Udupi: ಅಪರಿಚಿತರಿಗೆ ಮನೆ ಬಾಡಿಗೆ ಕೊಡುವಾಗ ಇರಲಿ ಎಚ್ಚರ


Team Udayavani, Oct 14, 2024, 6:49 AM IST

Udupi: ಅಪರಿಚಿತರಿಗೆ ಮನೆ ಬಾಡಿಗೆ ಕೊಡುವಾಗ ಇರಲಿ ಎಚ್ಚರ

ಉಡುಪಿ: ಕ್ಷಿಪ್ರ ಕಾರ್ಯಚರಣೆಯೊಂದರಲ್ಲಿ ಮಲ್ಪೆ ಪರಿಸರದಲ್ಲಿ ಕೂಲಿ ಕಾರ್ಮಿಕರಾಗಿದ್ದ ಬಾಂಗ್ಲಾ ದೇಶದ ಅಕ್ರಮ ವಲಸಿಗರನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಜತೆಗೆ ಕಾರ್ಮಿಕರಿಗೆ ಇಷ್ಟು ವರ್ಷ ಆಶ್ರಯ ನೀಡಿದ ಮನೆ ಮಾಲಕರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಪೂರ್ವಾಪರ ತಿಳಿಯದೇ ಬಾಡಿಗೆಗೆ ಮನೆ ನೀಡಿದ ಪರಿಣಾಮ ಇಂದು ಆ ಮನೆಯ ಮಾಲಕ ಪೊಲೀಸ್‌ ಠಾಣೆ ಮೆಟ್ಟಿಲೇರಬೇಕಾಯಿತು. ಇಂಥದ್ದೇ ಘಟನೆ ಮುಂದೆಯೂ ನಡೆಯಬಹುದು. ಈಗಿಂದಲೇ ಎಚ್ಚರ ವಹಿಸುವುದು ಅತ್ಯಾವಶ್ಯಕ.

ಉಡುಪಿಗೆ ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಬೀದರ್‌, ಕೊಪ್ಪಳ, ಹುಬ್ಬಳ್ಳಿ-ಧಾರವಾಡ, ಯಾದಗಿರಿ ಮೊದಲಾದ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ಬರುತ್ತಾರೆ. ಇವರು ನಗರ ಪ್ರದೇಶದ ಯಾವುದೋ ಒಂದು ಭಾಗದಲ್ಲಿ ಗುಡಿಸಲು ಅಥವಾ ತಮ್ಮದೇ ಪ್ರತ್ಯೇಕ ವ್ಯವಸ್ಥೆ ಮಾಡಿಕೊಂಡಿರುತ್ತಾರೆ. ಇನ್ನು ಕೆಲವರು ಬಾಡಿಗೆ ಮನೆಯಲ್ಲಿ ಇರುತ್ತಾರೆ. ನಮ್ಮ ರಾಜ್ಯದವರೇ ಆಗಿರುವುದರಿಂದ ಕನ್ನಡ ಮಾತಾಡುತ್ತಾರೆ. ಹೀಗಾಗಿ ಬಾಡಿಗೆ ನೀಡಲು ಯಾವುದೇ ಸಂಶಯ, ಗೊಂದಲ ಇರುವುದಿಲ್ಲ. ಆದರೂ ಅವರಿಂದ ನಿರ್ದಿಷ್ಟ ದಾಖಲೆಗಳನ್ನು ಪಡೆಯುವುದು ಉತ್ತಮ.

ಇನ್ನೂ ಹೊರ ರಾಜ್ಯದವರ ವಿಷಯದಲ್ಲಿ ಹೆಚ್ಚು ಎಚ್ಚರಿಕೆ ವಹಿಸಬೇಕಾಗುತ್ತದೆ. ಕೂಲಿ ಕಾರ್ಮಿಕರು ಅಥವಾ ಯಾವುದೇ ಉದ್ಯೋಗ ಅರಸಿ ಬಂದಿದ್ದರೂ ಅವರ ಆಧಾರ್‌ ಕಾರ್ಡನ್ನು ಮೊದಲು ಪರಿಶೀಲಿಸಬೇಕು. ಇದರ ಜತೆಗೆ ಎಲ್ಲಿ ಉದ್ಯೋಗ ಮಾಡುವುದು ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಆಧಾರ್‌ ಕಾರ್ಡ್‌ ಸಹಿತ ದಾಖಲೆಗಳಲ್ಲಿ ಯಾವುದೇ ಸಂಶಯ ಬಂದರೆ ತತ್‌ಕ್ಷಣವೇ ಸಮೀಪದ ಪೊಲೀಸ್‌ ಠಾಣೆಗೆ ತಿಳಿಸಬೇಕು. ಬಾಡಿಗೆ ಹೆಚ್ಚು ಸಿಗಬಹುದು ಎಂಬ ಒಂದೇ ಕಾರಣಕ್ಕೆ ಎಚ್ಚರ ತಪ್ಪಿದರೆ ಮುಂದೆ ಅಪಾಯ ಎದುರಾಗಬಹುದು.

ಬಾಂಗ್ಲಾ, ಶ್ರೀಲಂಕಾ ಮೊದಲಾದ ದೇಶದ ಅಕ್ರಮ ವಲಸಿಗರು ಉಡುಪಿಯಲ್ಲೂ ಇರುವ ಸಾಧ್ಯತೆ ಹೆಚ್ಚಿದೆ. ಯಾವ ಉದ್ದೇಶಕ್ಕೆ ಬರುತ್ತಾರೆ ಎಂಬುದೂ ತಿಳಿಯುವುದಿಲ್ಲ. ಹೀಗಾಗಿ ವಿದೇಶದ ಪ್ರಜೆಗಳು ಅಥವಾ ವಿದೇಶದ ಪ್ರಜೆಯಾಗಿದ್ದು ನಕಲಿ ದಾಖಲೆ ಸೃಷ್ಟಿಸಿಕೊಂಡಿರುವವರು ಇದ್ದರೆ ಮನೆ ಬಾಡಿಗೆ ನೀಡುವಾಗ ಎಚ್ಚರ ವಹಿಸುವುದು ಅಗತ್ಯ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಶೆಡ್‌ ನೀಡುವಾಗಲೂ ಇರಲಿ ಎಚ್ಚರ
ಹೊರ ರಾಜ್ಯದ ಕಾರ್ಮಿಕರಿಗೆ ಅಲ್ಲಲ್ಲಿ ಶೆಡ್‌ ವ್ಯವಸ್ಥೆ ಮಾಡಿಕೊಡುವ ಪದ್ಧತಿ ಕೆಲವು ವರ್ಷಗಳಿಂದ ರೂಢಿಯಲ್ಲಿದೆ. ಯಾರು ಅವರನ್ನು ಇಲ್ಲಿಗೆ ಕರೆದುಕೊಂಡು ಬರುತ್ತಾರೋ ಅವರೇ ಆ ವ್ಯವಸ್ಥೆ ಮಾಡುತ್ತಾರೆ. ಆದರೆ ಶೆಡ್‌ ಮಾಲಕರು ಸ್ಥಳೀಯರೇ ಆಗಿರುತ್ತಾರೆ. ನಿರ್ಜನ ಪ್ರದೇಶ ಅಥವಾ ಜನವಸತಿ ಕಡಿಮೆ ಇರುವ ಪ್ರದೇಶ ಇತ್ಯಾದಿ ಕಡೆ ಶೆಡ್‌ ಇರುತ್ತದೆ. ಅಲ್ಲಿಗೆ ಯಾರು ಬಂದು ಹೋಗುತ್ತಾರೆ ಎನ್ನುವುದರ ನಿಗಾ ಮಾಲಕರು ಇಡಲೇ ಬೇಕಾಗುತ್ತದೆ.

ಸ್ಥಳೀಯ ಅಪರಿಚಿತರ ಬಗ್ಗೆ ಇರಲಿ ಎಚ್ಚರ
ಗ್ರಾಮೀಣ ಅಥವಾ ನಗರ ಭಾಗದಲ್ಲಿ ಅನೇಕ ವರ್ಷದಿಂದ ವಾಸವಿರುವವರಿಗೆ ತಮ್ಮ ಊರು ಅಥವಾ ಪರಿಸರಕ್ಕೆ ಯಾರೇ ಹೊಸಬರು ಬಂದರೂ ಕೆಲವೇ ದಿನದಲ್ಲಿ ತಿಳಿಯುತ್ತದೆ. ಇಂತಹ ಸಂದರ್ಭದಲ್ಲಿ ಅಪರಿಚಿತರ ಚಲನವಲನಗಳ ಬಗ್ಗೆ ವಿಶೇಷ ಗಮನ ಹರಿಸುವುದು ಅಗತ್ಯವಾಗಿ ಮಾಡಬೇಕಾಗುತ್ತದೆ ಎನ್ನುತ್ತಾರೆ ಪೊಲೀಸರು.

ಟಾಪ್ ನ್ಯೂಸ್

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

4

Belthangady: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

Drone Strike: ಇಸ್ರೇಲ್ ಸೇನಾ ನೆಲೆ ಮೇಲೆ ಡ್ರೋನ್ ದಾಳಿ: 4 ಯೋಧರು ಮೃತ್ಯು, 60 ಮಂದಿಗೆ ಗಾಯ

01

BBK11: ಇಡೀ ಬಿಗ್ ಬಾಸ್ ಮನೆಗೆ ಆತಂಕ ತಂದ ಆ ಒಂದು ಕರೆ… ಮಾಡಿದ್ಯಾರು…?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

Udupi: ಮಲ್ಪೆ ಬಂದರಿನಲ್ಲಿ ಭದ್ರತೆಯ ಕೊರತೆ

wages

Udupi: ಬಾಂಗ್ಲಾ ಅಕ್ರಮ ವಲಸೆ ಫಾಲೋ ಅಪ್: ನೆಪಕ್ಕಷ್ಟೇ ಬಿಹಾರ, ಒಡಿಶಾ, ಅಸ್ಸಾಂ…

\172.17.1.5ImageDirUdayavaniDaily13-10-24Daily_NewsBangla.tif

Udupi: ಬಾಂಗ್ಲಾದಿಂದ ಭಾರತಕ್ಕೆ ವಲಸೆಯ ಉದ್ದೇಶ?

Udupi: ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಬಾಂಗ್ಲಾ ಅಕ್ರಮ ವಲಸಿಗರು?

Udupi: ರಾಜ್ಯದಲ್ಲಿ ಲಕ್ಷಕ್ಕೂ ಹೆಚ್ಚು ಬಾಂಗ್ಲಾ ಅಕ್ರಮ ವಲಸಿಗರು?

Dubai: ಫಾರ್ಚೂನ್‌ ಗ್ರೂಪ್‌ ಆಫ್‌ ಹೋಟೆಲ್ಸ್ ಗೆ ವಂಚನೆ: ಆರೋಪಿ 3 ದಿನ ಪೊಲೀಸ್‌ ಕಸ್ಟಡಿಗೆ

Dubai: ಫಾರ್ಚೂನ್‌ ಗ್ರೂಪ್‌ ಆಫ್‌ ಹೋಟೆಲ್ಸ್ ಗೆ ವಂಚನೆ: ಆರೋಪಿ 3 ದಿನ ಪೊಲೀಸ್‌ ಕಸ್ಟಡಿಗೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

4

Belthangady: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Flight: ಮುಂಬೈಯಿಂದ ನ್ಯೂಯಾರ್ಕ್ ಗೆ ಹೊರಟಿದ್ದ ವಿಮಾನಕ್ಕೆ ಬಾಂಬ್‌ ಬೆದರಿಕೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.