SCO Meet: ಶಾಂಘೈ ಶೃಂಗಸಭೆ: ಇಂದು ಪಾಕಿಸ್ಥಾನಕ್ಕೆ ವಿದೇಶಾಂಗ ಸಚಿವ ಜೈಶಂಕರ್
ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಜತೆ ಔತಣಕೂಟದಲ್ಲಿ ಭಾಗಿ, ದ್ವಿಪಕ್ಷೀಯ ಮಾತುಕತೆ ಇಲ್ಲ
Team Udayavani, Oct 15, 2024, 7:36 AM IST
ಹೊಸದಿಲ್ಲಿ: ಪಾಕಿಸ್ಥಾನದ ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಶೃಂಗಸಭೆಗಾಗಿ ವಿದೇಶಾಂಗ ಸಚಿವ ಜೈಶಂಕರ್ ಮಂಗಳವಾರ ಸಂಜೆ ಪಾಕಿಸ್ಥಾನಕ್ಕೆ ತೆರಳಲಿದ್ದಾರೆ.
ಬುಧವಾರ ಶೃಂಗ ಆರಂಭವಾಗಲಿದ್ದು, ಮಂಗಳವಾರ ರಾತ್ರಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಆಯೋಜಿಸಿರುವ ಔತಣಕೂಟದಲ್ಲಿ ಜೈಶಂಕರ್ ಪಾಲ್ಗೊಳ್ಳುವ ಸಾಧ್ಯತೆ ಇದೆ. ಶೃಂಗದಲ್ಲಿ ಭಾಗಿಯಾದರೂ ಭಾರತ-ಪಾಕ್ ನಡುವೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆಯುವುದಿಲ್ಲ ಎಂದು ಈಗಾಗಲೇ ಅವರು ಸ್ಪಷ್ಟ ಪಡಿಸಿದ್ದಾರೆ. ಪಾಕ್ ವಿದೇಶಾಂಗ ಇಲಾಖೆ ಕೂಡ, “ಜೈಶಂಕರ್ ಅವರು ಇಲ್ಲಿ ಬಹುಪಕ್ಷೀಯ ಸಭೆಯಲ್ಲಿ ಭಾಗಿಯಾಗಲು ಆಗಮಿಸುತ್ತಿದ್ದಾರೆ. ಭಾರತ-ಪಾಕ್ ಸಂಬಂಧದ ಬಗ್ಗೆ ಮಾತನಾಡಲು ಅಲ್ಲ’ ಎಂದಿದೆ.
ಪಾಕ್ ಲಾಕ್ಡೌನ್: ಶಾಲೆಗಳಿಗೆ ರಜೆ, ಮದುವೆಗೂ ನಿರ್ಬಂಧ, 2 ನಗರಗಳು ಸೇನೆಯ ನಿಯಂತ್ರಣಕ್ಕೆ!
ಶೃಂಗದ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಇಸ್ಲಾಮಾಬಾದ್ನಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, 2 ದಿನ ಲಾಕ್ಡೌನ್ ಮಾಡಲಾಗಿದೆ. ಶಾಲಾ-ಕಾಲೇಜು, ರೆಸ್ಟೋರೆಂಟ್ ಸೇರಿ ಸಾರ್ವಜನಿಕ ಸ್ಥಳಗಳನ್ನು ಮುಚ್ಚಲಾಗಿದೆ.
12ರಿಂದ 16ರವರೆಗೆ ಮದುವೆ ಹಾಲ್ಗಳು, ಕೆಫೆ, ಸ್ನೂಕರ್ ಕ್ಲಬ್ಗಳಿಗೆ ನಿರ್ಬಂಧ ಹೇರಲಾಗಿದೆ. ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ 14ರಿಂದ 16ರವ ರೆಗೆ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಹೆಚ್ಚುವರಿ ಭದ್ರತೆಗೆಂದು ಎರಡೂ ನಗರಗಳಲ್ಲಿ 10,000 ಯೋಧರನ್ನು ನಿಯೋಜಿಸಲಾಗಿದೆ. ರಾವಲ್ಪಿಂಡಿ, ಇಸ್ಲಾ ಮಾಬಾದ್ನ ಭದ್ರತೆಯನ್ನು ಸಂಪೂರ್ಣವಾಗಿ ಸೇನೆಗೆ ಹಸ್ತಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Air Pollution: ಜ.1ರ ವರೆಗೆ ದೆಹಲಿಯಲ್ಲಿ ಪಟಾಕಿ ಮಾರಾಟ, ಬಳಕೆ, ಉತ್ಪಾದನೆಗೆ ನಿಷೇಧ
Cancer Cases: ದೇಶದಲ್ಲಿ ಕ್ಯಾನ್ಸರ್ ಕೇಸ್ ಹೆಚ್ಚಳ… ಬಾಯಿ, ಸ್ತನ ಕ್ಯಾನ್ಸರ್ ಗಳೇ ಹೆಚ್ಚು
Election Date: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಇಂದು ಚುನಾವಣೆ ದಿನಾಂಕ ಘೋಷಣೆ!
Security: ಬಾಬಾ ಸಿದ್ದಿಕಿ ಹತ್ಯೆ ಬೆನ್ನಲ್ಲೇ ಸಲ್ಮಾನ್ ಖಾನ್ ಗೆ ಹೆಚ್ಚುವರಿ ಭದ್ರತೆ
Baba Siddique Case: ಸಲ್ಮಾನ್ಗೆ ನೆರವಾಗುವ ಎಲ್ಲರಿಗೂ ಇದೇ ಗತಿ: ಬಿಷ್ಣೋಯ್ ಗ್ಯಾಂಗ್!
MUST WATCH
ಹೊಸ ಸೇರ್ಪಡೆ
Sullia: ಪಂಜ ಹೋಬಳಿ ಕೇಂದ್ರ ತಲುಪುವುದೇ ಕಷ್ಟ!
Kalaburagi: ರಾಜ್ಯದಲ್ಲಿ ಕದ್ದ ಮಾಲು ವಾಪಸ್ಸು ಕೊಡುವ ಟ್ರೆಂಡ್ ಶುರುವಾಗಿದೆ… ಸಿ.ಟಿ ರವಿ
B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತೇವೆ
Miraculous Escape: ಮೈಮೇಲೆ ವಾಟರ್ ಟ್ಯಾಂಕ್ ಬಿದ್ದರೂ ಮಹಿಳೆ ಪಾರಾಗಿದ್ದೇ ಪವಾಡ…
Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್ಬಾಸ್ ವೇದಿಕೆಗೆ ಬರಲಿದ್ದಾರೆ ಕಮಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.