Puttur: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು
ಆಟೋರಿಕ್ಷಾ, ಮಹಿಳಾ ಪ್ರಯಾಣಿಕರು ಸಹಿತ ಜಾನುವಾರು ಪೊಲೀಸ್ ವಶಕ್ಕೆ
Team Udayavani, Oct 16, 2024, 1:08 PM IST
ಪುತ್ತೂರು: ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದುದನ್ನು ಬಜರಂಗದಳ ಕಾರ್ಯಕರ್ತರು ಪತ್ತೆ ಹಚ್ಚಿದ ಘಟನೆ ಪುತ್ತೂರಿನಲ್ಲಿ ಅ.16ರ ಬುಧವಾರ ನಡೆದಿದೆ.
ಪುತ್ತೂರಿನ ಬೈಪಾಸ್ ರಸ್ತೆಯಲ್ಲಿ ಬಜರಂಗದಳದ ಕಾರ್ಯಕರ್ತರು ಆಟೋ ರಿಕ್ಷಾವನ್ನು ತಡೆದು ಗೋವಿನ ರಕ್ಷಣೆ ಮಾಡಿದ್ದಾರೆ.
ಗೋವನ್ನು ಅಕ್ರಮವಾಗಿ ಪುತ್ತೂರು ಬೈಪಾಸ್ ರಸ್ತೆಯ ಮೂಲಕ ವ್ಯಕ್ತಿಯೋರ್ವ ಆಟೋ ರಿಕ್ಷಾದಲ್ಲಿ ಸಾಗಿಸುತ್ತಿರುವುದರ ಕುರಿತು ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಆ ಬಳಿಕ ಜಾನುವಾರು ಸಹಿತ ಆಟೋ ರಿಕ್ಷಾವನ್ನು ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ಆಟೋ ರಿಕ್ಷಾದಲ್ಲಿ ಮಹಿಳೆಯರು ಕೂಡ ಪ್ರಯಾಣಿಸುತ್ತಿದ್ದು, ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Punjalkatte:ಕೊಳಕ್ಕೆಬೈಲ್-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ
Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ
Madanthyar: ಇಲ್ಲಿ ಎಲ್ಲಿಂದ ಹೋದರೂ ಹೊಂಡಕ್ಕೇ ಬೀಳಬೇಕು!
Council By Poll: ಬಿಜೆಪಿ ಸರಕಾರವಿದ್ದಾಗ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ: ಬಿವೈವಿ
Sulya: ದ್ವಿಚಕ್ರ ವಾಹನಗಳ ಢಿಕ್ಕಿ: ಉದ್ಯೋಗಿ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.