BBK11: ಬಿಗ್‌ ಬಾಸ್‌ ಮನೆಯಲ್ಲಿ ಹೊಡೆದಾಟ; ಶೋನಿಂದ ಹೊರಬಿದ್ದ ಜಗದೀಶ್‌ – ರಂಜಿತ್‌?


Team Udayavani, Oct 16, 2024, 1:19 PM IST

8

ಬೆಂಗಳೂರು: ಬಿಗ್‌ ಬಾಸ್‌ ಕನ್ನಡ (Bigg Boss Kannada-11) ದೊಡ್ಮನೆಯಲ್ಲಿ ದೊಡ್ಡ ಜಗಳವೇ ಆಗಿದೆ. ದಿನಕಳೆದಂತೆ ಸ್ಪರ್ಧಿಗಳು ಹೊಡೆದಾಡಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕಾರಣದಿಂದ ಇಬ್ಬರು ಸ್ಪರ್ಧಿಗಳನ್ನು ದೊಡ್ಮನೆಯಿಂದ ಆಚೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ.

ನಿನ್ನೆಯ ಎಪಿಸೋಡ್‌ನಲ್ಲಿ ಜಗದೀಶ್‌ ಅವರ ಮೇಲೆ ಮನೆ ಅವರು ಮುಗಿಬಿದ್ದಿದ್ದರು. ಉಗ್ರಂ ಮಂಜು, ರಂಜಿತ್‌, ಚೈತ್ರಾ ಅವರು ಜಗದೀಶ್‌ ಅವರ ವರ್ತನೆಗೆ ಬೇಸತ್ತು ಅವರೊಂದಿಗೆ ವಾಗ್ವಾದಕ್ಕೆ ಇಳಿದಿದ್ದರು.

ಜಗದೀಶ್‌ ಹೇಳಿದ್ದೇನು?:

ನಾನು ಬಗ್ಗಿದರೆ ಹಿಂದಗಡೆ ನೋಡಿ ಯಾರೋ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡ್ತಾನೆ. ನನ್ನ ಇಮೇಜ್ ಡ್ಯಾಮೇಜ್ ಮಾಡೋಕೆ ನಾನಿಲ್ಲಿ ಬಂದಿಲ್ಲ. ಈಗ ಹೋಗ್ತೇನೆ ನಾನು, ನನಗೆ ಗತಿಯಿಲ್ಲದೆ ಇಲ್ಲಿಗೆ ಬಂದಿಲ್ಲ. ನನಗೆ ಯಾರೋ ಹೇಳ್ತಾನೆ ಮೆಂಟಲ್ ನನ್ಮಗ. ನಾನಿಲ್ಲಿ ಗತಿಯಿಲ್ಲದೆ ಬಂದಿಲ್ಲ. ನನಗೂ ನಾಲ್ಕು ಜನಕ್ಕೆ ಊಟ ಹಾಕೋ ಯೋಗ್ಯತೆ ಇದೆ. ಬಾಗಿಲು ಓಪನ್ ಮಾಡಿ ಈಗಲೇ ಹೊರಗಡೆ ಹೋಗ್ತೇನೆ. ನನ್ನ ಲಗೇಜ್ ಇಲ್ಲೇ ಇರಲಿ ಎಂದು ಜಗದೀಶ್ ಅವರು ತನ್ನ ಬಗ್ಗೆ ಆಡಿಕೊಳ್ಳುವ ಸಹ ಸ್ಪರ್ಧಿಗಳ ಬಗ್ಗೆ ಆಕ್ರೋಶ ಹೊರಹಾಕಿದ್ದರು.

ಜಗದೀಶ್ ಅವರು ಮಂಜು ಅವರ ಮೇಲೆ ಗರಂ ಆಗಿದ್ದಾರೆ. ಕ್ಯಾಮರ ಮುಂದೆ ಕೆಟ್ಟದಾಗಿ ಜಗದೀಶ್ ಮಾತನಾಡಿದ್ದಾರೆ. ತಮ್ಮ ಬಟ್ಟೆಯನ್ನು ಜಗದೀಶ್ ಅವರು ಪ್ಯಾಕ್ ಮಾಡಿರುವುದನ್ನು ತೋರಿಸಲಾಗಿತ್ತು.

ಮಂಜು ಹೇಳಿದ್ದೇನು?

ಇಲ್ಲಿ ವೈಯಕ್ತಿಕವಾಗಿ ಟಾರ್ಗೆಟ್ ಮಾಡೋದಲ್ಲ. ಹಲ್ಕಾ ಮಾತನಾಡೋದಲ್ಲ. ಹೋಗ್ತೇನೆ ಹೋಗ್ತೇನೆ ಅಂಥ ಹೇಳೋದಲ್ಲ. ತಿನ್ನೋ ಊಟಕ್ಕೆ ಗೌರವ ಕೊಡಬೇಕು. ಶೋ ಬಗ್ಗೆ ಇಲ್ಲಸಲ್ಲದ್ದು ಹೇಳೋದಲ್ಲ ಎಂದು ಮಂಜು ಇಲ್ಲಿ ಮುಖಾಮುಖಿಯಾಗಿ ಜಗದೀಶ್ ಗೆ ಹೇಳಿದ್ದಾರೆ.

ಬಿಗ್‌ ಬಾಸ್‌ ಮನೆಯಿಂದ ಜಗದೀಶ್‌ – ರಂಜಿತ್‌ ಔಟ್?:

ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದಾಗ ಬಿಗ್‌ ಬಾಸ್‌ ಎಲ್ಲರನ್ನು ಕೂರಿಸಿ ಸಮಾಧಾನ ಮಾಡಲು ಯತ್ನಿಸಿದ್ದರು. ಆದರೆ ಮತ್ತೆ ಜಗದೀಶ್‌ – ರಂಜಿತ್‌ ನಡುವೆ ವಾಗ್ವಾದ ಶುರುವಾಗಿದ್ದು, ಇಬ್ಬರು ಹೊಡೆದಾಡಿಕೊಳ್ಳುವವರೆಗೂ ಇದು ಹೋಗಿದೆ ಎನ್ನಲಾಗಿದೆ. ಇದೇ ಕಾರಣದಿಂದ ದೊಡ್ಮನೆಯಿಂದ ಜಗದೀಶ್‌ ಹಾಗೂ ರಂಜಿತ್‌ ಅವರನ್ನು ಹೊರ ಕಳುಹಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಮಾನಸ ಅವರ ವಿಚಾರದಲ್ಲಿ ಜಗದೀಶ್‌ ಅವರು ಮಧ್ಯ ಮಾತನಾಡಿದ ಸಂದರ್ಭದಲ್ಲಿ ರಂಜಿತ್‌, ಜಗದೀಶ್‌ ನಡುವೆ ಮಾತಿನ ಚಕಮಕಿ ನಡೆದಿದೆ. ಇದು ಹಲ್ಲೆ ಮಾಡುವವರೆಗೂ ಹೋಗಿದೆ. ಇಬ್ಬರು ಈ ಸಂದರ್ಭದಲ್ಲಿ ಹೊಡೆದಾಡಿಕೊಂಡಿದ್ದು, ನಿಯಮದ ಉಲ್ಲಂಘನೆ ಆದ ಕಾರಣ ಇಬ್ಬರನ್ನೂ ಮನೆಯಿಂದ ಆಚೆ ಕಳುಹಿಸಲಾಗಿದೆ ಎನ್ನಲಾಗುತ್ತಿದೆ.

ಈ ನಡುವೆ ಜಗದೀಶ್‌ ಅವರು ಮನೆಯಿಂದ ಆಚೆ ಬಂದು, ತೆಗೆದುಕೊಂಡಿರುವ ಫೋಟೋವೊಂದು ವೈರಲ್‌ ಆಗುತ್ತಿದೆ. ಇನ್ನೊಂದು ಕಡೆ ರಂಜಿತ್‌ ಅವರಿಗೆ ಎಚ್ಚರಿಕೆ ನೀಡಲಾಗಿದೆ ಎನ್ನಲಾಗಿದ್ದು, ಅವರು ಮನೆಯಿಂದ ಆಚೆ ಬಂದಿಲ್ಲ ಎನ್ನಲಾಗುತ್ತಿದೆ. ಯಾವುದಕ್ಕೂ ವಾಹಿನಿಯಿಂದಲೇ ಅಧಿಕೃತ ವಿಚಾರ ತಿಳಿದುಬರಬೇಕಿದೆ.

ಹುಚ್ಚ ವೆಂಕಟ್‌ ಹಲ್ಲೆ ಘಟನೆ: ಬಿಗ್‌ ಬಾಸ್‌ ಮನೆಯಲ್ಲಿ ಹಲ್ಲೆ ಮಾಡಿದ ಪ್ರಕರಣ ಈ ಹಿಂದೆಯೂ ನಡೆದಿತ್ತು. ಬಿಗ್ ಬಾಸ್‌ ಕನ್ನಡ ಸೀಸನ್ 3ರಲ್ಲಿ ಸಹ ಸ್ಪರ್ಧಿಯ ಮೇಲೆ ಹಲ್ಲೆ ಮಾಡಿದ್ದ ಕಾರಣಕ್ಕೆ ಹುಚ್ಚ ವೆಂಕಟ್ ಶೋನಿಂದ ಆಚೆ ಬಂದಿದ್ದರು. ಇದಾದ ಬಳಿಕ ಬಿಗ್ ಬಾಸ್ ಕನ್ನಡ ಸೀಸನ್ 4ರಲ್ಲಿಯೂ ಅವರನ್ನು ಮನೆಯೊಳಗೆ ಕಳುಹಿಸಲಾಗಿತ್ತು. ಜೊತೆಗೆ ಬೌನ್ಸರ್‌ಗಳೂ ಇದ್ದರು. ಆಗಲೂ ಅಲ್ಲಿದ್ದ ಪ್ರಥಮ್ ಮೇಲೆ ಹಲ್ಲೆ ವೆಂಕಟ್‌ ಹಲ್ಲೆ ಮಾಡಿದ್ದರು.

ಟಾಪ್ ನ್ಯೂಸ್

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

ಹುಚ್ಚ ವೆಂಕಟ್‌ To ಸಂಯುಕ್ತಾ.. ಬಿಗ್‌ಬಾಸ್‌ನಲ್ಲಿ ಕಿರಿಕ್‌ ಮಾಡಿ ಹೊರಬಂದ ಸ್ಪರ್ಧಿಗಳಿವರು

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

Bigg Boss: ವಾರದ ಮಧ್ಯದಲ್ಲೇ ಬಿಗ್‌ ಬಾಸ್‌ನಿಂದ ಎಲಿಮಿನೇಟ್‌ ಆದ ವೀಕ್ಷಕರ ಮೆಚ್ಚಿನ ಸ್ಪರ್ಧಿ

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

BBK11: ಏನೋ ಕಿತ್ತುಕೊಳ್ತೀಯಾ.. ಜಗದೀಶ್ ಮೇಲೆ‌‌ ಮುಗಿಬಿದ್ದ ಬಿಗ್ ಬಾಸ್ ಸಹ ಸ್ಪರ್ಧಿಗಳು..

4-biggboss

BBK11: ಅಪ್ಪನಿಗೆ ಹುಟ್ಟಿದ್ರೆ ಎದುರುಗಡೆ ನಿಂತು ಮಾತನಾಡಲಿ: ಜಗದೀಶ್ ಗೆ ಚೈತ್ರಾ ಸವಾಲು

11

BBK11: ಬಿಗ್‌ಬಾಸ್‌ಗೆ ಕಿಚ್ಚ ವಿದಾಯ.. ಟ್ವೀಟ್‌ ಮಾಡಿ ಎಲ್ಲ ಗೊಂದಲಕ್ಕೆ ತೆರೆ ಎಳೆದ ಸುದೀಪ್

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

10-udupi

Udupi: ಪಟಾಕಿ ಅಕ್ರಮ ದಾಸ್ತಾನು ; ಪಟಾಕಿ ಪೊಲೀಸ್‌ ವಶಕ್ಕೆ

15(1)

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

9-sagara

Sagara: ನಗರ ವ್ಯಾಪ್ತಿಯ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ; ಬೇಳೂರು ಸೂಚನೆ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

ಎಳನೀರು: ಮೊದಲ ಬಾರಿ ರೈತರಿಗೆ ಬಂಪರ್‌ ದರ-36ರೂ.ಗೆ ಬೆಳೆಗಾರರಿಂದ ಖರೀದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.