Karkala: ಅಡಿಕೆಯಲ್ಲಿ ಚೆಂಡೆಕೊಳೆ ರೋಗ ಪತ್ತೆ; ರೈತರಿಗೆ ದೊಡ್ಡ ಪ್ರಮಾಣದ ನಷ್ಟ

ಅಡಿಕೆ ಹಾಳೆಯ ಒಳ ಬುಡ ಭಾಗದಲ್ಲಿ ಕಂದು ಬಣ್ಣ ಕಾಣಬಹುದು

Team Udayavani, Oct 16, 2024, 7:55 AM IST

Areca-Chde

ಕಾರ್ಕಳ: ಕಾರ್ಕಳ ತಾಲೂಕಿನ ವಿವಿಧ ಭಾಗಗಳಲ್ಲಿ ಇತ್ತೀಚೆಗೆ ಚೆಂಡೆಕೊಳೆ ರೋಗ (ಕ್ರೋನ್‌ ರೂಟ್‌) ಕಾಣಿಸಿಕೊಂಡಿದೆ. ಬಾಧಿತ ಮರಗಳು ಕ್ರಮೇಣ ಸತ್ತು ಹೋಗುವುದರಿಂದ ರೈತರಿಗೆ ದೊಡ್ಡ ಪ್ರಮಾಣದ ನಷ್ಟವಾಗುತ್ತಿದೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳು ತೋಟಗಳಲ್ಲಿ ಈ ರೋಗ ಲಕ್ಷಣವನ್ನು ದೃಢಪಡಿಸಿದ್ದಾರೆ.

ಅಡಿಕೆ ಕೊಳೆ ರೋಗಕ್ಕೆ ಪೈಟೋಪ್‌ಥೋರ ಮೀಡಿಯೈ (ಕಜyಠಿಟಟಜಠಿಜಟ್ಟಚ ಞಛಿಚಛಜಿಜಿ) ಶಿಲೀಂಧ್ರವೇ ಕಾರಣವಾಗಿದ್ದು, ಹೆಚ್ಚು ಕಾಯಿ ಇರುವ ಮತ್ತು ಹಳೆ ಅಡಿಕೆ ಮರದಲ್ಲಿ ಈ ರೋಗ ಕಂಡು ಬರುತ್ತದೆ. ಈ ರೋಗವು ಆಗಸ್ಟ್‌-ಸೆಪ್ಟಂಬರ್‌ನಲ್ಲಿ ಪ್ರಾರಂಭವಾಗಿ ಡಿಸೆಂಬರ್‌-ಜನವರಿ ವರೆಗೂ ಇರುತ್ತದೆ. ಬಿಸಿಲು-ಮಳೆ, ರಾತ್ರಿಯ ಕಡಿಮೆ ಉಷ್ಣಾಂಶ ಹಾಗೂ ಮಂಜು ಬೀಳುವಿಕೆ ಶಿಲೀಂಧ್ರದ ಬೆಳೆವಣಿಗೆಗೆ ಸಹಕಾರಿ.

ರೋಗ ಲಕ್ಷಣ
ಪ್ರಾರಂಭದ ಲಕ್ಷಣವಾಗಿ ಹಸುರು ಗರಿಗಳು ಜೋತು ಬೀಳುತ್ತವೆ. ಕ್ರಮೇಣ ಹಳದಿ ಬಣ್ಣಕ್ಕೆ ತಿರುಗುತ್ತವೆ. ಸುಳಿ ಗರಿ ತುಂಬಾ ಸಮಯ ಹಸುರಾಗಿ ಉಳಿದು ತದನಂತರ ಒಣಗಿ ಚೆಂಡೆ ಭಾಗ ಕಳಚಿ ಬೀಳುತ್ತದೆ. ಅಡಿಕೆ ಹಾಳೆಯ ಒಳ ಬುಡ ಭಾಗದಲ್ಲಿ ಕಂದು ಬಣ್ಣ ಕಾಣಬಹುದು. ಅಡಿಕೆ ಹಾಳೆಯು ಕಾಂಡಕ್ಕೆ ಅಂಟಿಕೊಳ್ಳುವ ಭಾಗದಲ್ಲಿ ಶಿಲೀಂಧ್ರ ಪ್ರವೇಶಿಸಿ ಕಾಂಡದ ಒಳಭಾಗವನ್ನು ಪೂರ್ಣ ಕೊಳೆಯುವಂತೆ ಮಾಡುತ್ತದೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.


ಈ ರೋಗವನ್ನು ಸಮಗ್ರ ನಿಯಂತ್ರಣ ಕ್ರಮಗಳಿಂದ ನಿರ್ವಹಣೆ ಮಾಡಬಹುದಾಗಿದೆ. ಈ ರೋಗ ಹರಡಲು ಅಸಮರ್ಪಕ ಬೋರ್ಡೊ ಸಿಂಪರಣೆ ಕೂಡ ಒಂದು ಕಾರಣವಾಗಿರಬಹುದು. ಅಡಿಕೆ ಕೊಳೆ ರೋಗ ನಿಯಂತ್ರಣ ಕ್ರಮಗಳನ್ನು ಪೂರ್ಣವಾಗಿ ಅನುಸರಿಸುವ ರೈತರ ತೋಟಗಳಲ್ಲಿ ಈ ರೋಗದ ಬಾಧೆ ಕಡಿಮೆ. ಪ್ರಾರಂಭಿಕ ಹಂತದಲ್ಲಿ ರೋಗ ಬಾಧಿತ ಮರಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಅನುಸರಿಸಿದರೆ ಮರಗಳನ್ನು ಉಳಿಸಿಕೊಳ್ಳಬಹುದಾಗಿದೆ.

ನಿಯಂತ್ರಣಕ್ಕೆ ಸಲಹೆ
* ಮಣ್ಣು ಪರೀಕ್ಷೆ ಆಧಾರದಲ್ಲಿ ಶಿಫಾರಸು ಮಾಡಿದ ಪೋಷಕಾಂಶ ಗಳನ್ನು ನಿಯಮಿತವಾಗಿ ನೀಡುವುದು.

*  ಬೇವಿನ ಹಿಂಡಿ ಹಾಗೂ ಟ್ರೈಕೋಡರ್ಮ್ ಮಿಶ್ರಣವನ್ನು ಮಳೆಗಾಲದ ಪೂರ್ವದಲ್ಲಿ ಅಡಿಕೆ ಮರಗಳಿಗೆ ನೀಡುವುದು.

* ಕೊಳೆರೋಗ ಬಾಧಿತ ಹಿಂಗಾರ ಗಳನ್ನು ಸಂಗ್ರಹಿಸಿ ಸುಡುವುದು.

*  ಚೆಂಡೆ ಕೊಳೆ ಬಾಧೆಯಿಂದ ಸತ್ತ ಮರಗಳನ್ನು ಕತ್ತರಿಸಿ ಸುಡುವುದು.

* ಪ್ರಾರಂಭಿಕ ಹಂತದ ರೋಗ ಲಕ್ಷಣ ಹೊಂದಿರುವ (ಹಸುರು ಗರಿ ಗಳು ಜೋತು ಬೀಳುವುದು) ಮರ ಗಳ ಕುಬೆ ಭಾಗಕ್ಕೆ ಶೇ. 10ರ ಬೋರ್ಡೊ ಪೇಸ್ಟ್‌ ಹಚ್ಚುವುದು ಹಾಗೂ ಸುತ್ತಲಿನ ಮರಗಳ ಕುಬೆ ಭಾಗಕ್ಕೆ ಶೇ. 1ರ ಬೋರ್ಡೊ ಸಿಂಪಡಿಸುವುದು.

* ಪ್ರಾರಂಭಿಕ ಹಂತದ ರೋಗ ಲಕ್ಷಣ ಹೊಂದಿರುವ ಮರಗಳ ಎಲೆಗಳಿಗೆ ಮೆಟಾಲಾಕ್ಸಿಲ್‌ ಶೇ. 35 – 1.50 ಗ್ರಾಂ 1 ಲೀ. ನೀರಿನಲ್ಲಿ ಬೆರೆಸಿ ಸಿಂಪಡಿಸುವುದು. ಸಿಂಪರಣೆ ಮಾಡಿದ ತರುವಾಯು ಕನಿಷ್ಠ 3-4 ಗಂಟೆಗಳ ಬಿಸಿಲು ಅವಶ್ಯ.

* ರೈತರು ನಿಯಮಿತವಾಗಿ ಅಡಿಕೆ ಕೊಳೆ ನಿಯಂತ್ರಣಕ್ಕೆ ಸಿಂಪಡಿಸುವ ಬೋರ್ಡೊ ದ್ರಾವಣವನ್ನು ಮಳೆ ಪ್ರಾರಂಭವಾದ ಬಳಿಕ ಮಾತ್ರ ನೀಡು ವುದಲ್ಲದೆ, ಮಳೆಗಾಲ ಪ್ರಾರಂಭದ ಪೂರ್ವದಲ್ಲಿಯೂ ನೀಡಬೇಕು ಹಾಗೂ 2-3ನೇ ಬಾರಿ ಬೋರ್ಡೊ ಸಿಂಪರಣೆ ಸಮಯದಲ್ಲಿ ಕುಬೆ ಭಾಗಕ್ಕೂ ಸಿಂಪರಣೆ ಮಾಡುವುದು ಸಹಕಾರಿ ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಟಾಪ್ ನ್ಯೂಸ್

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

15(1)

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

10

ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’

10

Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

15(1)

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

9-sagara

Sagara: ನಗರ ವ್ಯಾಪ್ತಿಯ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ; ಬೇಳೂರು ಸೂಚನೆ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.