BY Election: ಬಿಜೆಪಿ ಅಭ್ಯರ್ಥಿಗಳು ಶೀಘ್ರ ಅಂತಿಮ: ಬಸವರಾಜ ಬೊಮ್ಮಾಯಿ
Team Udayavani, Oct 17, 2024, 12:21 AM IST
ಬೆಂಗಳೂರು: ಶಿಗ್ಗಾವಿ ಸೇರಿ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ 2-3 ದಿನಗಳಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುತ್ತದೆ. ಉಪಚುನಾವಣೆಯಲ್ಲಿ ನನ್ನ ಮಗನ ಸ್ಪರ್ಧೆ ಬಗ್ಗೆ ನನಗೆ ಇಚ್ಛೆಯಿಲ್ಲ. ನಾನು ಆ ಪ್ರಸ್ತಾವನೆಯನ್ನು ಮುಂದೆ ಇಟ್ಟಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರ ಜತೆ ಅವರು ಮಾತನಾಡಿ, ಲೋಕಸಭಾ ಚುನಾವಣೆ ಬಳಿಕ ನನ್ನ ಪುತ್ರ ಎಲ್ಲಿಯೂ ಕ್ಷೇತ್ರದಲ್ಲಿ ಓಡಾಡಿಲ್ಲ. ನನ್ನ ಮಗನ ಹೆಸರನ್ನು ಬಹಳ ಜನರು ಸೂಚಿಸಿರಬಹುದು. ಆದರೆ ನಾವಂತೂ ಎಲ್ಲಿಯೂ ಹೆಸರು ಪ್ರಸ್ತಾವ ಮಾಡಿಲ್ಲ. ಅರ್ಜಿಯನ್ನೂ ಹಾಕಿಲ್ಲ ಎಂದರು. ಮಾಜಿ ಸಚಿವ ಮುರುಗೇಶ್ ನಿರಾಣಿ ಬಂದು ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ.
ಹೈಕಮಾಂಡ್ ಜತೆ ಚರ್ಚೆ ಮಾಡಿ ತೀರ್ಮಾನ ಮಾಡಬೇಕು. ಐವತ್ತಕ್ಕೂ ಹೆಚ್ಚು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಶಿಗ್ಗಾವಿ ನಾನು ಪ್ರತಿನಿಧಿಸುವ ಕ್ಷೇತ್ರ ಆಗಿರುವುದರಿಂದ ನನ್ನ ಮೇಲೆ ಹೆಚ್ಚು ಜವಾಬ್ದಾರಿ ಇದೆ ಎಂದು ಹೇಳಿದರು.
ನಾವು ಐದಾರು ಜನ ಬಿಜೆಪಿ ಮುಖಂಡರು ಹೋಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಸಿ.ಪಿ.ಯೋಗೇಶ್ವರ್ ಸ್ಪರ್ಧೆಯ ಬಗ್ಗೆ ಕೇಳಿದ್ದೇವೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟನ್ನು ನಮ್ಮ ಪಕ್ಷದ ಹೈಕಮಾಂಡ್ ಹಾಗೂ ಕುಮಾರಸ್ವಾಮಿಯವರು ಸೇರಿ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KEA: ಯುಜಿನೀಟ್; ಮಾಪ್ಅಪ್ ಸುತ್ತಿನ ಸೀಟು ಹಂಚಿಕೆ ಪ್ರಕಟ
Rain: ಹಿಂಗಾರು ಮಳೆಯಬ್ಬರಕ್ಕೆ 18 ಜಿಲ್ಲೆಗಳು ಕಂಗಾಲು; ಕೆಲವು ಕಡೆ ಭಾರೀ ಹಾನಿ
KSRTC: ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿ
G Parameshwara: ಹರಿಪ್ರಸಾದ್ ಹೇಳಿದ್ದಾರೆಂದು ಡಿ.ಜೆ.ಹಳ್ಳಿ ಪ್ರಕರಣ ವಾಪಸ್ ಅಸಾಧ್ಯ
Karnataka Rajyotsava: ಧ್ವಜಾರೋಹಣಕ್ಕೆ ಉಸ್ತುವಾರಿ ಸಚಿವರ ನಿಯೋಜನೆ
MUST WATCH
ಹೊಸ ಸೇರ್ಪಡೆ
Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ
Rain: ಎಲ್ಲೋ ಅಲರ್ಟ್; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ
Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್ರಾಜ್ ಕಾಂಚನ್
Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.