BJP; ಬಂಟ್ವಾಳ, ಉಡುಪಿಯಲ್ಲಿ ಇಂದು ಜನಪ್ರತಿನಿಧಿಗಳ ಸಮಾವೇಶ: ವಿಜಯೇಂದ್ರ, ಅಶೋಕ್ ಭಾಗಿ
Team Udayavani, Oct 15, 2024, 6:10 AM IST
ಬಂಟ್ವಾಳ: ದ.ಕ.ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಂಟ್ವಾಳ ಹಾಗೂ ಉಡುಪಿಯಲ್ಲಿ ಅ. 15ರಂದು ನಡೆಯುವ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಛಲವಾದಿ ನಾರಾಯಣ ಸ್ವಾಮಿ ಅವರು ಸೋಮವಾರ ಜಿಲ್ಲೆಗೆ ಆಗಮಿಸಿದ್ದು, ಅವರು ಬಂಟ್ವಾಳ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರ ಗಂಜಿಮಠದ ಒಡೂxರು ಫಾಮ್ಸ್ìನಲ್ಲಿ ವಾಸ್ತವ್ಯ ಹೂಡಿದ್ದಾರೆ.
ದ.ಕ.ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ಕುಮಾರ್ ಪುತ್ತೂರು ಪರ ಅ. 15ರಂದು ಬೆಳಗ್ಗೆ 11ಕ್ಕೆ ಬಿ.ಸಿ.ರೋಡು ಬಳಿಯ ತುಂಬೆ ವಳವೂರಿನಲ್ಲಿರುವ ಬಂಟವಾಳದ ಬಂಟರ ಭವನದಲ್ಲಿ ದ.ಕ.ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ ನಡೆಯಲಿದ್ದು, ಸಂಜೆ 3.30ಕ್ಕೆ ಉಡುಪಿ ಅಂಬಾಗಿಲಿನ ಅಮೃತ್ ಗಾರ್ಡನ್ನಲ್ಲಿ ಉಡುಪಿ ಜಿಲ್ಲಾ ಜನಪ್ರತಿನಿಧಿಗಳ ಸಮಾವೇಶ ನಡೆಯಲಿದೆ. ಬಳಿಕ ರಾಜ್ಯಾಧ್ಯಕ್ಷರು ಸಂಜೆ 6ಕ್ಕೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ಹೆಬ್ರಿ, ಆಗುಂಬೆ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳಿದ್ದಾರೆ.
ವಿಪಕ್ಷ ನಾಯಕರು ಭಾಗಿ
ಸಮಾವೇಶದಲ್ಲಿ ರಾಜ್ಯಾಧ್ಯಕ್ಷರ ಜತೆಗೆ ವಿಧಾನಸಭಾ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಇತರ ರಾಜ್ಯ ಮಟ್ಟದ ನಾಯಕರು, ಉಭಯ ಜಿಲ್ಲೆಗಳ ಸಂಸದರು, ಶಾಸಕರು, ಪಕ್ಷದ ಜಿಲ್ಲಾಧ್ಯಕ್ಷರು ಸಹಿತ ಇತರ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.