Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ
Team Udayavani, Oct 15, 2024, 7:36 AM IST
ಮೇಷ: ಅಂದಾಜಿನಲ್ಲಿ ಹೆಚ್ಚುಕಡಿಮೆಯಾಗಿ ತಾತ್ಕಾಲಿಕ ತೊಂದರೆ. ದೈವಾನುಗ್ರಹದಿಂದ ಅನಾರೋಗ್ಯ ನಿವಾರಣೆ. ಹಿರಿಯರಿಗೆ ನೆಮ್ಮದಿಯ ವಾತಾವರಣ. ಉದ್ಯೋಗಸ್ಥರಿಗೆ ಪದೋನ್ನತಿಯ ಸೂಚನೆ. ಧಾರ್ಮಿಕ ಕಾರ್ಯಗಳಲ್ಲಿ ವಿಶೇಷ ಆಸಕ್ತಿ.
ವೃಷಭ: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ. ಉದ್ಯೋಗ ರಂಗದಲ್ಲಿ ಹೊಸ ಹೊಣೆಗಾರಿಕೆಗಳು. ವ್ಯವಹಾರ ಕ್ಷೇತ್ರದಲ್ಲಿ ತೀವ್ರ ಪೈಪೋಟಿ. ನಿರೀಕ್ಷಿತ ಲಾಭ ಕೈಸೇರಿ ಹರ್ಷ. ರಸಗೊಬ್ಬರ ಮೊದಲಾದ ವಸ್ತುಗಳ ವ್ಯಾಪಾರಿಗಳಿಗೆ ಶುಭ ಸೂಚನೆ.
ಮಿಥುನ: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ. ಕ್ಷಣಿಕ ಅನಾರೋಗ್ಯಕ್ಕೆ ಹೆದರುವುದು ಬೇಡ. ಧಾರ್ಮಿಕ, ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ. ನಿರೀಕ್ಷಿತ ಆರ್ಥಿಕ ನೆರವು ಕೈಸೇರಿ ಸಮಾಧಾನ.
ಕರ್ಕಾಟಕ: ವ್ಯವಹಾರದಲ್ಲಿ ತ್ವರಿತವಾಗಿ ಕಾರ್ಯ ಸಾಧಿಸುವ ಹಂಬಲ. ನಿರೀಕ್ಷಿತ ನೆರವು ವಿಳಂಬವಾದರೂ ಮುನ್ನಡೆ ಅಬಾಧಿತ. ಹಿರಿಯರಿಗೆ ಸ್ಥಾನ ಗೌರವದಿಂದ ಸಮಾಧಾನ. ಮಕ್ಕಳ ವ್ಯಾಸಂಗಕ್ಕೆ ಹೆಚ್ಚಿನ ಮಾರ್ಗದರ್ಶನ ಅವಶ್ಯ.
ಸಿಂಹ: ಕಾರ್ಯಸಾಧನೆಯಲ್ಲಿ ಅನೂಹ್ಯ ಮುನ್ನಡೆ. ಕಾರ್ಯಕ್ಷೇತ್ರದ ವಿಸ್ತರಣೆಗೆ ಒತ್ತಾಯ. ಪಶ್ಚಿಮ ದಿಕ್ಕಿನಿಂದ ಶುಭ ಸಮಾಚಾರ. ಹಿರಿಯರ ಯೋಗಕ್ಷೇಮ ವಿಚಾರಿಸಿ. ಗೃಹಿಣಿಯರಿಗೆ ಹೆಚ್ಚು ಜೀವನೋತ್ಸಾಹ.
ಕನ್ಯಾ: ಕುಲದೇವರ ದರ್ಶನದಿಂದ ದೀರ್ಘಕಾಲೀನ ಸಮಸ್ಯೆ ನಿವಾರಣೆ. ಸಣ್ಣ ಪ್ರವಾಸ ಸಂಭವ. ಗುರು ಸಮಾನ ವ್ಯಕ್ತಿಯಿಂದ ಮಾರ್ಗದರ್ಶನ. ಹೊಸ ಬಗೆಯ ಚಿಕಿತ್ಸಾ ಪದ್ಧತಿ ಯಿಂದ ಪ್ರಯೋಜನ.
ತುಲಾ: ಸಾಂಸಾರಿಕ ಸುಖ ವೃದ್ಧಿ. ಭಗವತ್ ಕೈಂಕರ್ಯದಿಂದ ಜೀವನ ಯಾತ್ರೆ ಸುಗಮ. ಮನೆಯಲ್ಲಿ ಎಲ್ಲರ ಆರೋಗ್ಯ ತೃಪ್ತಿಕರ. ಬಂಧುವರ್ಗದಲ್ಲಿ ವಿವಾಹ ನಿಶ್ಚಯ. ದೂರದಲ್ಲಿರುವ ಮಿತ್ರರಿಂದ ಅಮೂಲ್ಯ ಸಲಹೆ.
ವೃಶ್ಚಿಕ: ಅಪರೂಪದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅವಕಾಶ. ವಿದೇಶದಲ್ಲಿರುವ ಪುತ್ರನಿಗೆ ಪದೋನ್ನತಿ. ಸ್ವತಂತ್ರ ವ್ಯವಹಾರಸ್ಥರಿಗೆ ಅನುಕೂಲದ ವಿದ್ಯಮಾನ. ಬಂಧುವರ್ಗದಲ್ಲಿ ಶುಭಕಾರ್ಯಕ್ಕೆ ಸಹಾಯ.
ಧನು: ಧಾರ್ಮಿಕ ಕ್ಷೇತ್ರದಲ್ಲಿ ಗೌರವ. ಪರಿಸರ ನೈರ್ಮಲ್ಯ ಕಾರ್ಯಕ್ರಮಕ್ಕೆ ಉತ್ತೇಜನ. ವೃದ್ಧಾಶ್ರಮ, ಅನಾಥಾಶ್ರಮಕ್ಕೆ ಭೇಟಿ. ಕೃಷ್ಯುತ್ಪನ್ನ ಮಾರಾಟದಿಂದ ಸಾಮಾನ್ಯ ಆದಾಯ. ದಾಯಾದಿ ಕಲಹ ಮಾತುಕತೆಯಲ್ಲಿ ಪರಿಹಾರ.
ಮಕರ: ಸಾಂಸಾರಿಕ ಕ್ಷೇತ್ರದಲ್ಲಿ ಹರ್ಷದ ವಾತಾವರಣ. ಅನುಭವ ಇರುವ ಕೆಲಸ ವೊಂದನ್ನು ವಹಿಸಿಕೊಳ್ಳಲು ಆಹ್ವಾನ. ವಾಹನ ದುರಸ್ತಿ ಕೆಲಸಗಾರರಿಗೆ, ದ್ರವಪದಾರ್ಥ ವ್ಯಾಪಾರಿಗಳಿಗೆ ಲಾಭ. ತಾಯಿಯ ಆರೋಗ್ಯ ಸುಧಾರಣೆ.
ಕುಂಭ: ಏಳೂವರೆ ಶನಿಯ ಪ್ರಭಾವದಿಂದ ನೆಮ್ಮದಿ ದೂರ. ಹಿರಿಯರ ಆರೋಗ್ಯದಲ್ಲಿ ಎಚ್ಚರ. ಆಯ್ದ ವ್ಯಾಪಾರಿಗಳಿಗೆ ಬೇಡಿಕೆಗೆ ಸ್ಪಂದಿಸುವ ಸವಾಲು. ದೂರದಲ್ಲಿರುವ ಬಂಧುಗಳ ಆಗಮನ. ಆಪ್ತವರ್ಗದಲ್ಲಿ ಶುಭಕಾರ್ಯಕ್ಕೆ ನೆರವು. ದೇವಾಲಯಕ್ಕೆ ಭೇಟಿ.
ಮೀನ: ಉದ್ಯೋಗಸ್ಥರಿಗೆ ಹೊಸ ವಿಭಾಗದ ಹೊಣೆಗಾರಿಕೆ.ಸಾಮಾಜಿಕ ರಂಗದಿಂದ ಒತ್ತಡ. ಹಳೆಯ ಪಾಲುದಾರರ ಪುನರ್ಮಿಲನ. ಹೊಸ ವ್ಯವಹಾರ ಆರಂಭಿಸುವ ಕುರಿತು ಮಾತುಕತೆ. ಸಂಸಾರದಲ್ಲಿ ಪ್ರೀತಿ, ಅನುರಾಗ, ವಿಶ್ವಾಸ ವೃದ್ಧಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ
Daily Horoscope: ಆಪತ್ತುಗಳಿಂದ ವಿಮೋಚನೆ, ಮನೋಬಲ ವರ್ಧನೆಗೆ ಆಪ್ತರ ಸಹಾಯ
Daily Horoscope: ಜೀವನೋತ್ಸಾಹ ಉಳಿಸಿಕೊಳ್ಳಲು ಶ್ರಮ, ವ್ಯಾಪಾರಿಗಳಿಗೆ ಪೈಪೋಟಿಯಿಂದ ಲಾಭ
Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ಸಂತೋಷದ ವಾತಾವರಣ
Daily Horoscope; ಕಳೆದುಹೋದ ಸುಸಂದರ್ಭ ಮರಳಿ ಬರುವ ಸಾಧ್ಯತೆ…
MUST WATCH
ಹೊಸ ಸೇರ್ಪಡೆ
Sullia: ಪಂಜ ಹೋಬಳಿ ಕೇಂದ್ರ ತಲುಪುವುದೇ ಕಷ್ಟ!
Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ
B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತೇವೆ
Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…
Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್ಬಾಸ್ ವೇದಿಕೆಗೆ ಬರಲಿದ್ದಾರೆ ಕಮಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.