Basangouda Patil Yatnal: ಫಸ್ಟ್ ಲೈನ್ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ
Team Udayavani, Oct 14, 2024, 7:15 PM IST
ವಿಜಯಪುರ:ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬ ಸರ್ಕಾರಿ ನಿವೇಶನಗಳನ್ನು ವಾಪಸ್ ಕೊಡುವ ಮೂಲಕ ತಪ್ಪು ಮಾಡಿದಂತಲ್ಲವೇ? ಈ ಮೊದಲ ಸಾಲಿನ (ಫಸ್ಟ್ ಲೈನ್) ನಾಯಕರ ಎಲ್ಲ ಆಸ್ತಿ ಬಗ್ಗೆ ತನಿಖೆಯಾಗಬೇಕು ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒತ್ತಾಯಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ನಿವೇಶನಗಳನ್ನು ವಾಪಸ್ ಕೊಟ್ಟಿದ್ದರು. ಈಗ ಖರ್ಗೆ ಅವರೂ ನಿವೇಶನಗಳನ್ನು ವಾಪಸ್ ಕೊಟ್ಟಿದ್ದಾರೆ. ತಪ್ಪೇ ಮಾಡಿಲ್ಲ ಎಂದರೆ ವಾಪಸ್ ಕೊಟ್ಟಿದ್ದು ಏಕೆ? ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಕೂಡ ಖರ್ಗೆ ತಪ್ಪೇ ಮಾಡಿಲ್ಲ ಮತ್ತು ಅವರು ನ್ಯಾಯಯುತವಾಗಿ ಪಡೆದಿದ್ದಾರೆ ಎಂದು ಹೇಳುತ್ತಿದ್ದರು. ಏಕೆ ಭೂಮಿ ವಾಪಸ್ ಕೊಟ್ಟರು. ಎಲ್ಲ ಫಸ್ಟ್ ಲೈನ್ ನಾಯಕರ ಆಸ್ತಿ ಬಗ್ಗೆ ತನಿಖೆ ಮಾಡಬೇಕು. ಒಬ್ಬರಲ್ಲ, ಬಹಳ ಜನರು ಸರ್ಕಾರಿ ಭೂಮಿ ಗುಳುಂ ಮಾಡಿದ್ದಾರೆ. ಅಲ್ಲದೇ, ವಕ್ಫ್ ಆಸ್ತಿಯನ್ನೂ ಗುಳುಂ ಮಾಡಿದ್ದಾರೆ ಎಂದರು.
ಕಾಂಗ್ರೆಸ್ ಜಿಹಾದಿ ಪಕ್ಷ: ಯತ್ನಾಳ
ವಿಜಯಪುರ: ಮಲ್ಲಿಕಾರ್ಜುನ ಖರ್ಗೆ ಹಿರಿಯ ರಾಜಕಾರಣಿ. ಆದರೆ, ದಿನದಿಂದ ದಿನಕ್ಕೆ ಅವರು ಹಾದಿ ತಪ್ಪಿ ಮಾತನಾಡುತ್ತಿದ್ದಾರೆ. ಬಿಜೆಪಿ ಎಂದರೆ ಭಯೋತ್ಪಾದಕರ ಪಕ್ಷ ಎಂದಿದ್ದಾರೆ. ನಾನು ಕಾಂಗ್ರೆಸ್ ಜಿಹಾದಿಗಳ ಪಕ್ಷ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ದೇಶದಲ್ಲಿ ವಕ್ಫ್ ಎಂಬ ಕರಾಳ ಶಾಸನ ಇದೆ. ಈ ಕಾನೂನಿನ ಬಗ್ಗೆ ಸುಪ್ರೀಂ ಕೋರ್ಟ್ಗೂ ಅ ಧಿಕಾರವಿಲ್ಲ. ಇದು ಪೂರ್ತಿ ರದ್ದಾಗಬೇಕು. ಈ ಕಾಯ್ದೆಗೆ ಮುಂದಿನ ಅಧಿ ವೇಶನದಲ್ಲಿ ನರೇಂದ್ರ ಮೋದಿ ತಿದ್ದುಪಡಿ ತರಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್
Vijayapura: ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಜಾಮೀನು; ಅದ್ದೂರಿ ಸ್ವಾಗತ, ಸಮ್ಮಾನ!
Vijayapura: ಸಿ.ಟಿ.ರವಿ ಪ್ರಕರಣ ಹಿಂಪಡೆದ ಬಗ್ಗೆ ಬಿಜೆಪಿಯವರು ಯಾಕೆ ಹೇಳಲ್ಲ: ಎಂಬಿ ಪಾಟೀಲ್
Vijayapura: ಸಿಎಂ ಕುರ್ಚಿಯಲ್ಲಿ ಟಗರು ಕುಂತವ್ರೆ, ಅಲ್ಲಾಡಿಸಲು ಅಷ್ಟು ಸುಲಭನಾ..? ಜಮೀರ್
Vijayapura: ಧೂಳಖೇಡ್ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.