Sullia: ಪಂಜ ಹೋಬಳಿ ಕೇಂದ್ರ ತಲುಪುವುದೇ ಕಷ್ಟ!

ಹದಗೆಟ್ಟ ಗುತ್ತಿಗಾರು -ಬಳಕ್ಕ-ಪಂಜ ರಸ್ತೆ; ಮೇಲ್ದರ್ಜೆಗೇರಿದ್ದರೂ ಕಾಣದ ಅಭಿವೃದ್ಧಿ; ಜಳಕದ ಹೊಳೆ ಎಂಬಲ್ಲಿರುವ ಸೇತುವೆ ಶಿಥಿಲ; ಘನ ವಾಹನಗಳ ಸಂಚಾರಕ್ಕೆ ನಿಷೇಧ

Team Udayavani, Oct 15, 2024, 12:46 PM IST

1

ದುಸ್ತರಗೊಂಡಿರುವ ಪಂಜ-ಬಳಕ್ಕ-ಗುತ್ತಿಗಾರು ಸಂಪರ್ಕ ರಸ್ತೆ. ರಸ್ತೆ ಬದಿ ಚರಂಡಿಯೇ ಇಲ್ಲದಿರುವುದು.

ಸುಳ್ಯ: ಗುತ್ತಿಗಾರು- ಬಳಕ್ಕ- ಪಂಜ ಜಿಲ್ಲಾ ಮುಖ್ಯ ರಸ್ತೆ ಹಲವೆಡೆ ಹೊಂಡ- ಗುಂಡಿಗಳಿಂದ ಕೂಡಿ ದುಸ್ತರಗೊಂಡಿದ್ದು, ಗುತ್ತಿಗಾರು ಭಾಗದ ಜನತೆಗೆ ಹೋಬಳಿ ಕೇಂದ್ರ ಪಂಜವನ್ನು ಸಂಪರ್ಕಿಸುವುದೇ ತ್ರಾಸದಾಯಕವಾಗಿದೆ.

ಪಂಜ-ಬಳಕ್ಕ-ಗುತ್ತಿಗಾರು ರಸ್ತೆ ಮೇಲ್ದರ್ಜೆ ಗೇರಿಸಲಾದ ಜಿಲ್ಲಾ ಮುಖ್ಯ ರಸ್ತೆಯಾಗಿದ್ದು, ಕೆಲವು ವರ್ಷಗಳ ಹಿಂದೆ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ರಸ್ತೆಯ ಅಭಿವೃದ್ಧಿ ನಡೆಸಲಾಗಿತ್ತು. ಆದರೆ ಪೂರ್ಣ ಪ್ರಮಾಣದ ಅಭಿವೃದ್ಧಿ ಆಗದೆ ಇದ್ದುದರಿಂದ ಇಂದಿಗೂ ಈ ರಸ್ತೆ ಹೊಂಡ-ಗುಂಡಿಗಳಿಂದಲೇ ಕೂಡಿದೆ.

ಪಂಜ-ಬಳಕ್ಕ-ಗುತ್ತಿಗಾರು ಈ ರಸ್ತೆ ಸುಮಾರು 10 ಕಿ.ಮೀ. ದೂರ ವ್ಯಾಪ್ತಿ ಹೊಂದಿದ್ದು, ಇದರಲ್ಲಿ ಗುತ್ತಿಗಾರಿನಿಂದ ಚಿಕ್ಮುಳಿ ಎಂಬಲ್ಲಿವರೆಗೆ ರಸ್ತೆ ಡಾಮರೀಕರಣಗೊಂಡು ಅಭಿವೃದ್ಧಿಗೊಂಡಿದೆ. ಆದರೆ ಚಿಕ್ಮುಳಿ ಎಂಬಲ್ಲಿಂದ ಬಳಕ್ಕ-ಪಂಜ ವರೆಗೆ ಸುಮಾರು 7 ಕಿ.ಮೀ.ವರೆಗೆ ತೀರಾ ಹದಗೆಟ್ಟಿದ್ದು, ಸಂಚಾರಕ್ಕೆ ಸಂಕಷ್ಟ ತಂದೊಡ್ಡಿದೆ. ಈ ರಸ್ತೆಯ ಎರಡೂ ಬದಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಸರಿಯಾಗಿ ಹರಿಯದೆ ರಸ್ತೆಯಲ್ಲೇ ಹರಿಯುವ ಸ್ಥಿತಿ ಇದೆ. ಪಂಜದಿಂದ ಪಂಜದ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದವರೆಗೆ ರಸ್ತೆ ಎಲ್ಲಿ ಎಂದು ಹುಡುಕಬೇಕಾದ ಸ್ಥಿತಿಯಿದೆ.

ಪಂಜ ಹೋಬಳಿ ಕೇಂದ್ರವಾಗಿದ್ದು, ಇಲ್ಲಿಗೆ ಕೊಲ್ಲಮೊಗ್ರು, ಹರಿಹರ ಪಲ್ಲತ್ತಡ್ಕ, ಗುತ್ತಿಗಾರು ಭಾಗದ ಜನರು ತಮ್ಮ ಕಂದಾಯ ವಿಭಾಗ ಸೇರಿದಂತೆ ವಿವಿಧ ಕೆಲಸ ಕಾರ್ಯಗಳಿಗೆ ಆಗಮಿಸುತ್ತಾರೆ. ಅದಕ್ಕೆ ಇದೇ ರಸ್ತೆ ಬಳಕೆಯಾಗುತ್ತಿದ್ದು, ಆದರೆ ಪ್ರಸ್ತುತ ಈ ರಸ್ತೆ ಸರಿ ಇಲ್ಲದೆ ಇರುವುದರಿಂದ ಜನತೆಗೆ ಹೋಬಳಿ ಕೇಂದ್ರ ಸಂಪರ್ಕವೇ ತ್ರಾಸದಾಯಕವಾಗಿದೆ. ಈ ರಸ್ತೆಯನ್ನು ಬೇಗ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಮಾಡಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸೇತುವೆ ಶಿಥಿಲ
ಇದೇ ರಸ್ತೆಯ ಜಳಕದ ಹೊಳೆ ಎಂಬಲ್ಲಿ 1983ರಲ್ಲಿ ನಿರ್ಮಾಣಗೊಂಡಿರುವ ಸೇತುವೆ ಪ್ರಸ್ತುತ ಶಿಥಿಲಾವಸ್ಥೆ ತಲುಪಿದ್ದು ಅಪಾಯಕಾರಿ ಸ್ಥಿತಿಯಲ್ಲಿದೆ. ಈ ಸೇತುವೆಯಲ್ಲಿ ಘನ ವಾಹನ ಸಂಚಾರಕ್ಕೆ ಯೋಗ್ಯವಲ್ಲದ ಕಾರಣ ಘನ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರಿಣಾಮ ಪಂಜ-ಬಳಕ್ಕ-ಗುತ್ತಿಗಾರು ರಸ್ತೆಯಲ್ಲಿ ಘನ ವಾಹನ ಸಂಚಾರ ಸ್ಥಗಿಗೊಂಡಿದೆ. ಸೇತುವೆಯಲ್ಲೂ ಹೊಂಡ-ಗುಂಡಿ ನಿರ್ಮಾಣಗೊಂಡು, ಸಾಮಾನ್ಯ ವಾಹನಗಳ ಸಂಚಾರಕ್ಕೂ ಸಮಸ್ಯೆ ಆಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ಪಂಜ-ಗುತ್ತಿಗಾರು ರಸ್ತೆಯ ಹಲವೆಡೆ ರಸ್ತೆಯಲ್ಲಿ ಹೊಂಡ-ಗುಂಡಿ ನಿರ್ಮಾಣಗೊಂಡು ವಾಹನ ಸಂಚಾರಕ್ಕೆ ಕಷ್ಟವಾಗುತ್ತಿದೆ. ದ್ವಿಚಕ್ರ ವಾಹನ ಸಂಚಾರವೇ ಅಪಾಯಕಾರಿಯಾಗಿದೆ. ಇಕ್ಕಟ್ಟಾದ ರಸ್ತೆಯಲ್ಲಿ ಬೇರೆ ವಾಹನಗಳಿಗೆ ಸೈಡ್‌ ಕೊಡಲೂ ಆಗುತ್ತಿಲ್ಲ.
-ಸೂರ್ಯನಾರಾಯಣ ಸಂಪ, ಪಂಜ

ಗುತ್ತಿಗಾರು-ಪಂಜ ರಸ್ತೆಯ ಚಿಕ್ಮುಳಿವರೆಗೆ ರಸ್ತೆ ಉತ್ತಮವಾಗಿದ್ದರೂ ಚಿಕ್ಮುಳಿ ಎಂಬಲ್ಲಿಂದ ಪಂಜದ ವರೆಗೆ ರಸ್ತೆ ತೀರಾ ಹದಗೆಟ್ಟು ವಾಹನ ಸಂಚರಿಸಲು ಅಸಾಧ್ಯವಾದ ಸ್ಥಿತಿಯಲ್ಲಿದೆ. ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆ ದುರಸ್ತಿ ಮಾಡಿದರೂ ಪ್ರಯೋಜನವಾಗುವ ಸ್ಥಿತಿಯಲ್ಲಿಲ್ಲ. ಕೂಡಲೇ ರಸ್ತೆಯ ಅಭಿವೃದ್ಧಿಗೆ ಕ್ರಮಕೈಗೊಳ್ಳಬೇಕು.
-ಅನಿಲ್‌ ಗುತ್ತಿಗಾರು, ರಸ್ತೆಯ ಫಲಾನುಭವಿ

-ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

Date announcement for by-elections of Channapatnam, Sandur, Shiggamvi constituencies

By Election: ಚನ್ನಪಟ್ಟಣ,ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ

Election: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆ

Election: ಮಹಾರಾಷ್ಟ್ರ, ಜಾರ್ಖಂಡ್ ರಾಜ್ಯಗಳಿಗೆ ಚುನಾವಣೆ ದಿನಾಂಕ ಘೋಷಣೆ

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು

BJP MLA: ಅತ್ಯಾ*ಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಜಾಮೀನು

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

Salman to Munawar: ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಹಿಟ್‌ ಲಿಸ್ಟ್‌ ಯಾರೆಲ್ಲಾ ಇದ್ದಾರೆ

Baba Siddique Case: ಮುಂಬೈ ಪೊಲೀಸರಿಂದ ನಾಲ್ಕನೇ ಆರೋಪಿ ಬಂಧನ…

Baba Siddique Case: ಮುಂಬೈ ಪೊಲೀಸರಿಂದ ಇನ್ನೋರ್ವನ ಬಂಧನ… ಬಂಧಿತರ ಸಂಖ್ಯೆ 4ಕ್ಕೆ ಏರಿಕೆ

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು

Gangolli: ಪತ್ನಿಗೆ ಹಿಂಸೆ ನೀಡಿ ಹಲ್ಲೆ; ಅತ್ತೆ-ಗಂಡನ ವಿರುದ್ಧ ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

B.Y. Vijayendra: ಭ್ರಷ್ಟ ಸರ್ಕಾರ ವಜಾ ಮಾಡಲು ರಾಷ್ಟ್ರಪತಿಗಳಿಗೆ‌ ಮನವಿ ಸಲ್ಲಿಸುತ್ತೇವೆ

1-seers

Anganwadi workers; ಅಂಗನವಾಡಿ ಕಾರ್ಯಕರ್ತೆಯರಿಗೆ ಕಳಪೆ ಸೀರೆ

adike

Areca nut; ಅಡಿಕೆ ಎಲೆ ಹಳದಿ ವ್ಯಾಪಕ ; ನಾಲ್ಕು ವರ್ಷಗಳಿಂದ ನಡೆದೇ ಇಲ್ಲ ಸಮೀಕ್ಷೆ

police

Belthangady; ಟ್ರಸ್ಟ್‌ ಕುರಿತು ಅವಹೇಳನಕಾರಿ ಹೇಳಿಕೆ

1-ra

Aranthodu; ರಬ್ಬರ್‌ ಆ್ಯಸಿಡ್‌ ಸೇವಿಸಿದ್ದ ವ್ಯಕ್ತಿ ಸಾ*ವು

MUST WATCH

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

ಹೊಸ ಸೇರ್ಪಡೆ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿ ಹಾಕಲು ಕೇಂದ್ರದ ಮೇಲೆ ಆರೋಪ: ಸಿಎಂ ವಿರುದ್ದ ರೇಣುಕಾ ಟೀಕೆ

13

Shirva: ಕೊರಗರೂ ಮನುಷ್ಯರೆಂಬ ಭಾವನೆ ಸಾರ್ವತ್ರಿಕವಾಗಲಿ

12

Padubidri: ಮುದರಂಗಡಿಯಲ್ಲಿ ಕಾಡುಕೋಣ ಹಾವಳಿ; ವಾಹನ ಸವಾರರಿಗೆ ಅಪಾಯ

14

Swarajya 1942 Movie: ಸ್ವರಾಜ್ಯದಲ್ಲಿ ಕ್ರಾಂತಿಯ ಕಹಳೆ

Date announcement for by-elections of Channapatnam, Sandur, Shiggamvi constituencies

By Election: ಚನ್ನಪಟ್ಟಣ,ಸಂಡೂರು, ಶಿಗ್ಗಾಂವಿ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.