Hubli case ವಾಪಸ್‌; ಬೀದಿಗಿಳಿದ ಬಿಜೆಪಿ: ರಾಜ್ಯಪಾಲರಿಗೆ ದೂರು


Team Udayavani, Oct 15, 2024, 6:00 AM IST

1-bjjj

ಬೆಂಗಳೂರು: ಹಳೇ ಹುಬ್ಬಳ್ಳಿಯ ಪೊಲೀಸ್‌ ಠಾಣೆ ಮೇಲಿನ ದಾಳಿ, ಗಲಭೆ ಪ್ರಕರಣವನ್ನು ವಾಪಸ್‌ ಪಡೆದಿರುವ ರಾಜ್ಯ ಸರಕಾರದ ನಿರ್ಧಾರದ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ನಡೆಸಿದೆ. ಪ್ರತಿಭಟನೆಯ ಬಳಿಕ ಬಿಜೆಪಿ ಶಾಸಕರು, ಮುಖಂಡರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರನ್ನು ಭೇಟಿ ಮಾಡಿ ಈ ಸಂಬಂಧ ದೂರು ಸಲ್ಲಿಸಲಾಗಿದೆ.

ಹುಬ್ಬಳ್ಳಿ ಗಲಭೆ ಆರೋಪಿಗಳ ವಿರುದ್ಧದ ಪ್ರಕರಣವನ್ನು ವಾಪಸ್‌ ಪಡೆಯಲು ನಿರ್ಧರಿಸಿರುವ ರಾಜ್ಯ ಸರಕಾರದ ನಿರ್ಧಾರ ಖಂಡಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.

ಬಳಿಕ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಬಿಜೆಪಿ, ಪ್ರಕರಣದ ಆರೋಪಿ ಗಳ ವಿರುದ್ಧದ ಅಭಿ ಯೋಜನೆ ರದ್ದುಪಡಿಸಲು ಹೊರಟಿರುವುದು ನ್ಯಾಯಯುತವಲ್ಲ. ದೇಶದ್ರೋಹಿ ಚಟುವಟಿಕೆ, ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳನ್ನು ಕಾಂಗ್ರೆಸ್‌ ಸರಕಾರ ಮುಚ್ಚಿಹಾಕಿದೆ.

ರೈತ ಹೋರಾಟ, ಕನ್ನಡ ಹೋರಾಟಗಳಿಗೆ ಇದನ್ನು ಹೋಲಿಸಬಾರದು. ಸಿಎಂ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡುತ್ತಿದ್ದು, ಮುಸ್ಲಿಮರು ತನ್ನ ಪರವಾಗಿದ್ದಾರೆ ಎಂದು ತೋರಿಸಲು ಹೀಗೆ ಮಾಡಿದ್ದಾರೆ ಎಂಬಿತ್ಯಾದಿ ಅಂಶಗಳುಳ್ಳ ದೂರನ್ನು ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ವಿಪಕ್ಷ ನಾಯಕರಾದ ಆರ್‌. ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ| ಸಿ.ಎನ್‌. ಅಶ್ವತ್ಥನಾರಾಯಣ, ಶಾಸಕ ಎಸ್‌.ಆರ್‌. ವಿಶ್ವನಾಥ್‌, ವಿಧಾನಪರಿಷತ್‌ ಸದಸ್ಯರಾದ ಎನ್‌. ರವಿಕುಮಾರ್‌, ಸಿ.ಟಿ. ರವಿ ಮತ್ತು ಪಕ್ಷದ ಇತರ ಮುಖಂಡರು ಉಪಸ್ಥಿತರಿದ್ದರು.

ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ ಎನ್ನುವ ಕಾಂಗ್ರೆಸ್‌ ನಾಯಕರೆಲ್ಲರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳೇ ಆಗಿದ್ದಾರೆ. ಪೂರ್ಣಾವಧಿ ಅಧಿಕಾರ ನಡೆಸುವ ವಿಶ್ವಾಸವಿದ್ದರೆ ಸಿದ್ದರಾಮಯ್ಯನವರೇ 5 ವರ್ಷ ಮುಖ್ಯಮಂತ್ರಿ ಎಂದು ನಿಮ್ಮ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಂದ ಹೇಳಿಸಿ ನೋಡೋಣ.
– ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಕರ್ನಾಟಕದಲ್ಲಿ ಈಗ ಬಿಗ್‌ ಬಾಸ್‌ ಧಾರಾವಾಹಿ ನಡೆಯುತ್ತಿದೆ. ಕಾಂಗ್ರೆಸ್‌ ಸರಕಾರಕ್ಕೆ ಭಯೋತ್ಪಾದಕರೇ ಬಿಗ್‌ ಬಾಸ್‌. ಅವರ ಸೂಚನೆಯಂತೆ ಸರಕಾರ ನಡೆದುಕೊಳ್ಳುತ್ತಿದೆ. ಮತ ಬ್ಯಾಂಕ್‌ ಹಾಗೂ ಹಗರಣಗಳನ್ನು ಮರೆಮಾಚಲು ಕಾಂಗ್ರೆಸ್‌ ಸರಕಾರ ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದಿದೆ.
– ಆರ್‌. ಅಶೋಕ್‌,ವಿಧಾನಸಭೆ ವಿಪಕ್ಷ ನಾಯಕ

ಬಿಜೆಪಿಯವರು ಆಡಳಿತದಲ್ಲಿ ಇದ್ದಾಗಲೂ ಇಂತಹ ಸಾಕಷ್ಟು ಪ್ರಕರಣಗಳನ್ನು ಹಿಂಪಡೆದಿದ್ದಾರೆ. ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿಯೂ ಇದನ್ನು ಮಾಡಿದ್ದಾರೆ. ಹುಬ್ಬಳ್ಳಿ ಪ್ರಕರಣ ಮಾತ್ರ ವಾಪಸ್‌ ಪಡೆದಿಲ್ಲ. ರೈತರು, ವಿದ್ಯಾರ್ಥಿಗಳು, ಸಾಮಾನ್ಯ ಜನರು ಕೈಗೊಂಡಿದ್ದ ಪ್ರತಿಭಟನೆಯ ಬಹುತೇಕ ಎಲ್ಲ ಪ್ರಕರಣಗಳನ್ನೂ ಹಿಂಪಡೆಯಲಾಗಿದೆ.
– ಡಾ| ಪರಮೇಶ್ವರ, ಗೃಹ ಸಚಿವ

ಟಾಪ್ ನ್ಯೂಸ್

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Cancer Rates: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!

Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!

2

Bilichukki Hallihakki kannada Movie: ಇದು ಹಳ್ಳಿ ಹಕ್ಕಿಯ ಬಿಳಿಚುಕ್ಕಿ

Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ

Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ

salman

Baba Siddique Case: ಸಲ್ಮಾನ್‌ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್‌ ಗ್ಯಾಂಗ್‌!

Chinnaswamy

India-New Zeland Test: ಚಿನ್ನಸ್ವಾಮಿ ಮೈದಾನಕ್ಕೆ 25ನೇ ಟೆಸ್ಟ್‌ ಪಂದ್ಯದ ಗರಿಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam

Post Graduate Course; ಕಳೆದ ವರ್ಷದಷ್ಟೇ ಶುಲ್ಕ: ಉನ್ನತ ಶಿಕ್ಷಣ ಇಲಾಖೆ

1-dasasasa

Mysuru Dasara; ವಹಿವಾಟು ದಾಖಲೆ: 500 ಕೋಟಿಗೂ ಅಧಿಕ!

siddaramaiah

Siddaramaiah; ಸಿಎಂಗೆ ಮುಡಾ ಬಳಿಕ ಅರ್ಕಾವತಿ ಕಂಟಕ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

BY Vijayendra: 5 ವರ್ಷ ಸಿಎಂ ಎಂದು ಖರ್ಗೆ ಹೇಳಲಿ

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

Manjunath Bhandary: ಬಿಜೆಪಿ-ಸಂಘ ಪರಿವಾರದವರೂ ಭೂಮಿ ಹಿಂದಿರುಗಿಸುವರೇ?

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ

Cancer Rates: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Arrested: ವೃದ್ಧ ದಂಪತಿ ಮನೆಗೆ ನುಗ್ಗಿ ಒಡವೆ, ನಗದು ದರೋಡೆ; ಮೂವರ ಬಂಧನ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Bengaluru: ಮದ್ಯದ ಬಾಟಲಿಯಿಂದ ಹೊಡೆದು ಸ್ನೇಹಿತನ ಹತ್ಯೆ

Bengaluru: ಕಾಲೇಜಲ್ಲೇ ಮಹಿಳಾ ಪ್ರೊಫೆಸರ್‌ ಆತ್ಮಹತ್ಯೆಗೆ ಯತ್ನ

Bengaluru: ಕಾಲೇಜಲ್ಲೇ ಮಹಿಳಾ ಪ್ರೊಫೆಸರ್‌ ಆತ್ಮಹತ್ಯೆಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.