Kollywood: 33 ವರ್ಷದ ಬಳಿಕ ರಜಿನಿ ಜತೆ ಮಣಿರತ್ನಂ ಸಿನಿಮಾ? ನಿರ್ದೇಶಕರ ಪತ್ನಿ ಹೇಳಿದ್ದೇನು?
Team Udayavani, Oct 16, 2024, 6:14 PM IST
ಚೆನ್ನೈ: ಕಾಲಿವುಡ್ನಲ್ಲಿ ಕಳೆದ ಕೆಲ ದಿನಗಳಿಂದ ಸೂಪರ್ ಸ್ಟಾರ್ ರಜಿನಿಕಾಂತ್ (Rajinikanth) ಹಾಗೂ ಖ್ಯಾತ ನಿರ್ದೇಶಕ ಮಣಿರತ್ನಂ (Mani Ratnam) ಜತೆಯಾಗಿ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ.
ಸೂಪರ್ ಸ್ಟಾರ್ – ಮಣಿರತ್ನಂ ಜತೆಯಲ್ಲಿ ಸಿನಿಮಾ ಮಾಡಲಿದ್ದಾರೆ ಎನ್ನಲಾಗಿದ್ದು, ಕೆಲ ಸ್ಕ್ರಿಪ್ಟ್ ಗಳ ಬಗ್ಗೆ ಆರಂಭಿಕ ಹಂತದ ಮಾತುಕತೆ ನಡೆದಿದೆ ಎಂದು ಹೇಳಲಾಗಿದೆ. ಆದರೆ ಈ ಸುದ್ದಿ ಹರಿದಾಡುತ್ತಿದ್ದಂತೆಯೇ ಇದಕ್ಕೆ ನಿರ್ದೇಶಕ ಮಣಿರತ್ನಂ ಅವರ ಪತ್ನಿ ಸುಹಾಸಿನಿ (Suhasini) ಸ್ಪಷ್ಟನೆ ನೀಡಿದ್ದಾರೆ.
ಇದನ್ನೂ ಓದಿ: Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್
“ರಜಿನಿಕಾಂತ್ ಮತ್ತು ಮಣಿ ಅವರಿಗೂ ಇದರ ಬಗ್ಗೆ ತಿಳಿದಿಲ್ಲ ಎಂದು ನಾನು ಭಾವಿಸುತ್ತೇನೆ. ಜನರು ಮಾತ್ರ ಅದರ ಬಗ್ಗೆ ಬರೆಯುತ್ತಿದ್ದಾರೆ” ಎಂದು ಸಂದರ್ಶನವೊಂದರಲ್ಲಿ ಸುಹಾಸಿನಿ ಸ್ಪಷ್ಟನೆ ನೀಡಿದ್ದು, ಆ ಮೂಲಕ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ರಜಿನಿ – ಮಣಿರತ್ನಂ ಕಾಂಬಿನೇಷನ್ನಲ್ಲಿ ಸಿನಿಮಾ ನಿರೀಕ್ಷೆ ಮಾಡುತ್ತಿದ್ದು ಫ್ಯಾನ್ಸ್ ಗಳಿಗೆ ಇದರಿಂದ ನಿರಾಸೆಯಾಗಿದೆ.
ಈ ಹಿಂದೆ 1991ರಲ್ಲಿ ಮಣಿರತ್ನಂ ರಜಿನಿಕಾಂತ್ ಅವರೊಂದಿಗೆ ʼ ದಳಪತಿʼ(Thalapathi) ಎನ್ನುವ ಸಿನಿಮಾವನ್ನು ಮಾಡಿದ್ದರು. ಈ ಸಿನಿಮಾ ಹಿಂದೂ ಪೌರಾಣಿಕ ಮಹಾಕಾವ್ಯವಾದ ಮಹಾಭಾರತವನ್ನು ಆಧರಿಸಿದ್ದು, ಕರ್ಣ ಮತ್ತು ದುರ್ಯೋಧನ ನಡುವಿನ ಸ್ನೇಹದ ಸುತ್ತ ಚಿತ್ರ ಕಥೆ ಸಾಗುತ್ತದೆ.
ಸೂರ್ಯನಾಗಿ ರಜಿನಿಕಾಂತ್, ದೇವರಾಜ್ ಆಗಿ ಮಮ್ಮುಟ್ಟಿ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇದರೊಂದಿಗೆ ಅರವಿಂದ್ ಸ್ವಾಮಿ ,ಜೈಶಂಕರ್, ಅಮರೀಶ್ ಪುರಿ, ಶ್ರೀವಿದ್ಯಾ, ಭಾನುಪ್ರಿಯಾ, ಶೋಬನಾ, ಗೀತಾ ಮುಂತಾದವರು ನಟಿಸಿದ್ದರು.
ಸದ್ಯ ರಜಿನಿಕಾಂತ್ ʼವೆಟ್ಟೈಯನ್ʼ ಸಿನಿಮಾ ಸಕ್ಸಸ್ ಆದ ಖುಷಿಯಲ್ಲಿದ್ದು, ಮಣಿರತ್ನಂ ʼಥಗ್ ಲೈಫ್ʼ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಮುಂದೆ ರಜಿನಿಕಾಂತ್ ʼಕೂಲಿʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thalapathy 69: 8 ವರ್ಷದ ಬಳಿಕ ಮತ್ತೆ ಪೊಲೀಸ್ ಲುಕ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ವಿಜಯ್
Actress Oviya: ಬಿಗ್ಬಾಸ್ ಮಾಜಿ ಸ್ಪರ್ಧಿಯ ಖಾಸಗಿ ವಿಡಿಯೋ ವೈರಲ್; ದೂರು ದಾಖಲಿಸಿದ ನಟಿ
Kamal Haasan: ನಿರೂಪಣೆ ಬಿಟ್ಟ ಬಳಿಕ ಮತ್ತೆ ಬಿಗ್ಬಾಸ್ ವೇದಿಕೆಗೆ ಬರಲಿದ್ದಾರೆ ಕಮಲ್
Prasanth Varma: ಮಹಾಕಾಳಿಯಲ್ಲಿ ದೈವಾರಾಧನೆ
Actor Bala: ಮಾಜಿ ಪತ್ನಿ ಜತೆ ಅನುಚಿತ ವರ್ತನೆ ಆರೋಪ; ಖ್ಯಾತ ನಟ ಬಂಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.