Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ


Team Udayavani, Oct 16, 2024, 9:01 PM IST

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

ಬೆಳಗಾವಿ: ಬೆಳಗಾವಿ ಮತ್ತು ಬೆಂಗಳೂರು ಮಧ್ಯೆ ದಿನನಿತ್ಯ ಸಂಚರಿಸುವ ಇಂಡಿಗೋ ವಿಮಾನವನ್ನು ದಿನಾಂಕ 27 ರಿಂದ ಸ್ಥಗಿತಗೊಳಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವರಾದ ಕೆ. ಆರ್ ನಾಯ್ಡು ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು.

ಬೆಳಗಾವಿ ಬೆಂಗಳೂರು ಬೆಳಗಾವಿ ಮಧ್ಯೆ ದಿನನಿತ್ಯ ಬೆಳಿಗ್ಗೆ ಸಂಚರಿಸುವ ಇಂಡಿಗೋ ಸಂಸ್ಥೆ ವಿಮಾನಯಾನ ಸೇವೆಯನ್ನು ರದ್ದು ಮಾಡಬಾರದು‌. ಇದರಿಂದ ಪ್ರಯಾಣಿಕರಿಗೆ ಬಹಳ ತೊಂದರೆಯಾಗಲಿದೆ ಎಂದರು.

ಬೆಳಗಾವಿ – ಬೆಂಗಳೂರು ನಡುವೆ ಇಂಡಿಗೋ ಸಂಸ್ಥೆ ಪ್ರತಿನಿತ್ಯ ಬೆಳಿಗ್ಗೆ ವಿಮಾನಯಾನ ಸೇವೆಯನ್ನು ಒದಗಿಸುತ್ತಾ ಬಂದಿದೆ. ಕಳೆದ ಒಂದು ವರ್ಷದಲ್ಲಿ ಪ್ರತಿಶತ 82 ರಷ್ಟು ಅಂದರೆ ಪೂರ್ಣ ಸಾಮರ್ಥ್ಯ ಪ್ರಯಾಣಿಕರು ಇದರಲ್ಲಿ ಸಂಚಾರ ಮಾಡಿದ್ದಾರೆ ಎಂದು ಸಚಿವರಿಗೆ ಮನವರಿಕೆ ಮಾಡಿದರು.

ಆದರೆ ಈಗ ಇಂಡಿಗೋ ಏರ್ ಲೈನ್ಸ್ ಬರುವ ದಿನಾಂಕ 27 ರಿಂದ ಈ ಸೇವೆಯನ್ನು ರದ್ದುಗೊಳಿಸಲಿದೆ. ಇದು ಅತ್ಯಂತ ಬೇಸರದ ಸಂಗತಿ. ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಲಿದೆ‌. ಆದ್ದರಿಂದ ಯಾವುದೇ ಕಾರಣಕ್ಕೂ ರದ್ದು ಮಾಡದಂತೆ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸುವಂತೆ ಜಗದೀಶ್ ಶೆಟ್ಟರ್ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದರು.

ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು ಈ ಬಗ್ಗೆ ಸಂಬಂಧಿಸಿದ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ಅಧಿಕಾರಿಗಳಿಗೆ ಸೂಚಿಸುವ ಭರವಸೆ ನೀಡಿದ್ದಾರೆ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಇದಲ್ಲದೆ ಬೆಳಗಾವಿ ವಿಮಾನ ನಿಲ್ದಾಣದಿಂದ ಪುಣೆ, ಚೆನ್ನೈ ಕೊಚ್ಚಿನ್, ಲಖನೌ, ಮೈಸೂರು, ಸೂರತ್, ಮುಂಬಯಿ (ಏರ್ ಬಸ್) ಬೆಂಗಳೂರು (ಏರ್ ಬಸ್) ಗಳಿಗೂ ಸಹ ವಿಮಾನಯಾನ ಸೇವೆಯನ್ನು ಒದಗಿಸುವ ಬಗ್ಗೆ ಇತರೆ ವಿಮಾನ ಸಂಸ್ಥೆಗಳೊಂದಿಗೆ ಸಮಾಲೋಚಿಸುವಂತೆ ಮನವಿ ಮಾಡಿದರು.

ಉಡಾನ್ -3/0 ಯೋಜನೆಯನ್ನು ಸಹ 10 ವರ್ಷಗಳ ಕಾಲಾವಧಿಗೆ ವಿಸ್ತರಿಸಿ, ಇದಕ್ಕೆ ಬೆಳಗಾವಿ ವಿಮಾನ ನಿಲ್ದಾಣವನ್ನು ಸೇರ್ಪಡೆ ಮಾಡಿ ಬೆಳಗಾವಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸಹಕರಿಸುವಂತೆ ಕೋರಿದರು.

ಇದೇ ಸಮಯದಲ್ಲಿ ಜಗದೀಶ್ ಶೆಟ್ಟರ್ ಇಂಡಿಗೋ ಏರ್ ಲೈನ್ಸ್ ಸಂಸ್ಥೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಪ್ರಸ್ತಾಪಿತ ವಿಮಾನಯಾನ ಸೇವೆಯ ಲೀಸ್ ಅವಧಿ ಪೂರ್ಣಗೊಂಡಿರುವ ಕಾರಣ ಈ ಸೇವೆಯನ್ನು ರದ್ದುಪಡಿಸುವುದು ಅನಿವಾರ್ಯವಾಗಿದೆ.
ಆದರೆ ಬರುವ ಡಿಸೆಂಬರ್ ತಿಂಗಳಲ್ಲಿ ಖಂಡಿತವಾಗಿ ಪ್ರಸ್ತಾಪಿತ ಮಾರ್ಗದಲ್ಲಿ ಈ ಸೇವೆಯನ್ನು ಪುನಃ ಆರಂಭಿಸುವ ಭರವಸೆಯನ್ನು ಸಂಸ್ಥೆಯ ಅಧಿಕಾರಿಗಳು ನೀಡಿದರು ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Sathish-Kumpala

Hubballi: ಪೊಲೀಸ್‌ ಠಾಣೆ ಮೇಲೆ ದಾಳಿ ಪ್ರಕರಣ ವಾಪಸ್‌: ದ. ಕನ್ನಡ ಜಿಲ್ಲಾ ಬಿಜೆಪಿ ಖಂಡನೆ

KEA: ಯುಜಿನೀಟ್‌; ಮಾಪ್‌ಅಪ್‌ ಸುತ್ತಿನ ಸೀಟು ಹಂಚಿಕೆ ಪ್ರಕಟ

KEA: ಯುಜಿನೀಟ್‌; ಮಾಪ್‌ಅಪ್‌ ಸುತ್ತಿನ ಸೀಟು ಹಂಚಿಕೆ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KEA: ಯುಜಿನೀಟ್‌; ಮಾಪ್‌ಅಪ್‌ ಸುತ್ತಿನ ಸೀಟು ಹಂಚಿಕೆ ಪ್ರಕಟ

KEA: ಯುಜಿನೀಟ್‌; ಮಾಪ್‌ಅಪ್‌ ಸುತ್ತಿನ ಸೀಟು ಹಂಚಿಕೆ ಪ್ರಕಟ

Rain: ಹಿಂಗಾರು ಮಳೆಯಬ್ಬರಕ್ಕೆ 18 ಜಿಲ್ಲೆಗಳು ಕಂಗಾಲು; ಕೆಲವು ಕಡೆ ಭಾರೀ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ 18 ಜಿಲ್ಲೆಗಳು ಕಂಗಾಲು; ಕೆಲವು ಕಡೆ ಭಾರೀ ಹಾನಿ

KSRTC: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿKSRTC: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿ

KSRTC: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿ

G Parameshwara: ಹರಿಪ್ರಸಾದ್‌ ಹೇಳಿದ್ದಾರೆಂದು ಡಿ.ಜೆ.ಹಳ್ಳಿ ಪ್ರಕರಣ ವಾಪಸ್‌ ಅಸಾಧ್ಯ

G Parameshwara: ಹರಿಪ್ರಸಾದ್‌ ಹೇಳಿದ್ದಾರೆಂದು ಡಿ.ಜೆ.ಹಳ್ಳಿ ಪ್ರಕರಣ ವಾಪಸ್‌ ಅಸಾಧ್ಯ

Karnataka Rajyotsava: ಧ್ವಜಾರೋಹಣಕ್ಕೆ ಉಸ್ತುವಾರಿ ಸಚಿವರ ನಿಯೋಜನೆ

Karnataka Rajyotsava: ಧ್ವಜಾರೋಹಣಕ್ಕೆ ಉಸ್ತುವಾರಿ ಸಚಿವರ ನಿಯೋಜನೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ

ANAKU-operation

Udupi: “ಸಾಗರ್‌ ಕವಚ್‌’ ಅಣಕು ಕಾರ್ಯಾಚರಣೆ; 21 ಮಂದಿ ಬಂಧನ, 2 ಬೋಟ್‌, ವಾಹನಗಳು ವಶಕ್ಕೆ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Udupi: ಗೀತಾರ್ಥ ಚಿಂತನೆ-66: ಮಕ್ಕಳ ಮೇಲೆ ತಂದೆತಾಯಿಯ ಮನೋಧರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.