Bangalore University: ಕಸ ಎಸೆಯುವ ಸ್ಥಳವಾದ ಬೆಂ.ವಿವಿ ಕ್ಯಾಂಪಸ್‌!


Team Udayavani, Oct 15, 2024, 9:49 AM IST

3

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ನ್ಯಾಕ್‌ ಎ++ ಪಡೆದಿರುವ ಬೆಂಗಳೂರು ವಿವಿಯ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಸಾರ್ವಜನಿಕರು ಬಿಸಾಡುವ ಕಸ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಇದನ್ನು ತಡೆಯಲು ವಿವಿ ಎಷ್ಟೇ ಕ್ರಮಗಳನ್ನೂ ಕೈಗೊಂಡರೂ ಪ್ರಯೋಜನವಾಗುತ್ತಿಲ್ಲ.

ಬೆಂಗಳೂರು ವಿವಿಯು ಅತ್ಯಂತ ಹಳೆಯ ವಿವಿಯಾಗಿದ್ದು, 1 ಸಾವಿರ ಎಕರೆಗಿಂತ ಹೆಚ್ಚು ವಿಸ್ತೀರ್ಣವಿದೆ. ಕ್ಯಾಂಪಸ್‌ನ ಒಳಗಡೆಯಿಂದ ಹಾದು ಹೋಗುವ ರಸ್ತೆಗಳಲ್ಲಿ ಬೈಕ್‌, ಕಾರುಗಳಲ್ಲಿ ಸಂಚರಿಸುವ ಹಲವರು ಮತ್ತು ವಾಯು ವಿಹಾರಕ್ಕೆಂದು ಬರುವ ಅನೇಕ ಮಂದಿ ಜ್ಞಾನ ದೇಗುಲವಾಗಿರುವ ಬೆಂಗಳೂರು ವಿವಿ ಕ್ಯಾಂಪಸ್‌ ಅನ್ನು ಕಸದ ತೊಟ್ಟಿಯೆಂದು ಭಾವಿಸಿದಂತಿದೆ!

ಬೆಂಗಳೂರು ವಿವಿಯ ಜ್ಞಾನಭಾರತಿ ರೋಡ್‌ ಆರ್ಚ್‌ನಿಂದ ಉಲ್ಲಾಳು ಸಿಗ್ನಲ್‌ ತನಕದ ರಸ್ತೆ, ಮರಿಯಪ್ಪನ ಪಾಳ್ಯದಿಂದ ಜ್ಞಾನಭಾರತಿ ಮೆಟ್ರೋ ಸ್ಟೇಷನ್‌ ನಿಲ್ದಾಣದ ತನಕದ ರಸ್ತೆ, ವಿವಿ ಕೇಂದ್ರ ಕಚೇರಿಯಿಂದ ಗಾಂಧಿ ಅಧ್ಯಯನ ಕೇಂದ್ರದವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಪ್ರತಿದಿನ ಕಸದ ರಾಶಿಯೇ ನಿರ್ಮಾಣವಾಗುತ್ತಿದೆ. ಫ‌ುಟ್‌ಪಾತ್‌ ಮೇಲೆಯೂ ಕಸದ ಚೀಲಗಳು ಬಿದ್ದಿರುತ್ತವೆ. ಈ ಕಸವನ್ನು ನಿರ್ವಹಣೆ ಮಾಡುವ ಯತ್ನದಲ್ಲಿ ವಿವಿ ಹೈರಾಣಾಗಿದೆ.

ಮನೆಯ ಕಸವನ್ನು ತೆಗೆದುಕೊಂಡು ಬರುವ ಜನರು ಕ್ಯಾಂಪಸ್‌ ಪ್ರವೇಶಿಸಿದ ಬಳಿಕ ಮೆಲ್ಲನೆ ಕಸವನ್ನು ರಸ್ತೆಯ ಬದಿಗೆ ಎಸೆದು ತಮ್ಮ ಪ್ರಯಣವನ್ನು ಮುಂದುವರಿಸುತ್ತಾರೆ. ಕಸ ಎಸೆಯುವುದನ್ನು ತಡೆಯಲು ಬೃಹತ್‌ ಬೆಂಗಳೂರ ಮಹಾನಗರ ಪಾಲಿಕೆ ಮಾರ್ಷಲ್‌ಗ‌ಳನ್ನು ಹಾಗೂ ವಿವಿ ಭದ್ರತಾ ಸಿಬ್ಬಂದಿಯನ್ನು ನೇಮಿಸಿದರೂ ಪ್ರಯೋಜನವಾಗಿಲ್ಲ. ಕಸ ಎಸೆದರೆ ದಂಡ, ಶಿಕ್ಷಾರ್ಹ ಅಪರಾಧ ಎಂದು ಬೋರ್ಡ್‌ ಹಾಕಿದ್ದರೂ ಕಸ ಎಸೆಯುತ್ತಲೇ ಇದ್ದಾರೆ.

ಬೋರ್ಡ್‌ ಹಾಕಿದರೂ ಪ್ರಯೋಜವಿಲ್ಲ: ವಿವಿ ಭದ್ರತಾ ಸಿಬ್ಬಂದಿ ಇಲ್ಲದ ಜಾಗ ಹುಡುಕಿ ರಪ್ಪನೆ ಕಸ ಎಸೆದು ಪರಾರಿ ಆಗುತ್ತಾರೆ. ಪ್ರತಿ ಕಡೆಯೂ ಕಸ ಎಸೆಯದಂತೆ ಭದ್ರತಾ ಸಿಬ್ಬಂದಿ ನೇಮಿಸಲು ಸಾಧ್ಯವಿಲ್ಲ. “ನಾವು ನಮ್ಮ ಕ್ಯಾಂಪಸ್‌ನಲ್ಲಿ ಕಸ ಎಸೆಯಬೇಡಿ ಎಂದು ಬೋರ್ಡ್‌ ಹಾಕಿದರೂ ಪ್ರಯೋಜನವಾಗಿಲ್ಲ. ಕಸ ಎಲ್ಲಿ ವಿಲೇವಾರಿ ಮಾಡಬೇಕು ಎಂಬ ಪ್ರಜ್ಞೆ ಜನರಿಗಿಲ್ಲ ಎಂದಾದರೆ ಅವರು ಎಷ್ಟು ಶಿಕ್ಷಣ ಪಡೆದರೆ ಏನು ಪ್ರಯೋಜನ’ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯಕರ್‌ ಶೆಟ್ಟಿ ಬೇಸರ ವ್ಯಕ್ತಪಡಿಸುತ್ತಾರೆ.

ಕ್ಯಾಂಪಸ್‌ನಲ್ಲಿ ಕಸದ ವಾಸನೆ: ಕಸ ವಾಸನೆ ಬರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಓಡಾಟಕ್ಕೆ ಸಮಸ್ಯೆ ಆಗುವುದನ್ನು ಮನಗಂಡು ಎನ್‌ ಎಸ್‌ಎಸ್‌ ಸ್ವಯಂಸೇವಕರು ಆಗಾಗ ಕಸ ತೆಗೆದು ಕ್ಯಾಂಪಸ್‌ ಶುಚಿಗೊಳಿಸುವ ಪ್ರಯತ್ನ ನಡೆಸುತ್ತಾರೆ. ಆದರೂ ಸಾರ್ವಜನಿಕರು ಕಸ ಎಸೆಯುವುದು ತಪ್ಪುತ್ತಿಲ್ಲ. ನಮಗೂ ಕಸ ಎಸೆ ಯುವುದನ್ನು ತಡೆಯುವ ದಾರಿ ಗೋಚರಿಸುತ್ತಿಲ್ಲ ಎಂದು ವಿವಿ ಕುಲಪತಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಾರೆ.

ನಮ್ಮ ವಿವಿ ಕ್ಯಾಂಪಸಿನಲ್ಲಿ ಹೊರಗಿನಿಂದ ಬಂದು ಅನಾಗರಿಕರಂತೆ ಕಸ ಬಿಸಾಡುವುದು ಕಂಡಾಗ ನಮಗೆ ಬಹಳ ಬೇಸರವಾಗುತ್ತದೆ. ಜನರು ಕನಿಷ್ಠ ನಾಗರಿಕ ಪ್ರಜ್ಞೆ ಮೈಗೂಡಿಸಿಕೊಳ್ಳದಿದ್ದರೆ ಹೇಗೆ, ಇಷ್ಟೊಂದು ದೊಡ್ಡ ಕ್ಯಾಂಪಸ್‌ನಲ್ಲಿ ಕಸ ಬಿಸಾಕುವುದನ್ನು ತಡೆಯಲು ಏನು ಕ್ರಮ ಕೈಗೊಳ್ಳಬಹುದು ಎಂಬುದೇ ನಮಗೆ ತೋಚುತ್ತಿಲ್ಲ. -ಡಾ.ಜಯಕರ್‌ ಶೆಟ್ಟಿ, ವಿವಿ ಕುಲಪತಿ

ಜ್ಞಾನಭಾರತಿ ಆವರಣದಲ್ಲಿ ಎನ್‌ಎಸ್‌ ಎಸ್‌ ವಿದ್ಯಾರ್ಥಿಗಳು ಪ್ರತಿ 15 ದಿನಗಳಿಗೊಮ್ಮೆ ವಿಶೇಷ ಸ್ವತ್ಛತಾ ಅಭಿಯಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಸುತ್ತಿದ್ದಾರೆ. ಆದರೂ ಕಸದ ಸಮಸ್ಯೆ ಬಗೆಹರಿಯುತ್ತಿಲ್ಲ. ಸಾರ್ವಜನಿಕರು ಜವಾಬ್ದಾರಿ ಮರೆತು ವಿಶ್ವವಿದ್ಯಾಲಯದ ಆವರಣದಲ್ಲಿ ಮನಬಂದಂತೆ ಕಸ ಎಸೆದು ಹೋಗುತ್ತಿರುವುದೇ ಇದಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳು ಸಂಚರಿಸುವ ರಸ್ತೆ ಎಂಬ ಅರಿವನ್ನು ಸಾರ್ವಜನಿಕರು ಹೊಂದಬೇಕು. ಬಿಬಿಎಂಪಿ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು -ಪ್ರೊ.ಎಚ್‌.ಆರ್‌. ರವೀಶ್‌, ಎನ್‌ಎಸ್‌ಎಸ್‌, ಸಂಯೋಜನಾಧಿಕಾರಿ

ಬೆಂಗಳೂರಿಗೆ ಆಕ್ಸಿಜನ್‌ ನಂತಿರುವ ಜ್ಞಾನ ಭಾರತಿ ಆವರಣದಲ್ಲಿ ಕಸದ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಸಾರ್ವಜನಿಕ ಬೇಜವಾಬ್ದಾರಿತನದಿಂದ ವಿದ್ಯಾರ್ಥಿಗಳ ಓಡಾಟಕ್ಕೆ ಸಮಸ್ಯೆಯಾಗಿದೆ. ವಿದ್ಯಾರ್ಥಿ ಒಕ್ಕೂಟಗಳು ಸಾಕಷ್ಟು ಹೋರಾಟ ನಡೆಸಿದ್ದರೂ ಯಾವುದೇ ಫ‌ಲ ದೊರೆತಿಲ್ಲ. ವಿದ್ಯಾರ್ಥಿಗಳು ಮೂಗುಮುಚ್ಚಿ ಓಡಾಡುವ ಪರಿಸ್ಥಿತಿ ಇದೆ. ಬಿಬಿಎಂಪಿ ಮತ್ತು ವಿಶ್ವವಿದ್ಯಾಲಯ ಆಡಳಿತ ಮಂಡಳಿ ಕಠಿಣ ಕ್ರಮಗಳ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಬೇಕು. ಇಲ್ಲವಾದರೆ ವಿದ್ಯಾರ್ಥಿ ಒಕ್ಕೂಟ ಮತ್ತಷ್ಟು ಪ್ರತಿಭಟಿಸಲಿದೆ.-ಚಂದ್ರು ಪೆರಿಯಾರ್‌, ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟದ ಗೌರವಾಧ್ಯಕ್ಷ

ರಾಕೇಶ್‌ ಎನ್‌.ಎಸ್‌

ಟಾಪ್ ನ್ಯೂಸ್

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.