ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’


Team Udayavani, Oct 16, 2024, 6:01 PM IST

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

■ ಉದಯವಾಣಿ ಸಮಾಚಾರ
ನರಗುಂದ: ರಾಷ್ಟ್ರಾಭಿಮಾನ ನಮ್ಮ ಮನೆ ಮನಗಳಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಂಚಿನಾಳದ ಭಕ್ತಿ ಯೋಗಾಶ್ರಮದ
ಶ್ರೀ ಮಹೇಶಾನಂದ ಸ್ವಾಮಿಗಳು ಹೇಳಿದರು. ತಾಲೂಕಿನ ಶಿರೋಳ ಗ್ರಾಮದ ಯಚ್ಚರ ಸ್ವಾಮಿಗಳ ಗವಿಮಠದ ಜಾತ್ರಾ ಮಹೋತ್ಸವದ ಎರಡನೇ ದಿನದಂದು ನಡೆದ ರೈತ ಮತ್ತು ಸೈನಿಕ ಹಿತಚಿಂತನಾ ಸಭೆ ಹಾಗೂ ಪಾದಪೂಜೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಶ್ರೀಗಳು ಮಾತನಾಡಿ, ಭಾರತ ಉನ್ನತ ಸಂಸ್ಕೃತಿ, ಸಂಸ್ಕಾರ ಹೊಂದಿದ ದೇಶವಾಗಿದೆ ಎಂದರು.

ನಮ್ಮ ದೇಶ ಆಧುನಿಕ ಕೃಷಿಯಿಂದ ವಿಮುಖವಾಗಿ ಸಾವಯವ ಕೃಷಿ ಕಡೆಗೆ ಬರುತ್ತಿರುವದನ್ನು ಕಾಣಬಹುದಾಗಿದೆ. ವಿಷಮುಕ್ತ ಕೃಷಿ ಆಗಬೇಕಾದರೆ ರೈತರು ಪ್ರತಿ ಮನೆಯಲ್ಲಿ ದೇಶಿಯ ಹಸು ಸಾಕಬೇಕು. ಅದರ ಹಾಲಿನಿಂದ ಉತ್ತಮ ಆರೋಗ್ಯ, ಸಗಣಿಯಿಂದ ಫ‌ಲವತ್ತಾದ ಬೆಳೆ ಪಡೆದು 100 ವರ್ಷ ಗಟ್ಟಿಯಾಗಿ ಬದುಕಲು ಸಾಧ್ಯ. ನಮಗೆ ಅನ್ನ ನೀಡುವ ರೈತ ಮತ್ತು ದೇಶ ಕಾಯುವ ಸೆ„ನಿಕರಿಗೆ ಪಾದಪೂಜೆ ಮಾಡಿ ಅವರ ಸ್ಮರಣೆ ಮಾಡ್ಡಿದ್ದು ನಮ್ಮಜೀವನದಲ್ಲಿ ಇದು ಹೆಮ್ಮೆಯ ವಿಷಯ ಎಂದರು.

ಒಳ್ಳೆಯ ಸಂಸ್ಕಾರ ನೀಡಿ: ಶಿರೋಳ ತೋಂಟದಾರ್ಯ ಮಠದ ಶ್ರೀ ಶಾಂತಲಿಂಗ ಸ್ವಾಮಿಜಿ ಮಾತನಾಡಿ, ನಮ್ಮ ಭಾರತ ಭವ್ಯ
ಪರಂಪರೆ ದೇಶ. ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕವಾಗಿ ಜಗತ್ತಿಗೆ ಗುರುವಾಗಿ ಮೆರೆದಿದೆ. ಈಗಿನ ಆಧುನಿಕ ಕಾಲದಲ್ಲಿ ನಾವು ನಮ್ಮ ಮಕ್ಕಳಿಗೆ ಅದನ್ನು ಹೇಳುವಲ್ಲಿ ಎಡವಿದ್ದೇವೆ. ತಮ್ಮ ಕುಟುಂಬದಲ್ಲಿ ಒಳ್ಳೆಯ ಸಂಸ್ಕಾರ ಬೆಳೆಸುವಲ್ಲಿ ಆಧ್ಯಾತ್ಮ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.

ಹುಬ್ಬಳ್ಳಿಯ ನಿವೃತ್ತ ಸೇನಾಧಿಕಾರಿ ಸುಧೀಂದ್ರ ಇಟ್ನಾಳ ಮಾತನಾಡಿ, ನಮ್ಮ ಶಾಲೆ, ಕಾಲೇಜು ಗಳಲ್ಲಿ ನಮ್ಮ ಮಕ್ಕಳಿಗೆ ನಮ್ಮ ದೇಶಾಭಿಮಾನ ಮೂಡಿಸುವ ವಿಷಯಗಳನ್ನು ಅಳವಡಿಸಬೇಕು. ಸೈನಿಕ ಶಿಕ್ಷಣ ನೀಡಬೇಕಾಗಿದೆ ಎಂದರು.

ಚಿಕ್ಕಲಗುಡ್ಡದ ದರೋಜಿ ಫ್ಯಾಬ್ರಿಕ್ಸ್‌ನ ಶಾರವ್ವ ದರೋಜಿ ಮಾತನಾಡಿ, ನಾನು ಬರಿ ಮೂರನೇ ಕ್ಲಾಸ್‌ ಓದಿದರೂ ಉತ್ತಮ ಕೌಶಲ್ಯದಿಂದ ಕೌದಿ ಯನ್ನು ನಾವು ತಯಾರಿಸುತ್ತೇವೆ. ಅದು ವಿದೇಶಿಯರಿಗೆ ಮೆಚ್ಚುಗೆ ಆಗಿದೆ. ಅಂದರೆ ನಮ್ಮ ಕೆಲಸದಲ್ಲಿ ನಾವು ಪ್ರಗತಿ ಹೊಂದಬೇಕಾದರೆ ಕಷ್ಟಪಡಬೇಕು. 100 ಜನರಿಗೆ ಉದ್ಯೋಗ ನೀಡಿ ದ್ದೇನೆ ಎಂದರು. ಇದೇ ಸಂದರ್ಭದಲ್ಲಿ ರೈತರಿಗೆ
ಹಾಗೂ ಸೈನಿಕರಿಗೆ ಜಾತ್ರಾ ಮಹೋತ್ಸವದಲ್ಲಿ ಪಾದಪೂಜೆ ಮಾಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಯಚ್ಚರಸ್ವಾಮಿ ಗವಿಮಠದ ಶ್ರೀ ಅಭಿನವ ಯಚ್ಚರ ಸ್ವಾಮಿಗಳು, ಹುಬ್ಬಳ್ಳಿ ಮಹಾನಗರ ಪಾಲಿಕೆ ಮಹಾಪೌರರು ರಾಮಣ್ಣ ಬಡಿಗೇರ, ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ ಜಾನಮಟ್ಟಿ, ಮೃತ್ಯುಂಜಯ ವಸ್ತ್ರದ, ಬಾಬು ಪತ್ತಾರ, ಲಿಂಗಬಸು ಅಂಗಡಿ, ಕೆ.ಬಿ. ಸಾಸಳ್ಳಿ, ಶ್ರೀಕಾಂತಗೌಡ ಪಾಟೀಲ, ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಹನಮಂತಗೌಡ
ತಿರಕನಗೌಡ್ರ, ಉಪಾಧ್ಯಕ್ಷ ಪ್ರಕಾಶ ಸೊಬರದ, ಕಾರ್ಯದರ್ಶಿ ದ್ಯಾಮಣ್ಣ ಶಾಂತಗೇರಿ, ಸಹ ಕಾರ್ಯದರ್ಶಿ ರವಿ ಆಲಗುಂಡಿ
ಮುಂತಾದವರಿದ್ದರು.

ಟಾಪ್ ನ್ಯೂಸ್

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag: ಗದಗ ನಗರಕ್ಕೆ ಆಗಮಿಸಿದ ವಿಜಯ ಜ್ಯೋತಿ ಸ್ವಾಗತಿಸಿದ ಸಚಿವ ಎಚ್. ಕೆ. ಪಾಟೀಲ

Gadag: ಗದಗ ನಗರಕ್ಕೆ ಆಗಮಿಸಿದ ವಿಜಯ ಜ್ಯೋತಿ ಸ್ವಾಗತಿಸಿದ ಸಚಿವ ಎಚ್. ಕೆ. ಪಾಟೀಲ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

sand 1

Padubidri: ಟಿಪ್ಪರ್‌ನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮರಳು ವಶ

3

Uppala: ಲಾರಿ ತಡೆದು ನಿಲ್ಲಿಸಿ, ಚಾಲಕನಿಗೆ ಬೆದರಿಸಿ 1.64 ಲಕ್ಷ ರೂ. ದರೋಡೆ

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

2

Sullia: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ; ಆರೋಪಿ ವಶಕ್ಕೆ

18

Kinnigoli: ಮರ ಬಿದ್ದು ಬೈಕ್‌ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.