Davanagere Bandh; ದಾವಣಗೆರೆ ಬಂದ್ ಗೆ ವ್ಯಾಪಕ ಬೆಂಬಲ
60ಕ್ಕೂ ಹೆಚ್ಚು ಸಂಘಟನೆ ಗಳ ಬೆಂಬಲ
Team Udayavani, Oct 16, 2024, 8:18 AM IST
ದಾವಣಗೆರೆ: ದಾವಣಗೆರೆಯ ಯುಬಿಡಿಟಿ ಕಾಲೇಜು ಉಳಿಸಿ… ಎಂದು ಒತ್ತಾಯಿಸಿ ಎಐಡಿಎಸ್ ಒ, ಯುಬಿಡಿಟಿ ಉಳಿಸಿ ಸಮಿತಿ ಹಾಗೂ 60ಕ್ಕೂ ಹೆಚ್ಚು ಸಂಘಟನೆ ಗಳು ಬುಧವಾರ(ಅ16) ಕರೆ ನೀಡಿರುವ ದಾವಣಗೆರೆ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
ಕರ್ನಾಟಕದ ಪ್ರಪ್ರಥಮ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಎಂಬ ಖ್ಯಾತಿಯ ದಾವಣಗೆರೆ ಯುಬಿಡಿಟಿ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಪ್ರಥಮ ಸೆಮಿಸ್ಟರ್ ನಿಂದ ಶೇ. 50 ಪೇಮೆಂಟ್ ಕೋಟಾ ಜಾರಿಗೊಳಿಸುವ ಮೂಲಕ ಸರ್ಕಾರವೇ ಶಿಕ್ಷಣದ ವ್ಯಾಪಾರಕ್ಕಿಳಿದಿದೆ. ಕೂಡಲೇ ಶೇ. 50 ಪೇಮೆಂಟ್ ಕೋಟಾ ರದ್ದುಪಡಿಸುವ ಜತೆಗೆ ಯುಬಿಡಿಟಿಯ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿ ಸಂಘಟನೆ ಎಐಡಿಎಸ್ ಒ, ಯುಬಿಡಿಟಿ ಉಳಿಸಿ ಸಮಿತಿಯೊಟ್ಟಿಗೆ 60ಕ್ಕೂ ಹೆಚ್ಚು ರೈತ, ಕನ್ನಡಪರ, ದಲಿತ, ಮಹಿಳಾ ಸಂಘಟನೆ, ಸಿಪಿಐ, ಸಿಪಿಐ(ಎಂ) ಪಕ್ಷಗಳು, ಹಲವಾರು ಶಿಕ್ಷಣ ಪ್ರೇಮಿಗಳು ದಾವಣಗೆರೆ ಬಂದ್ ಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ.
ಬಂದ್ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ಸಂಘಟನಕಾರರು ಪ್ರಮುಖ ವೃತ್ತ, ರಸ್ತೆ ಇತರೆಡೆ ಸಂಚರಿಸಿ ಬಂದ್ ಗೆ ಕಾರಣ ತಿಳಿಸಿದರು. ಖಾಸಗಿ ಬಸ್ ಇತೆರೆಡೆ ಪ್ರಾರಂಭಿಕ ಹಂತದಲ್ಲಿ ವ್ಯಾಪಕವಾದ ಬೆಂಬಲ ವ್ಯಕ್ತವಾಯಿತು. ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಬಂದೋಬಸ್ತ್ ವ್ಯವಸ್ಥೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ
Belgavi; ಜೈಲಿನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ಕೈದಿ ಸಾ*ವು
Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ
Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.