Yelandur: ಅಪರೂಪದ ನಕ್ಷತ್ರ ಆಮೆ ಕಳ್ಳ ಸಾಗಾಟ; ಇಬ್ಬರ ಬಂಧನ
Team Udayavani, Oct 15, 2024, 7:31 PM IST
ಯಳಂದೂರು: ಅಪರೂಪದ ನಕ್ಷತ್ರ ಆಮೆ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿರುವ ಘಟನೆ ಅ.14ರ ಸೋಮವಾರ ರಾತ್ರಿ ನಡೆದಿದೆ.
ತಮಿಳುನಾಡು ಕೃಷ್ಣಗಿರಿ ಜಿಲ್ಲೆಯ ಕೋಡಿವೂರು ಗ್ರಾಮದ ಕಾಳಪ್ಪ ರಾಮಪ್ಪ ಹಾಗೂ ಜಿಲ್ಲೆಯ ಮಲ್ಲಿಗೆ ಬಾವಿದೊಡ್ಡಿ ಗ್ರಾಮದ ಮುತ್ತುರಾಜ್ ಎಂಬ ಇಬ್ಬರನ್ನು ಬಂಧಿಸಿ ಇವರಿಂದ ಜೀವಂತ ನಕ್ಷತ್ರ ಆಮೆ, 1 ಬೈಕ್ ಹಾಗೂ 1 ಬ್ಯಾಗನ್ನು ವಶಪಡಿಸಿಕೊಳ್ಳಲಾಗಿದೆ.
ಕೊಳ್ಳೇಗಾಲ ಅರಣ್ಯ ಸಂಚಾರಿ ದಳದ ಆರಕ್ಷಕ ಉಪ ನಿರೀಕ್ಷಕ ವಿಜಯರಾಜ್ ನೇತೃತ್ವದ ತಂಡ ತಾಲೂಕಿನ ಮದ್ದೂರು ಗ್ರಾಮದ ಪಕ್ಕದಲ್ಲಿರುವ ಎಳೆ ಪಿಳ್ಳಾರಿ ದೇಗುಲದ ಬಳಿಯ ಕೊಳದ ಹತ್ತಿರ ಜೀವಂತ ನಕ್ಷತ್ರ ಆಮೆಯನ್ನು ಹಿಡಿದು ಸಾಗಿಸಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು ಮುಂದಿನ ಕ್ರಮ ವಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Missing case: ಕುದ್ರೋಳಿಗೆ ಬಂದಿದ್ದ ಮಹಿಳೆ ನಾಪತ್ತೆ; ದೂರು ದಾಖಲು
BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..
Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು
High Court: “ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು
Jaishankar: ಪಾಕ್ ತಲುಪಿದ ಜೈಶಂಕರ್: 9 ವರ್ಷ ಬಳಿಕ ಭಾರತದ ವಿದೇಶಾಂಗ ಸಚಿವ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.