚುನಾವಣ ಆಯೋಗ ಸ್ಪಷ್ಟನೆ ನೀಡಲೇಬೇಕು: ಸಿಬಲ್

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ

BBK11:ಬಿಗ್ ಬಾಸ್‌ ಮನೆಯಲ್ಲಿ ನಮಗೆ ಯಾವ ತೊಂದರೆಯೂ ಆಗಿಲ್ಲ..ಮಹಿಳಾ ಸ್ಪರ್ಧಿಗಳಿಂದ ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

byndoor

Road mishap: ಕೊಪ್ಪಲಂಗಡಿ; ಮಿನಿ ಟೆಂಪೋ ಢಿಕ್ಕಿ; ವ್ಯಕ್ತಿ ಮೃತ್ಯು

accident

Padubidri: ಪಿಕ್‌ ಅಪ್‌ ವಾಹನ ಡಿಕ್ಕಿ; ವ್ಯಕ್ತಿ ಮೃತ್ಯು

sand

Karkala: ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು

ssa

Karkala: ಪೆಟ್ರೋಲ್‌ ಹಾಕಿಸಿ ಹಣ ನೀಡದೆ ಪರಾರಿ; ಕಾರು ವಶ

accident2

Brahmavar: ಪ್ರತ್ಯೇಕ ಅಪಘಾತ; ಇಬ್ಬರಿಗೆ ಗಾಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-asqwq

Womens T20 World Cup; ಭಾರತಕ್ಕೆ ಸೋಲು: ಆಸ್ಟ್ರೇಲಿಯ ಸೆಮಿಫೈನಲಿಗೆ

sup

BBK11: ಬಿಗ್ ಬಾಸ್ ನಿರೂಪಣೆಗೆ ಕಿಚ್ಚ ಗುಡ್ ಬೈ.. ಫ್ಯಾನ್ಸ್ ಶಾಕ್

byndoor

Road mishap: ಕೊಪ್ಪಲಂಗಡಿ; ಮಿನಿ ಟೆಂಪೋ ಢಿಕ್ಕಿ; ವ್ಯಕ್ತಿ ಮೃತ್ಯು

Reddy-Bank-DKS

Dharwad: ನಾನು ಸಿಎಂ ಆಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌!

Agri-Damage

Badami: ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ; ಬೆಳೆಗಳಿಗೆ ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.