Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

ಅರಮನೆ ಆವರಣದಲ್ಲಿ ಜನತೆಯಿಂದ ಭಾವನಾತ್ಮಕ ವಿದಾಯ

Team Udayavani, Oct 15, 2024, 7:20 AM IST

Mysuru: ಮರಳಿ ಕಾಡಿನತ್ತ ಪ್ರಯಾಣ ಬೆಳೆಸಿದ ಗಜಪಡೆ

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕಾಗಿ ಎರಡು ತಿಂಗಳ ಹಿಂದೆ ಕಾಡಿನಿಂದ ಆಗಮಿಸಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿದ್ದ ಶನಿವಾರ ನಡೆದ ಆನೆಗಳು ಜಂಬೂ ಸವಾರಿಯನ್ನು ಯಶಸ್ವಿಯಾಗಿ ಪೂರೈಸಿ ತಮ್ಮ ಶಿಬಿರದತ್ತ ಪ್ರಯಾಣ ಬೆಳೆಸಿದವು.

ಅರಮನೆ ಆವರಣದಲ್ಲಿ ಸೋಮವಾರ ಮಧ್ಯಾಹ್ನ ಅಭಿಮನ್ಯು ನೇತೃತ್ವದಲ್ಲಿ ಎಲ್ಲ ಆನೆಗಳಿಗೂ ವಿಶೇಷ ಪೂಜೆ ಸಲ್ಲಿಸಿ, ಬೆಲ್ಲ, ಕಬ್ಬು, ತೆಂಗು, ಬಾಳೆ ಹಣ್ಣು ನೀಡಿ ಬೀಳ್ಕೊಡುಗೆ ನೀಡಲಾಯಿತು.

ಕಳೆದೆರೆಡು ತಿಂಗಳಿಂದ ನಾನಾ ಹಂತದ ತಾಲೀಮಿನಲ್ಲಿ ಭಾಗವಹಿಸಿ, ನಗರದ ವಾತಾವರಣಕ್ಕೆ ಒಗ್ಗಿದ್ದ ಆನೆಗಳು, ಒಲ್ಲದ ಮನಸ್ಸಿನಲ್ಲೇ ಮರಳಿ ತಮ್ಮ ಶಿಬಿರದತ್ತ ಹೊರಟವು. ಈ ವೇಳೆ ಅರಮನೆ ಅಂಗಳದಲ್ಲಿ ಭಾವನಾತ್ಮಕ ಸನ್ನಿವೇಶ ನಿರ್ಮಾಣವಾಗಿತ್ತು. ನಮ್ಮೊಳಗೊಬ್ಬರಾಗಿದ್ದ ಗಜಪಡೆಯನ್ನು ಭಾರವಾದ ಮನಸ್ಸಿನಿಂದಲೇ ಹೋಗಿ ಬನ್ನಿ ಎಂದು ಕಳುಹಿಸಿಕೊಡಲಾಯಿತು. ಹೊಸ ವಾತಾವರಣಕ್ಕೆ ಬಂದು ಕುಣಿದು ಕುಪ್ಪಳಿಸುತ್ತಿದ್ದ ಮಾವುತರು, ಕಾವಾಡಿಗಳ ಮಕ್ಕಳು ಸಹ ಬೇಸರದಿಂದಲೇ ಬ್ಯಾಗುಗಳನ್ನು ಎತ್ತಿಕೊಂಡು ತಮ್ಮ ಊರಿನತ್ತ ಹೆಜ್ಜೆ ಹಾಕಿದರು. ಪ್ರತಿನಿತ್ಯ ಆನೆಗಳನ್ನು ನೋಡಿ ಖುಷಿ ಪಡುತ್ತಿದ್ದ ಮೈಸೂರಿನ ಜನತೆ ಸಪ್ಪೆ ಮೋರೆಯಲ್ಲಿಯೇ ಗಜಪಡೆಯನ್ನು ಬೀಳ್ಕೊಟ್ಟರು.

ಸಾಂಪ್ರದಾಯಿಕ ಪೂಜೆ:
ಆನೆಗಳಿಗೆ ಪುರೋಹಿತ ಪ್ರಹ್ಲಾದರಾವ್‌ ನೇತೃತ್ವದಲ್ಲಿ ಅರಮನೆ ಮಂಡಳಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು. ನಂತರ ಬೂದುಗುಂಬಳ ಒಡೆದು ದೃಷ್ಟಿ ತೆಗೆದು ಆನೆಗಳಿಗೆ ವಿವಿಧ ಹಣ್ಣು ಹಂಪಲು ಹಾಗೂ ಬೆಲ್ಲ ನೀಡಲಾಯಿತು. ಪೂಜೆ ಬಳಿಕ ಮಾವುತರು ಹಾಗೂ ಕಾವಾಡಿಗರ ಕುಟುಂಬ ವರ್ಗದವರಿಗೆ ಉಪಹಾರ ನೀಡಿ ಆನೆಗಳೊಂದಿಗೆ ಅವರನ್ನು ಬೀಳ್ಕೊಡಲಾಯಿತು. ಆನೆ ಶಿಬಿರದತ್ತ ಮರಳಿದ ಮಾವುತರು, ಕಾವಾಡಿಗಳಿಗೆ ಗೌರವಧನದ ಜತೆಗೆ ದಿನಸಿ ನೀಡಲಾಯಿತು. ನಂತರ ಎಲ್ಲಾ ಆನೆಗಳನ್ನು ಲಾರಿ ಹತ್ತಿಸಿ ಆಯಾ ಆನೆಗಳ ಶಿಬಿರಗಳಿಗೆ ಕಳುಹಿಸಲಾಯಿತು. ಅರಮನೆ ಆವರಣದಿಂದ ಹೊರಟ ಆನೆಗಳಿಗೆ ಮೈಸೂರಿನ ಜನತೆ ಭಾವನಾತ್ಮಕ ವಿದಾಯ ಹೇಳಿದರು. ರಸ್ತೆಯಲ್ಲಿದ್ದವರು ಕೈಬೀಸಿ ಆನೆಗಳಿಗೆ ಅಭಿನಂದನೆ ಸಲ್ಲಿಸಿ ಬೀಳ್ಕೊಟ್ಟರು.

2 ತಂಡದಲ್ಲಿ ಆಗಮಿಸಿದ್ದವು:
ಮೊದಲ ತಂಡದಲ್ಲಿ ಮತ್ತಿಗೋಡು ಆನೆ ಶಿಬಿರದ ಕ್ಯಾಪ್ಟನ್‌ ಅಭಿಮನ್ಯು, ಭೀಮ, ಏಕಲವ್ಯ, ರಾಂಪುರ ಆನೆ ಶಿಬಿರದ ರೋಹಿತ್‌, ದೊಡ್ಡಹರವೆ ಆನೆ ಶಿಬಿರದ ಲಕ್ಷ್ಮೀ, ವರಲಕ್ಷ್ಮೀ, ಕೊಡಗು ಜಿಲ್ಲೆಯ ದುಬಾರೆ ಶಿಬಿರದ ಧನಂಜಯ, ಗೋಪಿ, ಕಂಜನ್‌ ಅರಮನೆಗೆ ಬಂದಿದ್ದವು. ಎರಡನೇ ತಂಡದಲ್ಲಿ ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಿಂದ ಗಂಡಾನೆಗಳಾದ ಪ್ರಶಾಂತ, ಸುಗ್ರೀವ, ಮತ್ತಿಗೋಡು ಆನೆ ಶಿಬಿರದ ಮಹೇಂದ್ರ, ರಾಮಪುರ ಆನೆ ಶಿಬಿರದ ಹೆಣ್ಣಾನೆ ಹಿರಣ್ಯಾ, ಲಕ್ಷ್ಮೀ ಆನೆ ಆಗಮಿಸಿದ್ದವು.

ಆನೆಗಳನ್ನು ನೋಡಲು ಮುಗಿಬಿದ್ದರು
ಬೀಳ್ಕೊಡುಗೆ ದಿನವೂ ಗಜಪಡೆ ವೀಕ್ಷಿಸಲು ಪ್ರವಾಸಿಗರ ತಂಡ ಆನೆಗಳ ಬಳಿ ಸೇರಿತ್ತು. ಸೋಮವಾರ ಬೆಳಗ್ಗೆಯಿಂದಲೇ ಅಭಿಮನ್ಯು ಸೇರಿದಂತೆ ದಸರಾ ಆನೆಗಳನ್ನು ವೀಕ್ಷಿಸಲು ಸಾಕಷ್ಟು ಜನರು ಆಗಮಿಸಿದ್ದರು. ಕೆಲವರು ಆನೆಯ ಬಳಿ ನಿಂತು ಫೋಟೋ ತೆಗೆಸಿಕೊಂಡರು. ಬಳಿಕ ಆನೆಗಳ ಮಜ್ಜನ ನೋಡಿ ಸಂಭ್ರಮಿಸಿದರು. ಹಿರಿಯರು-ಕಿರಿಯರು ಎನ್ನದೆ ಸಾವಿರಾರು ಜನರು ಭೇಟಿ ನೀಡಿದ್ದರು. ಆನೆಗಳನ್ನು ಹತ್ತಿರದಿಂದ ನೋಡಿ ಖುಷಿಪಟ್ಟರು. ಕೆಲವರು ತಾವು ತಂದಿದ್ದ ಬಾಳೆಹಣ್ಣು, ಸಿಹಿ ತಿಂಡಿಗಳನ್ನು ಮಾವುತರ ಮೂಲಕ ಆನೆಗಳಿಗೆ ತಿನ್ನಿಸಿ ಸಂತಸಪಟ್ಟರು. ಕ್ಯಾಪ್ಟನ್‌ ಅಭಿಮನ್ಯು, ಹೆಚ್ಚು ಕ್ರೇಜ್‌ ಹೊಂದಿರುವ ಭೀಮನ ಬಳಿ ಹೆಚ್ಚು ಜನ ಸೇರಿದ್ದರು.

ಈ ಬಾರಿಯ ದಸರಾ ಮಹೋತ್ಸವ ತುಂಬಾ ಚೆನ್ನಾಗಿ ಆಗಿದೆ. ಡಿಸಿಎಫ್ ಸೇರಿದಂತೆ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಅಭಿಮನ್ಯು ಅಂಬಾರಿ ಹೊತ್ತು ಜಂಬೂ ಸವಾರಿ ಯಶಸ್ಸುಗೊಳಿಸಿದ್ದು, ಎಲ್ಲ ಆನೆಗಳೂ ಅತ್ಯುತ್ತಮವಾಗಿ ಸ್ಪಂದಿಸಿವೆ. ಅರ್ಜುನನ ಅನುಪಸ್ಥಿತಿ ಕಾಡದಂತೆ ಧನಂಜಯ ತನ್ನ ಕಾರ್ಯ ನಿಭಾಯಿಸಿದ್ದಾನೆ. ಧನಂಜಯ, ಮಹೇಂದ್ರನನ್ನು ಅಂಬಾರಿ ಆನೆಯಾಗಿ ಗುರುತಿಸಿದ್ದು, ಮುಂದಿನ ದಿನಗಳಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.
– ಮಾಲತಿಪ್ರಿಯ, ಅರಣ್ಯ ಸಂರಕ್ಷಣಾಧಿಕಾರಿ

*ಈ ಬಾರಿಯ ಜಂಬೂ ಸವಾರಿ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಎಲ್ಲಾ ಆನೆಗಳು, ಮಾವುತರು ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ¨ªಾರೆ. ಆನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಶಿಬಿರಗಳಿಗೆ ಬೀಳ್ಕೊಡಲಾಗಿದೆ.
– ಡಾ| ಐ.ಬಿ. ಪ್ರಭುಗೌಡ, ಡಿಸಿಎಫ್

ಟಾಪ್ ನ್ಯೂಸ್

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

Miraculous Escape: ವಾಟರ್ ಟ್ಯಾಂಕ್ ಮೈಮೇಲೆ ಬಿದ್ದರೂ ಬಚಾವಾದ ಮಹಿಳೆ

Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

BBK11: ಬಿಗ್‌ ಬಾಸ್‌ಗೆ ಸುದೀಪ್‌ ವಿದಾಯ; ಕಿಚ್ಚನ ನಿರ್ಧಾರಕ್ಕೆ ಅಸಲಿ ಕಾರಣ ಇದೇನಾ?

BBK11: ಬಿಗ್‌ ಬಾಸ್‌ಗೆ ಸುದೀಪ್‌ ವಿದಾಯ; ಕಿಚ್ಚನ ನಿರ್ಧಾರಕ್ಕೆ ಅಸಲಿ ಕಾರಣ ಇದೇನಾ?

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Cancer Rates: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police-ban

Mysuru: ಹಣ ಸುಲಿಗೆಗೆ ಯತ್ನ: ದೂರು ದಾಖಲು

Hunasuru-Acc

Hunasur: ಪಿಕಪ್ ವಾಹನ ಪಲ್ಟಿ: ಯುವಕ ಮೃತ್ಯು, 8 ಮಂದಿಗೆ ತೀವ್ರ ಗಾಯ 

Hunasuru: ಜ್ವರಕ್ಕೆ ಮದ್ದು ತರಲು ಹೋಗುತಿದ್ದವರಿಗೆ ಬೈಕ್ ಡಿಕ್ಕಿ… ಬಾಲಕಿ ಮೃತ್ಯು

Hunasuru: ಜ್ವರಕ್ಕೆ ಮದ್ದು ತರಲು ಹೋಗುತ್ತಿದ್ದ ತಂದೆ ಮಗಳಿಗೆ ಬೈಕ್ ಡಿಕ್ಕಿ, ಬಾಲಕಿ ಮೃತ್ಯು

DCM DKShivakumar

By Polls: ಚನ್ನಪಟ್ಟಣ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ: ಡಿ.ಕೆ. ಶಿವಕುಮಾರ್‌

Jamboo1

Mysuru Dasara: ವಿಶ್ವವಿಖ್ಯಾತ ಜಂಬೂಸವಾರಿ ಸಂಪನ್ನ; 5ನೇ ಬಾರಿ ಅಂಬಾರಿ ಹೊತ್ತ ಅಭಿಮನ್ಯು

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

1

Sullia: ಪಂಜ ಹೋಬಳಿ ಕೇಂದ್ರ ತಲುಪುವುದೇ ಕಷ್ಟ!

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

Miraculous Escape: ವಾಟರ್ ಟ್ಯಾಂಕ್ ಮೈಮೇಲೆ ಬಿದ್ದರೂ ಬಚಾವಾದ ಮಹಿಳೆ

Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್‌ಬಾಸ್‌ ವೇದಿಕೆಗೆ ಬರಲಿದ್ದಾರೆ ಕಮಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.