Kulai: ಅವೈಜ್ಞಾನಿಕ ಕುಳಾಯಿ ಮೀನುಗಾರಿಕಾ ಜೆಟ್ಟಿ

ಸಾಂಕೇತಿಕ ಪ್ರತಿಭಟನೆ: ಪಾಲಿಕೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆ.

Team Udayavani, Oct 15, 2024, 3:34 PM IST

10

ಕುಳಾಯಿ: ಕುಳಾಯಿ ಜೆಟ್ಟಿಯನ್ನು ಸ್ಥಳೀಯ ಮೀನುಗಾರರ ಬೇಡಿಕೆ ಯನ್ನು ಪರಿಗಣಿಸದೆ ಯಥಾಸ್ಥಿತಿಯಲ್ಲಿ ನಿರ್ಮಿಸ ಲಾಗುತ್ತಿದ್ದು, ಇದರಿಂದ ಆಕ್ರೋಶ ಗೊಂಡ ನಾಡದೋಣಿ ಹಾಗೂ ಮೂಲ ಮೀನುಗಾರ ಸಂಘಟನೆಯ ಮೀನುಗಾರರು ಸೋಮವಾರ ಜೆಟ್ಟಿ ಕಾಮಗಾರಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು.

ಮೀನುಗಾರಿಕೆಗೆ ಈ ಜೆಟ್ಟಿಯಿಂದ ಯಾವುದೇ ಪ್ರಯೋಜನವಿಲ್ಲದಂತಾಗಿದ್ದು ಸರಕಾರವು ಸ್ಥಳೀಯ ನಾಡ ದೋಣಿ ಮೀನುಗಾರರ ಅಹವಾಲಿಗೆ ಸ್ಪಂದಿಸದೆ ಮತ್ತೆ ಕಾಮಗಾರಿಯನ್ನ ಆರಂಭಿಸಿದೆ. ಈ ನಿಟ್ಟಿನಲ್ಲಿ ಮುಂಬರುವ ದಿನಗಳಲ್ಲಿ ಪಾಲಿಕೆ ಚುನಾವಣೆ ಸಹಿತ ಎಲ್ಲ ಚುನಾವಣೆಯಲ್ಲಿ ಮತ ಹಾಕದೆ ಬಹಿಷ್ಕಾರ ಹಾಕಲಿದ್ದೇವೆ ಎಂದು ಗಂಭೀರ ಎಚ್ಚರಿಕೆಯನ್ನು ಮೀನುಗಾರರು ನೀಡಿದರು.

ಕರಾವಳಿ ಸಾಂಪ್ರದಾಯಿಕ ನಾಡ ದೋಣಿ ಹಾಗೂ ಕರಾವಳಿ ಮೂಲ ನಾಡ ದೋಣಿ ಮೀನುಗಾರಿಕಾ ಸಂಘಟನೆಗಳು ಸೋಮವಾರ ತುರ್ತು ಸಭೆ ನಡೆಸಿ ಹೋರಾಟದ ರೂಪುರೇಷೆ ಚರ್ಚಿಸಿದರು.

ಎನ್‌ಎಂಪಿಎ ಅಧಿಕಾರಿಗಳು ಜನಪ್ರತಿನಿಧಿಗಳ ಭಯವೇ ಇಲ್ಲವೆಂಬಂತೆ ಅವರ ಮಾತಿಗೂ ನಿರ್ಲಕ್ಷ್ಯ ವಹಿಸಿದ್ದಾರೆ. ಕಾಮಗಾರಿ ಸ್ಥಗಿತಕ್ಕೆ ರಾಜ್ಯದ ಸಚಿವ ಮಂಕಾಳ್‌ ವೈದ್ಯ ಆದೇಶ ನೀಡಿದ್ದರೂ ಕಾಮಗಾರಿಯನ್ನು ಗುತ್ತಿಗೆದಾರರು ಮುಂದುವರಿಸಿದ್ದಾರೆ.

ಜನಪ್ರತಿನಿಧಿಗಳು ನಾಡ ದೋಣಿ ಮೀನುಗಾರಿಕೆಗೆ ಸೂಕ್ತವಾದ ಜೆಟ್ಟಿ ನಿರ್ಮಾಣ ಮಾಡುವವರೆಗೆ ಹಾಗೂ ಬೇಡಿಕೆಯನ್ನು ಈಡೇರಿಸುವವರೆಗೆ ಚುನಾವಣ ಬಹಿಷ್ಕಾರ ಹಾಗೂ ಅನಿರ್ದಿಷ್ಟಾವಧಿ ಪ್ರತಿಭಟನೆಯ ನಿರ್ಧಾರ ಕೈಗೊಂಡರು. ಇದೇ ಸಂದರ್ಭ ಕಾಮಗಾರಿಯ ಲಾರಿಗಳನ್ನು ತಡೆದು ಒಂದು ಗಂಟೆ ಪ್ರತಿಭಟನೆ ನಡೆಸಲಾಯಿತು.

ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಾಮಗಾರಿ
ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ವಸಂತ ಸುವರ್ಣ ಮಾತನಾಡಿ, ಅವೈಜ್ಞಾನಿಕ ಕಾಮಗಾರಿಯನ್ನು ನಿಲ್ಲಿಸಲು ಸಚಿವ ಮಂಕಾಳ್‌ ವೈದ್ಯ ಸ್ಥಳಕ್ಕೆ ಭೇಟಿ ನೀಡಿ ಆದೇಶಿಸಿದ್ದರು. ಆದರೆ ಎನ್‌ಎಂಪಿಎ ಮೀನುಗಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕಾಮಗಾರಿ ನಡೆಸಲಾಗುತ್ತಿದೆ. ಬೇಡಿಕೆ ಈಡೇರುವವರೆಗೆ ನಮ್ಮ ಹೋರಾಟ ಮುಂದಿನ ದಿನಗಳಲ್ಲಿ ಮುಂದುವರಿಯಲಿದೆ ಎಂದರು.

ಕೋಟ್ಯಾಂತರ ರೂ.ಖರ್ಚು ಮಾಡಿ ದಕ್ಕೆ ಬದಲು ಕೊಳವೊಂದು ನಿರ್ಮಿಸುತ್ತಿರುವ ರೀತಿಯಲ್ಲಿದೆ. ಅಧಿಕಾರಿಗಳು ಇಷ್ಟು ನಿರ್ಲಕ್ಷé ವಹಿಸಿ ಕಾಟಾಚಾರಕ್ಕೆ ಜೆಟ್ಟಿ ನಿರ್ಮಿಸುವುದರ ಅಗತ್ಯವೇನು?. ಮೀನುಗಾರರಿಗೆ ಅನ್ಯಾಯ ವಾದರೆ ಸಹಿಸಲು ಸಾಧ್ಯವಾಗದು ಹೋರಾಟವೇ ಅಂತಿಮ ಎಂದು ಪ್ರಧಾನ ಕಾರ್ಯದರ್ಶಿ ಸುರೇಶ್‌ ಶ್ರೀಯಾನ್‌ ಬೈಕಂಪಾಡಿ ನುಡಿದರು.

ಸುಧೀರ್‌ ಶ್ರೀಯಾನ್‌ ಮಾತನಾಡಿ ಮೀನುಗಾರರನ್ನು ವಿಶ್ವಾಸಕ್ಕೆ ತೆಗೆದು ಕೊಳ್ಳುವುದಾಗಿ ಹೇಳಿ ಮೋಸ ಮಾಡಿದ್ದಾರೆ. ಉಳ್ಳಾಲದಿಂದ ಕಾರವಾರದವರೆಗೆ ಇರುವ ಮೀನುಗಾರರ ಒಕ್ಕೂಟದ ಬೆಂಬಲ ಪಡೆದು ಕಾಮಗಾರಿ ಸ್ಥಗಿತಗೊಳಿಸಿ ಹೋರಾಟ ನಡೆಸಲಿದ್ದೇವೆ ಎಂದು ಎಚ್ಚರಿಸಿದರು.

ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಂಘದ ಉಪಾಧ್ಯಕ್ಷ ಉದಯ್‌ ಅಮೀನ್‌, ಪ್ರಧಾನ ಕಾರ್ಯದರ್ಶಿ ಸುರೇಶ್‌ ಶ್ರೀಯಾನ್‌ ಬೈಕಂಪಾಡಿ, ದ.ಕ. ಕರಾವಳಿ ಮೂಲ ಮೀನುಗಾರರ ಸಂಘದ ಅಧ್ಯಕ್ಷ ಅಶ್ವಥ್‌ ಕಾಂಚನ್‌ ಬೈಕಂಪಾಡಿ, ಸಂಘಟನ ಕಾರ್ಯದರ್ಶಿ ಚಂದ್ರಶೇಖರ ಶ್ರೀಯಾನ್‌ ಮತ್ತಿತರ ಪದಾಧಿಕಾರಿಗಳು, ಸರ್ವಸದಸ್ಯರು ಉಪಸ್ಥಿತರಿದ್ದರು.

ಅ.16ರಂದು ಸಭೆ
ಮೀನುಗಾರರ ಅನಿರ್ದಿಷ್ಟಾವಧಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ಬೇಡಿಕೆಯನ್ನು ಪರಿಗಣಿಸುವ ಸಲುವಾಗಿ ಕುಳಾಯಿ ಜೆಟ್ಟಿ ಕಾಮಗಾರಿ ಕುರಿತಂತೆ ಅ.16ರಂದು ನವಮಂಗಳೂರು ಬಂದರು ಪ್ರಾಧಿಕಾರದ ಜತೆ ಸಂಸದ ಬ್ರಿಜೇಶ್‌ ಚೌಟ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಶಾಸಕ ಡಾ|ಭರತ್‌ ಶೆಟ್ಟಿ ವೈ, ಮೀನುಗಾರರ ಸಂಘದ ಮುಖಂಡರು ಪಾಲ್ಗೊಳ್ಳಲಿದ್ದಾರೆ.ಈ ನಿಟ್ಟಿನಲ್ಲಿ ಮಂಗಳವಾರದಿಂದ ನಡೆಯುವ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಅಧಿಕಾರಿಗಳು ಬೇಡಿಕೆಗೆ ಸ್ಪಂದಿಸದೇ ಹೋದಲ್ಲಿ ಹೋರಾಟವೇ ಅಂತಿಮವಾಗಲಿದೆ ಎಂದು ಮೀನುಗಾರರು ತಿಳಿಸಿದ್ದಾರೆ.

ಟಾಪ್ ನ್ಯೂಸ್

6-yelandur

Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ

Possibility of five days of heavy rain on the coast due to the fall in atmospheric pressure

Rain; ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ

CM-Shinde

Deepavali Bonus: ಚುನಾವಣೆ ಘೋಷಣೆಗೂ ಮುನ್ನ ʼಮಹಾʼ ಸರಕಾರದಿಂದ ನೌಕರರಿಗೆ ಬೋನಸ್‌!

Santhebennur: Demand for Rs 2 thousand bribe; Deputy Tahsildar Lokayukta trap

Santhebennur: 2 ಸಾವಿರ ರೂ ಲಂಚಕ್ಕೆ ಬೇಡಿಕೆ; ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

K. S. Eshwarappa: ಅ.20ರಂದು ಬ್ರಿಗೇಡ್‌ ಹೆಸರು ಘೋಷಣೆ

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!

Shivamogga: ಜೈಲಿನಿಂದ ಮೊಬೈಲ್‌ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Mangaluru: ಸಾವಯವ ಕೃಷಿಕ ಗ್ರಾಹಕ ಬಳಗದಿಂದ ನ. 1ರಂದು ನಗರದಲ್ಲಿ ಕಾರ್ಯಾಗಾರ

8(1)

Padil ಸುತ್ತಮುತ್ತ: ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡಗುಂಡಿ; ಸಂಚಾರ ದುಸ್ತರ

4(4)

Mangaluru: ಜನಸಾಗರವೇ ಸಂಭ್ರಮಿಸಿದ ಮಂಗಳೂರು ದಸರಾ

3

Bajpe ಪೇಟೆ ಸಣ್ಣ ಸೇತುವೆ, ತೋಡಿಗೆ ತ್ಯಾಜ್ಯ ಎಸೆತ; ಪರಿಸರವೆಲ್ಲ ದುರ್ನಾತ

1-male

Dakshina Kannada; ಜಿಲ್ಲೆಯ ವಿವಿಧೆಡೆ ಮಳೆ : ಬೆಳ್ತಂಗಡಿಯಲ್ಲಿ ಬರೆ ಕುಸಿತ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

6-yelandur

Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ

Possibility of five days of heavy rain on the coast due to the fall in atmospheric pressure

Rain; ವಾಯುಭಾರ ಕುಸಿತದಿಂದ ಕರಾವಳಿಯಲ್ಲಿ ಐದು ದಿನ ಭಾರಿ ಗಾಳಿ ಮಳೆ ಸಾಧ್ಯತೆ

CM-Shinde

Deepavali Bonus: ಚುನಾವಣೆ ಘೋಷಣೆಗೂ ಮುನ್ನ ʼಮಹಾʼ ಸರಕಾರದಿಂದ ನೌಕರರಿಗೆ ಬೋನಸ್‌!

Santhebennur: Demand for Rs 2 thousand bribe; Deputy Tahsildar Lokayukta trap

Santhebennur: 2 ಸಾವಿರ ರೂ ಲಂಚಕ್ಕೆ ಬೇಡಿಕೆ; ಉಪ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ

Madhu Bangarappa

Dharwad: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್ ಪಡೆದಿದ್ದು ಸರಿ ಇದೆ : ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.