Kinnigoli: ಒಂದೇ ಮಳೆಗೆ ಎದ್ದು ಹೋಯಿತು ಕಾಟಾಚಾರದ ತೇಪೆ!
ಕಿನ್ನಿಗೋಳಿ - ಮೂಲ್ಕಿ ರಾಜ್ಯ ಹೆದ್ದಾರಿ ವ್ಯಥೆಯ ಕತೆ; ಅಪಾಯಕಾರಿ ಹೊಂಡಗಳಿಂದ ದ್ವಿಚಕ್ರ ವಾಹನ ಚಾಲಕರಿಗೆ ಸಂಚಕಾರ
Team Udayavani, Oct 14, 2024, 1:18 PM IST
ಕಿನ್ನಿಗೋಳಿ: ಕಿನ್ನಿಗೋಳಿ – ಮೂಲ್ಕಿ ರಾಜ್ಯ ಹೆದ್ದಾರಿಯಲ್ಲಿ ಈ ಬಾರಿಯ ಮಳೆಗೆ ಹಲವಾರು ಕಡೆಗಳಲ್ಲಿ ಡಾಮರು ಕಿತ್ತು ಹೋಗಿ ಹೊಂಡ ಗುಂಡಿಗಳು ನಿರ್ಮಾಣವಾಗಿವೆ. ಪತ್ರಿಕೆಯಲ್ಲಿ ಬಂದ ವರದಿಗೆ ಸ್ಪಂದಿಸಿ ಕಾಟಾಚಾರಕ್ಕೆ ಹಾಕಿದ ತೇಪೆ ಒಂದೇ ಮಳೆಗೆ ಎದ್ದು ಹೋಗಿದ್ದು ಮತ್ತೆ ಹೊಂಡ ಗುಂಡಿಗಳು ದೊಡ್ಡದಾಗಿವೆ.
ಮಳೆಗಾಲ ಇನ್ನೂ ಪೂರ್ತಿ ಮುಗಿದಿಲ್ಲ. ಕಿನ್ನಿಗೋಳಿ ರಾಜಾಂಗಣದ ಬಳಿಯ ದೊಡ್ಡ ಹೊಂಡದಲ್ಲಿ ಕನಿಷ್ಟ ಹತ್ತು ಜನರು ಬಿದ್ದು ಗಾಯಗೊಂಡಿದ್ದಾರೆ. ಮೂರುಕಾವೇರಿ, ಕಿನ್ನಿಗೋಳಿ ಪ.ಪಂ., ಭಟ್ಟಕೋಡಿ, ಪುನರೂರು, ಪದ್ಮನೂರು ಕೆರೆಕಾಡು, ಕೆಂಚನಕೆರೆಯ ರಸ್ತೆಯಲ್ಲಿ ಡಾಮರು ಕಿತ್ತು ಹೋಗಿ ದೊಡ್ಡ ದೊಡ್ಡ ಹೊಂಡ ಗುಂಡಿಗಳು ನಿರ್ಮಾಣವಾಗಿವೆ. ದ್ವಿಚಕ್ರ ವಾಹನ ಚಾಲಕರಿಗೆ ಹೆಚ್ಚಿನ ಹೊಂಡ ಗುಂಡಿಗಳು ಅಪಾಯಕಾರಿಯಾಗಿವೆ. ರಸೆಯು ಎಲ್ಲ ಕಡೆ ಉತ್ತಮವಾಗಿದೆ ಎಂದು ವೇಗವಾಗಿ ಚಲಿಸಿದರೆ ಗುಂಡಿಯ ಅರಿವು ಇಲ್ಲದೆ ದ್ವಿಚಕ್ರ ವಾಹನ ಗುಂಡಿಗೆ ಬಿದ್ದು ಮೂಳೆ ಮುರಿತ ಉಂಟಾಗುವುದು ಗ್ಯಾರಂಟಿ.
ಹೆದ್ದಾರಿ ನಿರ್ವಹಣೆ ಕೊರತೆ
ರಾಜ್ಯ ಹೆದ್ದಾರಿಯಲ್ಲಿ ಮಳೆಗಾಲಕ್ಕೆ ಮುನ್ನಾ ಸಣ್ಣ ಪುಟ್ಟ ಹೊಂಡ ತೇಪೆ ಕಾರ್ಯ ಹಾಗೂ ಹೆದ್ದಾರಿಯ ಬದಿಯ ಚರಂಡಿ ನಿರ್ವಹಣೆ ಮಾಡಿದರೇ ಇಂತಹ ಸಮಸ್ಯೆ ಆಗುತ್ತಿರಲ್ಲಿ, ಕೆಲವೆಡೆ ಚರಂಡಿಯ ಸಮಪರ್ಕ ನಿರ್ವಹಣೆ ಇಲ್ಲದೆ ಚರಂಡಿಯಲ್ಲಿ ಹರಿಯಬೇಕಾದ ನೀರು ರಸ್ತೆಯಲ್ಲಿ ಹರಿದು ಕೆರೆಕಾಡು, ಕೆಂಚನಕೆರೆ ಶಾಲೆಯ ಮುಂಭಾಗದಲ್ಲಿ ರಸ್ತೆಗಳು ಹದಗೆಟ್ಟು ಹೋಗಿದೆ. ಕೆಲವು ಕಡೆಗಳಲ್ಲಿ ರಸ್ತೆ ಹಾಕಿದ ಫೆವರ್ ಫಿನಿಶ್ ಕಿತ್ತು ಹೋಗಿದೆ.
ಹುಲ್ಲು ಗಿಡ- ಗಂಟಿ ಬೆಳೆದು ಸಂಕಷ್ಟ
ಕೆರೆಕಾಡು, ಹೊಸಕಾವೇರಿ, ಪುನರೂರು, ಕೆಂಚನಕೆರೆ ತಿರುವು ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ದೊಡ್ಡ ಗಾತ್ರದಲ್ಲಿ ಹುಲ್ಲು ಗಿಡ- ಗಂಟಿಗಳು ಬೆಳೆದು ಪಾದಚಾರಿಗಳಿಗೆ ಸಂಚರಿಸಲು ಕಷ್ಟಸಾಧ್ಯವಾಗಿದೆ, ತಿರುವುನಲ್ಲಿ ಎದುರಿಗೆ ಬರುವ ವಾಹನವು ಗೋಚರವಾಗುತ್ತಿಲ್ಲ.
ಕಾಂಕ್ರೀಟ್ ರಸ್ತೆ ನಿರ್ಮಿಸಿ
ಕಳೆದ ವರ್ಷ ಮಳೆಗಾಲದಲ್ಲಿ ಇದೇ ಸಮಸ್ಯೆ ಉಂಟಾಗಿತ್ತು. ಬಳಿಕ ಸ್ವಲ್ಪ ತೇಪೆ ಕಾರ್ಯ ಮಾತ್ರ ಮಾಡಲಾಗಿತ್ತು. ಇದೀಗ ಮತ್ತೆ ತೇಪೆ ಹಾಕಿದ್ದು ಎದ್ದು ಹೋಗಿ ಸಮಸ್ಯೆ ಉಂಟಾಗಿದೆ. ಇಂತಹ ಸಮಸ್ಯೆ ಶಾಶ್ವತ ಪರಿಹಾರ ಆಗಬೇಕಾಗಿದೆ. ರಸ್ತೆಯನ್ನು ವಿಸ್ತರಿಸಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿದರೆ ಮಾತ್ರ ಸಮಸ್ಯೆಗೆ ಪರಿಹಾರ.
-ರಘನಾಥ ಕಾಮತ್ ಕೆಂಚನಕೆರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Abhimanyu Son of Kashinath; ಕಾಶೀನಾಥ್ ಮಗನ ಹೊಸ ಸಿನಿಮಾ
Ballari: ಸರಕಾರದ ಬಳಿ ಹಣವಿಲ್ಲವೆಂದು ಬಿಜೆಪಿಯ ಪೆದ್ದ ಶಿಖಾಮಣಿಗಳಿಂದಷ್ಟೇ ಅಪಪ್ರಚಾರ: ಸಿಎಂ
Belagavi: ಪಂಚಮಸಾಲಿ ಮೀಸಲಾತಿ ಚರ್ಚೆಗೆ ಸಭೆ ನಿಗದಿ ಮಾಡದ ಸಿಎಂ ವಿರುದ್ದ ಸ್ವಾಮೀಜಿ ಆಕ್ರೋಶ
Renukaswamy Case; ದರ್ಶನ್,ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ: ಜೈಲೇ ಗತಿ
Bantwal: ಮೊಡಂಕಾಪು ಶ್ರೀ ವನದುರ್ಗೆ ದೇವಸ್ಥಾನಕ್ಕೆ ಭೇಟಿ ನೀಡಿದ ನಟ ಶಿವಣ್ಣ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.