By Election: ಮುಂದುವರಿದ ಚನ್ನಪಟ್ಟಣ ಎನ್ಡಿಎ ಅಭ್ಯರ್ಥಿ ಕಗ್ಗಂಟು
ಎಚ್.ಡಿ.ಕುಮಾರಸ್ವಾಮಿ-ಸಿ.ಪಿ.ಯೋಗೇಶ್ವರ್ ನಡುವೆ ಟಿಕೆಟ್ಗಾಗಿ ಬಿರುಸಿನ ಪೈಪೋಟಿ
Team Udayavani, Oct 17, 2024, 7:22 AM IST
ಬೆಂಗಳೂರು: ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದಿವೆ. ಹೈವೋಲ್ಟೇಜ್ ಕ್ಷೇತ್ರವೆಂದೇ ಪರಿಗಣಿಸಲಾದ ಚನ್ನಪಟ್ಟಣ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಕಗ್ಗಂಟು ಮುಂದುವರಿದಿದೆ.
ಇದನ್ನು ಮೈತ್ರಿ ಪಕ್ಷದ ವರಿಷ್ಠರು ಹೇಗೆ ಬಗೆಹರಿಸುತ್ತಾರೆಂಬುದೇ ಸದ್ಯದ ಕುತೂಹಲ.ಚನ್ನಪಟ್ಟಣ ಕ್ಷೇತ್ರದ ಟಿಕೆಟ್ ಜೆಡಿಎಸ್ ಅಭ್ಯರ್ಥಿಗೇ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಈ ಹಿಂದೆಯೇ ಹೇಳಿಕೆ ನೀಡಿದ್ದು, ಇದರ ಬೆನ್ನಲ್ಲೇ ವಿಪಕ್ಷ ನಾಯಕ ಅಶೋಕ್ ಅವರು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರೇ ಎನ್ಡಿಎ ಅಭ್ಯರ್ಥಿ ಎನ್ನುವ ಮೂಲಕ ಸಿಪಿವೈ ಪರ ಬ್ಯಾಟಿಂಗ್ ಬೀಸಿದ್ದಾರೆ.
ಚನ್ನಪಟ್ಟಣ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ಗೆ ಸಿ.ಪಿ.ಯೋಗೇಶ್ವರ್ ಪಟ್ಟು ಹಿಡಿದಿದ್ದಾರೆ. ಸ್ಥಳೀಯ ಬಿಜೆಪಿ ವಲಯದಲ್ಲೂ ಅವರ ಪರ ಅಭಿಪ್ರಾಯಗಳು ವ್ಯಕ್ತವಾಗಿದೆ.
ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಯೋಗೇಶ್ವರ್, ನೂರಕ್ಕೆ ನೂರು ನಾನೇ ಎನ್ಡಿಎ ಅಭ್ಯರ್ಥಿ. ನಮ್ಮ ಪಕ್ಷದ ರಾಜ್ಯ ನಾಯಕರು ಕುಮಾರಸ್ವಾಮಿ ಅವರ ಜತೆ ಚರ್ಚಿಸಿ ಮೈತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಈ ಬೆನ್ನಲ್ಲೇ, ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಸಿ.ಪಿ.ಯೋಗೇಶ್ವರ್ ಸ್ಪರ್ಧೆಯ ಬಗ್ಗೆ ಕೇಳಿದ್ದೇವೆ. ಚನ್ನಪಟ್ಟಣ ಕ್ಷೇತ್ರದ ಟಿಕೆಟನ್ನು ನಮ್ಮ ಪಕ್ಷದ ಹೈಕಮಾಂಡ್ ಹಾಗೂ ಕುಮಾರಸ್ವಾಮಿಯವರು ಸೇರಿ ತೀರ್ಮಾನ ಮಾಡುತ್ತಾರೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಯೋಗೇಶ್ವರ್ ಪರ ನಿಲುವು ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ ಇಡೀ ಬೆಳವಣಿಗೆಗಳ ಬಗ್ಗೆ ಜೆಡಿಎಸ್ ವರಿಷ್ಠರಿಂದ ಯಾವುದೇಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳ ನಾಯಕರು ಚನ್ನಪಟ್ಟಣದ ಟಿಕೆಟ್ ಕಗ್ಗಂಟನ್ನು ಹೇಗೆ ಬಗೆಹರಿಸುತ್ತಾರೆ ಎಂಬುದೇ ತೀವ್ರ ಚರ್ಚೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actor Darshan: ಅ.22ಕ್ಕೆ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸಾಧ್ಯತೆ
Renukaswamy Case: 5 ಆರೋಪಿಗಳ ಜಾಮೀನು ಅರ್ಜಿ ವಜಾ
Kodagu: ತಲಕಾವೇರಿಯಲ್ಲಿ ನಿಗಧಿತ ಸಮಯಕ್ಕೆ ತೀಥ೯ರೂಪಿಣಿಯಾದ ಕಾವೇರಿ ಮಾತೆ
By Election: ಕಾಂಗ್ರೆಸ್ನಲ್ಲಿ ಅಭ್ಯರ್ಥಿ ಆಯ್ಕೆ: ಸಿಎಂ, ಡಿಸಿಎಂ ಜತೆ ವೇಣುಗೋಪಾಲ್ ಸಭೆ
High Court: ಮುಸ್ಲಿಂ ವಿವಾಹ ನೋಂದಣಿ ಅಧಿಕಾರ ವಕ್ಫ್ ಮಂಡಳಿಗೆ: ಕೋರ್ಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.