Kinnigoli: ಒಂದೇ ಮಳೆಗೆ ಎದ್ದು ಹೋಯಿತು ಕಾಟಾಚಾರದ ತೇಪೆ!

ಕಿನ್ನಿಗೋಳಿ - ಮೂಲ್ಕಿ ರಾಜ್ಯ ಹೆದ್ದಾರಿ ವ್ಯಥೆಯ ಕತೆ; ಅಪಾಯಕಾರಿ ಹೊಂಡಗಳಿಂದ ದ್ವಿಚಕ್ರ ವಾಹನ ಚಾಲಕರಿಗೆ ಸಂಚಕಾರ

Team Udayavani, Oct 14, 2024, 1:18 PM IST

3

ಕಿನ್ನಿಗೋಳಿ: ಕಿನ್ನಿಗೋಳಿ – ಮೂಲ್ಕಿ ರಾಜ್ಯ ಹೆದ್ದಾರಿಯಲ್ಲಿ ಈ ಬಾರಿಯ ಮಳೆಗೆ ಹಲವಾರು ಕಡೆಗಳಲ್ಲಿ ಡಾಮರು ಕಿತ್ತು ಹೋಗಿ ಹೊಂಡ ಗುಂಡಿಗಳು ನಿರ್ಮಾಣವಾಗಿವೆ. ಪತ್ರಿಕೆಯಲ್ಲಿ ಬಂದ ವರದಿಗೆ ಸ್ಪಂದಿಸಿ ಕಾಟಾಚಾರಕ್ಕೆ ಹಾಕಿದ ತೇಪೆ ಒಂದೇ ಮಳೆಗೆ ಎದ್ದು ಹೋಗಿದ್ದು ಮತ್ತೆ ಹೊಂಡ ಗುಂಡಿಗಳು ದೊಡ್ಡದಾಗಿವೆ.

ಮಳೆಗಾಲ ಇನ್ನೂ ಪೂರ್ತಿ ಮುಗಿದಿಲ್ಲ. ಕಿನ್ನಿಗೋಳಿ ರಾಜಾಂಗಣದ ಬಳಿಯ ದೊಡ್ಡ ಹೊಂಡದಲ್ಲಿ ಕನಿಷ್ಟ ಹತ್ತು ಜನರು ಬಿದ್ದು ಗಾಯಗೊಂಡಿದ್ದಾರೆ. ಮೂರುಕಾವೇರಿ, ಕಿನ್ನಿಗೋಳಿ ಪ.ಪಂ., ಭಟ್ಟಕೋಡಿ, ಪುನರೂರು, ಪದ್ಮನೂರು ಕೆರೆಕಾಡು, ಕೆಂಚನಕೆರೆಯ ರಸ್ತೆಯಲ್ಲಿ ಡಾಮರು ಕಿತ್ತು ಹೋಗಿ ದೊಡ್ಡ ದೊಡ್ಡ ಹೊಂಡ ಗುಂಡಿಗಳು ನಿರ್ಮಾಣವಾಗಿವೆ. ದ್ವಿಚಕ್ರ ವಾಹನ ಚಾಲಕರಿಗೆ ಹೆಚ್ಚಿನ ಹೊಂಡ ಗುಂಡಿಗಳು ಅಪಾಯಕಾರಿಯಾಗಿವೆ. ರಸೆಯು ಎಲ್ಲ ಕಡೆ ಉತ್ತಮವಾಗಿದೆ ಎಂದು ವೇಗವಾಗಿ ಚಲಿಸಿದರೆ ಗುಂಡಿಯ ಅರಿವು ಇಲ್ಲದೆ ದ್ವಿಚಕ್ರ ವಾಹನ ಗುಂಡಿಗೆ ಬಿದ್ದು ಮೂಳೆ ಮುರಿತ ಉಂಟಾಗುವುದು ಗ್ಯಾರಂಟಿ.

ಹೆದ್ದಾರಿ ನಿರ್ವಹಣೆ ಕೊರತೆ
ರಾಜ್ಯ ಹೆದ್ದಾರಿಯಲ್ಲಿ ಮಳೆಗಾಲಕ್ಕೆ ಮುನ್ನಾ ಸಣ್ಣ ಪುಟ್ಟ ಹೊಂಡ ತೇಪೆ ಕಾರ್ಯ ಹಾಗೂ ಹೆದ್ದಾರಿಯ ಬದಿಯ ಚರಂಡಿ ನಿರ್ವಹಣೆ ಮಾಡಿದರೇ ಇಂತಹ ಸಮಸ್ಯೆ ಆಗುತ್ತಿರಲ್ಲಿ, ಕೆಲವೆಡೆ ಚರಂಡಿಯ ಸಮಪರ್ಕ ನಿರ್ವಹಣೆ ಇಲ್ಲದೆ ಚರಂಡಿಯಲ್ಲಿ ಹರಿಯಬೇಕಾದ ನೀರು ರಸ್ತೆಯಲ್ಲಿ ಹರಿದು ಕೆರೆಕಾಡು, ಕೆಂಚನಕೆರೆ ಶಾಲೆಯ ಮುಂಭಾಗದಲ್ಲಿ ರಸ್ತೆಗಳು ಹದಗೆಟ್ಟು ಹೋಗಿದೆ. ಕೆಲವು ಕಡೆಗಳಲ್ಲಿ ರಸ್ತೆ ಹಾಕಿದ ಫೆವರ್‌ ಫಿನಿಶ್‌ ಕಿತ್ತು ಹೋಗಿದೆ.

ಹುಲ್ಲು ಗಿಡ- ಗಂಟಿ ಬೆಳೆದು ಸಂಕಷ್ಟ
ಕೆರೆಕಾಡು, ಹೊಸಕಾವೇರಿ, ಪುನರೂರು, ಕೆಂಚನಕೆರೆ ತಿರುವು ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ದೊಡ್ಡ ಗಾತ್ರದಲ್ಲಿ ಹುಲ್ಲು ಗಿಡ- ಗಂಟಿಗಳು ಬೆಳೆದು ಪಾದಚಾರಿಗಳಿಗೆ ಸಂಚರಿಸಲು ಕಷ್ಟಸಾಧ್ಯವಾಗಿದೆ, ತಿರುವುನಲ್ಲಿ ಎದುರಿಗೆ ಬರುವ ವಾಹನವು ಗೋಚರವಾಗುತ್ತಿಲ್ಲ.

ಕಾಂಕ್ರೀಟ್‌ ರಸ್ತೆ ನಿರ್ಮಿಸಿ
ಕಳೆದ ವರ್ಷ ಮಳೆಗಾಲದಲ್ಲಿ ಇದೇ ಸಮಸ್ಯೆ ಉಂಟಾಗಿತ್ತು. ಬಳಿಕ ಸ್ವಲ್ಪ ತೇಪೆ ಕಾರ್ಯ ಮಾತ್ರ ಮಾಡಲಾಗಿತ್ತು. ಇದೀಗ ಮತ್ತೆ ತೇಪೆ ಹಾಕಿದ್ದು ಎದ್ದು ಹೋಗಿ ಸಮಸ್ಯೆ ಉಂಟಾಗಿದೆ. ಇಂತಹ ಸಮಸ್ಯೆ ಶಾಶ್ವತ ಪರಿಹಾರ ಆಗಬೇಕಾಗಿದೆ. ರಸ್ತೆಯನ್ನು ವಿಸ್ತರಿಸಿ ಕಾಂಕ್ರೀಟ್‌ ರಸ್ತೆ ನಿರ್ಮಾಣ ಮಾಡಿದರೆ ಮಾತ್ರ ಸಮಸ್ಯೆಗೆ ಪರಿಹಾರ.

-ರಘನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.