ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು
Team Udayavani, Oct 16, 2024, 8:15 PM IST
ಬಿಹಾರ: ಕಚ್ಚಿದ ಹಾವನ್ನೇ ವ್ಯಕ್ತಿಯೊಬ್ಬ ಹೆಗಲ ಮೇಲೆ ಹಾಕಿಕೊಂಡು ಆಸ್ಪತ್ರೆಗೆ ಬಂದ ಭಯಾನಕ ಘಟನೆಯೊಂದು ಬಿಹಾರದ ಭಾಗಲ್ಪುರದಲ್ಲಿ ನಡೆದಿದೆ.
ಪ್ರಕಾಶ್ ಮಂಡಲ್ ಎಂಬ ವ್ಯಕ್ತಿಗೆ ತೋಟದಲ್ಲಿ ಕೆಲಸ ಮಾಡುವ ವೇಳೆ ಕನ್ನಡಿ ಹಾವೊಂದು ಕಚ್ಚಿದೆ ಕೂಡಲೇ ಎಚ್ಚೆತ್ತ ಪ್ರಕಾಶ್ ಕಚ್ಚಿದ ಹಾವನ್ನು ಕೈಯಲ್ಲಿ ಹಿಡಿದು ಹೆಗಲ ಮೇಲೆ ಹಾಕಿಕೊಂಡು ಆಸ್ಪತ್ರೆಗೆ ದಾವಿಸಿದ್ದಾನೆ, ಇದನ್ನು ಕಂಡ ಆಸ್ಪತ್ರೆಯ ವೈದ್ಯರು, ಸಿಬಂದಿಗಳು ಹಾಗೂ ರೋಗಿಗಳು ಗಾಬರಿಗೊಂಡಿದ್ದಾರೆ.
ಹಾವಿನ ಕಡಿತಕ್ಕೆ ಒಳಗಾದ ವ್ಯಕ್ತಿ ಕೈಯಲ್ಲಿ ಹಾವನ್ನು ಹಿಡಿದುಕೊಂಡಿರುವುದರಿಂದ ವೈದ್ಯರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗಲಿಲ್ಲ ಅಲ್ಲದೆ ಕಚ್ಚಿದ ಹಾವು ವಿಷಪೂರಿತವಾಗಿದ್ದುದರಿಂದ ವೈದ್ಯರು ಆತಂಕಗೊಂಡಿದ್ದಾರೆ ಒಂದು ವೇಳೆ ವ್ಯಕ್ತಿ ತನ್ನ ಕೈಯಲ್ಲಿದ್ದ ಹಾವನ್ನು ಬಿಟ್ಟರೆ ಅದು ಏನು ಮಾಡುತ್ತದೋ ಎಂಬ ಭಯ ಒಂದು ಕಡೆಯಾದರೆ, ಹಾವನ್ನು ಕೈಯಲ್ಲೇ ಹಿಡಿದುಕೊಂಡರೆ ವ್ಯಕ್ತಿಗೆ ಚಿಕಿತ್ಸೆ ನೀಡುವುದು ಮತ್ತೊಂದು ಸಮಸ್ಯೆ ಹೀಗೆ ಕೊನೆಗೆ ವ್ಯಕ್ತಿಯ ಬಳಿ ಹಾವನ್ನು ಆಸ್ಪತ್ರೆಯ ಹೊರಗೆ ಬಿಡುವಂತೆ ಸೂಚಿಸಿದ್ದು ಅದರಂತೆ ವ್ಯಕ್ತಿ ಹಾವನ್ನು ಆಸ್ಪತ್ರ್ರೆ ಹೊರ ಭಾಗದಲ್ಲಿ ಬಿಟ್ಟು ಬಂದಿದ್ದಾರೆ ಬಳಿಕ ಕೂಡಲೇ ಕಾರ್ಯಪ್ರವೃತ್ತರಾದ ವೈದ್ಯರು ವ್ಯಕ್ತಿಗೆ ಚಿಕಿತ್ಸೆ ನೀಡಿದ್ದಾರೆ.
ವ್ಯಕ್ತಿ ಹಾವನ್ನು ಹೆಗಲ ಮೇಲೆ ಹಾಕಿಕೊಂಡು ಆಸ್ಪತ್ರೆಗೆ ಬರುತ್ತಿರುವ ವಿಡಿಯೋ ಆಸ್ಪತ್ರೆಯಲ್ಲಿದ್ದ ಕೆಲವರು ವಿಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೋಡುವಾಗಲೇ ಭಯಹುಟ್ಟಿಸುತ್ತೆ, ಆದರೆ ಹಾವು ಕಚ್ಚಿದ ವ್ಯಕ್ತಿಯ ಸ್ಥಿತಿ ಹೇಗಿದೆಯೋ ಎಂಬ ಮಾಹಿತಿ ಮಾತ್ರ ಲಭ್ಯವಾಗಿಲ್ಲ.
ई बिहार है भैया यहां उड़ती चिड़ियाँ को हल्दी लगाया जाता है फिर ई साँप का क्या मजाल की काट कर भाग जाये …वीडियो भागलपुर का है साँप ने काटा तो शख़्स ने साँप का नरेटी चांप कर अपने साथ अस्पताल ले आया #Bihar pic.twitter.com/fogo6QqOwZ
— Mukesh singh (@Mukesh_Journo) October 16, 2024
बिहार ग़ज़ब है… सांप ने काटा तो उसी सांप को लेकर अस्पताल पहुंचा आदमी pic.twitter.com/jEI1bji7UL
— Akshay Pratap Singh (@AkshayPratap94) October 16, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baba Siddique Case: ಯೂಟ್ಯೂಬ್ ನೋಡಿ ಗನ್ ಬಳಕೆ ಕಲಿತಿದ್ದ ಹಂತಕರು!
Extortion Case: ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಶರ್ಮಾ ಬಂಧನ
Helicopter: ಮುಖ್ಯ ಚುನಾವಣಾ ಆಯುಕ್ತರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
Panaji: ಗೋವಾದಲ್ಲಿ ಕಲೆ ಬೆಳೆಸಿದ ವಿಷಯ ತಿಳಿದು ಹೆಮ್ಮೆ ಎನಿಸುತ್ತಿದೆ: ಸತೀಶ್ ಶೆಟ್ಟಿ ಪಟ್ಲ
Panaji: ಹೊರ ರಾಜ್ಯದವರ ಬಗ್ಗೆ ಗೋವಾ ಮುಖ್ಯಮಂತ್ರಿಯಿಂದ ವಿವಾದಾತ್ಮಕ ಹೇಳಿಕೆ: ಆಕ್ಷೇಪ
MUST WATCH
ಹೊಸ ಸೇರ್ಪಡೆ
Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ
Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ
Udupi: “ಸಾಗರ್ ಕವಚ್’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್, ವಾಹನಗಳು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.