Koni: ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನ- ಹೈದರಾಬಾದ್‌ನಿಂದ ಎಚ್ಚರಿಸಿದ ಸೆಕ್ಯುರಿಟಿ ಸಂಸ್ಥೆ


Team Udayavani, Oct 17, 2024, 7:20 AM IST

kalla

ಕುಂದಾಪುರ: ಕೋಣಿ ಸಮೀಪದ ಬ್ಯಾಂಕ್‌ ಒಂದರಲ್ಲಿ ಮಂಗಳವಾರ ತಡರಾತ್ರಿ ಕಳ್ಳತನಕ್ಕೆ ಯತ್ನ ನಡೆದಿದೆ. ಎಟಿಎಂಗೆ ನುಗ್ಗಿ ಯಂತ್ರ ತೆರೆಯಲು ನೋಡಿದಾಗ ಹೈದರಾಬಾದ್‌ನಿಂದ ಸೆಕ್ಯುರಿಟಿ ಸಂಸ್ಥೆಯವರು ಎಚ್ಚರಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಷ್ಟರಲ್ಲಿ ಕಳ್ಳರು ಬರಿಗೈಯಲ್ಲಿ ಪರಾರಿಯಾಗಿದ್ದಾರೆ.

ರಾತ್ರಿ 1.30ರ ಸುಮಾರಿಗೆ ಕೋಣಿ ಸಮೀಪದ ಬ್ಯಾಂಕ್‌ನ ಬಾಗಿಲಿನ ಬೀಗ ಮುರಿದು ಒಳನುಗ್ಗಿದ ಇಬ್ಬರು ವ್ಯಕ್ತಿಗಳು ಬ್ಯಾಂಕಿನ ಒಳಗೆ ಪೂರ್ತಿ ಜಾಲಾಡಿದ್ದಾರೆ. ಲಾಕರ್‌ ತೆರೆಯುವ ಯತ್ನ ಫಲ ನೀಡಲಿಲ್ಲ. ಕೊನೆಗೆ ಅದಕ್ಕೆ ಅಂಟಿಕೊಂಡಂತಿದ್ದ ಎಟಿಎಂಗೆ ಪ್ರವೇಶಿಸಿದ್ದಾರೆ. ಎಟಿಎಂ ಯಂತ್ರವನ್ನು ತೆರೆಯಲು ಯತ್ನಿಸಿದಾಗ ಸೈರನ್‌ ಮೊಳಗಿದೆ.

ಎಟಿಎಂಗಳನ್ನು ನಿರ್ವಹಿಸುವ ಸಂಸ್ಥೆಯ ಭದ್ರತೆ ನಿಗಾ ವಹಿಸುವವರು ಹೈದರಾಬಾದ್‌ನಲ್ಲಿ ಸಿಸಿ ಟಿವಿ ಮಾನಿಟರಿಂಗ್‌ ಮಾಡುತ್ತಿದ್ದು, ಅವರ ಗಮನಕ್ಕೆ ಬಂದು ತತ್‌ಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಎಸ್‌ಐ ಹಾಗೂ ತಂಡ ಸ್ಥಳಕ್ಕೆ ಭೇಟಿ ನೀಡುವಷ್ಟರಲ್ಲಿ ಸೈರನ್‌ ಆದ ಕಾರಣ ಕಳ್ಳರು ಪರಾರಿಯಾಗಿದ್ದಾರೆ.

ಸಕಾಲದ ಮಾನಿಟರಿಂಗ್‌
ಡಿವೈಎಸ್‌ಪಿ ಬೆಳ್ಳಿಯಪ್ಪ, ಸರ್ಕಲ್‌ ಇನ್ಸ್‌ಪೆಕ್ಟರ್‌ ಮಂಜಪ್ಪ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕೆಲವು ಸಮಯದ ಹಿಂದೆ ಮುಳ್ಳಿಕಟ್ಟೆಯಲ್ಲಿ ಸೊಸೈಟಿಯೊಂದಕ್ಕೆ ಕಳ್ಳನೊಬ್ಬ ನುಗ್ಗಿದಾಗ ಸಿಸಿ ಟಿವಿ ಮಾನಿಟರಿಂಗ್‌ ಮಾಡುವ ಸೈನ್‌ ಇನ್‌ ಸಂಸ್ಥೆ ಸಕಾಲದಲ್ಲಿ ಪೊಲೀಸರನ್ನು ಎಚ್ಚರಿಸಿ ಪಕ್ಕದಲ್ಲೇ ಗಸ್ತಿನಲ್ಲಿದ್ದ ಪೊಲೀಸರು ತತ್‌ಕ್ಷಣ ಸ್ಥಳಕ್ಕೆ ತಲುಪಿದ ಕಾರಣ ಕಳ್ಳನನ್ನು ಸೆರೆಹಿಡಿಯಲು ಸಾಧ್ಯವಾಗಿತ್ತು. ಅದಾದ ಬಳಿಕ ತೆಕ್ಕಟ್ಟೆ ಸಮೀಪ ತಂಡವೊಂದು ದರೋಡೆಗೆ ಬಂದಾಗಲೂ ಎಚ್ಚರ ವಹಿಸಿ ಅನಂತರ ತಂಡವನ್ನು ಪೊಲೀಸರು ಬಂಧಿಸಿದ್ದರು. ಇದೇ ರೀತಿ ಕಮಲಶಿಲೆ ದೇವಾಲಯ ಸಹಿತ ವಿವಿಧೆಡೆಯ ಗೋಕಳ್ಳತನ ಪ್ರಕರಣಗಳ ಆರೋಪಿಗಳನ್ನೂ ಬಂಧಿಸಲಾಗಿತ್ತು.

ರೈನ್‌ಕೋಟ್‌ ಧರಿಸಿದ್ದರು
ರೈನ್‌ಕೋಟ್‌ ಧರಿಸಿದ್ದ ಇಬ್ಬರ ಚಹರೆ ಪೂರ್ತಿಯಾಗಿ ಸಿಸಿ ಟಿವಿಯಲ್ಲಿ ಸೆರೆಯಾಗಿಲ್ಲ. ಬೈಕ್‌ನಲ್ಲಿ ಬಂದಿರುವ ಸಾಧ್ಯತೆಯಿದೆ. ಶ್ವಾನದಳ, ಬೆರಳಚ್ಚು ಪರಿಶೀಲನೆ ತಂಡ ಹಾಗೂ ಸೊಕೊ (ಸೀನ್‌ ಆಫ್‌ ಕ್ರೈಂ) ತಂಡ ಉಡುಪಿಯಿಂದ ಬುಧವಾರ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.

ಟಾಪ್ ನ್ಯೂಸ್

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

Tragedy: ಕಾರು ಪಲ್ಟಿಯಾಗಿ ಮಕ್ಕಳು ಸೇರಿದಂತೆ ಒಂದೇ ಕುಟುಂಬದ 7 ಮಂದಿ ಮೃತ್ಯು, ಸಿಎಂ ಸಂತಾಪ

2

Actor Darshan: ಅ.22ಕ್ಕೆ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

Oxford University: ಆಕ್ಸ್‌ಫ‌ರ್ಡ್‌ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್‌ನಲ್ಲಿ

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

India- Canada: ಭಾರತದ ಮೇಲೆ ನಿರ್ಬಂಧ ವಿಧಿಸಿದರೆ ಕೆನಡಾಕ್ಕೆ ನಷ್ಟ!

bhopal

Raids: ಜೂನಿಯರ್ ಆಡಿಟರ್ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಕಂಡು ಅಧಿಕಾರಿಗಳೇ ದಂಗು

Nayab Singh Saini: 2ನೇ ಬಾರಿಗೆ ಹರಿಯಾಣ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ ಸ್ವೀಕಾರ

Haryana: 2ನೇ ಬಾರಿಗೆ ಸಿಎಂ ಆಗಿ ಸೈನಿ ಇಂದು ಪ್ರಮಾಣ ವಚನ, ಪ್ರಧಾನಿ, ಬಿಜೆಪಿ ಗಣ್ಯರು ಭಾಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Bangaladesh illegal immigrants: ಕಾರ್ಮಿಕರ ಮಾಹಿತಿ ಸಂಗ್ರಹ ಆರಂಭಿಸಿದ ಪೊಲೀಸರು

courts

Udupi: ಅಪ್ರಾಪ್ತೆಯ ಅತ್ಯಾಚಾರ; ಆರೋಪಿ ಖುಲಾಸೆ

Krishna-Mata-Udupi

Udupi: ಇಂದು ಶ್ರೀ ಕೃಷ್ಣ ಮಠದಲ್ಲಿ 100 ನೃತ್ಯಗಾರರಿಂದ 14 ಗಂಟೆ ನೃತ್ಯ ಪ್ರದರ್ಶನ

de

Kundapura: ಲಾರಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಮರಣ ಹೊಂದಿದ ಚಾಲಕ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Argentina: ಹೋಟೆಲ್‌ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Bengaluru: ರಾಜಕಾಲುವೆ ಒತ್ತುವರಿಯೇ ಅವಾಂತರಕ್ಕೆ ಕಾರಣ; ಆಯುಕ್ತ

Havery ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Haveri: ಧಾರಾಕಾರ ಮಳೆ; ರಸ್ತೆ ಕಾಣದೆ ಚರಂಡಿಗೆ ಬಿದ್ದು ಕೊಚ್ಚಿ ಹೋದ ಬಾಲಕ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

Bengalruru Rain: ಬಿಬಿಎಂಪಿ ಕಳಪೆ ಕಾಮಗಾರಿ ಬಿಚ್ಚಿಟ್ಟ ಮಳೆ

5

Bengaluru Rain: ಮಳೆಗೆ 4 ಬಡಾವಣೆ ನಿವಾಸಿಗಳ ಗುಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.