Ramalinga Reddy: ಸುಮಲತಾ, ಸಿ.ಟಿ.ರವಿ ಸಹ ಕೇಸ್‌ ವಾಪಸ್‌ ಫ‌ಲಾನುಭವಿಗಳು

ಬಿಜೆಪಿ ಅವಧಿಯಲ್ಲಿ 385 ಪ್ರಕರಣಗಳ ವಾಪಸ್‌

Team Udayavani, Oct 16, 2024, 6:45 AM IST

Ramalinga Reddy: ಸುಮಲತಾ, ಸಿ.ಟಿ.ರವಿ ಸಹ ಕೇಸ್‌ ವಾಪಸ್‌ ಫ‌ಲಾನುಭವಿಗಳು

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ಪಡೆದಿರುವುದನ್ನು ಸಮರ್ಥಿಸಿಕೊಂಡ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಬಿಜೆಪಿ ತನ್ನ ಆಡಳಿತಾವಧಿಯಲ್ಲಿ ಕೋಮುದ್ವೇಷ ಸೇರಿ 182 ಗಂಭೀರ ಪ್ರಕರಣಗಳನ್ನು ವಾಪಸ್‌ ಪಡೆದಿತ್ತು. ಮಾಜಿ ಸಂಸದೆ ಸುಮಲತಾ ಅಂಬರೀಶ್‌, ಸಿ.ಟಿ. ರವಿ ಸೇರಿದಂತೆ ಹಲವರು ಇದರ ಫ‌ಲಾನುಭವಿಗಳಾಗಿದ್ದಾರೆ ಎಂದು ತಿರುಗೇಟು ನೀಡಿದರು.

ಇತ್ತೀಚೆಗೆ ನಡೆದ ಸಚಿವ ಸಂಪುಟದಲ್ಲಿ 43 ಪ್ರಕರಣಗಳನ್ನು ವಾಪಸ್‌ ಪಡೆಯಲಾಗಿದೆ. ಇದರಲ್ಲಿ ಹಳೇಹುಬ್ಬಳ್ಳಿ ಪ್ರಕರಣವೂ ಒಂದಾಗಿದೆ. ಆದರೆ, ಬಿಜೆಪಿಯವರು ಸತ್ಯಹರಿಶ್ಚಂದ್ರರಂತೆ ಬಿಂಬಿಸಿಕೊಳ್ಳುತ್ತಿದ್ದಾರೆ.ಅವರ ಅಧಿಕಾರವಧಿಯಲ್ಲಿ ಒಟ್ಟಾರೆ 385 ಪ್ರಕರಣಗಳನ್ನು ಹಿಂಪಡೆದಿದ್ದು, ಅದರಲ್ಲಿ 182 ಪ್ರಕರಣಗಳು ಕೋಮುದ್ವೇಷ, ಅನೈತಿಕ ಪೊಲೀಸ್‌ಗಿರಿ, ಪಬ್‌ ದಾಳಿಯಂತಹ ಗಂಭೀರ ಪ್ರಕರಣಗಳೂ ಸೇರಿವೆ. ಇದರಿಂದ 2 ಸಾವಿರಕ್ಕೂ ಅಧಿಕ ಆರೋಪಿಗಳ ಮೇಲಿನ ಪ್ರಕರಣಗಳು ಇಲ್ಲವಾಗಿವೆ. ರಮೇಶ್‌ ಜಾರಕಿಹೊಳಿ, ಸಿ.ಟಿ. ರವಿ, ಸುಮಲತಾ ಅಂಬರೀಶ್‌, ಪ್ರತಾಪ್‌ಸಿಂಹ, ಜೆ.ಸಿ. ಮಾಧುಸ್ವಾಮಿ ಮತ್ತಿತರರು ಅದರ ಫ‌ಲಾನುಭವಿಗಳಾಗಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಹೆಣ ಬಿದ್ದರೆ ಸಾಕು, ಬಿಜೆಪಿಯವರು ರಣಹದ್ದುಗಳಂತೆ ಕಾಯುತ್ತಿರುತ್ತಾರೆ. ಹೆಣದ ಮೇಲಿನ ರಾಜಕೀಯದ ಬಗ್ಗೆ ಪುಸ್ತಕವಿದ್ದು ಅದನ್ನು ಮತ್ತೂಮ್ಮೆ ಮುದ್ರಿಸಲಾಗುವುದು. ಬಿಜೆಪಿ ಅವಧಿಯಲ್ಲಿ ಕೇಸ್‌ ಹಿಂಪಡೆದಿದ್ದರಿಂದ ಲಾಭ ಪಡೆದವರ ಪಟ್ಟಿಯಲ್ಲಿ ಶ್ರೀರಾಮ ಸೇನೆ, ಭಜರಂಗದಳ, ಹಿಂದೂ ಜಾಗರ ವೇದಿಕೆ ಸದಸ್ಯರೂ ಪಡೆದಿದ್ದಾರೆ. 2018 ರಿಂದ 2020ನೇ ಸಾಲಿನಲ್ಲಿ 127 ಕೇಸ್‌ಗಳನ್ನು ಬಿಜೆಪಿ ಹಿಂಪಡೆದಿದೆ. ಇದರ ಫ‌ಲಾನುಭವಿಗಳು ಪಿಎಫ್ಐ, ಎಸ್‌ಡಿಪಿಐ ಕೂಡ ಆಗಿವೆ ಎಂದು ದೂರಿದರು.

ಕ್ರಿಮಿನಲ್‌ ಪ್ರಕ್ರಿಯೆ ಸಂಹಿತೆ ಕಲಂ 321ರಡಿ ರಾಜ್ಯದ ಯಾವುದೇ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದ್ದರೂ, ವಾಪಸ್‌ ಪಡೆಯುವ ಅಧಿಕಾರ ದೇಶದ ಎಲ್ಲ ರಾಜ್ಯ ಸರ್ಕಾರಗಳಿಗಿದೆ. ಗೃಹ ಇಲಾಖೆಗೆ ಕೇಸ್‌ಗೆ ಸಂಬಂಧ ಪಟ್ಟವರು ವಾಪಸ್‌ ಪಡೆಯಬೇಕು ಎಂದು ಮನವಿ ಸಲ್ಲಿಸಿರುತ್ತಾರೆ. ಇದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಅನೇಕ ಬಾರಿ ದುರುದ್ದೇಶಪೂರಿತವಾಗಿ ಕೇಸ್‌ ದಾಖಲಿಸಲಾಗಿರುತ್ತದೆ. ರೈತರ ಪರ, ಭಾಷೆ, ಜಲವಿವಾದ ಸೇರಿದಂತೆ ಅನೇಕ ಸಂಘಟನೆಗಳು ಹೋರಾಟ ನಡೆಸಿರುತ್ತವೆ ಎಂದು ಹಿಂಪಡೆದಿದ್ದಕ್ಕೆ ಸಮಜಾಯಿಷಿ ನೀಡಿದರು.

ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್‌ ಬಾಬು ಮಾತನಾಡಿ, ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆಯುವಂತೆ ದಲಿತ ಸಂಘಟನೆಗಳ ಒಕ್ಕೂಟದ ಡಿ.ಬಿ. ಚಲವಾದಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಕೊಟ್ಟ ಆಧಾರದ ಮೇಲೆ ಅದನ್ನು ಗೃಹ ಇಲಾಖೆಗೆ ಕಳುಹಿಸಲಾಗಿತ್ತು. ಅವರು ಉಪ ಸಮಿತಿಗೆ ಕಳುಹಿಸಿದ್ದರು, ಈ ಸಮಿತಿಯ ವರದಿ ಅಧಾರದ ಮೇಲೆ ಕೇಸ್‌ ನಂಬರ್‌ 63/ 2022 ಹಳೇಹುಬ್ಬಳ್ಳಿ ಪ್ರಕರಣ ಹಿಂಪಡೆಯಲಾಗಿದೆ. ಸಾರ್ವಜನಿಕ ಹಿತಾಸಕ್ತಿಯನ್ನು ಗಮನಿಸಿ ಕೇಸ್‌ ವಾಪಸ್‌ ಪಡೆಯಲು ಅವಕಾಶವಿದೆ ಎಂದು ಸಮರ್ಥಿಸಿಕೊಂಡರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ನಾರಾಯಣಸ್ವಾಮಿ, ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ ಅಧ್ಯಕ್ಷ ಎಸ್‌. ಮನೋಹರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

15(1)

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

9-sagara

Sagara: ನಗರ ವ್ಯಾಪ್ತಿಯ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ; ಬೇಳೂರು ಸೂಚನೆ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

15(1)

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

9-sagara

Sagara: ನಗರ ವ್ಯಾಪ್ತಿಯ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ; ಬೇಳೂರು ಸೂಚನೆ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.