ಭೈರನಹಟ್ಟಿ: ಕಾರ್ಗಿಲ್ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ
Team Udayavani, Oct 15, 2024, 2:10 PM IST
■ ಉದಯವಾಣಿ ಸಮಾಚಾರ
ಕುಳಗೇರಿ ಕ್ರಾಸ್: ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ದೊರೆಸ್ವಾಮಿ ವಿರಕ್ತಮಠ ಭೈರನಹಟ್ಟಿ ಅವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಚೊಳಚಗುಡ್ಡದಿಂದ ಭೈರನಹಟ್ಟಿಯವರೆಗೆ ಕಾರ್ಗಿಲ್ ಜ್ಯೋತಿ ರಥಯಾತ್ರೆಗೆ ಹಾವೇರಿಯ ಹುಕ್ಕೇರಿ ಮಠದ ಸದಾಶಿವ ಮಹಾಸ್ವಾಮೀಜಿ ಚಾಲನೆ ನೀಡಿದರು.
ನಂತರ ಮಾತನಾಡಿದ ಶ್ರೀಗಳು, ಕಾರ್ಗಿಲ್ ಹುತಾತ್ಮ ಯೋಧರ ಜ್ಯೋತಿ ರಥ ಎಳೆಯುತ್ತಿರುವುದು ದೇಶದಲ್ಲಿಯೇ ಪ್ರಥಮ.
ದೇಶಕ್ಕಾಗಿ ಮಡಿದ ಯೋಧರ ಜ್ಯೋತಿ ರಥಯಾತ್ರೆಯನ್ನು ಹಮ್ಮಿಕೊಳ್ಳುವುದರ ಜತೆಗೆ ನಮಗೆಲ್ಲ ನಮ್ಮ ಸೈನಿಕರನ್ನು ನೆನಪು
ಮಾಡಿಕೊಡುವ ಕೆಲಸ ಭೈರನಹಟ್ಟಿ ಶ್ರೀಮಠದಿಂದ ನಡೆಯುತ್ತಿದೆ. ಕಾರ್ಗಿಲ್ ವಿಜಯ ದಿನವನ್ನು ವಿವಿಧ ಕಾರ್ಯ ಕ್ರಮದೊಂದಿಗೆ ಶ್ರೀಮಠದಲ್ಲಿ ವಿನೂತನವಾಗಿ ಆಚರಿಸುತ್ತಿರುವುದು ದೇಶಭಕ್ತರಲ್ಲಿ ಸಂತಸ ತಂದಿದೆ ಎಂದು ಹೇಳಿದರು.
ಶ್ರೀ ವೀರಪುಲಿಕೇಶಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ರಥಯಾತ್ರೆಯನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಂತರ
ರಾಜ್ಯ ಹೆದ್ದಾರಿ ಮೂಲಕ ಸಕಲ ವಾದ್ಯಗಳೊಂದಿಗೆ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಮೆರವಣಿಗೆ ಮಾಡಲಾಯಿತು.
ನಂತರ ರಾಯಣ್ಣನ ಮೂರ್ತಿಗೆ ಪೂಜೆ ಸಲ್ಲಿಸಿದ ಭೈರನಹಟ್ಟಿ ಪೂಜ್ಯ ಶಾಂತಲಿಂಗ ಸ್ವಾಮಿಜಿ ಮಾತನಾಡಿ, ಕಾರ್ಗಿಲ್ ವಿಜಯ
ಪತಾಕೆಯನ್ನು ಹಾರಿಸಿ 25 ವರ್ಷ ಗತಿಸಿದವು. ಅನ್ನ ನೀಡುವ ರೈತ, ದೇಶ ಕಾಯುವ ಸೈನಿಕರನ್ನ ನೆನೆಯುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಕಾರ್ಗಿಲ್ ಯುದ್ಧದಲ್ಲಿ ಪ್ರಥಮವಾಗಿ ಮಡಿದ ಚೊಳಚಗುಡ್ಡದ ಶಿವಬಸಯ್ಯ ಕುಲಕರ್ಣಿಯವರ ಸ್ಮಾರಕದಿಂದ ಪ್ರಾರಂಭವಾದ
ಜ್ಯೋತಿರಥಯಾತ್ರೆಯು ಬನಶಂಕರಿ, ಬಾದಾಮಿ, ಮುತ್ತಲಗೇರಿ, ತಿಮ್ಮಾಪೂರ ಎಸ್ ಎನ್, ಕುಳಗೇರಿ ಕ್ರಾಸ್ ಮಾರ್ಗವಾಗಿ
ಗೋವನಕೊಪ್ಪ, ಕೊಣ್ಣೂರ ಮೂಲಕ ಭೈರನಹಟ್ಟಿ ಶ್ರೀಮಠಕ್ಕೆ ತಲುಪಿತು. ಎಲ್ಲ ಗ್ರಾಮಸ್ಥರು, ಮಾಜಿ ಸೈನಿಕರು, ಗ್ರಾಪಂ
ಸಸಸ್ಯರು, ವಿವಿಧ ಕನ್ನಡಪರ ಸಂಘಟನೆಯವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Badami: ಮಲಪ್ರಭಾ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ; ಬೆಳೆಗಳಿಗೆ ಅಪಾರ ಹಾನಿ
Mudhol: ಸಾಂಸ್ಕೃತಿಕ ಸೇವೆಯಲ್ಲೂ ಗಣನೀಯ ಸಾಧನೆ- ಮೈಸೂರು ದಸರಾದಲ್ಲಿ ಮುಧೋಳ ಮಲ್ಲರ ಕಮಾಲ್
Ratan Tata: ಕಳಚಿದ ಕೈಗಾರಿಕೆ ಕ್ಷೇತ್ರದ ಬೃಹತ್ ಕೊಂಡಿ: ಶಾಸಕ ಮೇಟಿ
Bagalakote: ಖ್ಯಾತ ಉದ್ಯಮಿ ರತನ್ ಟಾಟಾ ಅಗಲಿಕೆ ಬಹಳ ಆಘಾತ ತಂದಿದೆ : ಡಾ.ನಿರಾಣಿ
Kaladgi:ಜೆಸಿಬಿಚಾಲಕನ ನಿರ್ಲಕ್ಷ್ಯ ಕಾಮಗಾರಿ;ಪೈಪ್ ಲೈನ್ ಒಡೆದು ಸಾಕಷ್ಟು ಪ್ರಮಾಣದ ನೀರುಪೋಲು
MUST WATCH
ಹೊಸ ಸೇರ್ಪಡೆ
Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ
K. S. Eshwarappa: ಅ.20ರಂದು ಬ್ರಿಗೇಡ್ ಹೆಸರು ಘೋಷಣೆ
Shivamogga: ಜೈಲಿನಿಂದ ಮೊಬೈಲ್ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!
BCB: ಕೋಚ್ ಚಂಡಿಕಾ ಹತುರುಸಿಂಘೆರನ್ನು ಅಮಾನತು ಮಾಡಿದ ಬಾಂಗ್ಲಾದೇಶ ಕ್ರಿಕೆಟ್
ಹೊಸಪೇಟೆ: ವಿಜಯನಗರದ ಕಾಲದ ಅಪರೂಪದ ಮಾಸ್ತಿಕಲ್ಲು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.