Bangladesh Unrest: ಹಿಂದೂ ಸಮುದಾಯದ ರಕ್ಷಣೆ: ಬಾಂಗ್ಲಾ ಸರಕಾರ ಬದ್ಧತೆ ತೋರಲಿ


Team Udayavani, Oct 14, 2024, 6:00 AM IST

BAnga

ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿಸಿ ಕಳೆದ ಕೆಲವು ತಿಂಗಳುಗಳಿಂದೀಚೆಗೆ ನಡೆಯುತ್ತಿರುವ ದಾಳಿಗಳು ಒಂದೇ ಸಮನೆ ಹೆಚ್ಚುತ್ತಲೇ ಸಾಗಿದ್ದು, ಅಲ್ಲಿನ ಅಲ್ಪಸಂಖ್ಯಾತ ಸಮುದಾಯವನ್ನು ಆತಂಕಕ್ಕೀಡು ಮಾಡಿದೆ. ದಂಗೆ ನಡೆಸುವ ಮೂಲಕ ಬಾಂಗ್ಲಾದಲ್ಲಿ ಅಧಿಕಾರದಲ್ಲಿದ್ದ ಶೇಖ್‌ ಹಸೀನಾ ನೇತೃತ್ವದ ಚುನಾಯಿತ ಸರಕಾರ‌ವನ್ನು ಪದಚ್ಯುತಗೊಳಿಸಿದ ಬಳಿಕ ಅಲ್ಲಿನ ಹಿಂದೂಗಳು ಅತಂತ್ರರಾಗಿದ್ದಾರೆ.

ಸದ್ಯ ಬಾಂಗ್ಲಾದೇಶದಲ್ಲಿರುವ ಮಧ್ಯಂತರ ಸರಕಾರ‌ ಹಿಂದೂಗಳಿಗೆ ರಕ್ಷಣೆ ನೀಡುವ ಅಭಯ ನೀಡುತ್ತ ಬಂದಿದ್ದರೂ ಹಿಂದೂಗಳ ದೇಗುಲಗಳು, ಆರಾಧನ ಸ್ಥಳಗಳ ಮೇಲಿನ ದಾಳಿಗಳು ಮುಂದುವರಿಯುತ್ತಲೇ ಇದೆ. ನವರಾತ್ರಿ ಸಂಭ್ರ ಮಾ ಚರಣೆ ಸಂದರ್ಭದಲ್ಲೂ ದುರ್ಗಾಮಾತೆಯ ಪೆಂಡಾಲ್‌ಗ‌ಳ ಮೇಲೆ ಪೆಟ್ರೋಲ್‌ ಬಾಂಬ್‌ಗಳನ್ನು ಎಸೆಯಲಾಗಿದೆಯಲ್ಲದೆ ಹಲವೆಡೆ ದಾಳಿಗಳನ್ನು ನಡೆಸಿ, ದೇವಾಲಯಗಳಲ್ಲಿನ ಚಿನ್ನಾಭರಣಗಳನ್ನು ಲೂಟಿ ಮಾಡಲಾಗಿದೆ. ಈ ಎಲ್ಲ ಘಟನಾವಳಿಗಳು ಬಾಂಗ್ಲಾದಲ್ಲಿನ ಹಿಂದೂಗಳನ್ನು ಅಭದ್ರತೆಯ ಕೂಪಕ್ಕೆ ತಳ್ಳಿವೆ.

ಬಾಂಗ್ಲಾದಲ್ಲಿನ ಪ್ರಜಾಸತ್ತಾತ್ಮಕ ಸರಕಾರ‌ವನ್ನು ದಾಂಧಲೆ ನಡೆಸಿ ಕಿತ್ತೂಗೆ ಯು­ವಲ್ಲಿ ಯಶಸ್ವಿಯಾದ ಅಲ್ಲಿನ ಕೆಲವು ಸಂಘಟನೆಗಳು ಈಗ ದೇಶದಲ್ಲಿನ ಹಿಂದೂ­ಗಳನ್ನು ಗುರಿಯಾಗಿಸಿ ಅವರ ಮೇಲೆ ಅವ್ಯಾಹತವಾಗಿ ದಾಳಿಗಳನ್ನು ನಡೆಸುತ್ತಿವೆ. ದೇಶದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಪುನರ್‌ ಸ್ಥಾಪಿಸುವ ಭರವಸೆಯೊಂದಿಗೆ ಅಧಿಕಾರಕ್ಕೇರಿದ್ದ ಮಧ್ಯಾಂತರ ಸರಕಾರ‌ ಈ ಕಿಡಿಗೇಡಿಗಳ ದುಷ್ಕೃತ್ಯಗಳಿಗೆ ಮೂಕಪ್ರೇಕ್ಷಕವಾಗಿದೆ.

ಬಾಂಗ್ಲಾದಲ್ಲಿ ಅರಾಜಕತೆ ಸೃಷ್ಟಿ ಯಾದಾಗಿ­ನಿಂ­ದಲೂ ಇದರ ಹಿಂದೆ ಭಾರೀ ಷಡ್ಯಂತ್ರ ಅಡಗಿರುವ ಮಾತು ಗಳು ಕೇಳಿ ಬರು­ತ್ತಲೇ ಇವೆಯಾದರೂ ಈ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯ ವಾಗಲೀ, ವಿಶ್ವಸಂಸೆ­§ಯಾಗಲೀ ತಲೆಕೆಡಿಸಿಕೊಂಡಿಲ್ಲ. ಇದು ಬಾಂಗ್ಲಾದ ಆಂತರಿಕ ವಿಚಾರ ಎಂದು ಇವೆಲ್ಲವೂ ಮೌನಕ್ಕೆ ಶರಣಾಗಿವೆ. ಇದೇ ವೇಳೆ ಬಾಂಗ್ಲಾದಲ್ಲಿನ ಈ ಬೆಳವಣಿಗೆಗಳ ಹಿಂದೆ ವಿಶ್ವದ ಬಲಿಷ್ಠ ರಾಷ್ಟ್ರಗಳ ಕೈವಾಡವೂ ಇದೆ ಎಂಬ ಆರೋ ಪವೂ ಇದ್ದು, ಭಾರತವನ್ನು ಗುರಿಯಾಗಿಸಿಯೇ ಬಾಂಗ್ಲಾದಲ್ಲಿ ಅರಾ ಜಕತೆಯ ವಾತಾ­­ವ­ರಣವನ್ನು ಸೃಷ್ಟಿಸಿ ಹಿಂದೂಗಳನ್ನು ಗುರಿಯಾಗಿಸಿ ದಾಳಿಗಳನ್ನು ನಡೆಸಲಾ­ಗುತ್ತಿದೆ ಎಂಬ ಮಾತುಗಳೂ ಕೇಳಿಬಂದಿವೆ. ಬಾಂಗ್ಲಾದಲ್ಲಿನ ಪ್ರಸಕ್ತ ಬೆಳವಣಿಗೆಗ­ಳನ್ನು ಗಮನಿಸಿದಾಗ ಈ ಎಲ್ಲ ಅನುಮಾನಗಳಲ್ಲಿ ಹುರುಳಿದ್ದಂತೆ ತೋರುತ್ತಿದೆ.

ಬಾಂಗ್ಲಾದಲ್ಲಿ ಹಿಂದೂ ಸಮುದಾಯದವರ ಮೇಲೆ ನಡೆಯುತ್ತಿರುವ ದಾಳಿಗಳು, ದೌರ್ಜನ್ಯಗಳ ಬಗೆಗೆ ಅಲ್ಲಿನ ಮಧ್ಯಂತರ ಸರಕಾರ‌ದ ಗಮನವನ್ನು ಭಾರತ ಸೆಳೆಯುತ್ತಲೇ ಬಂದಿದ್ದು, ಹಿಂದೂಗಳಿಗೆ ಅಗತ್ಯ ರಕ್ಷಣೆ ಒದಗಿಸುವಂತೆ ಒತ್ತಡ ಹೇರುತ್ತಲೇ ಬಂದಿದೆ. ರಾಜತಾಂತ್ರಿಕ ಮಟ್ಟದಲ್ಲಿ ಮಾತ್ರವಲ್ಲದೆ ಉಭಯ ದೇಶ ಗಳ ನಾಯಕರು ಭೇಟಿಯಾದಾಗಲೆಲ್ಲ ಈ ಬಗ್ಗೆ ಚರ್ಚೆ ನಡೆಸಿ, ಹಿಂದೂಗಳಿಗೆ ಸೂಕ್ತ ಭದ್ರತೆ ನೀಡುವಂತೆ ಆಗ್ರಹಿಸಿದ್ದಾರೆ.

ಇದೇ ವೇಳೆ ಬಾಂಗ್ಲಾದಲ್ಲಿ ನಡೆಯು ತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿದೇಶಿ ನಾಯಕರ ಗಮನ ಸೆಳೆಯುವ ಪ್ರಯತ್ನವನ್ನು ಭಾರತ ಮಾಡಿದೆ. ಈ ಎಲ್ಲ ಮನವಿ, ಪ್ರಯತ್ನಗಳ ಹೊರತಾಗಿಯೂ ಬಾಂಗ್ಲಾದಲ್ಲಿ ಅಲ್ಪಸಂಖ್ಯಾತ ಅದರಲ್ಲೂ ಹಿಂದೂಗಳನ್ನೇ ಗುರಿಯಾಗಿಸಿ ನಡೆಸ­ಲಾಗುತ್ತಿರುವ ದಾಳಿಗಳ ಹಿಂದೆ ಭಾರೀ ಷಡ್ಯಂತ್ರವಿದೆ ಎಂಬುದರಲ್ಲಿ ಅನು ಮಾ­ನವೇ ಇಲ್ಲ. ಹೀಗಾಗಿ ಭಾರತ ಸರಕಾರ‌ ಈ ಬಗ್ಗೆ ಅಂತಾ ರಾಷ್ಟ್ರೀಯ ಮಟ್ಟದಲ್ಲಿ ಪ್ರಬಲವಾದ ದನಿ ಎತ್ತಬೇಕಿದೆ.

ಈ ವಿಷಯದಲ್ಲಿ ಭಾರತ ಈಗಾಗಲೇ ಸಾಕಷ್ಟು ತಾಳ್ಮೆ, ಸಂಯಮ ವಹಿಸಿದ್ದು, ಇನ್ನೊಂದಿಷ್ಟು ಏರು ಧ್ವನಿಯಲ್ಲಿ ಬಾಂಗ್ಲಾ ದೇಶಕ್ಕೆ ಸ್ಪಷ್ಟ ಮಾತುಗಳಲ್ಲಿ ಎಚ್ಚರಿಕೆ ನೀಡಬೇಕು. ಅಂತಾ ರಾಷ್ಟ್ರೀಯ ಮಟ್ಟದಲ್ಲಿಯೂ ಬಾಂಗ್ಲಾ­ದಲ್ಲಿನ ಅರಾಜಕತೆ, ಮಾನವಹಕ್ಕುಗಳ ಉಲ್ಲಂಘನೆಯ ವಿಷಯಗಳನ್ನು ಪ್ರಸ್ತಾಪಿಸಿ, ಬಾಂಗ್ಲಾ ಸರಕಾರ‌ದ ಮೇಲಣ ಒತ್ತಡವನ್ನು ಮತ್ತಷ್ಟು ತೀವ್ರಗೊಳಿಸಿ, ಅಲ್ಲಿನ ಹಿಂದೂಗಳಲ್ಲಿ ಸುರಕ್ಷಾ ಭಾವವನ್ನು ಮೂಡಿಸುವ ಪ್ರಯತ್ನಮಾಡಬೇಕು.

ಟಾಪ್ ನ್ಯೂಸ್

8

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

Explainer: ರಾಜ್ಯದ ಜಾತಿ ಜನ ಗಣತಿಗೆ ಯಾಕೆ ಇಷ್ಟೊಂದು ಚರ್ಚೆ ?

Explainer: ರಾಜ್ಯದ ಜಾತಿ ಜನ ಗಣತಿ ಕುರಿತು ಯಾಕೆ ಇಷ್ಟೊಂದು ಚರ್ಚೆ ?

4-ptr

Puttur: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು

1-amudaa

MUDA; Chairman ಕೆ.ಮರಿಗೌಡ ರಾಜೀನಾಮೆ: ಆಡಳಿತಾಧಿಕಾರಿ ನೇಮಕ ಸಾಧ್ಯತೆ

1-jj-bg-aa

J&K; ಸಿಎಂ ಆಗಿ ಒಮರ್ ಅಬ್ದುಲ್ಲಾ, ಡಿಸಿಎಂ ಆಗಿ ಸುರೀಂದರ್ ಚೌಧರಿ ಪ್ರಮಾಣ ವಚನ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Dubai-N1

Dubai Miracle Garden: ಮರು ಭೂಮಿಯಲ್ಲಿ ಮೂಡಿ ಬಂದ ಪುಷ್ಪ ಸಿರಿ ವೈಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯಕ್ಯಾನ್ಸರ್‌ ಕಾಯಿಲೆ: ನಿರಂತರ ಜಾಗೃತಿ ಅಗತ್ಯ

India: ಕ್ಯಾನ್ಸರ್‌ ಕಾಯಿಲೆ; ನಿರಂತರ ಜಾಗೃತಿ ಅಗತ್ಯ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

Canada: ಜಸ್ಟಿನ್‌ ಟ್ರಾಡೊ ಉದ್ಧಟತನಕ್ಕೆ ತಕ್ಕ ಪ್ರತಿಕ್ರಿಯೆ

Exam 3

PU ಪ್ರಾಯೋಗಿಕ ಪರೀಕ್ಷೆ ದಿನಕ್ಕೊಂದು ಆದೇಶದ ಗೊಂದಲ

EVM

Haryana Election: ಮತ್ತೆ ಇವಿಎಂ ಮೇಲೆ ಅನುಮಾನ ಕಾಂಗ್ರೆಸ್‌ ಸಾಕ್ಷ್ಯಾಧಾರ ಒದಗಿಸಲಿ

vidhana-Soudha

Guidlines: ಗ್ರಾಮಸಭೆಗೆ ಮಾರ್ಗಸೂಚಿ ಉತ್ತರದಾಯಿತ್ವ ಅಗತ್ಯ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

1-rss

Hubli; ಗಲಭೆ ಪ್ರಕರಣ ವಾಪಸ್ ಖಂಡಿಸಿ ಠಾಣೆ ಮುಂಭಾಗ ಶ್ರೀರಾಮ ಸೇನೆ ಪ್ರತಿಭಟನೆ

3

Punjalkatte:ಕೊಳಕ್ಕೆಬೈಲ್‌-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ

8

BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?

2

Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ

Explainer: ರಾಜ್ಯದ ಜಾತಿ ಜನ ಗಣತಿಗೆ ಯಾಕೆ ಇಷ್ಟೊಂದು ಚರ್ಚೆ ?

Explainer: ರಾಜ್ಯದ ಜಾತಿ ಜನ ಗಣತಿ ಕುರಿತು ಯಾಕೆ ಇಷ್ಟೊಂದು ಚರ್ಚೆ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.