India vs Canada; ಮತ್ತೆ ಕಾಲು ಕೆರೆದ ಕೆನಡಾಕ್ಕೆ ಭಾರತದ ಛಡಿ!
ಭಾರತೀಯ ರಾಯಭಾರಿ ವಾಪಸ್; 6 ಕೆನಡಾ ರಾಜತಾಂತ್ರಿಕರ ಉಚ್ಚಾಟನೆ
Team Udayavani, Oct 15, 2024, 7:00 AM IST
ಹೊಸದಿಲ್ಲಿ: ಖಲಿಸ್ಥಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಭಾರತದ ರಾಯಭಾರಿ ಹಾಗೂ ಇತರ ರಾಜತಾಂತ್ರಿಕ ಅಧಿಕಾರಿಗಳ ಕೈವಾಡ ಇದೆ ಎಂಬ ಕೆನಡಾದ ಹೊಸ ಆರೋಪ ಭಾರತವನ್ನು ತೀವ್ರವಾಗಿ ಕೆರಳಿಸಿದ್ದು, ಕೆನಡಾದಲ್ಲಿರುವ ತನ್ನ ರಾಯಭಾರಿಯನ್ನು ತತ್ಕ್ಷಣ ಹಿಂದಕ್ಕೆ ಕರೆಯಿಸಿಕೊಳ್ಳಲು ತೀರ್ಮಾನಿಸಿದೆ. ಜತೆಗೆ ಹೊಸದಿಲ್ಲಿಯಲ್ಲಿರುವ ಕೆನಡಾದ ಆರು ಮಂದಿ ರಾಜತಾಂತ್ರಿಕರಿಗೆ ಅ. 19ರ ಮಧ್ಯರಾತ್ರಿಯೊಳಗೆ ದೇಶ ತೊರೆಯುವಂತೆ ಆದೇಶಿಸಿದೆ. ಈ ಮೂಲಕ ಕಾಲು ಕೆರೆದು ಜಗಳಕ್ಕೆ ಬರುತ್ತಿರುವ ಜಸ್ಟಿನ್ ಟ್ರಾಡೊ ಸರಕಾರದ ವಿರುದ್ಧ ಉಗ್ರ ಕ್ರಮ ತೆಗೆದುಕೊಂಡಿದೆ.
ಕೆನಡಾ ಮತ್ತೆ ಎತ್ತಿರುವ ತಗಾದೆಗೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಕೆನಡಾ ಮಾಡುತ್ತಿರುವ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ ಎಂದಿದೆ. ಕಳೆದ ವರ್ಷ ಕೆನಡಾದಲ್ಲಿ ನಡೆದ ನಿಜ್ಜರ್ ಕೊಲೆ ಪ್ರಕರಣದಲ್ಲಿ ಕೆನಡಾ ದಲ್ಲಿರುವ ಭಾರ ತೀಯ ರಾಜತಾಂತ್ರಿಕ ಅಧಿಕಾರಿ, ಸಿಬಂದಿ ಕೈವಾಡವಿದ್ದು, ಅವರ ವಿರುದ್ಧ ತನಿಖೆ ಕೈಗೊಳ್ಳ ಬೇಕು ಎಂದು ಕೆನಡಾ ಹೇಳಿದೆ.
ಭಾರತದ ರಾಯಭಾರಿ ಹಿಂದಕ್ಕೆ
ಕೆನಡಾದ ನಡೆಗೆ ಭಾರೀ ಆಕ್ರೋಶ ವ್ಯಕ್ತಪಡಿಸಿರುವ ಭಾರತ ಸರಕಾರವು ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಸಂಜಯ್ ಕುಮಾರ್ ವರ್ಮಾ ಅವರನ್ನು ಮರಳಿ ಕರೆಸಿಕೊಳ್ಳಲು ತೀರ್ಮಾನಿಸಿದೆ. ಕೆನಡಾ ಸರಕಾರವು ಗುರಿಯಾಗಿಸಿಕೊಂಡಿರುವ ಮುಖ್ಯ ರಾಯಭಾರಿ ಸಂಜಯ್ ವರ್ಮಾ ಕೆನಡಾ ಸಹಿತ ಹಲವು ದೇಶಗಳಲ್ಲಿ ಸುಮಾರು 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಇಷ್ಟು ವರ್ಷಗಳ ಕಾಲ ಅವರು ಯಾವುದೇ ಅಕ್ರಮಗಳನ್ನು ಎಸಗಿಲ್ಲ. ಅಂಥವರ ವಿರುದ್ಧ ಕೆನಡಾ ರಾಜಕೀಯ ದುರುದ್ದೇಶದಿಂದ ಆರೋಪ ಹೊರಿಸಿರುವುದು ಸಮರ್ಥನೀಯವಲ್ಲ ಎಂದು ಭಾರತ ಹೇಳಿದೆ.
ಕೆನಡಾ ಸರಕಾರದ ಮೇಲೆ ನಂಬಿಕೆಯಿಲ್ಲ
ನಿಜ್ಜರ್ ಹತ್ಯೆಗೆ ಸಂಬಂಧಿಸಿ ಕೆನಡಾ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಭಾರತ ಸರಕಾರವು, “ನಮಗೆ ಕೆನಡಾದಲ್ಲಿ ಆಡಳಿತ ನಡೆಸುತ್ತಿರುವ ಸರಕಾರದ ಮೇಲೆ ನಂಬಿಕೆ ಇಲ್ಲ. ಯಾವುದೇ ಹೊಸ ಸಾಕ್ಷ್ಯಗಳಿಲ್ಲದೆ ಭಾರತದ ಮೇಲೆ ಆರೋಪ ಮಾಡುವ ಕೆಲಸವನ್ನು ಅದು ಮಾಡುತ್ತಿದೆ’ ಎಂದಿದೆ.
6 ಕೆನಡಾ ರಾಜತಾಂತ್ರಿಕರ ಉಚ್ಚಾಟನೆ
ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಭಾರತ ಸರಕಾರವು ಭಾರತದಲ್ಲಿರುವ ಆರು ಕೆನಡಾ ರಾಜತಾಂತ್ರಿಕರನ್ನು ಉಚ್ಚಾಟಿಸಿದ್ದು, ಅ. 19ರ ಮಧ್ಯರಾತ್ರಿಯೊಳಗೆ ದೇಶ ತೊರೆಯುವಂತೆ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ
Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು
Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!
Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ
Baba Siddique Case: ಸಲ್ಮಾನ್ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್ ಗ್ಯಾಂಗ್!
MUST WATCH
ಹೊಸ ಸೇರ್ಪಡೆ
Sullia: ಪಂಜ ಹೋಬಳಿ ಕೇಂದ್ರ ತಲುಪುವುದೇ ಕಷ್ಟ!
Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ
B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತೇವೆ
Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…
Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್ಬಾಸ್ ವೇದಿಕೆಗೆ ಬರಲಿದ್ದಾರೆ ಕಮಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.