Election: ಮಹಾರಾಷ್ಟ್ರದಲ್ಲಿ 20 ಕಾಂಗ್ರೆಸ್ ಶಾಸಕರಿಗೆ ಟಿಕೆಟ್ ಕೈ ತಪ್ಪುವ ಭೀತಿ
Team Udayavani, Oct 16, 2024, 7:33 AM IST
ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಕನಿಷ್ಠ 10 ಶಾಸಕರಿಗೆ ಕಾಂಗ್ರೆಸ್ ಪಕ್ಷದ ಟಿಕೆಟ್ ತಪ್ಪುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಪಕ್ಷದ ಆಂತರಿಕ ಸಮೀಕ್ಷೆಯಲ್ಲಿ ಹಾಲಿ ಶಾಸಕರ ವಿರುದ್ಧ ಆಡಳಿತ ವಿರೋಧಿ ಅಲೆ ಇರುವುದು ಗೊತ್ತಾಗಿದೆ. ಹೀಗಾಗಿ, ಟಿಕೆಟ್ ತಪ್ಪುವ ಸಾಧ್ಯತೆಗಳಿವೆ. ಟಿಕೆಟ್ ವಂಚಿತರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಹೈಕಮಾಂಡ್ನ ಈ ನಿರ್ಧಾರವು ಪಕ್ಷದೊಳಗೇ ಬಂಡಾಯಕ್ಕೂ ಕಾರಣವಾಗಬಹುದು. ಆಡಳಿತ ವಿರೋಧಿ ಅಲೆಯನ್ನು ತಪ್ಪಿಸುವುದಕ್ಕಾಗಿ ಹಳಬರ ಜಾಗದಲ್ಲಿ ಹೊಸಬರಿಗೆ ಟಿಕೆಟ್ ನೀಡುವ ಪ್ರಯತ್ನ ಮಾಡಲಾಗುತ್ತಿದೆ ಎನ್ನಲಾಗಿದೆ.
2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ 288 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 44 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಚುನಾವಣೆಯಲ್ಲಿ ಹೆಚ್ಚಿನ ಸಾಧನೆಗೆ ಅವಕಾಶವಿರುವುದನ್ನು ಮನಗಂಡಿರುವ ಪಕ್ಷವು ಹೊಸಬರಿಗೆ ಹೆಚ್ಚಿನ ಅವಕಾಶ ನೀಡಲು ಮುಂದಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Panaji: ಗೋವಾದಲ್ಲಿ ಕಲೆ ಬೆಳೆಸಿದ ವಿಷಯ ತಿಳಿದು ಹೆಮ್ಮೆ ಎನಿಸುತ್ತಿದೆ: ಸತೀಶ್ ಶೆಟ್ಟಿ ಪಟ್ಲ
Panaji: ಹೊರ ರಾಜ್ಯದವರ ಬಗ್ಗೆ ಗೋವಾ ಮುಖ್ಯಮಂತ್ರಿಯಿಂದ ವಿವಾದಾತ್ಮಕ ಹೇಳಿಕೆ: ಆಕ್ಷೇಪ
J&K; ಸಿಎಂ ಆಗಿ ಒಮರ್ ಅಬ್ದುಲ್ಲಾ, ಡಿಸಿಎಂ ಆಗಿ ಸುರೀಂದರ್ ಚೌಧರಿ ಪ್ರಮಾಣ ವಚನ
Ayodhya; ರಾಮ ಮಂದಿರಕ್ಕೆ ಭೇಟಿ ನೀಡಿದ ಇಸ್ರೇಲ್ ರಾಯಭಾರಿ ಅಜರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.