Special Court: ಮೂರು ತಿಂಗಳ ಸೆರೆವಾಸದ ಬಳಿಕ ಮಾಜಿ ಸಚಿವ ನಾಗೇಂದ್ರ ಬಿಡುಗಡೆ


Team Udayavani, Oct 16, 2024, 11:55 PM IST

Special Court: ಮೂರು ತಿಂಗಳ ಸೆರೆವಾಸದ ಬಳಿಕ ಮಾಜಿ ಸಚಿವ ನಾಗೇಂದ್ರ ಬಿಡುಗಡೆ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ನೂರಾರು ಕೋಟಿ ರೂ. ಅಕ್ರಮ ಪ್ರಕರಣದಲ್ಲಿ ಕಳೆದ 3 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಮಾಜಿ ಸಚಿವ ನಾಗೇಂದ್ರ ಬುಧವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಸೋಮವಾರವಷ್ಟೇ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಗೇಂದ್ರಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಬುಧವಾರ ಬೆಳಗ್ಗೆ 9 ಗಂಟೆಗೆ ನಾಗೇಂದ್ರ ಅವರ ಜಾಮೀನು ಆದೇಶ ಪ್ರತಿ ಜೈಲಿನ ಮುಖ್ಯ ಅಧೀಕ್ಷಕರಿಗೆ ತಲುಪಿತ್ತು. ಬಳಿಕ ಕೆಲವೊಂದು ಕಾನೂನು ಪ್ರಕ್ರಿಯೆ ಮುಗಿಸಿ 10.30ರ ಸುಮಾರಿಗೆ ಜೈಲಿನಿಂದ ನಾಗೇಂದ್ರ ಅವರನ್ನು ಬಿಡುಗಡೆ ಮಾಡಲಾಯಿತು.

ಬಳ್ಳಾರಿ ಹಾಗೂ ಉತ್ತರ ಕರ್ನಾಟಕ ಭಾಗದಿಂದ ನಾಗೇಂದ್ರ ಅವರ ಸ್ವಾಗತಕ್ಕೆ ಆಗಮಿಸಿದ ಹತ್ತಾರು ಮಂದಿ ಅಭಿಮಾನಿಗಳು ಹಾಗೂ ಬೆಂಬಲಿಗರು ಜೈಲಿನ ಚೆಕ್‌ ಪೋಸ್ಟ್‌ ಬಳಿ ಮುಂಜಾನೆಯೇ ಜಮಾಯಿಸಿದ್ದರು. ನಾಗೇಂದ್ರ ಕಾರಿನಲ್ಲಿ ಬರುತ್ತಿದ್ದಂತೆ ಹೂವಿನ ಹಾರ ಹಾಕಿ ಸ್ವಾಗತಿಸಿದರು. ಆ ಬಳಿಕ ಬೂದಕುಂಬಳಕಾಯಿ ಒಡೆದು ದೃಷ್ಟಿ ತೆಗೆದರು. ಬಳಿಕ ನಾಗೇಂದ್ರ ನಗು ಮುಖದಲ್ಲೇ ತಮ್ಮ ಬೆಂಬಲಿಗರ ಕುಶಲೋಪರಿ ವಿಚಾರಿಸಿ ಕಾರಿನಲ್ಲಿ ತೆರಳಿದರು.

ಸಚಿವ ಜಮೀರ್‌ ಭೇಟಿ
ನಾಗೇಂದ್ರ ಅವರು ಬುಧವಾರ ಬಿಡುಗಡೆಯಾಗುತ್ತಿದ್ದಂತೆ ಸಚಿವ ಜಮೀರ್‌ ಅಹಮದ್‌ ನಿವಾ ಸ ಕ್ಕೆ ತೆರಳಿದರು. ಅನಂತರ ಪರಸ್ಪರ ಹಸ್ತಲಾಘವ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು. ಈ ವೇಳೆ ಬಳ್ಳಾರಿ ಜಿಲ್ಲೆಯ ಸಂಡೂರು ಉಪಚುನಾವಣೆ ಕುರಿತು ಚರ್ಚೆ ನಡೆಸಿದರು ಎನ್ನಲಾಗಿದೆ.

ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್‌ ಅಹಮದ್‌, ಈಗ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರಿಗೆ ಜಾಮೀನು ಸಿಕ್ಕಿದೆ. ಟೈಗರ್‌ ಈಸ್‌ ಬ್ಯಾಕ್‌. ಅವರ ನೇತೃತ್ವದಲ್ಲೇ ಚುನಾವಣೆ ಎದುರಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KEA: ಯುಜಿನೀಟ್‌; ಮಾಪ್‌ಅಪ್‌ ಸುತ್ತಿನ ಸೀಟು ಹಂಚಿಕೆ ಪ್ರಕಟ

KEA: ಯುಜಿನೀಟ್‌; ಮಾಪ್‌ಅಪ್‌ ಸುತ್ತಿನ ಸೀಟು ಹಂಚಿಕೆ ಪ್ರಕಟ

Rain: ಹಿಂಗಾರು ಮಳೆಯಬ್ಬರಕ್ಕೆ 18 ಜಿಲ್ಲೆಗಳು ಕಂಗಾಲು; ಕೆಲವು ಕಡೆ ಭಾರೀ ಹಾನಿ

Rain: ಹಿಂಗಾರು ಮಳೆಯಬ್ಬರಕ್ಕೆ 18 ಜಿಲ್ಲೆಗಳು ಕಂಗಾಲು; ಕೆಲವು ಕಡೆ ಭಾರೀ ಹಾನಿ

KSRTC: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿKSRTC: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿ

KSRTC: ಬಸ್‌ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿ

G Parameshwara: ಹರಿಪ್ರಸಾದ್‌ ಹೇಳಿದ್ದಾರೆಂದು ಡಿ.ಜೆ.ಹಳ್ಳಿ ಪ್ರಕರಣ ವಾಪಸ್‌ ಅಸಾಧ್ಯ

G Parameshwara: ಹರಿಪ್ರಸಾದ್‌ ಹೇಳಿದ್ದಾರೆಂದು ಡಿ.ಜೆ.ಹಳ್ಳಿ ಪ್ರಕರಣ ವಾಪಸ್‌ ಅಸಾಧ್ಯ

Karnataka Rajyotsava: ಧ್ವಜಾರೋಹಣಕ್ಕೆ ಉಸ್ತುವಾರಿ ಸಚಿವರ ನಿಯೋಜನೆ

Karnataka Rajyotsava: ಧ್ವಜಾರೋಹಣಕ್ಕೆ ಉಸ್ತುವಾರಿ ಸಚಿವರ ನಿಯೋಜನೆ

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.