Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ


Team Udayavani, Oct 16, 2024, 1:16 PM IST

2

ಮಲವಂತಿಗೆ ಗ್ರಾಮದ ದಿಡುಪೆ ಕೆಮ್ಮಟೆ ದರ್ಕಾಸು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ದಿಡುಪೆ ದರ್ಕಾಸು ಸಾಗುವ ರಸ್ತೆಯ ಕೆಮ್ಮಟೆ ಸಮೀಪ ಶಾಶ್ವತ ಕಾಲುಸಂಕ ವಿಲ್ಲದೆ ಅಡಿಕೆ ಪಾಲದಲ್ಲಿ ಓಡಾಡುತ್ತಿದ್ದ ಕುರಿತು ‘ಉದಯವಾಣಿ ಸುದಿನ ವರದಿ’ ಆಲಿಸಿದ ಬೆಳ್ತಂಗಡಿ ರೋಟರಿ ತಂಡವು ಕಾಲುಸಂಕ ನಿರ್ಮಾಣದ ಭರವಸೆಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಅಂದಾಜು ವೆಚ್ಚದ ಕುರಿತು ವರದಿ ಸಿದ್ಧಪಡಿಸಿದೆ.

ಬೆಳ್ತಂಗಡಿ ಗ್ರಾಮದ ಅಂಚಿನಲ್ಲಿರುವ ಮಲವಂತಿಗೆ ಗ್ರಾಮದ ದಿಡುಪೆ ಐದು ಸೆಂಡ್ಸ್‌ ಮಾರ್ಗವಾಗಿ ದರ್ಕಾಸು ಕೆಮ್ಮಟೆ ಸಾಗುವಲ್ಲಿ ಹಿಂದೆ ನಂದಿಕಾಡು ಹೊಳೆಗೆ ಅಡ್ಡಲಾಗಿ ಕಿರು ಸೇತುವೆಯೊಂದು ಮಂಡಲ ಪಂಚಾಯತ್‌ ಅವಧಿಯಲ್ಲಿ ನಿರ್ಮಾಣವಾಗಿತ್ತು. ಆದರೆ 2019ರ ನೆರೆ ಅದನ್ನು ಕೊಚ್ಚಿ ತನ್ನ ಪಾಲಾಗಿಸಿತ್ತು. ಬಳಿಕ ದಿನನಿತ್ಯದ ಓಡಾಟಕ್ಕೆ ಅಡಿಕೆ ಪಾಲದ ಕಾಲುಸಂಕ ರಚಿಸಿ ದಿನ ಸಾಗಿಸುತ್ತಿದ್ದರು. ಈ ಕುರಿತು ‘ಉದಯವಾಣಿ ಸುದಿನ’ ಸ್ಥಳೀಯರ ಸಮಸ್ಯೆ ಬಗ್ಗೆ ವರದಿ ಬಿತ್ತರಿಸಿತ್ತು.

ಸೇವೆಯಲ್ಲಿ ಸದಾ ಮುಂದು, ಸಮಾಜಕ್ಕಾಗಿ ಸದಾ ತುಡಿಯುವ ರೋಟರಿ ಸೇವಾ ಸಂಸ್ಥೆಯು ವರದಿ ಓದಿ ಇನ್ನಿತರ ಸಂಘ ಸಂಸ್ಥೆಯೊಂದಿಗೆ ಜತೆಗೂಡಿ ಇದೇ ಮೊದಲಬಾರಿಗೆ ರೋಟರಿ ಅಧ್ಯಕ್ಷ ಪೂರನ್‌ ವರ್ಮಾ ಅವರ ಮುತುವರ್ಜಿಯೊಂದಿಗೆ ಕಾಲು ಸಂಕ ನಿರ್ಮಾಣದತ್ತ ಚಿಂತಿಸಿದೆ. ಈ ಸಲುವಾಗಿ ಸ್ಥಳಕ್ಕೆ ಭೇಟಿ ನೀಡಿ, ಸ್ಥಳೀಯರಿಂದ ಮಾಹಿತಿ ಪಡೆದು ವರದಿ ಪಡೆದಿದ್ದು, ಮುಂದೆ ಎಂಜಿನಿಯರ್‌ಗಳ ತಂಡವು ಅಂದಾಜು ವೆಚ್ಚದ ಬಗ್ಗೆ ಪಟ್ಟಿ ಸಿದ್ಧಪಡಿಸಿ ಅನುದಾನ ಹೊಂದಿಸಲು ಮುಂದಾಗಿದೆ.

ಈ ಪ್ರದೇಶದಲ್ಲಿ 15ರಿಂದ 20 ಮನೆಗಳಿವೆ. ಇಲ್ಲಿನ 10ಕ್ಕೂ ಅಧಿಕ ಅಂಗನವಾಡಿ ಮಕ್ಕಳು, ಅಂಗವಿಕಲರು, ವೃದ್ಧರು ಇದೇ ಕಾಲು ಸಂಕ ಅನುಸರಿಸಬೇಕಿದೆ. ಸುಮಾರು 20 ಅಡಿ ಉದ್ದ, 15 ರಿಂದ 20 ಅಡಿ ಆಳವಿರುವ ಈ ಕಾಲು ಸಂಕದಲ್ಲೇ ಅಗತ್ಯ ಕಾರ್ಯಗಳಿಗೆ ದಿಡುಪೆಗೆ ಓಡಾಡ ಬೇಕಾಗಿರುವುದರಿಂದ ಕಾಲುಸಂಕ ಅಗತ್ಯವಾಗಿದೆ.

ಟಾಪ್ ನ್ಯೂಸ್

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

Nigeria: ತೈಲ ಟ್ಯಾಂಕರ್‌ ಸ್ಫೋಟ-ನೂರು ಮಂದಿ ಸಜೀವ ದಹನ, 50 ಜನರಿಗೆ ಗಾಯ

1-s-j

SCO Summit; ಉಗ್ರವಾದದ ವಿರುದ್ಧ ಪಾಕಿಸ್ಥಾನದಲ್ಲೇ ಸ್ಪಷ್ಟ ಸಂದೇಶ ನೀಡಿದ ಎಸ್. ಜೈಶಂಕರ್

1-yekanath

Maharashtra Poll; ”ತ್ಯಾಗ” ಮಾಡಲು ಸಿದ್ಧರಾಗಬೇಕು.. ಶಿಂಧೆಗೆ ಬಿಜೆಪಿ ಸ್ಪಷ್ಟ ಸಂದೇಶ!

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Sagara: ತಾಯಿ ಮಗು ಆಸ್ಪತ್ರೆ ಹೈಟೆಕ್ ಮಾಡಲು ಅಗತ್ಯ ಕ್ರಮ; ಬೇಳೂರು

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Punjalkatte:ಕೊಳಕ್ಕೆಬೈಲ್‌-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ

4-ptr

Puttur: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು

1(1)

Madanthyar: ಇಲ್ಲಿ ಎಲ್ಲಿಂದ ಹೋದರೂ ಹೊಂಡಕ್ಕೇ ಬೀಳಬೇಕು!

Bantwala-BJp

Council By Poll: ಬಿಜೆಪಿ ಸರಕಾರವಿದ್ದಾಗ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅನುದಾನ: ಬಿವೈವಿ

BOJAPPA

Sulya: ದ್ವಿಚಕ್ರ ವಾಹನಗಳ ಢಿಕ್ಕಿ: ಉದ್ಯೋಗಿ ಸಾವು

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

11-

Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

15(1)

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

9-sagara

Sagara: ನಗರ ವ್ಯಾಪ್ತಿಯ ಸಮರೋಪಾದಿಯಲ್ಲಿ ಸ್ವಚ್ಛತಾ ಕಾರ್ಯ; ಬೇಳೂರು ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.