CM Post: ಅಧಿಕಾರಕ್ಕಾಗಿ ಜೆಡಿಎಸ್‌ಗೆ ಸಿದ್ದರಾಮಯ್ಯ ದ್ರೋಹ: ಎಚ್‌.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯ ರಾಜೀನಾಮೆ ನೀಡುವುದು, ಬಿಡುವುದು ಕಾಂಗ್ರೆಸ್‌ಗೆ ಸೇರಿದ ವಿಚಾರ

Team Udayavani, Oct 14, 2024, 7:45 AM IST

HDK

ದಾವಣಗೆರೆ: ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಸೇರಿ ಅನೇಕ ನಾಯಕರು ಕೇವಲ ಅಧಿಕಾರಕ್ಕಾಗಿ ಕಾರ್ಯಕರ್ತರಿಗೆ ದ್ರೋಹ ಮಾಡಿದರು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.

ಜೆಡಿಎಸ್‌ ಸದಸ್ಯತ್ವ ನೋಂದಣಿ ಮತ್ತು ಬೂತ್‌ ಸಮಿತಿ ರಚನೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಈಗಿನ ಸಿಎಂ ಸಿದ್ದರಾಮಯ್ಯ ಅವರನ್ನು ಗುರುತಿಸಿದ್ದೇ ಜೆಡಿಎಸ್‌ ಕಾರ್ಯಕರ್ತರು. ಅಂತಹ ಕಾರ್ಯಕರ್ತರ ದುಡಿಮೆಯ ಫಲವಾಗಿಯೇ ರಾಜ್ಯ ಮಟ್ಟದ ನಾಯಕರಾಗಿ ಬೆಳೆದಂತಹವರು ಕೇವಲ ಅಧಿಕಾರಕ್ಕಾಗಿ ದ್ರೋಹ ಮಾಡಿದರು.

ಈಗ ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಾದ ಹಲವರು ಬಿಜೆಪಿಯ ಕೆಲ ನಾಯಕರೂ ಜೆಡಿಎಸ್‌ನಲ್ಲಿದ್ದರು. ಹಾಗಾಗಿಯೇ ಜೆಡಿಎಸ್‌ನ್ನು ನಾಯಕರ ಸೃಷ್ಟಿ ಮಾಡುವ ಪಕ್ಷ ಎಂದು ಕರೆಯುವುದು. ಆದರೆ ನಾಯಕರಾಗಿ ಬೆಳೆದವರು ಪಕ್ಷ ಬಿಟ್ಟು ಹೋಗುವಾಗ ಏನೇನೋ ಹೇಳಿ ಹೋದರು ಎಂದರು.

ಸಿದ್ದರಾಮಯ್ಯ ದಸರಾ ಅನಂತರ ರಾಜೀನಾಮೆ ಕೊಡ್ತಾರೆ ಎಂಬುದು ನನಗೆ ಗೊತ್ತಿಲ್ಲ. ಅವರು ರಾಜೀನಾಮೆ ನೀಡುವುದು, ಬಿಡುವುದು ಕಾಂಗ್ರೆಸ್‌ಗೆ ಸೇರಿದ ವಿಚಾರ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಕೆಐಎಡಿಬಿಯಿಂದ ಪಡೆದಿದ್ದ 5 ಎಕರೆ ಜಾಗ ವಾಪಸ್‌ ಏಕೆ ಕೊಟ್ಟರು. ತಪ್ಪು ಮಾಡಿದ್ದೇವೆ ಎಂದು ಅರಿವಾಗಿ ಕೊಟ್ಟಿದ್ದಾರೆ. ಇನ್ನು ಏನೇನು ಆಗುತ್ತದೆ ಕಾದು ನೋಡೋಣ. ಕಳೆದ ಮೂರು ತಿಂಗಳನಿಂದ ಗೌರವಧನ ಬಿಡುಗಡೆಯಾಗದ ಕಾರಣಕ್ಕೆ ದಾವಣಗೆರೆಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬರು ಆ್ಯಸಿಡ್‌ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದಕ್ಕೆ ಹೇಳುವುದು ಈ ಸರಕಾರದಲ್ಲಿ ಬಡವರ ಸಮಸ್ಯೆ ಕೇಳುವವರು ಯಾರೂ ಇಲ್ಲ ಎಂದರು.

ಚನ್ನಪಟ್ಟಣ ಕ್ಷೇತ್ರಕ್ಕೆ ನಾನೇ ಎನ್‌ಡಿಎ ಅಭ್ಯರ್ಥಿ: ಕೇಂದ್ರ ಸಚಿವ
ದಾವಣಗೆರೆ: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರೇ ಅಭ್ಯರ್ಥಿಯಾದರೂ ನಾನೇ ಎನ್‌ಡಿಎ ಅಭ್ಯರ್ಥಿ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಅಭ್ಯರ್ಥಿ ಆಯ್ಕೆ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಪ್ರಾಥಮಿಕ ಹಂತದ ಚರ್ಚೆ ನಡೆದಿದೆ. ಯೋಗ್ಯರನ್ನೇ ಕಣಕ್ಕಿಳಿಸಲಾಗುವುದು. ಅಲ್ಲಿ ಯಾರೇ ಅಭ್ಯರ್ಥಿಯಾದರೂ ನಾನೇ ಎನ್‌ಡಿಎ ಅಭ್ಯರ್ಥಿ ಎಂದರು.

ಚಂದ್ರಶೇಖರ್‌ಗೆ ಕೋರ್ಟ್‌ನಲ್ಲೇ ಉತ್ತರ: ಎಚ್‌ಡಿಕೆ
ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್‌ ನನ್ನ ಮೇಲೆ ದೂರು ದಾಖಲಿಸಿದ್ದಾರೆ. ಅದಕ್ಕೆ ನಾನು ನ್ಯಾಯಾಲಯದಲ್ಲಿ ಉತ್ತರ ಕೊಡುತ್ತೇನೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸುದ್ದಿಗಾರರ ಬಳಿ ಹೇಳಿದರು.

3-4 ಸಾವಿರ ಪುಟಗಳಷ್ಟು ಚಾರ್ಜ್‌ಶೀಟ್‌ ಹಾಕುತ್ತಾರೆ. 12 ವರ್ಷದಿಂದ ನನ್ನ ಮೇಲೆ ಪ್ರಕರಣ ಹಾಗೆ ಉಳಿಸಿಕೊಂಡಿದ್ದಾರೆ. ನ್ಯಾಯಾಲಯದಲ್ಲಿ ಎಲ್ಲ ಚರ್ಚೆ ಆಗಲಿ. ಕುಮಾರಸ್ವಾಮಿ ತಾಜ್‌ ವೆಸ್ಟೆಂಡ್‌ನ‌ಲ್ಲಿ ಅ ಧಿಕಾರ ನಡೆಸಿದ್ರು ಎಂದು ಬಾಲಕೃಷ್ಣ ಹೇಳಿರುವ ಬಗ್ಗೆ ನಾನು ಮಾತನಾಡುವುದಿಲ್ಲ. ಕಾರಣ ಬಾಲಕೃಷ್ಣ ಹಿನ್ನೆಲೆ ಏನು ಎಂಬುದು ಗೊತ್ತಿದೆ ಎಂದರು.

ಟಾಪ್ ನ್ಯೂಸ್

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

5

Actor Bala: ಮಾಜಿ ಪತ್ನಿ ಜತೆ ಅನುಚಿತ ವರ್ತನೆ ಆರೋಪ; ಖ್ಯಾತ ನಟ ಬಂಧನ

Women’s T20 World Cup: Despite losing against Aussies, India still have a chance in the semis

Women’s T20 World Cup: ಆಸೀಸ್‌ ವಿರುದ್ದ ಸೋತರೂ ಭಾರತಕ್ಕೆ ಇನ್ನೂ ಇದೆ ಸೆಮಿ ಅವಕಾಶ

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

Punjalkatte: ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು; ಮಹಿಳೆ ಸಾವು

4

Belthangady: ಮೀನು ಹಿಡಿಯಲು ಹೋದ ವ್ಯಕ್ತಿ ಸಾವು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು

Sampaje: ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿಯಾದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಚ್‌ ಡಿ ಕುಮಾರಸ್ವಾಮಿ

By Election: ಚನ್ನಪಟ್ಟಣದಲ್ಲಿ ನಾನೇ ಎನ್ ಡಿಎ ಅಭ್ಯರ್ಥಿ: ಎಚ್‌ ಡಿ ಕುಮಾರಸ್ವಾಮಿ

ಮಹಿಷಮರ್ದನ ರೀತಿಯಲ್ಲೇ ರಾಜ್ಯ ಸರ್ಕಾರದ ಮರ್ದನ: ರೇಣುಕಾಚಾರ್ಯ

Davanagere: ಮಹಿಷಮರ್ದನ ರೀತಿಯಲ್ಲೇ ರಾಜ್ಯ ಸರ್ಕಾರದ ಮರ್ದನ: ರೇಣುಕಾಚಾರ್ಯ

Davanagere: Dussehra festival grand procession

Davanagere: ದಸರಾ ಹಬ್ಬದ ಬೃಹತ್ ಶೋಭಾಯಾತ್ರೆ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಅಡಕೆ ವ್ಯಾಪಾರಿಯನ್ನ ಬೆದರಿಸಿ 17 ಲಕ್ಷ ದರೋಡೆ… ಘಟನೆ ನಡೆದ ಎರಡೇ ದಿನಕ್ಕೆ ಆರೋಪಿಗಳ ಬಂಧನ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

kannada movie Murphy

Murphy: ʼಮರ್ಫಿʼಗೆ ಸಾಥ್‌ ನೀಡಿದ ನಟಿಮಣಿಯರು

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

UP: ದುರ್ಗಾ ವಿಸರ್ಜನೆ ವೇಳೆ ಕೋಮು ಘರ್ಷಣೆ: ಗುಂಡಿನ ದಾಳಿ… ಯುವಕ ಬಲಿ, 30 ಮಂದಿ ಬಂಧನ

5

Actor Bala: ಮಾಜಿ ಪತ್ನಿ ಜತೆ ಅನುಚಿತ ವರ್ತನೆ ಆರೋಪ; ಖ್ಯಾತ ನಟ ಬಂಧನ

Women’s T20 World Cup: Despite losing against Aussies, India still have a chance in the semis

Women’s T20 World Cup: ಆಸೀಸ್‌ ವಿರುದ್ದ ಸೋತರೂ ಭಾರತಕ್ಕೆ ಇನ್ನೂ ಇದೆ ಸೆಮಿ ಅವಕಾಶ

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.