Gangolli: ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿದ ಯುವಕರು

'ನಮ್ಮ ಊರು ನಮ್ಮ ರಸ್ತೆ' ಅಭಿಯಾನ

Team Udayavani, Oct 16, 2024, 3:40 PM IST

10

ತ್ರಾಸಿ- ಗಂಗೊಳ್ಳಿ ಮುಖ್ಯ ರಸ್ತೆ ಗುಂಡಿ ಮುಚ್ಚಿರುವುದು.

ಗಂಗೊಳ್ಳಿ: ತ್ರಾಸಿಯಿಂದ ಗುಜ್ಜಾಡಿ – ಗಂಗೊಳ್ಳಿಗೆ ಸಂಪರ್ಕಿಸುವ ರಸ್ತೆಯ ಅಲ್ಲಲ್ಲಿ ಅನೇಕ ಕಡೆಗಳಲ್ಲಿ ಹೊಂಡ-ಗುಂಡಿಮಯವಾಗಿದ್ದು, ಇದನ್ನು ಸರಿಪಡಿಸುವಂತೆ ಅನೇಕ ದಿನಗಳಿಂದ ಗ್ರಾಮಸ್ಥರು ಒತ್ತಾಯಿಸುತ್ತಿದ್ದರೂ, ಆಳುವ ವರ್ಗ ಈ ಬಗ್ಗೆ ಗಮನವೇ ಕೊಟ್ಟಿರಲಿಲ್ಲ. ಇದರಿಂದ ಬೇಸತ್ತ ಸಮಾನ ಮನಸ್ಕ ಯುವಕರ ತಂಡವೊಂದು ‘ನಮ್ಮ ಊರು ನಮ್ಮ ರಸ್ತೆ’ ಅಭಿಯಾನದ ಮೂಲಕ ಈ ರಸ್ತೆಯಲ್ಲಿನ ಹೊಂಡ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಿದ್ದು, ಈಗ ಎಲ್ಲರ ಗಮನ ಸೆಳೆದು ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಪ್ರತಿನಿತ್ಯ ವಾಹನ ಸಂಚಾರಕ್ಕೆ ತೊಂದರೆ ಯಾಗುತ್ತಿರುವುದಲ್ಲದೆ, ಅನೇಕ ರಸ್ತೆ ಅಪಘಾತಗಳಿಗೆ ಕಾರಣವಾಗಿದೆ. ಪ್ರತಿನಿತ್ಯ ಗಂಗೊಳ್ಳಿ ಮೀನುಗಾರಿಕಾ ಬಂದರು, ಶಾಲಾ ಕಾಲೇಜುಗಳು, ಆರೋಗ್ಯ ಕೇಂದ್ರಗಳಿಗೆ ಸಾವಿರಾರು ಜನರು ಈ ರಸ್ತೆಯ ತುಂಬಾ ಬೃಹತ್‌ ಗಾತ್ರದ ಹೊಂಡ ಗುಂಡಿಗಳೇ ಕಾಣುತ್ತಿತ್ತು.

ಇದರಿಂದ ಬೇಸತ್ತ ಗುಜ್ಜಾಡಿ ಗ್ರಾಮದ ಸಮಾನ ಮನಸ್ಕ ಯುವಕರ ತಂಡ ಈಗ ಹೊಂಡ ಗುಂಡಿಗಳನ್ನು ಮುಚ್ಚಿ, ರಸ್ತೆಯಲ್ಲಿ ಬಿದ್ದಿರುವ ಹೊಂಡ ಗುಂಡಿಗಳಿಂದ ಜನರಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನ ಸೆಳೆದಿದ್ದರು. ‘ಉದಯವಾಣಿ ಸುದಿನ’ವು ತ್ರಾಸಿ-ಗಂಗೊಳ್ಳಿ ಮುಖ್ಯರಸ್ತೆ ಅವ್ಯವಸ್ಥೆ ಬಗ್ಗೆ ಸಚಿತ್ರ ವರದಿ ಪ್ರಕಟಿಸಿತ್ತು.

ಇದರಿಂದ ಎಚ್ಚೆತ್ತುಕೊಂಡು ಪಿಡಬ್ಲ್ಯೂಡಿ ಇಲಾಖೆ ಸಹಾಯಕ ಎಂಜಿನಿಯರ್‌ ರಾಮಣ್ಣ ಗೌಡ, ಹಾಗೂ ಎಇ ಮಹಾಬಲ ನಾಯ್ಕ ಹಾಗೂ ವರ್ಕ್‌ ಎಂಜಿನಿಯರ್‌ ಮೂರ್ತಿ ಎಂಬುವರು ಎರಡು ಬಾರಿ ತ್ರಾಸಿ-ಗಂಗೊಳ್ಳಿ ಮುಖ್ಯ ರಸ್ತೆಯ ಹಾನಿಗೊಳಗಾದ ಭಾಗಗಳಿಗೆ ಭೇಟಿ ನೀಡಿ ರಸ್ತೆ ದುರಸ್ತಿಪಡಿಸುವ ಭರವಸೆ ನೀಡಿದ್ದರು. ಆದರೆ ತಿಂಗಳು ಕಳೆದರೂ ಹೊಂಡ ಗುಂಡಿ ಮುಚ್ಚುವ ಯಾವುದೇ ಕೆಲಸ ಆಗಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನ ಕೊಡದ ಕಾರಣ ಸ್ಥಳೀಯ ಸಮಾನ ಮನಸ್ಕರು ತಂಡದ ಸದಸ್ಯರು ‘ನಮ್ಮ ಊರು ನಮ್ಮ ರಸ್ತೆ’ ಎಂಬ ಅಭಿಯಾನಕ್ಕೆ ಮುಂದಾಗಿದ್ದಾರೆ.

ಈಗಾಗಲೇ ನಾಯಕವಾಡಿಯಿಂದ ಗುಜ್ಜಾಡಿ ಯವರೆಗಿನ ಮುಖ್ಯರಸ್ತೆಯ ಹೊಂಡಗಳಿಗೆ ಹೆಂಚಿನ ಹುಡಿಯನ್ನು ಹಾಕಿ ಹೊಂಡ ಮುಚ್ಚುವ ಮೂಲಕ ಎಲ್ಲರ ಗಮನ ಸೆಳೆದಿದ್ದು, ಆಡಳಿತ ವ್ಯವಸ್ಥೆಯ ನಿರ್ಲಕ್ಷ್ಯಕ್ಕೆ ಸೆಡ್ಡು ಹೊಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಟಾಪ್ ನ್ಯೂಸ್

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್

Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್‌ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-udupi

Udupi: ಅಕ್ರಮ ಪಟಾಕಿ ದಾಸ್ತಾನು; ಪೊಲೀಸ್‌ ವಶಕ್ಕೆ

mgm

Manipal: ಎಂಜಿಎಂ ಚಿಟ್ಟೆ ಪಾರ್ಕ್‌ನಲ್ಲಿ ಬಣ್ಣ ಬಣ್ಣದ ಚಿಟ್ಟೆಗಳು

14

Malpe: ಸಿಎನ್‌ಜಿ ಕೊರತೆ; ರಿಕ್ಷಾ ಚಾಲಕರಿಗೆ ಚಿಂತೆ

10

ಅ.22ರಂದು ಉಡುಪಿ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ‘ರಜತ ಕ್ರೀಡಾ ಸಂಭ್ರಮ’

9(1)

Trasi-ಮರವಂತೆ ಬೀಚ್‌: ವಾಟರ್‌ ಗೇಮ್ಸ್‌ ಬೋಟಿಂಗ್‌ ಮತ್ತೆ ಆರಂಭ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

15

Ellige Payana Yaavudo Daari Movie: ಟ್ರೇಲರ್‌ನಲ್ಲಿ ಅಭಿಮನ್ಯು ಪಯಣ

14

BBK11: ಗಲಾಟೆ ಭರದಲ್ಲಿ ಮಂಜುಗೆ ಕಿಸ್‌ ಮಾಡಿದ್ರಾ ಜಗದೀಶ್?‌ ಏನಿದು ವೈರಲ್‌ ವಿಡಿಯೋ?

Cavery-Water

Drinking Water: ಕಾವೇರಿ 6ನೇ ಹಂತದ ಯೋಜನೆಗೆ ಡಿಪಿಆರ್‌ ಸಿದ್ಧ: ಡಿಸಿಎಂ ಶಿವಕುಮಾರ್‌

13

Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.