Valmiki Nigama: ಹಣ ದುರ್ಬಳಕೆಯಾದರೂ ಈ ವರ್ಷದ ಅನುದಾನ ಕೊಡಲು ಸೂಚಿಸಿರುವೆ: ಸಿದ್ದರಾಮಯ್ಯ

ಜಾತಿ ಪ್ರಮಾಣಪತ್ರ ವಿತರಣೆಯಲ್ಲಾಗುತ್ತಿರುವ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಹೇಳಿದ್ದೇನೆ: ಮುಖ್ಯಮಂತ್ರಿ

Team Udayavani, Oct 15, 2024, 8:39 PM IST

SC-Meet-CM

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅವ್ಯವಹಾರವಾಗಿದ್ದರೂ ಈ ವರ್ಷದಲ್ಲಿ ನಿಗಮಕ್ಕೆ ನಿಗದಿಪಡಿಸಿರುವ ಅನುದಾನ ಸಂಪೂರ್ಣ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ವಿಧಾನಸೌಧದಲ್ಲಿ ಮಂಗಳವಾರ ಪರಿಶಿಷ್ಟ ಪಂಗಡ ಸಮುದಾಯಗಳ ಸಭೆಯ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿ  ವಾಲ್ಮೀಕಿ ನಿಗಮದ ಅನುದಾನ ಕಡಿತಗೊಳಿಸದಂತೆ ಹಲವು ಮನವಿಗಳು ಬಂದಿವೆ ಆದ್ದರಿಂದ ಈ ವರ್ಷ ವಾಲ್ಮೀಕಿ ನಿಗಮಕ್ಕೆ ಮೀಸಲಿಟ್ಟಿರುವ ಅನುದಾನ ಸಂಪೂರ್ಣ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ‘ಪರಿಶಿಷ್ಟ ಪಂಗಡದ ಶಾಸಕರು ಹಾಗೂ ಸ್ವಾಮೀಜಿಗಳ ಜತೆಗಿನ ಸಭೆಯಲ್ಲಿ ಎರಡು ವಿಷಯಗಳ ಬಗ್ಗೆ ಚರ್ಚೆಯಾಗಿದೆ. ಮೊದಲು ಅನುದಾನ ಕಡಿತ ಮಾಡದಂತೆ ಶಾಸಕರು ಹಾಗೂ ಸ್ವಾಮೀಜಿಗಳು ಮನವಿ ಮಾಡಿದ್ದರು. ಎರಡನೆಯದಾಗಿ ನಕಲಿ ಜಾತಿ ಪ್ರಮಾಣ ಪತ್ರ ಸಮಸ್ಯೆ ಕುರಿತ ಚರ್ಚೆ ನಡೆದಿದ್ದು ಗೊಂದಲ ನಿವಾರಣೆ ಮಾಡುವ ಕೆಲಸ ಮಾಡುತ್ತೇವೆ ಎಂದರು.

ಇನ್ನು ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಅವ್ಯವಹಾರ ಕುರಿತಂತೆ ಎಸ್ಐಟಿ ತನಿಖೆ ನಡೆಸುತ್ತಿದೆ. ನಿಗಮದ 89.63 ಕೋಟಿ ರೂ. ದುರುಪಯೋಗವಾಗಿದ್ದು, ಅದರಲ್ಲಿ 5 ಕೋಟಿ ರೂ. ವಾಪಸ್ ಬಂದಿದೆ. ಎಸ್‌ಐಟಿ ತನಿಖೆ ವೇಳೆ ರೂ.71.54 ಕೋಟಿ ರೂಪಾಯಿಯ ಮತ್ತೆ ವಶಕ್ಕೆ ಪಡೆದಿದೆ. ಇನ್ನು ಉಳಿದ 13 ಕೋಟಿ ರೂ.ಮೊತ್ತ  ನಿಗಮಕ್ಕೆ ವಾಪಸ್‌ ಬರಬೇಕಿದೆ. ಅವ್ಯವಹಾರದ ಪೂರ್ಣ ಮೊತ್ತ  ಮರು ಪಡೆಯಲಾಗುವುದು. ಈ ಪ್ರಕರಣವು ಪ್ರಸ್ತುತ ನ್ಯಾಯಾಲಯದ ಮುಂದಿದೆ. ನಾವು ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತೇವೆ. ಜಾತಿ ಪ್ರಮಾಣಪತ್ರದ ಬಗ್ಗೆ ಗೊಂದಲ ಪರಿಹರಿಸಿ ಅಗತ್ಯ ಆದೇಶಗಳ ಹೊರಡಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.


ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಚರ್ಚಿಸಿ ತೀರ್ಮಾನ:
ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಕಡಿಮೆ ಅನುದಾನ ನೀಡುತ್ತಿರುವ ಕೇಂದ್ರದ ಅನ್ಯಾಯದ ವಿರುದ್ಧ ಪ್ರತಿಭಟನೆಗೆ ಸಂಬಂಧಿಸಿದಂತೆ ಉತ್ತರಿಸಿದ ಅವರು, ಈ ಬಗ್ಗೆ ಇನ್ನೂ ಚರ್ಚೆಯಾಗಿಲ್ಲ. ದೆಹಲಿಯಲ್ಲಿ ಪ್ರತಿಭಟನೆ ನಡೆಸುವ ವಿಚಾರ ಸದ್ಯಕ್ಕೆ ತೀರ್ಮಾನ ಮಾಡಿಲ್ಲ, ಪ್ರತಿಭಟನೆ ಮಾಡುವ ಬಗ್ಗೆ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದರು. ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ವಿಚಾರವಾಗಿ ಸಿದ್ದರಾಮಯ್ಯ ಅವರು ಉಪಚುನಾವಣೆಗೆ ಸಿದ್ಧರಿದ್ದು, ಉಪಚುನಾವಣೆಯನ್ನು ಸಮರ್ಥವಾಗಿ ಎದುರಿಸುತ್ತೇವೆ ಎಂದು ಹೇಳಿದರು.

ಪರಿಶಿಷ್ಟ ಪಂಗಡ ಸಮುದಾಯಗಳ ಸಭೆಯಲ್ಲಿ ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಖ್‌ ಸೇರಿ ಹಿರಿಯ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

Pramod-Madwaraj

Udupi: ಪ್ರಮೋದ್‌ ಮಧ್ವರಾಜ್‌ ಹುಟ್ಟುಹಬ್ಬ: ಕುಂದಾಪುರದಲ್ಲಿ ಅ.17ಕ್ಕೆ ರಕ್ತದಾನ ಶಿಬಿರ

KOTA

Kota: ಅಚ್ಲಾಡಿ ಶ್ರೀಸಿದ್ಧಿವಿನಾಯಕ ದೇವಸ್ಥಾನ: ನಾಳೆ ನವೀಕೃತ ತೀರ್ಥ ಪುಷ್ಕರಣಿ ಲೋಕಾರ್ಪಣೆ

Udupi: ಗೀತಾರ್ಥ ಚಿಂತನೆ-65: ಪಾಂಡವರಲ್ಲಿದ್ದ ಸಮನ್ವಯ ಕೌರವರಲ್ಲಿಲ್ಲ

Udupi: ಗೀತಾರ್ಥ ಚಿಂತನೆ-65: ಪಾಂಡವರಲ್ಲಿದ್ದ ಸಮನ್ವಯ ಕೌರವರಲ್ಲಿಲ್ಲ

Police custody: ಆಹಾರ ಭತ್ತೆ 150 ರೂ.ಗೆ ಹೆಚ್ಚಳ

Police custody: ಆಹಾರ ಭತ್ತೆ 150 ರೂ.ಗೆ ಹೆಚ್ಚಳ

Congress Govt.,: ಹುಬ್ಬಳ್ಳಿ ಕೇಸ್‌ ವಾಪಸ್‌; ಕೇಂದ್ರಕ್ಕೆ ಛಲವಾದಿ ಪತ್ರ

Congress Govt.,: ಹುಬ್ಬಳ್ಳಿ ಕೇಸ್‌ ವಾಪಸ್‌; ಕೇಂದ್ರಕ್ಕೆ ಛಲವಾದಿ ಪತ್ರ

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

Tamil Nadu braced for torrential rains; 5 flights, 4 trains canceled

Chennai: ಧಾರಾಕಾರ ಮಳೆಗೆ ತಮಿಳುನಾಡು ಹೈರಾಣ; 5 ವಿಮಾನ, 4 ರೈಲುಗಳ ಸಂಚಾರ ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police custody: ಆಹಾರ ಭತ್ತೆ 150 ರೂ.ಗೆ ಹೆಚ್ಚಳ

Police custody: ಆಹಾರ ಭತ್ತೆ 150 ರೂ.ಗೆ ಹೆಚ್ಚಳ

Congress Govt.,: ಹುಬ್ಬಳ್ಳಿ ಕೇಸ್‌ ವಾಪಸ್‌; ಕೇಂದ್ರಕ್ಕೆ ಛಲವಾದಿ ಪತ್ರ

Congress Govt.,: ಹುಬ್ಬಳ್ಳಿ ಕೇಸ್‌ ವಾಪಸ್‌; ಕೇಂದ್ರಕ್ಕೆ ಛಲವಾದಿ ಪತ್ರ

High Court: “ಜೈ ಶ್ರೀರಾಮ್‌’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು

High Court: “ಜೈ ಶ್ರೀರಾಮ್‌’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು

Heavy Rain: ರಾಜ್ಯಾದ್ಯಂತ ಇನ್ನೂ 4 ದಿನ ಭಾರೀ ಮಳೆ: 18 ಜಿಲ್ಲೆಗೆ ಆರೆಂಜ್‌ ಅಲರ್ಟ್‌

Heavy Rain: 19 ಜಿಲ್ಲೆಗಳಲ್ಲಿ ಹಿಂಗಾರು ಮಳೆ ಆರ್ಭಟ: ಓರ್ವ ಸಾವು; ಮೂವರಿಗೆ ಗಾಯ

CM Siddaramaiah: ಡ್ರಗ್ಸ್‌ ನಿಯಂತ್ರಣಕ್ಕೆ ಕಾನೂನಲ್ಲಿ ತಿದ್ದುಪಡಿ ತರಲು ಚಿಂತನೆ

CM Siddaramaiah: ಡ್ರಗ್ಸ್‌ ನಿಯಂತ್ರಣಕ್ಕೆ ಕಾನೂನಲ್ಲಿ ತಿದ್ದುಪಡಿ ತರಲು ಚಿಂತನೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Pramod-Madwaraj

Udupi: ಪ್ರಮೋದ್‌ ಮಧ್ವರಾಜ್‌ ಹುಟ್ಟುಹಬ್ಬ: ಕುಂದಾಪುರದಲ್ಲಿ ಅ.17ಕ್ಕೆ ರಕ್ತದಾನ ಶಿಬಿರ

KOTA

Kota: ಅಚ್ಲಾಡಿ ಶ್ರೀಸಿದ್ಧಿವಿನಾಯಕ ದೇವಸ್ಥಾನ: ನಾಳೆ ನವೀಕೃತ ತೀರ್ಥ ಪುಷ್ಕರಣಿ ಲೋಕಾರ್ಪಣೆ

Udupi: ಗೀತಾರ್ಥ ಚಿಂತನೆ-65: ಪಾಂಡವರಲ್ಲಿದ್ದ ಸಮನ್ವಯ ಕೌರವರಲ್ಲಿಲ್ಲ

Udupi: ಗೀತಾರ್ಥ ಚಿಂತನೆ-65: ಪಾಂಡವರಲ್ಲಿದ್ದ ಸಮನ್ವಯ ಕೌರವರಲ್ಲಿಲ್ಲ

Police custody: ಆಹಾರ ಭತ್ತೆ 150 ರೂ.ಗೆ ಹೆಚ್ಚಳ

Police custody: ಆಹಾರ ಭತ್ತೆ 150 ರೂ.ಗೆ ಹೆಚ್ಚಳ

Congress Govt.,: ಹುಬ್ಬಳ್ಳಿ ಕೇಸ್‌ ವಾಪಸ್‌; ಕೇಂದ್ರಕ್ಕೆ ಛಲವಾದಿ ಪತ್ರ

Congress Govt.,: ಹುಬ್ಬಳ್ಳಿ ಕೇಸ್‌ ವಾಪಸ್‌; ಕೇಂದ್ರಕ್ಕೆ ಛಲವಾದಿ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.