Madanthyar: ಇಲ್ಲಿ ಎಲ್ಲಿಂದ ಹೋದರೂ ಹೊಂಡಕ್ಕೇ ಬೀಳಬೇಕು!

ಸಂಪೂರ್ಣ ಹದಗೆಟ್ಟ ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆ; ಸಂಚಾರವೇ ಪ್ರಾಣ ಸಂಕಟ; ಅಪೂರ್ಣ ಕಾಮಗಾರಿ; ರಸ್ತೆ ತುಂಬಾ ಹೊಂಡ ಗುಂಡಿ; ಉದುರುವ ವಾಹನ ಬಿಡಿಭಾಗಗಳು

Team Udayavani, Oct 16, 2024, 12:57 PM IST

1(1)

ಮಡಂತ್ಯಾರು: ನಿತ್ಯ ಸಾವಿರಾರು ಮಂದಿ ಸಂಚರಿಸುವ, ಸಾವಿರಾರು ವಾಹನಗಳು ಓಡಾಡುವ ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದೆ. ಅಲ್ಲಲ್ಲಿ ಬೃಹತ್‌ ಗಾತ್ರದ ಗುಂಡಿಗಳು ಸೃಷ್ಟಿಯಾಗಿದ್ದು ಇಲ್ಲಿ ವಾಹನ ಚಲಾಯಿಸುವುದೇ ದುಸ್ತರ ಎನಿಸಿದೆ. ಈ ರಸ್ತೆಯ ಕೆಲವು ಭಾಗಗಳಲ್ಲಿ ಪರಿಸ್ಥಿತಿ ಎಷ್ಟೊಂದು ಭಯಾನಕವಾಗಿದೆ ಎಂದರೆ, ಯಾವ

ಕಡೆಯಿಂದ ಹೋದರೂ ರಸ್ತೆ ಗುಂಡಿಗೆ ಬೀಳಲೇಬೇಕು!
ಗುರುವಾಯನಕೆರೆಯಿಂದ ಕುಪ್ಪೆಟ್ಟಿ (ಉರುವಾಲು) ತನಕ ಅಂದಾಜು 13 ಕಿ.ಮೀ. ದೂರದ ರಸ್ತೆಯುದ್ದಕ್ಕೂ 50ಕ್ಕೂ ಹೆಚ್ಚು ಕಡೆಗಳಲ್ಲಿ ಗುಂಡಿಗಳಿವೆ. ಇಲ್ಲಿನ ರಸ್ತೆಯ ಗುಂಡಿಗಳಿಗೆ ದ್ವಿಚಕ್ರ ವಾಹನ ಸವಾರರು ಬಿದ್ದು ಕೈ, ಕಾಲು, ತಲೆಗೆ ಗಂಭೀರವಾದ ಗಾಯ ಮಾಡಿಕೊಂಡು ಆಸ್ಪತ್ರೆ ಸೇರಿದ ಹಲವು ನಿದರ್ಶನಗಳಿವೆ.

ಗುರುವಾಯನಕೆರೆ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯು ಪುತ್ತೂರು ಮತ್ತು ಬೆಳ್ತಂಗಡಿ ಪಟ್ಟಣಗಳನ್ನು ಬೆಸೆಯುವ ಪ್ರಮುಖ ತಂತುವಾಗಿದೆ. ಮಳೆಗಾಲದ ಸಮಯದಲ್ಲಿ ಮಳೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಯಿಲ್ಲದ ಕಾರಣ, ರಸ್ತೆಯಲ್ಲೇ ನೀರು ಹರಿದು ಹೋಗುತ್ತದೆ. ಈ ಕಾರಣದಿಂದ ರಸ್ತೆಯಲ್ಲಿ ಗುಂಡಿ ಸೃಷ್ಟಿ ಆಗಿದೆ. ಸಾವಿ ರಾರು ವಾಹನಗಳು ಓಡಾಡುವುದರಿಂದ ದಿನದಿಂದ ದಿನಕ್ಕೆ ಗುಂಡಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು,ವಾಹನ ಸವಾರರ ಸಂಕಟ ಮೂಕ ರೋದನವೆನಿಸಿದೆ.

ಕೂಡಲೇ ಈ ರಸ್ತೆಯನ್ನು ದುರಸ್ತಿಗೊಳಿಸಿ ಸಂಚಾರ ಯೋಗ್ಯವಾಗಿ ಮಾಡಬೇಕು, ಪ್ರಾಣಗಳನ್ನು ಉಳಿಸಬೇಕು ಎನ್ನುವ ಆಗ್ರಹವನ್ನು ಜನರು ಮಂಡಿಸುತ್ತಿದ್ದಾರೆ.

ಹಲವು ಸಂಪರ್ಕ ರಸ್ತೆಗಳ ಜೋಡಣೆ
ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ಗ್ರಾಮೀಣ ಭಾಗದಿಂದಲೂ ಸಂಪರ್ಕವಿದೆ. ಹಿಂದಿನ ಸರಕಾರ ಹಾಗೂ ಈಗಿನ ಸರಕಾರದ ಅವಧಿಯಲ್ಲಿ ರಸ್ತೆಗೆ ಮರು ಡಾಮರೀಕರಣ, ಚರಂಡಿ ರಿಪೇರಿ ಮೊದಲಾದ ಯಾವ ಕಾಮಗಾರಿಯೂ ನಡೆದಿಲ್ಲ. ಹೀಗಾಗಿ ರಸ್ತೆ ಈ ಪರಿಯಲ್ಲಿ ಕೆಟ್ಟು ಹೋಗಲು ಕಾರಣವಾಗಿದೆ. ಹೊಂಡ-ಗುಂಡಿಗಳಿಂದ ಕೂಡಿ ಪ್ರಯಾಣಿಕರಿಗೆ ಪ್ರಾಣ ಸಂಕಟವಾಗಿದೆ.

ಎಲ್ಲೆಲ್ಲಿ ಅಪಾಯಕಾರಿ ಸ್ಥಿತಿ?
ಈ ರಸ್ತೆಯು ಬೆಳ್ತಂಗಡಿ ಲೋಕೋಪಯೋಗಿ ಇಲಾಖಾ ವ್ಯಾಪ್ತಿಗೆ ಬರುತ್ತದೆ. ಎರಡು ಪಟ್ಟಣಗಳನ್ನು ಸೇರಿಸುವ ರಸ್ತೆಯಲ್ಲಿ 20 ಕಿ.ಮೀ. ಉದ್ದಕ್ಕೆ ಸರಿಯಾಗಿರುವ ಒಂದರ್ಧ ಕಿ.ಮೀ. ರಸ್ತೆ ಕೂಡಾ ಕಾಣುವುದಿಲ್ಲ.

ಗುರುವಾಯನಕೆರೆ ಪೇಟೆಯಿಂದ ಆರಂಭಗೊಂಡು 1.ಕಿ.ಮೀ. ದೂರದವರೆಗಿನ ಪಣೆಜಾಲು ತನಕವೇ ರಸ್ತೆಯಲ್ಲಿ ಹತ್ತಾರು ಬೃಹತ್‌ ಗುಂಡಿಗಳಿವೆ ಇಡ್ಯ, ರೇಷ್ಮೆ ರೋಡ್‌, ಗೇರುಕಟ್ಟೆ, ಪರಪ್ಪು, ನಾಳ, ಜಾರಿಗೆಬೈಲು, ಗೋವಿಂದೂರು, ಯಂತ್ರಡ್ಕ, ಮಾವಿನಕಟ್ಟೆ, ಹಲೇಜಿ ಮತ್ತು ಕುಪ್ಪೆಟ್ಟಿ ಪೇಟೆಯ ಮುಖ್ಯ ಭಾಗದಲ್ಲಿರುವ ರಸ್ತೆ ಗುಂಡಿಗಳನ್ನು ತಪ್ಪಿಸಲು ಸಾಧ್ಯವೇ ಇಲ್ಲ ಎಂಬಂತಾಗಿದೆ. ಕೆಲವರು ತಪ್ಪಿಸಲು ಹೋಗಿ ಅಪಘಾತಕ್ಕೆ ಒಳಗಾಗಿದ್ದಾರೆ.

– ಇತ್ತೀಚೆಗೆ ಕೆಲವು ಭಾಗದಲ್ಲಿ ಚರಂಡಿ ರಿಪೇರಿ ಕಾಮಗಾರಿ ಪ್ರಾರಂಭಿಸಲಾಗಿತ್ತು. ಆದರೆ ಅದನ್ನು ಅರ್ಧಕ್ಕೆ ನಿಲ್ಲಿಸಲಾಗಿದೆ. ಚರಂಡಿಯ ಹಸಿ ಮಣ್ಣನ್ನು ರಸ್ತೆಯ ಪಕ್ಕದಲ್ಲಿ ಹಾಕಿದ ಪರಿಣಾಮ ಮಳೆಗೆ ಹರಿದು ಮತ್ತಷ್ಟು ಸಮಸ್ಯೆಯಾಗಿದೆ.

ಚರಂಡಿಗೆ ಬಿದ್ದ ವಾಹನ
ಯಂತ್ರಡ್ಕ ಸಮೀಪ ತಿರುವಿನಲ್ಲಿ ರಸ್ತೆಯ ತುಂಬಾ ಕಿರಿದಾಗಿದೆ, ರಸ್ತೆ ಬದಿಯೂ ಕುಸಿದಿದೆ. ಹೀಗಾಗಿ ಇತ್ತೀಚೆಗೆ ಇಲ್ಲಿ ಘನ ವಾಹನವೊಂದು ಚರಂಡಿಗೆ ಬಿದ್ದಿತ್ತು. ಈ ಭಾಗದಲ್ಲಿ ರಸ್ತೆ ಇನ್ನಷ್ಟು ಕುಸಿದು ಬೀಳುವ ಅಪಾಯವಿದ್ದರೂ ಸಂಬಂಧಿಸಿದ ಇಲಾಖೆಯವರು ಯಾವುದೇ ರೀತಿಯ ಸೂಚನೆ ಫಲಕ ಅಥವಾ ಅಪಾಯ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ.

ಖಾಸಗಿಯವರಿಂದ ಚರಂಡಿಗೆ ಕಲ್ಲು!
ಕೆಲವು ಕಡೆ ಸ್ಥಳೀಯರು ಪಂಚಾಯತ್‌ ಮತ್ತು ಲೋಕೋಪಯೋಗಿ ಇಲಾಖೆಯ ನಿಯಮ ಪಾಲಿಸದೆ ರಸ್ತೆಯ ಪಕ್ಕದಲ್ಲಿ ಮನೆ, ಅಂಗಡಿ ಹಾಗೂ ವಸತಿ ಕಟ್ಟಡ ನಿರ್ಮಿಸಿದ್ದಾರೆ. ಈ ಸಂದರ್ಭದಲ್ಲಿ ರಸ್ತೆ ಚರಂಡಿಯನ್ನೇ ಮುಚ್ಚಲಾಗುತ್ತದೆ. ಕೆಲವು ಕಡೆ ಸಣ್ಣ ಗಾತ್ರದ ಮೋರಿಯಿಂದಾಗಿ ನೀರು ಸರಾಗವಾಗಿ ಹರಿಯುತ್ತಿಲ್ಲ. ಇನ್ನು ಕೆಲವು ಕಡೆ ದೊಡ್ಡ ಗಾತ್ರದ ಕಲ್ಲುಗಳನ್ನು, ಕಟ್ಟಡ ನಿರ್ಮಾಣದ ಸಂದರ್ಭದಲ್ಲಿ ಹಾಳಾದ ಸಿಮೆಂಟ್‌, ಟೈಲ್ಸ್‌ ತುಂಡುಗಳನ್ನು ಗೋಣಿ ಚೀಲದಲ್ಲಿ ತುಂಬಿ ರಸ್ತೆ ಗುಂಡಿಗೆ ಹಾಕುತ್ತಾರೆ. ಇದು ಕೂಡಾ ಸಣ್ಣ ವಾಹನಗಳಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

-ಕೆ.ಎನ್‌. ಗೌಡ, ಗೇರುಕಟ್ಟೆ

ಟಾಪ್ ನ್ಯೂಸ್

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Punjalkatte:ಕೊಳಕ್ಕೆಬೈಲ್‌-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ

2

Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ

4-ptr

Puttur: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು

Bantwala-BJp

Council By Poll: ಬಿಜೆಪಿ ಸರಕಾರವಿದ್ದಾಗ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ: ಬಿವೈವಿ

BOJAPPA

Sulya: ದ್ವಿಚಕ್ರ ವಾಹನಗಳ ಢಿಕ್ಕಿ: ಉದ್ಯೋಗಿ ಸಾವು

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

15(1)

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

9-sagara

Sagara: ನಗರ ವ್ಯಾಪ್ತಿಯ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ; ಬೇಳೂರು ಸೂಚನೆ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.